AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಮೌಳಿ ಮುಂದಿನ ಸಿನಿಮಾದ ಬಗ್ಗೆ ಬಿಗ್​ ಅಪ್​ಡೇಟ್​; ವಿಲನ್​ ಆದ ಸ್ಟಾರ್​ ಹೀರೋ

‘ಆರ್​ಆರ್​ಆರ್​’ ಸಿನಿಮಾ ಕೆಲಸಗಳು ಪೂರ್ಣಗೊಂಡಿವೆ. ಇನ್ನೇನು ಪ್ರಚಾರ ಕಾರ್ಯಕ್ಕೆ ಚಾಲನೆ ಸಿಗಲಿದೆ. ರಾಜಮೌಳಿ ಸಿನಿಮಾದಲ್ಲಿ ಅದ್ದೂರಿತನಕ್ಕೆ ಯಾವುದೇ ಕೊರತೆ ಇರುವುದಿಲ್ಲ. ಅದು ‘ಆರ್​ಆರ್​ಆರ್​’ ಚಿತ್ರದಲ್ಲೂ ಮುಂದುವರಿದಿದೆ ಎಂಬುದಕ್ಕೆ ಟೀಸರ್​ ಸಾಕ್ಷ್ಯ ನೀಡಿದೆ.

ರಾಜಮೌಳಿ ಮುಂದಿನ ಸಿನಿಮಾದ ಬಗ್ಗೆ ಬಿಗ್​ ಅಪ್​ಡೇಟ್​; ವಿಲನ್​ ಆದ ಸ್ಟಾರ್​ ಹೀರೋ
ರಾಜಮೌಳಿ-ವಿಕ್ರಮ್​
TV9 Web
| Edited By: |

Updated on: Nov 23, 2021 | 2:50 PM

Share

ಎಸ್​.ಎಸ್​. ರಾಜಮೌಳಿ (SS Rajamouli) ಅವರ ಕಲೆಯೇ ಅಂತಹದ್ದು. ಅವರು ಒಮ್ಮೆ ಪಾತ್ರದ ಬಗ್ಗೆ ಆಲೋಚನೆ ಮಾಡಿದರು ಎಂದರೆ, ಅದಕ್ಕೆ ಸೂಕ್ತವಾದ ಕಲಾವಿದರನ್ನೂ ಕೂಡ ಆಯ್ಕೆ ಮಾಡುತ್ತಾರೆ. ಖ್ಯಾತ ನಟ ರಾನಾ ದಗ್ಗುಬಾಟಿ (Rana Daggubati) ಅವರಿಗೆ ‘ಬಾಹುಬಲಿ’ (Bahubali) ಚಿತ್ರದಲ್ಲಿ ವಿಲನ್​ ಪಾತ್ರ ನೀಡಿದ್ದರು ರಾಜಮೌಳಿ. ಈಗ ಅವರ ಮುಂದಿನ ಚಿತ್ರಕ್ಕಾಗಿ ಸದ್ದಿಲ್ಲದೆ ಸಿದ್ಧತೆ ನಡೆಯುತ್ತಿದೆ. ಖ್ಯಾತ ನಟ ಈ ಚಿತ್ರದಲ್ಲಿ ವಿಲನ್​ ಆಗಲಿದ್ದಾರೆ ಎನ್ನುವ ಮಾತು ಕೇಳಿ ಬರುತ್ತಿದೆ. ಈ ವಿಚಾರ ಕೇಳಿ ಫ್ಯಾನ್ಸ್​ ಖುಷಿಯಾಗಿದ್ದಾರೆ.

‘ಆರ್​ಆರ್​ಆರ್​’ ಸಿನಿಮಾ ಕೆಲಸಗಳು ಪೂರ್ಣಗೊಂಡಿವೆ. ಇನ್ನೇನು ಪ್ರಚಾರ ಕಾರ್ಯಕ್ಕೆ ಚಾಲನೆ ಸಿಗಲಿದೆ. ರಾಜಮೌಳಿ ಸಿನಿಮಾದಲ್ಲಿ ಅದ್ದೂರಿತನಕ್ಕೆ ಯಾವುದೇ ಕೊರತೆ ಇರುವುದಿಲ್ಲ. ಅದು ‘ಆರ್​ಆರ್​ಆರ್​’ ಚಿತ್ರದಲ್ಲೂ ಮುಂದುವರಿದಿದೆ ಎಂಬುದಕ್ಕೆ ಟೀಸರ್​ ಸಾಕ್ಷ್ಯ ನೀಡಿದೆ. ಈ ಸಿನಿಮಾ ರಿಲೀಸ್​ ಆದ ನಂತರ ರಾಜಮೌಳಿ ಒಂದು ಸಣ್ಣ ಬ್ರೇಕ್​ ತೆಗೆದುಕೊಳ್ಳಲಿದ್ದಾರೆ. ಅದಾದ ಬಳಿ ಮಹೇಶ್​ ಬಾಬು ಜತೆ ಅವರು ಸಿನಿಮಾ ಮಾಡಲಿದ್ದಾರೆ. ಈ ಚಿತ್ರಕ್ಕೆ ಪಾತ್ರದ ಆಯ್ಕೆ ಪ್ರಕ್ರಿಯೆ ಸದ್ದಿಲ್ಲದೆ ನಡೆಯುತ್ತಿದೆಯಂತೆ! ಹಾಗಾದರೆ ಮಹೇಶ್​ ಬಾಬು-ರಾಜಮೌಳಿ ಸಿನಿಮಾಗೆ ವಿಲನ್​ ಯಾರು? ಚಿಯಾನ್​ ವಿಕ್ರಮ್​.

ತಮಿಳಲ್ಲಿ ದೊಡ್ಡ ಮಟ್ಟದ ಹೆಸರು ಮಾಡಿದವರು ವಿಕ್ರಮ್​. ಯಾವುದೇ ಪಾತ್ರ ಕೊಟ್ಟರೂ ನೀರು ಕುಡಿದಷ್ಟೇ ಸುಲಭವಾಗಿ ನಟನೆ ಮಾಡಿ ತೋರಿಸುವ ಕಲೆ ಅವರಿಗೆ ಕರಗತವಾಗಿದೆ. ಈಗ ರಾಜಮೌಳಿ ಸಿನಿಮಾಗೆ ವಿಕ್ರಮ್​ ಪ್ರಮುಖ ವಿಲನ್​ ಆಗಲಿದ್ದಾರೆ ಎನ್ನುವ ಮಾತು ಜೋರಾಗಿದೆ. ಅಂದಹಾಗೆ, ಈ ಸಿನಿಮಾದಲ್ಲಿ ಮಹೇಶ್​ ಬಾಬುಗೆ ಭಿನ್ನ ಗೆಟಪ್​ ಇರಲಿದೆಯಂತೆ. ಈಗ ವಿಕ್ರಮ್ ಕೂಡ ಈ ತಂಡ ಸೇರಿಕೊಳ್ಳುತ್ತಿದ್ದಾರೆ ಎನ್ನುವ ವಿಚಾರ ಸಾಕಷ್ಟು ಖುಷಿ ನೀಡಿದೆ.

ರಾಜಮೌಳಿ ನಿರ್ದೇಶನದ ‘ಆರ್​ಆರ್​ಆರ್’​ ಸಿನಿಮಾ ಜನವರಿ 7ರಂದು ತೆರೆಗೆ ಬರುತ್ತಿದೆ. ಈ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ದೊಡ್ಡ ಮಟ್ಟದಲ್ಲಿ ಕಲೆಕ್ಷನ್​ ಮಾಡುವ ನಿರೀಕ್ಷೆ ಇದೆ. ವಿಕ್ರಮ್​ ಅವರು ಸದ್ಯ ಪಾ. ರಂಜಿತ್ ಹಾಗೂ ರಜನಿಕಾಂತ್​ ನಿರ್ಮಾಣದ, ಮಹೇಶ್​ ನಾರಾಯಣ್​​ ನಿರ್ದೇಶನದ ಮುಂದಿನ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ವಿಜಯ್​ ಸೇತುಪತಿ ಕೂಡ ಸಿನಿಮಾದಲ್ಲಿ ನಟಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: RRR ರಿಲೀಸ್​ಗೂ ಮುನ್ನವೇ ಸಲ್ಮಾನ್​ ಖಾನ್​ ಭೇಟಿ ಮಾಡಿದ ರಾಜಮೌಳಿ; ಕೇಳಿ ಬಂತು ಹೊಸ ಅಪ್​ಡೇಟ್​

Follow Us
ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಬಳಿ ಬೃಹತ್ ಮರ ಧರೆಗುರುಳಿ ಇಬ್ಬರಿಗೆ ಗಾಯ
ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಬಳಿ ಬೃಹತ್ ಮರ ಧರೆಗುರುಳಿ ಇಬ್ಬರಿಗೆ ಗಾಯ
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ