AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಮೌಳಿ ಮುಂದಿನ ಸಿನಿಮಾದ ಬಗ್ಗೆ ಬಿಗ್​ ಅಪ್​ಡೇಟ್​; ವಿಲನ್​ ಆದ ಸ್ಟಾರ್​ ಹೀರೋ

‘ಆರ್​ಆರ್​ಆರ್​’ ಸಿನಿಮಾ ಕೆಲಸಗಳು ಪೂರ್ಣಗೊಂಡಿವೆ. ಇನ್ನೇನು ಪ್ರಚಾರ ಕಾರ್ಯಕ್ಕೆ ಚಾಲನೆ ಸಿಗಲಿದೆ. ರಾಜಮೌಳಿ ಸಿನಿಮಾದಲ್ಲಿ ಅದ್ದೂರಿತನಕ್ಕೆ ಯಾವುದೇ ಕೊರತೆ ಇರುವುದಿಲ್ಲ. ಅದು ‘ಆರ್​ಆರ್​ಆರ್​’ ಚಿತ್ರದಲ್ಲೂ ಮುಂದುವರಿದಿದೆ ಎಂಬುದಕ್ಕೆ ಟೀಸರ್​ ಸಾಕ್ಷ್ಯ ನೀಡಿದೆ.

ರಾಜಮೌಳಿ ಮುಂದಿನ ಸಿನಿಮಾದ ಬಗ್ಗೆ ಬಿಗ್​ ಅಪ್​ಡೇಟ್​; ವಿಲನ್​ ಆದ ಸ್ಟಾರ್​ ಹೀರೋ
ರಾಜಮೌಳಿ-ವಿಕ್ರಮ್​
TV9 Web
| Edited By: |

Updated on: Nov 23, 2021 | 2:50 PM

Share

ಎಸ್​.ಎಸ್​. ರಾಜಮೌಳಿ (SS Rajamouli) ಅವರ ಕಲೆಯೇ ಅಂತಹದ್ದು. ಅವರು ಒಮ್ಮೆ ಪಾತ್ರದ ಬಗ್ಗೆ ಆಲೋಚನೆ ಮಾಡಿದರು ಎಂದರೆ, ಅದಕ್ಕೆ ಸೂಕ್ತವಾದ ಕಲಾವಿದರನ್ನೂ ಕೂಡ ಆಯ್ಕೆ ಮಾಡುತ್ತಾರೆ. ಖ್ಯಾತ ನಟ ರಾನಾ ದಗ್ಗುಬಾಟಿ (Rana Daggubati) ಅವರಿಗೆ ‘ಬಾಹುಬಲಿ’ (Bahubali) ಚಿತ್ರದಲ್ಲಿ ವಿಲನ್​ ಪಾತ್ರ ನೀಡಿದ್ದರು ರಾಜಮೌಳಿ. ಈಗ ಅವರ ಮುಂದಿನ ಚಿತ್ರಕ್ಕಾಗಿ ಸದ್ದಿಲ್ಲದೆ ಸಿದ್ಧತೆ ನಡೆಯುತ್ತಿದೆ. ಖ್ಯಾತ ನಟ ಈ ಚಿತ್ರದಲ್ಲಿ ವಿಲನ್​ ಆಗಲಿದ್ದಾರೆ ಎನ್ನುವ ಮಾತು ಕೇಳಿ ಬರುತ್ತಿದೆ. ಈ ವಿಚಾರ ಕೇಳಿ ಫ್ಯಾನ್ಸ್​ ಖುಷಿಯಾಗಿದ್ದಾರೆ.

‘ಆರ್​ಆರ್​ಆರ್​’ ಸಿನಿಮಾ ಕೆಲಸಗಳು ಪೂರ್ಣಗೊಂಡಿವೆ. ಇನ್ನೇನು ಪ್ರಚಾರ ಕಾರ್ಯಕ್ಕೆ ಚಾಲನೆ ಸಿಗಲಿದೆ. ರಾಜಮೌಳಿ ಸಿನಿಮಾದಲ್ಲಿ ಅದ್ದೂರಿತನಕ್ಕೆ ಯಾವುದೇ ಕೊರತೆ ಇರುವುದಿಲ್ಲ. ಅದು ‘ಆರ್​ಆರ್​ಆರ್​’ ಚಿತ್ರದಲ್ಲೂ ಮುಂದುವರಿದಿದೆ ಎಂಬುದಕ್ಕೆ ಟೀಸರ್​ ಸಾಕ್ಷ್ಯ ನೀಡಿದೆ. ಈ ಸಿನಿಮಾ ರಿಲೀಸ್​ ಆದ ನಂತರ ರಾಜಮೌಳಿ ಒಂದು ಸಣ್ಣ ಬ್ರೇಕ್​ ತೆಗೆದುಕೊಳ್ಳಲಿದ್ದಾರೆ. ಅದಾದ ಬಳಿ ಮಹೇಶ್​ ಬಾಬು ಜತೆ ಅವರು ಸಿನಿಮಾ ಮಾಡಲಿದ್ದಾರೆ. ಈ ಚಿತ್ರಕ್ಕೆ ಪಾತ್ರದ ಆಯ್ಕೆ ಪ್ರಕ್ರಿಯೆ ಸದ್ದಿಲ್ಲದೆ ನಡೆಯುತ್ತಿದೆಯಂತೆ! ಹಾಗಾದರೆ ಮಹೇಶ್​ ಬಾಬು-ರಾಜಮೌಳಿ ಸಿನಿಮಾಗೆ ವಿಲನ್​ ಯಾರು? ಚಿಯಾನ್​ ವಿಕ್ರಮ್​.

ತಮಿಳಲ್ಲಿ ದೊಡ್ಡ ಮಟ್ಟದ ಹೆಸರು ಮಾಡಿದವರು ವಿಕ್ರಮ್​. ಯಾವುದೇ ಪಾತ್ರ ಕೊಟ್ಟರೂ ನೀರು ಕುಡಿದಷ್ಟೇ ಸುಲಭವಾಗಿ ನಟನೆ ಮಾಡಿ ತೋರಿಸುವ ಕಲೆ ಅವರಿಗೆ ಕರಗತವಾಗಿದೆ. ಈಗ ರಾಜಮೌಳಿ ಸಿನಿಮಾಗೆ ವಿಕ್ರಮ್​ ಪ್ರಮುಖ ವಿಲನ್​ ಆಗಲಿದ್ದಾರೆ ಎನ್ನುವ ಮಾತು ಜೋರಾಗಿದೆ. ಅಂದಹಾಗೆ, ಈ ಸಿನಿಮಾದಲ್ಲಿ ಮಹೇಶ್​ ಬಾಬುಗೆ ಭಿನ್ನ ಗೆಟಪ್​ ಇರಲಿದೆಯಂತೆ. ಈಗ ವಿಕ್ರಮ್ ಕೂಡ ಈ ತಂಡ ಸೇರಿಕೊಳ್ಳುತ್ತಿದ್ದಾರೆ ಎನ್ನುವ ವಿಚಾರ ಸಾಕಷ್ಟು ಖುಷಿ ನೀಡಿದೆ.

ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್’​ ಸಿನಿಮಾ ಜನವರಿ 7ರಂದು ತೆರೆಗೆ ಬರುತ್ತಿದೆ. ಈ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ದೊಡ್ಡ ಮಟ್ಟದಲ್ಲಿ ಕಲೆಕ್ಷನ್​ ಮಾಡುವ ನಿರೀಕ್ಷೆ ಇದೆ. ವಿಕ್ರಮ್​ ಅವರು ಸದ್ಯ ಪಾ. ರಂಜಿತ್ ಹಾಗೂ ರಜನಿಕಾಂತ್​ ನಿರ್ಮಾಣದ, ಮಹೇಶ್​ ನಾರಾಯಣ್​​ ನಿರ್ದೇಶನದ ಮುಂದಿನ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ವಿಜಯ್​ ಸೇತುಪತಿ ಕೂಡ ಸಿನಿಮಾದಲ್ಲಿ ನಟಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: RRR ರಿಲೀಸ್​ಗೂ ಮುನ್ನವೇ ಸಲ್ಮಾನ್​ ಖಾನ್​ ಭೇಟಿ ಮಾಡಿದ ರಾಜಮೌಳಿ; ಕೇಳಿ ಬಂತು ಹೊಸ ಅಪ್​ಡೇಟ್​

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ