AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿರಂಜೀವಿ ಸರ್ಜಾ ಇಲ್ಲದೇ ಉರುಳಿತು ಒಂದು ವರ್ಷ; ಅಣ್ಣನಿಗೆ ಧ್ರುವ ಭಾವುಕ ಪತ್ರ ವೈರಲ್​

Chiranjeevi Sarja Death Anniversary: ಚಿರಂಜೀವಿ ಸರ್ಜಾ ಅವರ ಮೊದಲ ವರ್ಷದ ಪುಣ್ಯ ಸ್ಮರಣೆ ಸಲುವಾಗಿ ಸಹೋದರ ಧ್ರುವ ಸರ್ಜಾ ಒಂದು ಪತ್ರವನ್ನು ಶೇರ್​ ಮಾಡಿಕೊಂಡಿದ್ದಾರೆ. ಇಡೀ ಸರ್ಜಾ ಕುಟುಂಬದ ಪರವಾಗಿ ಈ ಪತ್ರವನ್ನು ಬರೆಯಲಾಗಿದೆ.

ಚಿರಂಜೀವಿ ಸರ್ಜಾ ಇಲ್ಲದೇ ಉರುಳಿತು ಒಂದು ವರ್ಷ; ಅಣ್ಣನಿಗೆ ಧ್ರುವ ಭಾವುಕ ಪತ್ರ ವೈರಲ್​
ಚಿರಂಜೀವಿ ಸರ್ಜಾ, ಧ್ರುವ ಸರ್ಜಾ
ಮದನ್​ ಕುಮಾರ್​
| Edited By: |

Updated on:Jun 07, 2021 | 10:17 AM

Share

ಸರ್ಜಾ ಕುಟುಂಬದ ಪಾಲಿಗೆ ಜೂ.7 ಕರಾಳ ದಿನ. ಕನ್ನಡದಲ್ಲಿ ಬ್ಯಾಕ್​ ಟು ಬ್ಯಾಕ್​ ಸಿನಿಮಾ ಮಾಡುತ್ತಿದ್ದ ನಟ ಚಿರಂಜೀವಿ ಸರ್ಜಾ ಅವರು ಅಂದು ಹೃದಯಾಘಾತದಿಂದ ಕೊನೆಯುಸಿರೆಳೆದರು. ಅಂಥ ಒಂದು ದುರ್ಘಟನೆ ಸಂಭವಿಸುತ್ತಿದೆ ಎಂದು ಕನಸಿನಲ್ಲಿಯೂ ಸಹ ಯಾರೂ ಊಹಿರಲಿಲ್ಲ. ಚಿರು ನಿಧನರಾಗಿದ್ದಾರೆ ಎಂಬ ಸುದ್ದಿಯನ್ನು ಅಭಿಮಾನಿಗಳಿಗೆ ಅರಗಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಅವರ ಕುಟುಂಬದವರಿಗೆ ಆದ ನೋವನ್ನು ಪದಗಳಲ್ಲಿ ವಿವರಿಸಲು ಸಾಧ್ಯವಿಲ್ಲ. ಅರ್ಧ ದಾರಿಯಲ್ಲೇ ಪಯಣ ಅಂತ್ಯಗೊಳಿಸಿದ ಚಿರುಗೆ ಸರ್ಜಾ ಕುಟುಂಬದವರು ಪತ್ರ ಬರೆದಿದ್ದಾರೆ.

ಚಿರಂಜೀವಿ ಸರ್ಜಾ ಅವರ ಮೊದಲ ವರ್ಷದ ಪುಣ್ಯ ಸ್ಮರಣೆ ಸಲುವಾಗಿ ಸಹೋದರ ಧ್ರುವ ಸರ್ಜಾ ಒಂದು ಪತ್ರವನ್ನು ಶೇರ್​ ಮಾಡಿಕೊಂಡಿದ್ದಾರೆ. ಇಡೀ ಸರ್ಜಾ ಕುಟುಂಬದ ಪರವಾಗಿ ಈ ಪತ್ರವನ್ನು ಬರೆಯಲಾಗಿದೆ. ಚಿರು ಮತ್ತು ಧ್ರುವ ಅಣ್ಣ-ತಮ್ಮಂದಿರಾದರೂ ಅವರು ಸ್ನೇಹಿತರ ರೀತಿ ಇದ್ದರು. ಅವರಿಬ್ಬರ ಆತ್ಮೀಯತೆಗೆ ಸಾಕ್ಷಿ ಒದಗಿಸುವಂತಹ ಹಲವಾರು ವಿಡಿಯೋ ಮತ್ತು ಫೋಟೋಗಳು ಚಿರು ನಿಧನದ ಬಳಿಕ ವೈರಲ್​ ಆಗಿದ್ದವು. ಈಗ ಈ ಪತ್ರ ವೈರಲ್​ ಆಗುತ್ತಿದೆ.

‘ನಮ್ಮ ಹೃದಯದ ಚಿರಂಜೀವಿ, ನೀನು ದೇವರ ಮನೆಗೆ ಹೋಗಿ ಒಂದು ವರ್ಷ ಆಯಿತು. ಎಷ್ಟು ಬೇಗ ಒಂದು ವರ್ಷ. ಈ 365 ದಿನಗಳಲ್ಲಿ ನಿನ್ನ ನೆನೆಯದ ದಿನಗಳೇ ಇಲ್ಲ. ಕನಸಿನಲ್ಲಿ ನಿನ್ನ ಕಾಣದ ರಾತ್ರಿಗಳೇ ಇಲ್ಲ. ಮರೆಯಲಾಗದ ಚಿರ ನೆನಪುಗಳು. ಕುಟುಂಬದ ಮೇಲೆ ನಿನಗಿದ್ದ ಅಪಾರವಾದ ಗೌರವ, ಜನಗಳಿಗೆ ನೀನು ತೋರಿಸುತ್ತಿದ್ದ ಪ್ರೀತಿ, ಪ್ರೇಮ, ಉದಾರ ಗುಣ ಮತ್ತು ಅಜಾತಶತ್ರುವಾಗಿದ್ದ ನಿನ್ನ ನೆನಪುಗಳೇ ಈಗ ನಮ್ಮ ಕರಗಲಾರದ ಆಸ್ತಿ. ನೀನೆಲ್ಲಿದ್ದರೂ ಅಲ್ಲಿ ನಗು ತುಂಬಿರಬೇಕು. ನಿನ್ನ ಆತ್ಮ ಸದಾ ಶಾಂತಿಯಿಂದಿರಬೇಕು. ಆ ಪ್ರಾರ್ಥನೆಯಲ್ಲೇ, ಎಂದೆಂದೂ ನಿನ್ನ ನೆನಪಲ್ಲೇ.. ನಿನ್ನ ಪ್ರೀತಿಯ ನಿನ್ನ ಕುಟುಂಬ’ ಎಂದು ಪತ್ರದಲ್ಲಿ ಬರೆಯಲಾಗಿದೆ.

ಧ್ರುವ ಸರ್ಜಾ ಮಾತ್ರವಲ್ಲದೇ, ಮೇಘನಾ ರಾಜ್​ ಕೂಡ ಈ ಪತ್ರವನ್ನು ತಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಮೊದಲ ವರ್ಷದ ಪುಣ್ಯತಿಥಿಗೂ ಮೊದಲು ಮೇಘನಾ ರಾಜ್​ ಸಾಮಾಜಿಕ ಜಾಲತಾಣದಲ್ಲಿ ಒಂದು ಫೋಟೋವನ್ನು ಹಂಚಿಕೊಂಡಿದ್ದು, ‘ನನ್ನವನು’ ಎಂದು ಬರೆದುಕೊಂಡಿದ್ದಾರೆ. ಕೊರೊನಾ ವೈರಸ್​ ಎರಡನೇ ಅಲೆ ಕಾರಣದಿಂದ ಚಿರು ಪುಣ್ಯತಿಥಿಯನ್ನು ಕುಟುಂಬದವರು ಸರಳವಾಗಿ ಆಚರಿಸುತ್ತಿದ್ದಾರೆ. ಅಭಿಮಾನಿಗಳು ಕೂಡ ಚಿರುಗೆ ನೆನಪಿನ ನಮನ ಸಲ್ಲಿಸುತ್ತಿದ್ದಾರೆ.

ಇದನ್ನೂ ಓದಿ:

Chiranjeevi Sarja Death Anniversary: ಚಿರಂಜೀವಿ ಸರ್ಜಾ ಅಗಲಿದ ಕಹಿ ನೆನಪಿಗೆ ಒಂದು ವರ್ಷ; ಫೋಟೋ ಹಂಚಿಕೊಂಡ ಮೇಘನಾ ರಾಜ್

ಮೇಘನಾ ರಾಜ್ ​- ಚಿರಂಜೀವಿ ಸರ್ಜಾ ಪುತ್ರ ಜ್ಯೂ. ಚಿರುಗೆ ಹೆಜ್ಜೆ ಹೆಜ್ಜೆಗೂ ಪ್ರೀತಿ ತೋರಿಸುತ್ತಿರುವ ಫ್ಯಾನ್ಸ್​

(Chiranjeevi Sarja Death Anniversary: Dhruva Sarja remembers his brother Chiru with emotional letter)

Published On - 8:21 am, Mon, 7 June 21

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು