AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಫೋಟೋದಲ್ಲಿರೋ ಇಬ್ಬರು ಸ್ಯಾಂಡಲ್​​ವುಡ್​ನ ಸ್ಟಾರ್ ಹೀರೋಗಳು; ಒಬ್ಬರು ನಮ್ಮೊಂದಿಗಿಲ್ಲ

ನಮ್ಮನ್ನು ಬಿಟ್ಟು ಹೋದ ಹೀರೋಗಳ ಬಾಲ್ಯದ ಫೋಟೋಗಳನ್ನು ಫ್ಯಾನ್ಸ್ ವೈರಲ್ ಮಾಡುತ್ತಾರೆ. ಈಗ ಸ್ಯಾಂಡಲ್​ವುಡ್ ಹೀರೋ ಒಬ್ಬರ ಬಾಲ್ಯದ ಫೋಟೋ ವೈರಲ್ ಆಗಿದೆ.

ಈ ಫೋಟೋದಲ್ಲಿರೋ ಇಬ್ಬರು ಸ್ಯಾಂಡಲ್​​ವುಡ್​ನ ಸ್ಟಾರ್ ಹೀರೋಗಳು; ಒಬ್ಬರು ನಮ್ಮೊಂದಿಗಿಲ್ಲ
ಸೆಲೆಬ್ರಿಟಿ ಬಾಲ್ಯದ ಫೋಟೋ
ರಾಜೇಶ್ ದುಗ್ಗುಮನೆ
|

Updated on:Jun 07, 2023 | 9:07 AM

Share

ಸೋಶಿಯಲ್ ಮೀಡಿಯಾದಲ್ಲಿ ಈಗ ಥ್ರೋಬ್ಯಾಕ್ ಟ್ರೆಂಡ್ ಜೋರಾಗಿದೆ. ಬಾಲ್ಯದ ಫೋಟೋ ಹಂಚಿಕೊಂಡು ಥ್ರೋಬ್ಯಾಕ್ (Throwback Photo) ಹ್ಯಾಶ್​ಟ್ಯಾಗ್  ಹಾಕಲಾಗುತ್ತದೆ. ಕೆಲವೊಮ್ಮೆ ನಮ್ಮನ್ನು ಬಿಟ್ಟು ಹೋದ ಹೀರೋಗಳ ಬಾಲ್ಯದ ಫೋಟೋಗಳನ್ನು ಫ್ಯಾನ್ಸ್ ವೈರಲ್ ಮಾಡುತ್ತಾರೆ. ಈಗ ಸ್ಯಾಂಡಲ್​ವುಡ್ ಹೀರೋ ಒಬ್ಬರ ಬಾಲ್ಯದ ಫೋಟೋ ವೈರಲ್ ಆಗಿದೆ. ಬೇಸರದ ವಿಚಾರ ಎಂದರೆ ಅವರು ಇಂದು ನಮ್ಮ ಜೊತೆ ಇಲ್ಲ. ಅವರು ಬೇರಾರು ಅಲ್ಲ ಚಿರಂಜೀವಿ ಸರ್ಜಾ(Chiranjeevi Sarja) . ಇಂದು (ಜೂನ್ 7) ಅವರ ಮೂರನೇ ವರ್ಷದ ಪುಣ್ಯತಿಥಿ. ಅವರನ್ನು ನೆನಪಿಸಿಕೊಳ್ಳುವ ಕೆಲಸ ಅಭಿಮಾನಿಗಳಿಂದ ಆಗುತ್ತಿದೆ.

ಚಿರಂಜೀವಿ ಸರ್ಜಾ ಅವರು 2020ರ ಜೂನ್ 7ರಂದು ಹೃದಯಾಘಾತದಿಂದ ಮೃತಪಟ್ಟರು. ಅವರ ಸಾವು ಇಡೀ ಕುಟುಂಬ ಹಾಗೂ ಅಭಿಮಾನಿ ವರ್ಗಕ್ಕೆ ದುಃಖ ತಂದಿತ್ತು. ಇಂದು ಅವರನ್ನು ನೆನಪಿಸಿಕೊಳ್ಳುವ ಕೆಲಸ ಆಗುತ್ತಿದೆ. ಅದೇ ರೀತಿ ಚಿರಂಜೀವಿ ಅವರು ಅಂದು ಹಂಚಿಕೊಂಡ ಫೋಟೋ ಒಂದನ್ನು ಈಗ ಫ್ಯಾನ್ಸ್ ಶೇರ್ ಮಾಡಿಕೊಳ್ಳುತ್ತಿದ್ದಾರೆ.

ಸಾಯುವುದಕ್ಕೂ ಒಂದು ದಿನ ಮೊದಲು ಅಂದರೆ ಜೂನ್ 6ರಂದು (2020) ಚಿರಂಜೀವಿ ಒಂದು ಫೋಟೋ ಶೇರ್ ಮಾಡಿಕೊಂಡಿದ್ದರು. ಈ ಫೋಟೋದಲ್ಲಿ ಚಿರಂಜೀವಿ, ಧ್ರುವ ಸರ್ಜಾ ಹಾಗೂ ಮತ್ತೋರ್ವ ವ್ಯಕ್ತಿ ಇದ್ದಾರೆ. ಬಾಲ್ಯದ ಫೋಟೋ ಹಾಗೂ ಲೇಟೇಸ್ಟ್ ಫೋಟೋನ ಜೋಡಿಸಿ ಪೋಸ್ಟ್ ಮಾಡಿದ್ದರು ಚಿರು. ‘ಅಂದು ಮತ್ತು ಇಂದು. ನಾವು ಹಾಗೆಯೇ ಇದ್ದೇವೆ. ಏನು ಹೇಳುತ್ತೀರಿ’ ಎಂದು ಅವರು ಈ ಪೋಸ್ಟ್​ಗೆ ಕ್ಯಾಪ್ಶನ್ ನೀಡಿದ್ದರು.

ಈ ಫೋಟೋ ಅಭಿಮಾನಿಗಳ ವಲಯದಲ್ಲಿ ಮತ್ತೆ ವೈರಲ್ ಆಗುತ್ತಿದೆ. ಚಿರಂಜೀವಿಯನ್ನು ಅನೇಕರು ಮಿಸ್ ಮಾಡಿಕೊಂಡಿದ್ದಾರೆ. ಈಗಲೂ ಈ ಪೋಸ್ಟ್​ಗೆ ಕಮೆಂಟ್​ಗಳು ಬರುತ್ತಿವೆ. ಅನೇಕರು ಅವರನ್ನು ಮಿಸ್ ಮಾಡಿಕೊಳ್ಳುತ್ತಿರುವುದಾಗಿ ಕಮೆಂಟ್ ಹಾಕುತ್ತಿದ್ದಾರೆ.

ಇದನ್ನೂ ಓದಿ:  ಚಿರಂಜೀವಿ ಸರ್ಜಾ ಪುಣ್ಯತಿಥಿ: ಪತಿ ಅಗಲಿಕೆ ಬಳಿಕ ಮೇಘನಾ ರಾಜ್ ವೈಯಕ್ತಿಕ ಜೀವನದ ಬಗ್ಗೆ ಕೇಳಿ ಬಂದಿತ್ತು ದೊಡ್ಡ ವದಂತಿ

ಚಿರಂಜೀವಿ ಸರ್ಜಾ ಅವರ ಅಂತ್ಯಕ್ರಿಯೆ ಬೆಂಗಳೂರಿನ ಹೊರವಲಯದಲ್ಲಿರುವ ಧ್ರುವ ಸರ್ಜಾ ಫಾರ್ಮ್​ಹೌಸ್​ನಲ್ಲಿ ಮಾಡಲಾಗಿತ್ತು. ಇಂದು ಚಿರು ಅವರ ಸಮಾಧಿಗೆ ಇಡೀ ಕುಟುಂಬ ಭೇಟಿ ನೀಡಲಿದೆ. ಅಲ್ಲಿಗೆ ತೆರಳಿ ಪೂಜೆ ಮಾಡಲಿದೆ. ಈ ಮೂಲಕ ಚಿರುನ ನೆನಪಿಸಿಕೊಳ್ಳುವ ಕೆಲಸ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:39 am, Wed, 7 June 23

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು