AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವಾಗ ರಿಲೀಸ್​ ಆಗಲಿದೆ ಚಿರಂಜೀವಿ ಸರ್ಜಾ ನಟನೆಯ ‘ರಣಂ’? ಫ್ಯಾನ್ಸ್​ಗೆ ಬ್ರೇಕಿಂಗ್​ ನ್ಯೂಸ್ ನೀಡಿದ​ ಚಿತ್ರತಂಡ

ಕಳೆದ ವರ್ಷ ಇಹಲೋಕ ತ್ಯಜಿಸಿದ ಕನ್ನಡ ಚಿತ್ರರಂಗದ ಖ್ಯಾತ ನಟ ಚಿರಂಜೀವಿ ಸರ್ಜಾ ಅಭಿಮಾನಿಗಳು ಖುಷಿ ಪಡುವಂತಹ ಸುದ್ದಿ ಕೇಳಿಬಂದಿದೆ. ಮಾ.26ಕ್ಕಾಗಿ ಅವರೆಲ್ಲ ಕಾಯುವಂತಾಗಿದೆ.

ಯಾವಾಗ ರಿಲೀಸ್​ ಆಗಲಿದೆ ಚಿರಂಜೀವಿ ಸರ್ಜಾ ನಟನೆಯ ‘ರಣಂ’?  ಫ್ಯಾನ್ಸ್​ಗೆ ಬ್ರೇಕಿಂಗ್​ ನ್ಯೂಸ್ ನೀಡಿದ​ ಚಿತ್ರತಂಡ
‘ರಣಂ’ ಸಿನಿಮಾದಲ್ಲಿ ಚಿರಂಜೀವಿ ಸರ್ಜಾ
ಮದನ್​ ಕುಮಾರ್​
|

Updated on:Mar 10, 2021 | 2:07 PM

Share

ಸ್ಯಾಂಡಲ್​ವುಡ್​ನಲ್ಲಿ ತಮ್ಮದೇ ಆದಂತಹ ಚಾರ್ಮ್​ ಹೊಂದಿದ್ದ ನಟ ಚಿರಂಜೀವಿ ಸರ್ಜಾ ಅವರು 2020ರ ಜೂನ್​ 7ರಂದು ಹೃದಯಾಘಾತದಿಂದ ಮೃತರಾದರು. ಆ ದುರ್ಘಟನೆ ಸಂಭವಿಸುವುದಕ್ಕೂ ಮುನ್ನ ಅವರು ಕೆಲವು ಸಿನಿಮಾಗಳಲ್ಲಿ ತೊಡಗಿಸಿಕೊಂಡಿದ್ದರು. ಅವುಗಳಲ್ಲಿ ‘ರಣಂ’ ಕೂಡ ಪ್ರಮುಖವಾದದ್ದು. ಈಗ ಆ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ‘ರಣಂ’ ಚಿತ್ರತಂಡ ರಿಲೀಸ್​ ದಿನಾಂಕ ಘೋಷಿಸಿಕೊಂಡಿದೆ.

ಮಾರ್ಚ್​ 26ರಂದು ರಾಜ್ಯಾದ್ಯಂತ ‘ರಣಂ’ ಬಿಡುಗಡೆ ಆಗಲಿದೆ. ವಿಶೇಷ ಏನೆಂದರೆ, ಚಿರು ನಿಧನರಾಗುವುದಕ್ಕೂ ಮುನ್ನ ಈ ಸಿನಿಮಾದ ಶೂಟಿಂಗ್​ ಮತ್ತು ಡಬ್ಬಿಂಗ್​ ಕೆಲಸಗಳನ್ನು ಮುಗಿಸಿದ್ದರು. ಚಿರು ಧ್ವನಿ ನೀಡಿದ ಕೊನೇ ಸಿನಿಮಾ ಇದಾಗಿದೆ. ಹಾಗಾಗಿ, ಇದು ಅಭಿಮಾನಿಗಳ ಪಾಲಿಗೆ ಸ್ಪೆಷಲ್​. ನಂತರ ಬರಲಿರುವ ‘ರಾಜಮಾರ್ತಾಂಡ’ ಚಿತ್ರದ ಶೂಟಿಂಗ್​ ಕೂಡ ಮುಗಿದಿದೆಯಾದರೂ ಅದಕ್ಕೆ ಚಿರು ಡಬ್ಬಿಂಗ್​ ಮಾಡುವ ಮುನ್ನವೇ ಇಹಲೋಕ ತ್ಯಜಿಸಿದ್ದು ವಿಪರ್ಯಾಸ. ಹಾಗಾಗಿ, ದೊಡ್ಡ ಪರದೆಯಲ್ಲಿ ಚಿರಂಜೀವಿ ಸರ್ಜಾ ಅವರ ಧ್ವನಿಯಿರುವ ಸಿನಿಮಾ ನೋಡುವ ಕೊನೇ ಅವಕಾಶವು ‘ರಣಂ’ ಮೂಲಕ ಅಭಿಮಾನಿಗಳಿಗೆ ಸಿಗುತ್ತಿದೆ.

ಈ ಸಿನಿಮಾದಲ್ಲಿ ಚಿರಂಜೀವಿ ಸರ್ಜಾ ಜೊತೆ ‘ಆ ದಿನಗಳು’ ಚೇತನ್​ ಕೂಡ ನಟಿಸಿದ್ದಾರೆ. ನಾಯಕಿಯಾಗಿ ವರಲಕ್ಷ್ಮೀ ಶರತ್​ ಕುಮಾರ್​ ಅಭಿನಯಿಸಿದ್ದಾರೆ. ಚಿರು ಪೊಲೀಸ್​ ಪಾತ್ರದಲ್ಲಿ ಕಾಣಿಸಿಕೊಂಡಿರುವುದು ವಿಶೇಷ. ಸಾಧುಕೋಕಿಲ, ಬುಲೆಟ್ ಪ್ರಕಾಶ್, ಮಧುಸೂದನ್, ಕಾರ್ತಿಕ್, ಅಭಿಲಾಶ್, ಹರೀಶ್, ಪ್ರವೀಣ್​ ಮುಂತಾದವರು ಕೂಡ ನಟಿಸಿದ್ದಾರೆ. ವಿ. ಸಮುದ್ರ ನಿರ್ದೇಶನದ ಈ ಚಿತ್ರಕ್ಕೆ ರವಿಶಂಕರ್ ಹಾಗೂ ಎಸ್. ಚಿನ್ನ ಸಂಗೀತ ನೀಡಿದ್ದಾರೆ. ಆರ್.ಎಸ್. ಪ್ರೊಡಕ್ಷನ್ಸ್ ಮೂಲಕ ಕನಕಪುರ ಶ್ರೀನಿವಾಸ್ ನಿರ್ಮಾಣ ಮಾಡಿರುವ 21ನೇ ಚಿತ್ರವಿದು. ಕಿರಣ್ ಗೌಡ ಈ ಚಿತ್ರದ ಸಹ ನಿರ್ಮಾಪಕರು.

ಚಿರು ನಟಿಸಿರುವ ಮತ್ತೊಂದು ಸಿನಿಮಾ ‘ರಾಜಮಾರ್ತಾಂಡ’ ಸಿನಿಮಾಗೆ ಚಿರು ಸಹೋದರ ಧ್ರುವ ಸರ್ಜಾ ಧ್ವನಿ ನೀಡುತ್ತಿದ್ದಾರೆ. ಕೆಲವೇ ದಿನಗಳ ಹಿಂದೆ ಆ ಸಿನಿಮಾದ ಟ್ರೇಲರ್​ ಅನ್ನು ಚಿರು-ಮೇಘನಾ ರಾಜ್​ ಪುತ್ರನ ಕೈಯಲ್ಲಿ ರಿಲೀಸ್​ ಮಾಡಿಸಲಾಗಿತ್ತು. ಅದು 1.8 ಮಿಲಿಯನ್​ ವ್ಯೂಸ್​ ಪಡೆದುಕೊಂಡಿದೆ. ‘ರಾಜಮಾರ್ತಾಂಡ’ ಮೇಲೆ ಅಭಿಮಾನಿಗಳಿಗೆ ದೊಡ್ಡಮಟ್ಟದ ನಿರೀಕ್ಷೆ ಇದೆ.

ಇದನ್ನೂ ಓದಿ: ನನಗೆ ನನ್ನ ಮಗನೇ ಶಕ್ತಿ, ಸ್ಫೂರ್ತಿ.. ಅವನಿಗೆ ಒಳ್ಳೇ ಹೆಸರು ಇಡ್ತೇವೆ -ಮೇಘನಾ ರಾಜ್

 ಪತ್ನಿ-ಅತ್ತೆಯಿಂದ ನಟ ಚಿರಂಜೀವಿ ಸರ್ಜಾ ಸಮಾಧಿ ಬಳಿ ಕ್ರಿಶ್ಚಿಯನ್​ ಪ್ರಾರ್ಥನೆ

Published On - 1:01 pm, Wed, 10 March 21

Follow Us
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ