AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಫೋಟೋದಲ್ಲಿರೋ ಇಬ್ಬರು ಸ್ಯಾಂಡಲ್​​ವುಡ್​ನ ಸ್ಟಾರ್ ಹೀರೋಗಳು; ಒಬ್ಬರು ನಮ್ಮೊಂದಿಗಿಲ್ಲ

ನಮ್ಮನ್ನು ಬಿಟ್ಟು ಹೋದ ಹೀರೋಗಳ ಬಾಲ್ಯದ ಫೋಟೋಗಳನ್ನು ಫ್ಯಾನ್ಸ್ ವೈರಲ್ ಮಾಡುತ್ತಾರೆ. ಈಗ ಸ್ಯಾಂಡಲ್​ವುಡ್ ಹೀರೋ ಒಬ್ಬರ ಬಾಲ್ಯದ ಫೋಟೋ ವೈರಲ್ ಆಗಿದೆ.

ಈ ಫೋಟೋದಲ್ಲಿರೋ ಇಬ್ಬರು ಸ್ಯಾಂಡಲ್​​ವುಡ್​ನ ಸ್ಟಾರ್ ಹೀರೋಗಳು; ಒಬ್ಬರು ನಮ್ಮೊಂದಿಗಿಲ್ಲ
ಸೆಲೆಬ್ರಿಟಿ ಬಾಲ್ಯದ ಫೋಟೋ
ರಾಜೇಶ್ ದುಗ್ಗುಮನೆ
|

Updated on:Jun 07, 2023 | 9:07 AM

Share

ಸೋಶಿಯಲ್ ಮೀಡಿಯಾದಲ್ಲಿ ಈಗ ಥ್ರೋಬ್ಯಾಕ್ ಟ್ರೆಂಡ್ ಜೋರಾಗಿದೆ. ಬಾಲ್ಯದ ಫೋಟೋ ಹಂಚಿಕೊಂಡು ಥ್ರೋಬ್ಯಾಕ್ (Throwback Photo) ಹ್ಯಾಶ್​ಟ್ಯಾಗ್  ಹಾಕಲಾಗುತ್ತದೆ. ಕೆಲವೊಮ್ಮೆ ನಮ್ಮನ್ನು ಬಿಟ್ಟು ಹೋದ ಹೀರೋಗಳ ಬಾಲ್ಯದ ಫೋಟೋಗಳನ್ನು ಫ್ಯಾನ್ಸ್ ವೈರಲ್ ಮಾಡುತ್ತಾರೆ. ಈಗ ಸ್ಯಾಂಡಲ್​ವುಡ್ ಹೀರೋ ಒಬ್ಬರ ಬಾಲ್ಯದ ಫೋಟೋ ವೈರಲ್ ಆಗಿದೆ. ಬೇಸರದ ವಿಚಾರ ಎಂದರೆ ಅವರು ಇಂದು ನಮ್ಮ ಜೊತೆ ಇಲ್ಲ. ಅವರು ಬೇರಾರು ಅಲ್ಲ ಚಿರಂಜೀವಿ ಸರ್ಜಾ(Chiranjeevi Sarja) . ಇಂದು (ಜೂನ್ 7) ಅವರ ಮೂರನೇ ವರ್ಷದ ಪುಣ್ಯತಿಥಿ. ಅವರನ್ನು ನೆನಪಿಸಿಕೊಳ್ಳುವ ಕೆಲಸ ಅಭಿಮಾನಿಗಳಿಂದ ಆಗುತ್ತಿದೆ.

ಚಿರಂಜೀವಿ ಸರ್ಜಾ ಅವರು 2020ರ ಜೂನ್ 7ರಂದು ಹೃದಯಾಘಾತದಿಂದ ಮೃತಪಟ್ಟರು. ಅವರ ಸಾವು ಇಡೀ ಕುಟುಂಬ ಹಾಗೂ ಅಭಿಮಾನಿ ವರ್ಗಕ್ಕೆ ದುಃಖ ತಂದಿತ್ತು. ಇಂದು ಅವರನ್ನು ನೆನಪಿಸಿಕೊಳ್ಳುವ ಕೆಲಸ ಆಗುತ್ತಿದೆ. ಅದೇ ರೀತಿ ಚಿರಂಜೀವಿ ಅವರು ಅಂದು ಹಂಚಿಕೊಂಡ ಫೋಟೋ ಒಂದನ್ನು ಈಗ ಫ್ಯಾನ್ಸ್ ಶೇರ್ ಮಾಡಿಕೊಳ್ಳುತ್ತಿದ್ದಾರೆ.

ಸಾಯುವುದಕ್ಕೂ ಒಂದು ದಿನ ಮೊದಲು ಅಂದರೆ ಜೂನ್ 6ರಂದು (2020) ಚಿರಂಜೀವಿ ಒಂದು ಫೋಟೋ ಶೇರ್ ಮಾಡಿಕೊಂಡಿದ್ದರು. ಈ ಫೋಟೋದಲ್ಲಿ ಚಿರಂಜೀವಿ, ಧ್ರುವ ಸರ್ಜಾ ಹಾಗೂ ಮತ್ತೋರ್ವ ವ್ಯಕ್ತಿ ಇದ್ದಾರೆ. ಬಾಲ್ಯದ ಫೋಟೋ ಹಾಗೂ ಲೇಟೇಸ್ಟ್ ಫೋಟೋನ ಜೋಡಿಸಿ ಪೋಸ್ಟ್ ಮಾಡಿದ್ದರು ಚಿರು. ‘ಅಂದು ಮತ್ತು ಇಂದು. ನಾವು ಹಾಗೆಯೇ ಇದ್ದೇವೆ. ಏನು ಹೇಳುತ್ತೀರಿ’ ಎಂದು ಅವರು ಈ ಪೋಸ್ಟ್​ಗೆ ಕ್ಯಾಪ್ಶನ್ ನೀಡಿದ್ದರು.

ಈ ಫೋಟೋ ಅಭಿಮಾನಿಗಳ ವಲಯದಲ್ಲಿ ಮತ್ತೆ ವೈರಲ್ ಆಗುತ್ತಿದೆ. ಚಿರಂಜೀವಿಯನ್ನು ಅನೇಕರು ಮಿಸ್ ಮಾಡಿಕೊಂಡಿದ್ದಾರೆ. ಈಗಲೂ ಈ ಪೋಸ್ಟ್​ಗೆ ಕಮೆಂಟ್​ಗಳು ಬರುತ್ತಿವೆ. ಅನೇಕರು ಅವರನ್ನು ಮಿಸ್ ಮಾಡಿಕೊಳ್ಳುತ್ತಿರುವುದಾಗಿ ಕಮೆಂಟ್ ಹಾಕುತ್ತಿದ್ದಾರೆ.

ಇದನ್ನೂ ಓದಿ:  ಚಿರಂಜೀವಿ ಸರ್ಜಾ ಪುಣ್ಯತಿಥಿ: ಪತಿ ಅಗಲಿಕೆ ಬಳಿಕ ಮೇಘನಾ ರಾಜ್ ವೈಯಕ್ತಿಕ ಜೀವನದ ಬಗ್ಗೆ ಕೇಳಿ ಬಂದಿತ್ತು ದೊಡ್ಡ ವದಂತಿ

ಚಿರಂಜೀವಿ ಸರ್ಜಾ ಅವರ ಅಂತ್ಯಕ್ರಿಯೆ ಬೆಂಗಳೂರಿನ ಹೊರವಲಯದಲ್ಲಿರುವ ಧ್ರುವ ಸರ್ಜಾ ಫಾರ್ಮ್​ಹೌಸ್​ನಲ್ಲಿ ಮಾಡಲಾಗಿತ್ತು. ಇಂದು ಚಿರು ಅವರ ಸಮಾಧಿಗೆ ಇಡೀ ಕುಟುಂಬ ಭೇಟಿ ನೀಡಲಿದೆ. ಅಲ್ಲಿಗೆ ತೆರಳಿ ಪೂಜೆ ಮಾಡಲಿದೆ. ಈ ಮೂಲಕ ಚಿರುನ ನೆನಪಿಸಿಕೊಳ್ಳುವ ಕೆಲಸ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:39 am, Wed, 7 June 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ