AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೀಘ್ರವೇ ತೆರೆಗೆ ಬರಲಿದೆ ಚಿರಂಜೀವಿ ಸರ್ಜಾ ನಟನೆಯ ‘ರಾಜಮಾರ್ತಾಂಡ’; ಅಪ್​ಡೇಟ್​ ನೀಡಿದ ಚಿತ್ರತಂಡ

Chiranjeevi Sarja: ಚಿರಂಜೀವಿ ಸರ್ಜಾ ಅಭಿನಯದ ‘ರಾಜಮಾರ್ತಾಂಡ’ ಚಿತ್ರಕ್ಕೆ ಕೊನೇ ಹಂತದ ಕೆಲಸಗಳು ಮಾತ್ರ ಬಾಕಿ ಇವೆ. ಆದಷ್ಟು ಬೇಗ ಸಿನಿಮಾವನ್ನು ತೆರೆಗೆ ತರಬೇಕು ಎಂಬ ಆಶಯದೊಂದಿಗೆ ಚಿತ್ರತಂಡ ಕೆಲಸ ಮಾಡುತ್ತಿದೆ.

ಶೀಘ್ರವೇ ತೆರೆಗೆ ಬರಲಿದೆ ಚಿರಂಜೀವಿ ಸರ್ಜಾ ನಟನೆಯ ‘ರಾಜಮಾರ್ತಾಂಡ’; ಅಪ್​ಡೇಟ್​ ನೀಡಿದ ಚಿತ್ರತಂಡ
ಚಿರಂಜೀವಿ ಸರ್ಜಾ
TV9 Web
| Edited By: |

Updated on: Jan 04, 2022 | 7:30 AM

Share

ಚಿರಂಜೀವಿ ಸರ್ಜಾ (Chiranjeevi Sarja) ಅವರನ್ನು ಕಳೆದುಕೊಂಡಿದ್ದು ಕನ್ನಡ ಚಿತ್ರರಂಗಕ್ಕಾದ ನಷ್ಟ. ಹೃದಯಾಘಾತದಿಂದ ನಿಧನರಾಗುವುದಕ್ಕೂ ಮುನ್ನ ಅವರು ಕೆಲವು ಸಿನಿಮಾಗಳಲ್ಲಿ ನಟಿಸುತ್ತಿದ್ದರು. ಆ ಪೈಕಿ ‘ರಾಜಮಾರ್ತಾಂಡ’ ಸಿನಿಮಾ (Rajamarthanda Kannada Movie) ಹೆಚ್ಚು ನಿರೀಕ್ಷೆ ಮೂಡಿಸಿತ್ತು. ಟೀಸರ್​ ಮೂಲಕ ಭಾರಿ ಹೈಪ್​ ಕೂಡ ಸೃಷ್ಟಿ ಮಾಡಿತ್ತು. ಆದರೆ ಆ ಚಿತ್ರದ ಕೆಲಸಗಳು ಪೂರ್ಣಗೊಳ್ಳುವುಕ್ಕೂ ಮುನ್ನವೇ ಚಿರಂಜೀವಿ ಸರ್ಜಾ ವಿಧಿವಶರಾದರು. ಈಗ ಆ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಆ ಕುರಿತು ಚಿತ್ರತಂಡದಿಂದ ಅಪ್​ಡೇಟ್​ ಸಿಕ್ಕಿದೆ. ಚಿರಂಜೀವಿ ಸರ್ಜಾ ಅವರನ್ನು ಮತ್ತೆ ಬೆಳ್ಳಿಪರದೆ ಮೇಲೆ ನೋಡಬೇಕು ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ. ಅಂಥವರಿಗೆಲ್ಲ ಇಲ್ಲಿದೆ ಗುಡ್​ ನ್ಯೂಸ್​. ಶೀಘ್ರದಲ್ಲೇ ಈ ಚಿತ್ರವನ್ನು ಸೆನ್ಸಾರ್​ ಮಂಡಳಿ ಸದಸ್ಯರು ವೀಕ್ಷಿಸಲಿದ್ದಾರೆ.

‘ರಾಜಮಾರ್ತಾಂಡ’ ಸಿನಿಮಾದ ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳು ಬರದಿಂದ ಸಾಗುತ್ತಿವೆ. ಕೊನೇ ಹಂತದ ಕೆಲಸಗಳು ಮಾತ್ರ ಬಾಕಿ ಇವೆ. ಚಿರಂಜೀವಿ ಸರ್ಜಾ ಅವರ ಪಾತ್ರಕ್ಕೆ ಅವರ ಸಹೋದರ ಧ್ರುವ ಸರ್ಜಾ ಅವರು ಧ್ವನಿ ನೀಡಲಿದ್ದಾರೆ. ಆದಷ್ಟು ಬೇಗ ಸಿನಿಮಾವನ್ನು ತೆರೆಗೆ ತರಬೇಕು ಎಂಬ ಆಶಯದೊಂದಿಗೆ ಚಿತ್ರತಂಡ ಕೆಲಸ ಮಾಡುತ್ತಿದೆ.

ಈ ಸಿನಿಮಾದಲ್ಲಿ ಚಿರಂಜೀವಿ ಸರ್ಜಾ ಅವರಿಗೆ ನಾಯಕಿಯರಾಗಿ ದೀಪ್ತಿ‌ ಸಾತಿ, ಮೇಘಶ್ರೀ, ‘ಟಗರು’ ಖ್ಯಾತಿಯ ತ್ರಿವೇಣಿ ಅಭಿನಯಿದ್ದಾರೆ. ಭಜರಂಗಿ ಲೋಕಿ, ಚಿಕ್ಕಣ್ಣ, ದೇವರಾಜ್, ಸುಮಿತ್ರಾ, ಶಂಕರ್ ಅಶ್ವಥ್, ವಿನೀತ್ ಕುಮಾರ್ ಮುಂತಾದವರು ಈ ಚಿತ್ರದ ಪೋಷಕ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಚಿರಂಜೀವಿ ಸರ್ಜಾ ಅವರ ನಿಧನಕ್ಕೂ ಮುನ್ನ ‘ರಾಜಮಾರ್ತಾಂಡ’ ಚಿತ್ರೀಕರಣ ಪೂರ್ತಿಯಾಗಿತ್ತು. ಹಾಗಾಗಿ ಇದನ್ನು ಅವರು ಶೂಟಿಂಗ್​ ಮುಗಿಸಿದ್ದ ಕೊನೆಯ ಚಿತ್ರ ಎನ್ನಬಹುದು.‌

ಗೀತರಚನಕಾರರಾಗಿ ಜನಪ್ರಿಯರಾಗಿರುವ ಜೆ.ಕೆ. ರಾಮ್​ ನಾರಾಯಣ್ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರವನ್ನು ಶ್ರೀಮಾದೇಶ್ವರ ಪ್ರೊಡಕ್ಷನ್ಸ್ ಮೂಲಕ ಪ್ರಣವ್ ಗೌಡ ಎನ್., ನಿವೇದಿತಾ ಹಾಗೂ ಶಿವಕುಮಾರ್ ನಿರ್ಮಿಸಿದ್ದಾರೆ. ಈ ಚಿತ್ರದ ಹಾಡುಗಳಿಗೆ ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಧರ್ಮ ವಿಶ್ ಅವರು ಹಿನ್ನೆಲೆ ಸಂಗೀತ ನೀಡಿದ್ದಾರೆ. ಇವರಿಬ್ಬರ ಕಾಂಬಿನೇಷನ್​ನಲ್ಲಿ ‘ರಾಜಮಾರ್ತಾಂಡ’ ಚಿತ್ರದ ಮೆರುಗು ಹೆಚ್ಚಿದೆ. ಜೆ.ಕೆ. ಗಣೇಶ್ ಛಾಯಾಗ್ರಹಣ, ವೆಂಕಟೇಶ್ ಸಂಕಲನ, ವಿನೋದ್, ಪಳನಿರಾಜ್ ಸಾಹಸ ನಿರ್ದೇಶನ, ಭೂಷಣ್, ಹರ್ಷ ಅವರ ನೃತ್ಯ ನಿರ್ದೇಶನದಲ್ಲಿ ‘ರಾಜಮಾರ್ತಾಂಡ’ ಸಿನಿಮಾ ಮೂಡಿಬಂದಿದೆ.

ಇದನ್ನೂ ಓದಿ:

‘ಚಿರಂಜೀವಿಗೆ ಯಾವಾಗಲೂ ಭಾನುವಾರ ವಿಶೇಷವಾಗಿತ್ತು’; ಕಾರಣ ವಿವರಿಸಿದ ಮೇಘನಾ

ಕ್ರಿಸ್​ಮಸ್​ ಆಚರಿಸಿದ ಚಿರು ಪುತ್ರ ರಾಯನ್​; ಮೇಘನಾ ರಾಜ್​ ಹಂಚಿಕೊಂಡ ಫೋಟೋಗಳು ಇಲ್ಲಿವೆ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ