AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chiranjeevi Sarja Birthday: ಚಿರಂಜೀವಿ ಸರ್ಜಾ ಜನ್ಮದಿನಕ್ಕೆ ರಾಯನ್​ ರಾಜ್​ ಸರ್ಜಾ, ಮೇಘನಾ ರಾಜ್​ ಕಡೆಯಿಂದ ವಿಶೇಷ ಗಿಫ್ಟ್​

Happy Birthday Chiranjeevi Sarja: ಚಿರಂಜೀವಿ ಸರ್ಜಾ ಬರ್ತ್​ಡೇ ಸಲುವಾಗಿ ‘ರಾಜಮಾರ್ತಾಂಡ’ ಚಿತ್ರದ ಟೀಸರ್​ ಬಿಡುಗಡೆ ಆಗಲಿದೆ. ಮೇಘನಾ ರಾಜ್​ ನಟಿಸಲಿರುವ ಹೊಸ ಸಿನಿಮಾ ಲಾಂಚ್​ ಆಗಲಿದೆ. ಅಪ್ಪನಿಗೆ ರಾಯನ್​ ರಾಜ್​ ಸರ್ಜಾ ವಿಶ್​ ಮಾಡಲಿದ್ದಾನೆ.

Chiranjeevi Sarja Birthday: ಚಿರಂಜೀವಿ ಸರ್ಜಾ ಜನ್ಮದಿನಕ್ಕೆ ರಾಯನ್​ ರಾಜ್​ ಸರ್ಜಾ, ಮೇಘನಾ ರಾಜ್​ ಕಡೆಯಿಂದ ವಿಶೇಷ ಗಿಫ್ಟ್​
ಚಿರಂಜೀವಿ ಸರ್ಜಾ
TV9 Web
| Edited By: |

Updated on: Oct 17, 2021 | 7:28 AM

Share

ನಟ ಚಿರಂಜೀವಿ ಸರ್ಜಾ ಅವರನ್ನು ಅಭಿಮಾನಿಗಳು ಸಖತ್​ ಮಿಸ್​ ಮಾಡಿಕೊಳ್ಳುತ್ತಿದ್ದಾರೆ. ಇಂದು (ಅ.17) ಚಿರು ಹುಟ್ಟುಹಬ್ಬ. ಒಂದು ವೇಳೆ ಅವರು ನಮ್ಮೊಂದಿಗೆ ಇದ್ದಿದ್ದರೆ ಅವರ ಮನೆ ಮುಂದೆ ನೂರಾರು ಅಭಿಮಾನಿಗಳು ಜಮಾಯಿಸಿ ನೆಚ್ಚಿನ ನಟನಿಗೆ ಕೇಕ್​ ತಿನ್ನಿಸಿ, ಉಡುಗೊರೆ ನೀಡಿ ಸಂಭ್ರಮಿಸುತ್ತಿದ್ದರು. ಚಿರು ಇಲ್ಲದೇ ನಡೆಯುತ್ತಿರುವ ಎರಡನೇ ವರ್ಷದ ಹುಟ್ಟುಹಬ್ಬ ಇದು. ಸೋಶಿಯಲ್​ ಮೀಡಿಯಾದಲ್ಲಿ ಸ್ನೇಹಿತರು, ಅಭಿಮಾನಿಗಳು, ಕುಟುಂಬದವರು ಶುಭಾಶಯ ಕೋರುತ್ತಿದ್ದಾರೆ. ಅವರ ಜೊತೆ ಕಳೆದ ಕ್ಷಣಗಳನ್ನು ನೆನಪಿಸಿಕೊಳ್ಳುತ್ತಿದ್ದಾರೆ.

ಅಪ್ಪನಿಗೆ ರಾಯನ್​ ರಾಜ್ ಸರ್ಜಾ ವಿಶ್​:

ಹೃದಯಾಘಾತದಿಂದ ನಿಧನರಾಗುವುದಕ್ಕೂ ಮುನ್ನ ಚಿರಂಜೀವಿ ಸರ್ಜಾ ಅವರು ‘ರಾಜಮಾರ್ತಾಂಡ’ ಸಿನಿಮಾದಲ್ಲಿ ನಟಿಸಿದ್ದರು. ಆ ಚಿತ್ರದ ಬಗ್ಗೆ ಅವರು ಸಖತ್​ ನಿರೀಕ್ಷೆ ಇಟ್ಟುಕೊಂಡಿದ್ದರು. ಕೆಲವು ದೃಶ್ಯಗಳಿಗೆ ಚಿರು ಡಬ್ಬಿಂಗ್​ ಮಾಡಿದ್ದರು. ಡಬ್ಬಿಂಗ್​ ಕೆಲಸಗಳು ಇನ್ನೂ ಬಾಕಿ ಇರುವಾಗಲೇ ಅವರು ಇಹಲೋಕ ತ್ಯಜಿಸಿದರು. ಉಳಿದ ದೃಶ್ಯಗಳಿಗೆ ಧ್ರುವ ಸರ್ಜಾ ಡಬ್ಬಿಂಗ್​ ಮಾಡಿದ್ದಾರೆ. ಈಗ ಆ ಚಿತ್ರದ ಟೀಸರ್​ ಬಿಡುಗಡೆ ಆಗುತ್ತಿದೆ. ಅಪ್ಪನಿಗೆ ರಾಯೆನ್​ ರಾಜ್​ ಸರ್ಜಾ ಬರ್ತ್​ಡೇ ವಿಶ್​ ಮಾಡಲಿದ್ದಾನೆ. ಇಂದು 11 ಗಂಟೆಗೆ ಈ ಟೀಸರ್​ ಬಿಡುಗಡೆ ಆಗಿದೆ.

ಚಿರು ಹುಟ್ಟುಹಬ್ಬಕ್ಕೆ ಮೇಘನಾ ಹೊಸ ಸಿನಿಮಾ:

ಚಿರಂಜೀವಿ ಸರ್ಜಾ ನಿಧನದ ಬಳಿಕ ನಟನೆಯಿಂದ ಗ್ಯಾಪ್​ ಪಡೆದುಕೊಂಡಿದ್ದ ಮೇಘನಾ ರಾಜ್​ ಅವರು ಈಗ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಆ ಚಿತ್ರ ಇಂದು ಚಿರು ಹುಟ್ಟುಹಬ್ಬದ ಪ್ರಯುಕ್ತ ಸೆಟ್ಟೇರುತ್ತಿದೆ. ಇದು ಅವರ ಅಭಿಮಾನಿಗಳಿಗೆ ಸಖತ್​ ಖುಷಿ ನೀಡಿದೆ. ಮೇಘನಾ ಆದಷ್ಟು ಬೇಗ ಕಮ್​ಬ್ಯಾಕ್​ ಮಾಡಬೇಕು ಎಂಬುದೇ ಫ್ಯಾನ್ಸ್​ ಬಯಕೆ ಆಗಿತ್ತು. ಆ ಬಯಕೆಯನ್ನು ಮೇಘನಾ ಈಡೇರಿಸುತ್ತಿದ್ದಾರೆ. ಈ ಚಿತ್ರದ ಲಾಂಚಿಂಗ್​ ಕಾರ್ಯಕ್ರಮಕ್ಕೆ ಹಿರಿಯ ನಿರ್ದೇಶಕ ನಾಗಾಭರಣ, ನಟ ಸುಂದರ್​ ರಾಜ್​, ಕಲಾ ನಿರ್ದೇಶಕ ಶಿವಕುಮಾರ್​ ಮುಂತಾದವರು ಹಾಜರಿ ಹಾಕಲಿದ್ದಾರೆ. ಚಿರು ಸ್ನೇಹಿತ ಪನ್ನಗ ಭರಣ ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ.

ಇದನ್ನೂ ಓದಿ:

Meghana Raj: 45 ವರ್ಷ ಹಳೇ ಗೊಂಬೆಗಳ ಜತೆ ರಾಯನ್​ ರಾಜ್​ ಸರ್ಜಾ; ಮೇಘನಾ ರಾಜ್-ಚಿರು ಪುತ್ರನಿಗೆ ಮೊದಲ ದಸರಾ

Meghana Raj: ಮೇಘನಾ ರಾಜ್​ ಎರಡನೇ ಮದುವೆ ಬಗ್ಗೆ ಸುಳ್ಳು ಸುದ್ದಿ; ನಟ ಪ್ರಥಮ್​ ಆಕ್ರೋಶ

Follow Us
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ