ಯಾವಾಗ ರಿಲೀಸ್​ ಆಗಲಿದೆ ಚಿರಂಜೀವಿ ಸರ್ಜಾ ನಟನೆಯ ‘ರಣಂ’? ಫ್ಯಾನ್ಸ್​ಗೆ ಬ್ರೇಕಿಂಗ್​ ನ್ಯೂಸ್ ನೀಡಿದ​ ಚಿತ್ರತಂಡ

ಕಳೆದ ವರ್ಷ ಇಹಲೋಕ ತ್ಯಜಿಸಿದ ಕನ್ನಡ ಚಿತ್ರರಂಗದ ಖ್ಯಾತ ನಟ ಚಿರಂಜೀವಿ ಸರ್ಜಾ ಅಭಿಮಾನಿಗಳು ಖುಷಿ ಪಡುವಂತಹ ಸುದ್ದಿ ಕೇಳಿಬಂದಿದೆ. ಮಾ.26ಕ್ಕಾಗಿ ಅವರೆಲ್ಲ ಕಾಯುವಂತಾಗಿದೆ.

ಯಾವಾಗ ರಿಲೀಸ್​ ಆಗಲಿದೆ ಚಿರಂಜೀವಿ ಸರ್ಜಾ ನಟನೆಯ ‘ರಣಂ’?  ಫ್ಯಾನ್ಸ್​ಗೆ ಬ್ರೇಕಿಂಗ್​ ನ್ಯೂಸ್ ನೀಡಿದ​ ಚಿತ್ರತಂಡ
‘ರಣಂ’ ಸಿನಿಮಾದಲ್ಲಿ ಚಿರಂಜೀವಿ ಸರ್ಜಾ
Follow us
|

Updated on:Mar 10, 2021 | 2:07 PM

ಸ್ಯಾಂಡಲ್​ವುಡ್​ನಲ್ಲಿ ತಮ್ಮದೇ ಆದಂತಹ ಚಾರ್ಮ್​ ಹೊಂದಿದ್ದ ನಟ ಚಿರಂಜೀವಿ ಸರ್ಜಾ ಅವರು 2020ರ ಜೂನ್​ 7ರಂದು ಹೃದಯಾಘಾತದಿಂದ ಮೃತರಾದರು. ಆ ದುರ್ಘಟನೆ ಸಂಭವಿಸುವುದಕ್ಕೂ ಮುನ್ನ ಅವರು ಕೆಲವು ಸಿನಿಮಾಗಳಲ್ಲಿ ತೊಡಗಿಸಿಕೊಂಡಿದ್ದರು. ಅವುಗಳಲ್ಲಿ ‘ರಣಂ’ ಕೂಡ ಪ್ರಮುಖವಾದದ್ದು. ಈಗ ಆ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ‘ರಣಂ’ ಚಿತ್ರತಂಡ ರಿಲೀಸ್​ ದಿನಾಂಕ ಘೋಷಿಸಿಕೊಂಡಿದೆ.

ಮಾರ್ಚ್​ 26ರಂದು ರಾಜ್ಯಾದ್ಯಂತ ‘ರಣಂ’ ಬಿಡುಗಡೆ ಆಗಲಿದೆ. ವಿಶೇಷ ಏನೆಂದರೆ, ಚಿರು ನಿಧನರಾಗುವುದಕ್ಕೂ ಮುನ್ನ ಈ ಸಿನಿಮಾದ ಶೂಟಿಂಗ್​ ಮತ್ತು ಡಬ್ಬಿಂಗ್​ ಕೆಲಸಗಳನ್ನು ಮುಗಿಸಿದ್ದರು. ಚಿರು ಧ್ವನಿ ನೀಡಿದ ಕೊನೇ ಸಿನಿಮಾ ಇದಾಗಿದೆ. ಹಾಗಾಗಿ, ಇದು ಅಭಿಮಾನಿಗಳ ಪಾಲಿಗೆ ಸ್ಪೆಷಲ್​. ನಂತರ ಬರಲಿರುವ ‘ರಾಜಮಾರ್ತಾಂಡ’ ಚಿತ್ರದ ಶೂಟಿಂಗ್​ ಕೂಡ ಮುಗಿದಿದೆಯಾದರೂ ಅದಕ್ಕೆ ಚಿರು ಡಬ್ಬಿಂಗ್​ ಮಾಡುವ ಮುನ್ನವೇ ಇಹಲೋಕ ತ್ಯಜಿಸಿದ್ದು ವಿಪರ್ಯಾಸ. ಹಾಗಾಗಿ, ದೊಡ್ಡ ಪರದೆಯಲ್ಲಿ ಚಿರಂಜೀವಿ ಸರ್ಜಾ ಅವರ ಧ್ವನಿಯಿರುವ ಸಿನಿಮಾ ನೋಡುವ ಕೊನೇ ಅವಕಾಶವು ‘ರಣಂ’ ಮೂಲಕ ಅಭಿಮಾನಿಗಳಿಗೆ ಸಿಗುತ್ತಿದೆ.

ಈ ಸಿನಿಮಾದಲ್ಲಿ ಚಿರಂಜೀವಿ ಸರ್ಜಾ ಜೊತೆ ‘ಆ ದಿನಗಳು’ ಚೇತನ್​ ಕೂಡ ನಟಿಸಿದ್ದಾರೆ. ನಾಯಕಿಯಾಗಿ ವರಲಕ್ಷ್ಮೀ ಶರತ್​ ಕುಮಾರ್​ ಅಭಿನಯಿಸಿದ್ದಾರೆ. ಚಿರು ಪೊಲೀಸ್​ ಪಾತ್ರದಲ್ಲಿ ಕಾಣಿಸಿಕೊಂಡಿರುವುದು ವಿಶೇಷ. ಸಾಧುಕೋಕಿಲ, ಬುಲೆಟ್ ಪ್ರಕಾಶ್, ಮಧುಸೂದನ್, ಕಾರ್ತಿಕ್, ಅಭಿಲಾಶ್, ಹರೀಶ್, ಪ್ರವೀಣ್​ ಮುಂತಾದವರು ಕೂಡ ನಟಿಸಿದ್ದಾರೆ. ವಿ. ಸಮುದ್ರ ನಿರ್ದೇಶನದ ಈ ಚಿತ್ರಕ್ಕೆ ರವಿಶಂಕರ್ ಹಾಗೂ ಎಸ್. ಚಿನ್ನ ಸಂಗೀತ ನೀಡಿದ್ದಾರೆ. ಆರ್.ಎಸ್. ಪ್ರೊಡಕ್ಷನ್ಸ್ ಮೂಲಕ ಕನಕಪುರ ಶ್ರೀನಿವಾಸ್ ನಿರ್ಮಾಣ ಮಾಡಿರುವ 21ನೇ ಚಿತ್ರವಿದು. ಕಿರಣ್ ಗೌಡ ಈ ಚಿತ್ರದ ಸಹ ನಿರ್ಮಾಪಕರು.

ಚಿರು ನಟಿಸಿರುವ ಮತ್ತೊಂದು ಸಿನಿಮಾ ‘ರಾಜಮಾರ್ತಾಂಡ’ ಸಿನಿಮಾಗೆ ಚಿರು ಸಹೋದರ ಧ್ರುವ ಸರ್ಜಾ ಧ್ವನಿ ನೀಡುತ್ತಿದ್ದಾರೆ. ಕೆಲವೇ ದಿನಗಳ ಹಿಂದೆ ಆ ಸಿನಿಮಾದ ಟ್ರೇಲರ್​ ಅನ್ನು ಚಿರು-ಮೇಘನಾ ರಾಜ್​ ಪುತ್ರನ ಕೈಯಲ್ಲಿ ರಿಲೀಸ್​ ಮಾಡಿಸಲಾಗಿತ್ತು. ಅದು 1.8 ಮಿಲಿಯನ್​ ವ್ಯೂಸ್​ ಪಡೆದುಕೊಂಡಿದೆ. ‘ರಾಜಮಾರ್ತಾಂಡ’ ಮೇಲೆ ಅಭಿಮಾನಿಗಳಿಗೆ ದೊಡ್ಡಮಟ್ಟದ ನಿರೀಕ್ಷೆ ಇದೆ.

ಇದನ್ನೂ ಓದಿ: ನನಗೆ ನನ್ನ ಮಗನೇ ಶಕ್ತಿ, ಸ್ಫೂರ್ತಿ.. ಅವನಿಗೆ ಒಳ್ಳೇ ಹೆಸರು ಇಡ್ತೇವೆ -ಮೇಘನಾ ರಾಜ್

 ಪತ್ನಿ-ಅತ್ತೆಯಿಂದ ನಟ ಚಿರಂಜೀವಿ ಸರ್ಜಾ ಸಮಾಧಿ ಬಳಿ ಕ್ರಿಶ್ಚಿಯನ್​ ಪ್ರಾರ್ಥನೆ

Published On - 1:01 pm, Wed, 10 March 21

ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ