AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chiranjeevi Sarja: ಚಿರಂಜೀವಿ ಬರ್ತ್​ಡೇಗೆ ಸ್ವೀಟ್ ಆಗಿ ವಿಶ್ ಮಾಡಿದ ನಟಿ ಮೇಘನಾ ರಾಜ್

ಕೆಲ ವರ್ಷಗಳ ಹಿಂದೆ ಹೃದಯಾಘಾತದಿಂದ ಚಿರಂಜೀವಿ ಅವರು ಮೃತಪಟ್ಟರು. ಆದರೆ, ಮೇಘನಾ ರಾಜ್ ಹಾಗೂ ಅಭಿಮಾನಿಗಳ ಪಾಲಿಗೆ ಅವರಿನ್ನೂ ಜೀವಂತವಾಗಿದ್ದಾರೆ. ಅವರನ್ನು ನಾನಾ ರೀತಿಯಲ್ಲಿ ನೆನಪಿಸಿಕೊಳ್ಳುವ ಕೆಲಸ ಆಗುತ್ತಿದೆ.

Chiranjeevi Sarja: ಚಿರಂಜೀವಿ ಬರ್ತ್​ಡೇಗೆ ಸ್ವೀಟ್ ಆಗಿ ವಿಶ್ ಮಾಡಿದ ನಟಿ ಮೇಘನಾ ರಾಜ್
ಮೇಘನಾ-ಚಿರಂಜೀವಿ
ರಾಜೇಶ್ ದುಗ್ಗುಮನೆ
|

Updated on: Oct 17, 2023 | 11:36 AM

Share

ಇಂದು (ಅಕ್ಟೋಬರ್ 17) ಚಿರಂಜೀವಿ ಸರ್ಜಾ (Chiranjeevi Sarja) ಜನ್ಮದಿನ. ಈ ವಿಶೇಷ ದಿನದಂದು ಅಭಿಮಾನಿ ವಲಯದಲ್ಲಿ ಅವರನ್ನು ನೆನಪಿಸಿಕೊಳ್ಳುವ ಕೆಲಸ ಆಗುತ್ತಿದೆ. ಇಷ್ಟೇ ಅಲ್ಲ, ಅವರ ಪತ್ನಿ ನಟಿ ಮೇಘನಾ ರಾಜ್ ಕೂಡ ಪತಿಯನ್ನು ನೆನಪಿಸಿಕೊಂಡಿದ್ದಾರೆ. ಚಿರು ಜೊತೆ ಇದ್ದ ಫೋಟೋ ಹಂಚಿಕೊಂಡಿರುವ ಅವರು, ಪತಿಗೆ ಬರ್ತ್​ಡೇ ವಿಶ್ ಮಾಡಿದ್ದಾರೆ. ಈ ಫೋಟೋ ಮೇಘನಾ ಹಾಗೂ ಚಿರಂಜೀವಿ ಸರ್ಜಾ ಅವರ ಅಭಿಮಾನಿ ವಲಯದಲ್ಲಿ ವೈರಲ್ ಆಗುತ್ತಿದೆ.

ಚಿರಂಜೀವಿ ಸರ್ಜಾ ಅವರು ಜನಿಸಿದ್ದು 1984ರ ಅಕ್ಟೋಬರ್ 17ರಂದು. ಅವರು ನಮ್ಮ ಜೊತೆ ಇದ್ದಿದ್ದರೆ 39ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದರು. ಆದರೆ ಕೆಲ ವರ್ಷಗಳ ಹಿಂದೆ ಹೃದಯಾಘಾತದಿಂದ ಚಿರಂಜೀವಿ ಅವರು ಮೃತಪಟ್ಟರು. ಆದರೆ, ಮೇಘನಾ ರಾಜ್ ಹಾಗೂ ಅಭಿಮಾನಿಗಳ ಪಾಲಿಗೆ ಅವರಿನ್ನೂ ಜೀವಂತವಾಗಿದ್ದಾರೆ. ಅವರನ್ನು ನಾನಾ ರೀತಿಯಲ್ಲಿ ನೆನಪಿಸಿಕೊಳ್ಳುವ ಕೆಲಸ ಆಗುತ್ತಿದೆ.

ಚಿರಂಜೀವಿ ಸರ್ಜಾ ಅವರ ಜೊತೆ ಕಳೆದ ಕ್ಷಣದ ಫೋಟೋ ಹಂಚಿಕೊಂಡಿದ್ದಾರೆ ಮೇಘನಾ ರಾಜ್. ‘ಹ್ಯಾಪಿ ಬರ್ತ್​ಡೇ ಹಸ್ಬಂಡ್’ ಎಂದು ಅವರು ಬರೆದುಕೊಂಡಿದ್ದಾರೆ. ಈ ಫೋಟೋಗೆ ಬಗೆಬಗೆಯಲ್ಲಿ ಕಮೆಂಟ್​ಗಳು ಬಂದಿವೆ. ‘ಹುಟ್ಟುಹಬ್ಬದ ಶುಭಾಶಯಗಳು ಚಿರಂಜೀವಿ ಅವರೇ. ನಾವು ನಿಮ್ಮನ್ನು ಮಿಸ್ ಮಾಡಿಕೊಳ್ಳುತ್ತಿದ್ದೇವೆ’ ಎಂದು ಕೆಲವರು ಬರೆದುಕೊಂಡಿದ್ದಾರೆ.

ಚಿರಂಜೀವಿ ಸರ್ಜಾ ಅವರು ಮೃತಪಟ್ಟ ನಂತರದಲ್ಲಿ ಮೇಘನಾ ರಾಜ್ ಮತ್ತೊಂದು ಮದುವೆ ಆಗಲಿದ್ದಾರೆ ಎಂದೆಲ್ಲ ಸುದ್ದಿ ಹಬ್ಬಿತು. ಆದರೆ, ಅದು ಸುಳ್ಳು ಎಂಬುದನ್ನು ಅವರು ಸ್ಪಷ್ಟನೆ ನೀಡಾಗಿದೆ. ಅವರಿಗೆ ಈಗ ಮಗ ರಾಯನ್ ರಾಜ್ ಸರ್ಜಾನೇ ಎಲ್ಲಾ ಆಗಿದ್ದಾನೆ. ಅವನ ಆರೈಕೆಯಲ್ಲಿ ಮೇಘನಾ ಬ್ಯುಸಿ ಆಗಿದ್ದಾರೆ. ಅವರು ರಾಯನ್​ನಲ್ಲಿ ಚಿರಂಜೀವಿಯನ್ನು ಕಾಣುತ್ತಿದ್ದಾರೆ.

View this post on Instagram

A post shared by Meghana Raj Sarja (@megsraj)

ಇದನ್ನೂ ಓದಿ: ಅಳಿಯ ಚಿರಂಜೀವಿ ಸರ್ಜಾ ನಟಿಸಿದ ಕೊನೇ ಸಿನಿಮಾ ‘ರಾಜಮಾರ್ತಾಂಡ’ ನೋಡಿ ಸುಂದರ್​ ರಾಜ್​ ಹೇಳಿದ್ದೇನು?

ಇತ್ತೀಚೆಗೆ ಚಿರಂಜೀವಿ ಸರ್ಜಾ ಅವರ ಕೊನೆಯ ಸಿನಿಮಾ ‘ರಾಜಮಾರ್ತಾಂಡ’ ರಿಲೀಸ್ ಆಗಿದೆ. ಈ ಕಾರಣಕ್ಕೂ ಚಿರಂಜೀವಿ ಅವರ ಬರ್ತ್​ಡೇ ಸಾಕಷ್ಟು ವಿಶೇಷ ಎನಿಸಿಕೊಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್