AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧ್ರುವ ಸರ್ಜಾ ಬರ್ತ್​ಡೇ ದಿನ ರಿಲೀಸ್ ಆಗಲಿದೆ ಚಿರು ಸರ್ಜಾ ನಟನೆಯ ಕೊನೆಯ ಸಿನಿಮಾ ‘ರಾಜಮಾರ್ತಾಂಡ’

ಅಕ್ಟೋಬರ್ 6 ಧ್ರುವ ಸರ್ಜಾ ಜನ್ಮದಿನ. ಈ ದಿನ ಶುಕ್ರವಾರ ಕೂಡ ಹೌದು. ಅಣ್ಣ ಚಿರು ಮೇಲೆ ಧ್ರುವಗೆ ಅಪಾರ ಪ್ರೀತಿ ಇತ್ತು. ಅವರನ್ನು ಕಳೆದುಕೊಂಡಿರೋ ನೋವು ಸದ್ಯಕ್ಕೆ ಮರೆ ಆಗುವಂಥದ್ದಲ್ಲ. ಈಗ ಜನ್ಮದಿನದಂದೇ ಅಣ್ಣನ ಸಿನಿಮಾ ರಿಲೀಸ್ ಆಗುತ್ತಿರುವುದಕ್ಕೆ ಧ್ರುವ ಸರ್ಜಾ ಖುಷಿಯಾಗಿದ್ದಾರೆ. ಚಿತ್ರತಂಡದ ನಿರ್ಧಾರವನ್ನು ಅವರು ಶ್ಲಾಘಿಸಿದ್ದಾರೆ.

ಧ್ರುವ ಸರ್ಜಾ ಬರ್ತ್​ಡೇ ದಿನ ರಿಲೀಸ್ ಆಗಲಿದೆ ಚಿರು ಸರ್ಜಾ ನಟನೆಯ ಕೊನೆಯ ಸಿನಿಮಾ ‘ರಾಜಮಾರ್ತಾಂಡ’
ಚಿರು-ಧ್ರುವ
ರಾಜೇಶ್ ದುಗ್ಗುಮನೆ
|

Updated on:Sep 07, 2023 | 10:39 AM

Share

ಚಿರಂಜೀವಿ ಸರ್ಜಾ (Chiranjeevi Sarja) ಅವರು ನಮ್ಮನ್ನು ಅಗಲಿ ಕೆಲವು ವರ್ಷಗಳು ಕಳೆದಿವೆ. ಅವರ ನಟನೆಯ ಕೊನೆಯ ಸಿನಿಮಾ ‘ರಾಜಮಾರ್ತಾಂಡ’ ಚಿತ್ರದ (Rajamartanda Movie) ಶೂಟಿಂಗ್ ಪೂರ್ಣಗೊಂಡಿತ್ತು. ಆದರೆ, ಡಬ್ಬಿಂಗ್ ಕೆಲಸಗಳು ಆಗಿರಲಿಲ್ಲ. ಚಿರು ಪಾತ್ರಕ್ಕೆ ಧ್ರುವ ಸರ್ಜಾ ಅವರು ಧ್ವನಿ ನೀಡಿದ್ದಾರೆ. ಈ ಸಿನಿಮಾದ ರಿಲೀಸ್ ದಿನಾಂಕ ಕಾರಣಾಂತರಗಳಿಂದ ಮುಂದೂಡಲ್ಪಡುತ್ತಲೇ ಇತ್ತು. ಈಗ ಸಿನಿಮಾಗೆ ಬಿಡುಗಡೆ ದಿನಾಂಕ ನಿಗದಿ ಆಗಿದೆ. ಧ್ರುವ ಸರ್ಜಾ ಬರ್ತ್​ಡೇ ದಿನ ‘ರಾಜಮಾರ್ತಾಂಡ’ ರಿಲೀಸ್ ಆಗಲಿದೆ ಎಂದು ತಂಡ ಹೇಳಿಕೊಂಡಿದೆ.

ಅಕ್ಟೋಬರ್ 6 ಧ್ರುವ ಸರ್ಜಾ ಜನ್ಮದಿನ. ಈ ದಿನ ಶುಕ್ರವಾರ ಕೂಡ ಹೌದು. ಅಣ್ಣ ಚಿರು ಮೇಲೆ ಧ್ರುವಗೆ ಅಪಾರ ಪ್ರೀತಿ ಇತ್ತು. ಅವರನ್ನು ಕಳೆದುಕೊಂಡಿರೋ ನೋವು ಸದ್ಯಕ್ಕೆ ಮರೆ ಆಗುವಂಥದ್ದಲ್ಲ. ಈಗ ಜನ್ಮದಿನದಂದೇ ಅಣ್ಣನ ಸಿನಿಮಾ ರಿಲೀಸ್ ಆಗುತ್ತಿರುವುದಕ್ಕೆ ಧ್ರುವ ಸರ್ಜಾ ಖುಷಿಯಾಗಿದ್ದಾರೆ. ಚಿತ್ರತಂಡದ ನಿರ್ಧಾರವನ್ನು ಅವರು ಶ್ಲಾಘಿಸಿದ್ದಾರೆ.

ಚಿರು ನಿಧನಕ್ಕೂ ಮುಂಚೆ ‘ರಾಜಮಾರ್ತಾಂಡ’ ಚಿತ್ರದಲ್ಲಿ ನಟಿಸಿದ್ದರು. ಶೂಟಿಂಗ್ ಕೂಡ ಪೂರ್ಣಗೊಂಡಿತ್ತು. ಡಬ್ಬಿಂಗ್ ಕೆಲಸಗಳು ಬಾಕಿ ಇದ್ದವು. ಆದರೆ, ಈ ಸಂದರ್ಭದಲ್ಲಿ ಚಿರಂಜೀವಿ ಅವರು ಹೃದಯಾಘಾತದಿಂದ ಮೃತಪಟ್ಟರು. ಬಾಕಿ ಇದ್ದ ಡಬ್ಬಿಂಗ್ ಕೆಲಸವನ್ನು ಧ್ರುವ ಸರ್ಜಾ ಪೂರ್ಣಗೊಳಿಸಿದ್ದಾರೆ. ಈ ವಿಚಾರ ಅಭಿಮಾನಿಗಳು ಖಷಿಪಟ್ಟಿದ್ದಾರೆ.

‘ರಾಜಮಾರ್ತಾಂಡ’ ಚಿತ್ರವನ್ನು ಶಿವಕುಮಾರ್ ನಿರ್ಮಿಸಿದ್ದಾರೆ. ರಾಮನಾರಾಯಣ್ ನಿರ್ದೇಶಿಸಿದ್ದಾರೆ.  ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಚಿತ್ರಕ್ಕಿದೆ. ಧರ್ಮವಿಶ್ ಅವರು ಹಿನ್ನೆಲೆ ಸಂಗೀತ ನೀಡಿದ್ದಾರೆ.  ವೆಂಕಟೇಶ್ ಯು.ಡಿ.ವಿ. ಸಂಕಲನ, ಕೆ. ಗಣೇಶ್ ಛಾಯಾಗ್ರಹಣ, ವಿನೋದ್, ಪಳನಿರಾಜ್ ಸಾಹಸ ನಿರ್ದೇಶನ ಚಿತ್ರಕ್ಕಿದೆ. ಭೂಷಣ್, ಹರ್ಷ ಅವರು ನೃತ್ಯ ನಿರ್ದೇಶನ ಮಾಡಿದ್ದಾರೆ.

ಇದನ್ನೂ ಓದಿ: ಅಳಿಯ ಚಿರಂಜೀವಿ ಸರ್ಜಾ ನಟಿಸಿದ ಕೊನೇ ಸಿನಿಮಾ ‘ರಾಜಮಾರ್ತಾಂಡ’ ನೋಡಿ ಸುಂದರ್​ ರಾಜ್​ ಹೇಳಿದ್ದೇನು?

‘ರಾಜಮಾರ್ತಾಂಡ’ ಚಿತ್ರದ ಪಾತ್ರವರ್ಗ ಕೂಡ ದೊಡ್ಡದಾಗಿದೆ. ಚಿರಂಜೀವಿ ಸರ್ಜಾ ಅವರಿಗೆ ನಾಯಕಿಯರಾಗಿ ದೀಪ್ತಿ‌ ಸಾತಿ, ಮೇಘಶ್ರೀ, ತ್ರಿವೇಣಿ (ಟಗರು) ಬಣ್ಣ ಹಚ್ಚಿದ್ದಾರೆ. ಚಿಕ್ಕಣ್ಣ, ಭಜರಂಗಿ ಲೋಕಿ, ದೇವರಾಜ್, ಶಂಕರ್ ಅಶ್ವಥ್, ಸುಮಿತ್ರ, ವಿನೀತ್ ಕುಮಾರ್ (ಬಾಂಬೆ) ಮುಂತಾದವರು ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:47 am, Thu, 7 September 23

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ