Chiranjeevi Sarja Death Anniversary: ಚಿರಂಜೀವಿ ಸರ್ಜಾ ಅಗಲಿದ ಕಹಿ ನೆನಪಿಗೆ ಒಂದು ವರ್ಷ; ಫೋಟೋ ಹಂಚಿಕೊಂಡ ಮೇಘನಾ ರಾಜ್

Meghana Raj: 2020 ಇಡೀ ಜಗತ್ತಿನ ಪಾಲಿಗೆ ಕೆಟ್ಟ ವರ್ಷ ಎಂದು ಪರಿಗಣಿಸಲ್ಪಟ್ಟಿದೆ. 2020ರ ಆರಂಭದಲ್ಲಿ ಕೊರೊನಾ ವೈರಸ್​ ವಿಶ್ವಾದ್ಯಂತ ಹರಡಿತ್ತು. ಅಲ್ಲದೆ, ಸಾಕಷ್ಟು ಸೆಲೆಬ್ರಿಟಿಗಳು ಕೂಡ ಮೃತಪಟ್ಟಿದ್ದು ಸಿನಿಪ್ರಿಯರಿಗೆ ತೀವ್ರ ನೋವಾಗಿತ್ತು.

Chiranjeevi Sarja Death Anniversary: ಚಿರಂಜೀವಿ ಸರ್ಜಾ ಅಗಲಿದ ಕಹಿ ನೆನಪಿಗೆ ಒಂದು ವರ್ಷ; ಫೋಟೋ ಹಂಚಿಕೊಂಡ ಮೇಘನಾ ರಾಜ್
ಚಿರಂಜೀವಿ ಸರ್ಜಾ-ಮೇಘನಾ
Follow us
| Updated By: ಮದನ್​ ಕುಮಾರ್​

Updated on: Jun 07, 2021 | 7:29 AM

ಸರಿಯಾಗಿ ಒಂದು ವರ್ಷದ ಹಿಂದಿನ ಮಾತು. ಹೀಗಾಗುತ್ತದೆ ಎಂದು ಯಾರೂ ಭಾವಿಸಿರಲಿಲ್ಲ. 2020ರ ಜೂನ್​ 7ರ ಮಧ್ಯಾಹ್ನ ‘ಹೃದಯಾಘಾತದಿಂದ ಚಿರಂಜೀವಿ ಸರ್ಜಾ ನಿಧನ ಹೊಂದಿದ್ದಾರೆ’ ಎನ್ನುವ ವಿಚಾರ ಸಿಡಿಲಂತೆ ಬಂದಪ್ಪಳಿಸಿತ್ತು. ಈ ವಿಚಾರವನ್ನು ಅನೇಕರು ನಂಬಲೂ ಸಾಧ್ಯವಾಗಿರಲಿಲ್ಲ. ಅವರ ಕುಟುಂಬ ಹಾಗೂ ಅಭಿಮಾನಿಗಳು ಕಣ್ಣೀರಲ್ಲಿ ಮುಳುಗುವಂತಾಯಿತು. ಈ ಕಹಿ ನೆನಪಿಗೆ ಈಗ ಒಂದು ವರ್ಷ.

2020 ಇಡೀ ಜಗತ್ತಿನ ಪಾಲಿಗೆ ಕೆಟ್ಟ ವರ್ಷ ಎಂದು ಪರಿಗಣಿಸಲ್ಪಟ್ಟಿದೆ. 2020ರ ಆರಂಭದಲ್ಲಿ ಕೊರೊನಾ ವೈರಸ್​ ವಿಶ್ವಾದ್ಯಂತ ಹರಡಿತ್ತು. ಅಲ್ಲದೆ, ಸಾಕಷ್ಟು ಸೆಲೆಬ್ರಿಟಿಗಳು ಕೂಡ ಮೃತಪಟ್ಟಿದ್ದು ಸಿನಿಪ್ರಿಯರಿಗೆ ತೀವ್ರ ನೋವಾಗಿತ್ತು. ಅದೆ ರೀತಿ ಜೂನ್​ 7ರಂದು ಚಿರು ಹೃದಯಾಘಾತದಿಂದ ಮೃತಪಟ್ಟರು. ಇದನ್ನು ಅರಗಿಸಿಕೊಳ್ಳೋಕೆ ಅವರ ಪತ್ನಿ ಮೇಘನಾ ರಾಜ್​ ತುಂಬಾನೇ ಕಷ್ಟಪಟ್ಟಿದ್ದಾರೆ.

ಚಿರಂಜೀವಿ ಸರ್ಜಾ ನಿಧನರಾಗುವುದಕ್ಕೂ ಒಂದು ದಿನ ಮೊದಲು ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತಂತ. ಹೀಗಾಗಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅವರ ವಯುಸ್ಸು ಚಿಕ್ಕದಾದ್ದರಿಂದ ಇದು ಹೃದಯ ಸಂಬಂಧಿ ಕಾಯಿಲೆ ಇರಬಹುದು ಎಂದು ಕುಟುಂಬದವರು ಭಾವಿಸಿರಲಿಲ್ಲ. ಮನೆಗೆ ಬಂದ ನಂತರ ಉಸಿರಾಟದ ತೊಂದರೆ ಜೊತೆಗೆ ತೀವ್ರ ಎದೆನೋವು ಕಾಣಿಸಿಕೊಂಡಿದೆ. ಆಗಲೇ ಅವರಿಗೆ ಹೃದಯಾಘಾತವಾಗಿದೆ ಎನ್ನಲಾಗಿತ್ತು.

2009ರಲ್ಲಿ ತೆರೆಗೆ ಬಂದ ವಾಯುಪುತ್ರ ಸಿನಿಮಾ ಮೂಲಕ ಚಿರು ಚಿತ್ರರಂಗಕ್ಕೆ ಕಾಲಿಟ್ಟರು. ನಂತರ ಅವರು ಸಾಲು ಸಾಲು ಚಿತ್ರಗಳಲ್ಲಿ ನಟಿಸಿದ್ದರು. ಅವರು ನಿಧನರಾಗುವುದಕ್ಕೂ ಕೆಲ ತಿಂಗಳ ಮೊದಲು ಅವರ ನಟನೆಯ ‘ಶಿವಾರ್ಜುನ’ ಸಿನಿಮಾ ರಿಲೀಸ್​ ಆಗಿತ್ತು. ಲಾಕ್​ಡೌನ್​ ಕಾರಣದಿಂದ ಸಿನಿಮಾ ಚಿತ್ರಮಂದಿರಗಳಿಂದ ತೆಗೆಯಬೇಕಾದ ಅನಿವಾರ್ಯತೆ ಬಂದಿತ್ತು.

ಮೊದಲ ವರ್ಷದ ಪುಣ್ಯತಿಥಿಗೂ ಮೊದಲು ಮೇಘನಾ ರಾಜ್​ ಸಾಮಾಜಿಕ ಜಾಲತಾಣದಲ್ಲಿ ಫೋಟೋವನ್ನು ಹಂಚಿಕೊಂಡಿದ್ದು, ‘ನನ್ನವನು’ ಎಂದು ಬರೆದುಕೊಂಡಿದ್ದಾರೆ. ಕೊರೊನಾ ವೈರಸ್​ ಮಿತಿಮೀರಿದೆ. ಹೀಗಾಗಿ, ಇಂದು (ಜೂನ್​ 7) ಚಿರು ಅವರ ಒಂದು ವರ್ಷದ ಪುಣ್ಯಸ್ಮರಣೆ ಕಾರ್ಯವನ್ನ ಸರ್ಜಾ ಕುಟುಂಬ ಸಿಂಪಲ್ ಆಗಿ ಮಾಡಲಿದೆ.

View this post on Instagram

A post shared by Meghana Raj Sarja (@megsraj)

ಇದನ್ನೂ ಓದಿ: ಮೇಘನಾ ರಾಜ್ ​- ಚಿರಂಜೀವಿ ಸರ್ಜಾ ಪುತ್ರ ಜ್ಯೂ. ಚಿರುಗೆ ಹೆಜ್ಜೆ ಹೆಜ್ಜೆಗೂ ಪ್ರೀತಿ ತೋರಿಸುತ್ತಿರುವ ಫ್ಯಾನ್ಸ್​

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ