AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವಾಗ ರಿಲೀಸ್​ ಆಗಲಿದೆ ಚಿರಂಜೀವಿ ಸರ್ಜಾ ನಟನೆಯ ‘ರಣಂ’? ಫ್ಯಾನ್ಸ್​ಗೆ ಬ್ರೇಕಿಂಗ್​ ನ್ಯೂಸ್ ನೀಡಿದ​ ಚಿತ್ರತಂಡ

ಕಳೆದ ವರ್ಷ ಇಹಲೋಕ ತ್ಯಜಿಸಿದ ಕನ್ನಡ ಚಿತ್ರರಂಗದ ಖ್ಯಾತ ನಟ ಚಿರಂಜೀವಿ ಸರ್ಜಾ ಅಭಿಮಾನಿಗಳು ಖುಷಿ ಪಡುವಂತಹ ಸುದ್ದಿ ಕೇಳಿಬಂದಿದೆ. ಮಾ.26ಕ್ಕಾಗಿ ಅವರೆಲ್ಲ ಕಾಯುವಂತಾಗಿದೆ.

ಯಾವಾಗ ರಿಲೀಸ್​ ಆಗಲಿದೆ ಚಿರಂಜೀವಿ ಸರ್ಜಾ ನಟನೆಯ ‘ರಣಂ’?  ಫ್ಯಾನ್ಸ್​ಗೆ ಬ್ರೇಕಿಂಗ್​ ನ್ಯೂಸ್ ನೀಡಿದ​ ಚಿತ್ರತಂಡ
‘ರಣಂ’ ಸಿನಿಮಾದಲ್ಲಿ ಚಿರಂಜೀವಿ ಸರ್ಜಾ
Follow us
ಮದನ್​ ಕುಮಾರ್​
|

Updated on:Mar 10, 2021 | 2:07 PM

ಸ್ಯಾಂಡಲ್​ವುಡ್​ನಲ್ಲಿ ತಮ್ಮದೇ ಆದಂತಹ ಚಾರ್ಮ್​ ಹೊಂದಿದ್ದ ನಟ ಚಿರಂಜೀವಿ ಸರ್ಜಾ ಅವರು 2020ರ ಜೂನ್​ 7ರಂದು ಹೃದಯಾಘಾತದಿಂದ ಮೃತರಾದರು. ಆ ದುರ್ಘಟನೆ ಸಂಭವಿಸುವುದಕ್ಕೂ ಮುನ್ನ ಅವರು ಕೆಲವು ಸಿನಿಮಾಗಳಲ್ಲಿ ತೊಡಗಿಸಿಕೊಂಡಿದ್ದರು. ಅವುಗಳಲ್ಲಿ ‘ರಣಂ’ ಕೂಡ ಪ್ರಮುಖವಾದದ್ದು. ಈಗ ಆ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ‘ರಣಂ’ ಚಿತ್ರತಂಡ ರಿಲೀಸ್​ ದಿನಾಂಕ ಘೋಷಿಸಿಕೊಂಡಿದೆ.

ಮಾರ್ಚ್​ 26ರಂದು ರಾಜ್ಯಾದ್ಯಂತ ‘ರಣಂ’ ಬಿಡುಗಡೆ ಆಗಲಿದೆ. ವಿಶೇಷ ಏನೆಂದರೆ, ಚಿರು ನಿಧನರಾಗುವುದಕ್ಕೂ ಮುನ್ನ ಈ ಸಿನಿಮಾದ ಶೂಟಿಂಗ್​ ಮತ್ತು ಡಬ್ಬಿಂಗ್​ ಕೆಲಸಗಳನ್ನು ಮುಗಿಸಿದ್ದರು. ಚಿರು ಧ್ವನಿ ನೀಡಿದ ಕೊನೇ ಸಿನಿಮಾ ಇದಾಗಿದೆ. ಹಾಗಾಗಿ, ಇದು ಅಭಿಮಾನಿಗಳ ಪಾಲಿಗೆ ಸ್ಪೆಷಲ್​. ನಂತರ ಬರಲಿರುವ ‘ರಾಜಮಾರ್ತಾಂಡ’ ಚಿತ್ರದ ಶೂಟಿಂಗ್​ ಕೂಡ ಮುಗಿದಿದೆಯಾದರೂ ಅದಕ್ಕೆ ಚಿರು ಡಬ್ಬಿಂಗ್​ ಮಾಡುವ ಮುನ್ನವೇ ಇಹಲೋಕ ತ್ಯಜಿಸಿದ್ದು ವಿಪರ್ಯಾಸ. ಹಾಗಾಗಿ, ದೊಡ್ಡ ಪರದೆಯಲ್ಲಿ ಚಿರಂಜೀವಿ ಸರ್ಜಾ ಅವರ ಧ್ವನಿಯಿರುವ ಸಿನಿಮಾ ನೋಡುವ ಕೊನೇ ಅವಕಾಶವು ‘ರಣಂ’ ಮೂಲಕ ಅಭಿಮಾನಿಗಳಿಗೆ ಸಿಗುತ್ತಿದೆ.

ಈ ಸಿನಿಮಾದಲ್ಲಿ ಚಿರಂಜೀವಿ ಸರ್ಜಾ ಜೊತೆ ‘ಆ ದಿನಗಳು’ ಚೇತನ್​ ಕೂಡ ನಟಿಸಿದ್ದಾರೆ. ನಾಯಕಿಯಾಗಿ ವರಲಕ್ಷ್ಮೀ ಶರತ್​ ಕುಮಾರ್​ ಅಭಿನಯಿಸಿದ್ದಾರೆ. ಚಿರು ಪೊಲೀಸ್​ ಪಾತ್ರದಲ್ಲಿ ಕಾಣಿಸಿಕೊಂಡಿರುವುದು ವಿಶೇಷ. ಸಾಧುಕೋಕಿಲ, ಬುಲೆಟ್ ಪ್ರಕಾಶ್, ಮಧುಸೂದನ್, ಕಾರ್ತಿಕ್, ಅಭಿಲಾಶ್, ಹರೀಶ್, ಪ್ರವೀಣ್​ ಮುಂತಾದವರು ಕೂಡ ನಟಿಸಿದ್ದಾರೆ. ವಿ. ಸಮುದ್ರ ನಿರ್ದೇಶನದ ಈ ಚಿತ್ರಕ್ಕೆ ರವಿಶಂಕರ್ ಹಾಗೂ ಎಸ್. ಚಿನ್ನ ಸಂಗೀತ ನೀಡಿದ್ದಾರೆ. ಆರ್.ಎಸ್. ಪ್ರೊಡಕ್ಷನ್ಸ್ ಮೂಲಕ ಕನಕಪುರ ಶ್ರೀನಿವಾಸ್ ನಿರ್ಮಾಣ ಮಾಡಿರುವ 21ನೇ ಚಿತ್ರವಿದು. ಕಿರಣ್ ಗೌಡ ಈ ಚಿತ್ರದ ಸಹ ನಿರ್ಮಾಪಕರು.

ಚಿರು ನಟಿಸಿರುವ ಮತ್ತೊಂದು ಸಿನಿಮಾ ‘ರಾಜಮಾರ್ತಾಂಡ’ ಸಿನಿಮಾಗೆ ಚಿರು ಸಹೋದರ ಧ್ರುವ ಸರ್ಜಾ ಧ್ವನಿ ನೀಡುತ್ತಿದ್ದಾರೆ. ಕೆಲವೇ ದಿನಗಳ ಹಿಂದೆ ಆ ಸಿನಿಮಾದ ಟ್ರೇಲರ್​ ಅನ್ನು ಚಿರು-ಮೇಘನಾ ರಾಜ್​ ಪುತ್ರನ ಕೈಯಲ್ಲಿ ರಿಲೀಸ್​ ಮಾಡಿಸಲಾಗಿತ್ತು. ಅದು 1.8 ಮಿಲಿಯನ್​ ವ್ಯೂಸ್​ ಪಡೆದುಕೊಂಡಿದೆ. ‘ರಾಜಮಾರ್ತಾಂಡ’ ಮೇಲೆ ಅಭಿಮಾನಿಗಳಿಗೆ ದೊಡ್ಡಮಟ್ಟದ ನಿರೀಕ್ಷೆ ಇದೆ.

ಇದನ್ನೂ ಓದಿ: ನನಗೆ ನನ್ನ ಮಗನೇ ಶಕ್ತಿ, ಸ್ಫೂರ್ತಿ.. ಅವನಿಗೆ ಒಳ್ಳೇ ಹೆಸರು ಇಡ್ತೇವೆ -ಮೇಘನಾ ರಾಜ್

 ಪತ್ನಿ-ಅತ್ತೆಯಿಂದ ನಟ ಚಿರಂಜೀವಿ ಸರ್ಜಾ ಸಮಾಧಿ ಬಳಿ ಕ್ರಿಶ್ಚಿಯನ್​ ಪ್ರಾರ್ಥನೆ

Published On - 1:01 pm, Wed, 10 March 21

ಚಾರ್ಮಾಡಿಯಲ್ಲಿ ಕಾಡಾನೆ ಜತೆ ಸೆಲ್ಫೀ ಕ್ಲಿಕ್ಕಿಸಲು ಮುಂದಾದ ಪ್ರಯಾಣಿಕ
ಚಾರ್ಮಾಡಿಯಲ್ಲಿ ಕಾಡಾನೆ ಜತೆ ಸೆಲ್ಫೀ ಕ್ಲಿಕ್ಕಿಸಲು ಮುಂದಾದ ಪ್ರಯಾಣಿಕ
ಮಂಗಳೂರು: ಅಬ್ಬರಿಸುತ್ತಿದೆ ಅರಬ್ಬೀ ಸಮುದ್ರ, ಕಡಲ್ಕೊರೆತ ಭೀತಿ ಹೆಚ್ಚಳ
ಮಂಗಳೂರು: ಅಬ್ಬರಿಸುತ್ತಿದೆ ಅರಬ್ಬೀ ಸಮುದ್ರ, ಕಡಲ್ಕೊರೆತ ಭೀತಿ ಹೆಚ್ಚಳ
VIDEO: ಕ್ಯಾಚ್ ಕೈಬಿಟ್ಟ ಬೆನ್ನಲ್ಲೇ ರೋಹಿತ್ ಶರ್ಮಾನ ಹೊರಗೆ ಕಳಿಸಿದ ಪಾಂಡ್ಯ
VIDEO: ಕ್ಯಾಚ್ ಕೈಬಿಟ್ಟ ಬೆನ್ನಲ್ಲೇ ರೋಹಿತ್ ಶರ್ಮಾನ ಹೊರಗೆ ಕಳಿಸಿದ ಪಾಂಡ್ಯ
Daily Devotional: ಪಂಚಮುಖಿ ಹನುಮನ ಉಪಾಸನೆಯ ಹಿಂದಿನ ರಹಸ್ಯ ತಿಳಿಯಿರಿ
Daily Devotional: ಪಂಚಮುಖಿ ಹನುಮನ ಉಪಾಸನೆಯ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಕುಜ ಕರ್ಕಾಟಕ ರಾಶಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
Daily horoscope: ಕುಜ ಕರ್ಕಾಟಕ ರಾಶಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ