AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಲವ್​ ಮಾಕ್​ಟೇಲ್​ ಸಿನಿಮಾ ಅದ್ಭುತ’​; ESCN ಎಂದಿದ್ದ ಆಸ್ಟ್ರೇಲಿಯಾ ಪತ್ರಕರ್ತೆಗೆ ಈಗ ಕನ್ನಡ ಸಿನಿಮಾಗಳ ಮೇಲೆ ಒಲವು

Chloe Amanda Bailey: 2020ರಲ್ಲಿ ತೆರೆಗೆ ಬಂದ ಲವ್​ ಮಾಕ್​​ಟೇಲ್​ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಡಾರ್ಲಿಂಗ್​ ಕೃಷ್ಣ ಹಾಗೂ ಮಿಲನಾ ಸಿನಿ ಬದುಕಿಗೆ ಈ ಚಿತ್ರ ಸಾಕಷ್ಟು ಮೈಲೇಜ್​ ನೀಡಿತ್ತು.

‘ಲವ್​ ಮಾಕ್​ಟೇಲ್​ ಸಿನಿಮಾ ಅದ್ಭುತ’​; ESCN ಎಂದಿದ್ದ ಆಸ್ಟ್ರೇಲಿಯಾ ಪತ್ರಕರ್ತೆಗೆ ಈಗ ಕನ್ನಡ ಸಿನಿಮಾಗಳ ಮೇಲೆ ಒಲವು
ಕ್ಲೊಯಿ ಅಮಂಡಾ- ಲವ್​ ಮಾಕ್ಟೇಲ್​ ಸಿನಿಮಾ ಪೋಸ್ಟರ್​
ರಾಜೇಶ್ ದುಗ್ಗುಮನೆ
|

Updated on: May 27, 2021 | 7:43 PM

Share

ಆಸ್ಟ್ರೆಲಿಯಾದ ಜನಪ್ರಿಯ ಕ್ರೀಡಾ ಪತ್ರಕರ್ತೆ ಕ್ಲೊಯಿ ಅಮಂಡಾ ಬೈಲಿ ಇತ್ತೀಚೆಗೆ ‘ಈ ಸಲ ಕಪ್​ ನಮ್ದೇ’ ಎಂದು ಕನ್ನಡದಲ್ಲಿ ಟ್ವೀಟ್​ ಮಾಡಿ ಕರ್ನಾಟಕದವರ ಮನ ಗೆದ್ದಿದ್ದರು. ಈಗ ಕನ್ನಡಿಗರಿಗೆ ಅವರು ಮತ್ತಷ್ಟು ಹತ್ತಿರವಾಗಿದ್ದಾರೆ. ಕ್ಲೊಯಿ ಕನ್ನಡ ಸಿನಿಮಾಗಳ ಬಗ್ಗೆ ಒಲವು ಹೆಚ್ಚಿಸಿಕೊಂಡಿದ್ದು, ಡಾರ್ಲಿಂಗ್​ ಕೃಷ್ಣ ಹಾಗೂ ಮಿಲನಾ ನಾಗರಾಜ್​ ನಟನೆಯ ‘ಲವ್​ ಮಾಕ್​​ಟೇಲ್’​ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ.

2020ರಲ್ಲಿ ತೆರೆಗೆ ಬಂದ ‘ಲವ್​ ಮಾಕ್​​ಟೇಲ್’​ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಡಾರ್ಲಿಂಗ್​ ಕೃಷ್ಣ ಹಾಗೂ ಮಿಲನಾ ಸಿನಿ ಬದುಕಿಗೆ ಈ ಚಿತ್ರ ಸಾಕಷ್ಟು ಮೈಲೇಜ್​ ನೀಡಿತ್ತು. ಈ ಸಿನಿಮಾವನ್ನು ನೋಡಿ ಕಣ್ಣೀರಿಟ್ಟವರ ಸಂಖ್ಯೆ ದೊಡ್ಡದಿದೆ. ಈಗ ಈ ಚಿತ್ರಕ್ಕೆ ದೂರದ ಆಸ್ಟ್ರೇಲಿಯಾದಿಂದ ಮೆಚ್ಚುಗೆಯ ಮಾತು ಕೇಳಿ ಬಂದಿದೆ. ಕ್ಲೊಯಿ ಅಮಂಡಾ ಬೈಲಿ ಸಿನಿಮಾ ನೋಡಿ ಟ್ವೀಟ್​ ಮಾಡಿದ್ದಾರೆ.

‘ನಾನು ‘ಲವ್​ ಮಾಕ್ಟೇಲ್’​ ಸಿನಿಮಾ ನೋಡಿದೆ. ನಿಜಕ್ಕೂ ಇದು ಅತ್ಯುತ್ತಮ ಸಿನಿಮಾ. ನಾನು ಸಿನಿಮಾ ಉದ್ದಕ್ಕೂ ನಕ್ಕಿದ್ದೇನೆ. ಸಿನಿಮಾದ ಕ್ಲೈಮ್ಯಾಕ್ಸ್​ ಬೇಸರ ಮೂಡಿಸುತ್ತದೆ. ಸಿನಿಮಾ ಮ್ಯೂಸಿಕ್​ ಅದ್ಭುತವಾಗಿದೆ. ಸಿನಿಮಾದಲ್ಲಿ ಫನ್​ ಇದೆ, ಬೇಸರ ಇದೆ. ಈ ಚಿತ್ರ ಎಲ್ಲಾ ಎಮೋಷನ್​ಗಳನ್ನು ಒಳಗೊಂಡಿದೆ. ಲವ್​ ಮಾಕ್​ಟೇಲ್​ 2 ಬರುತ್ತಿದೆ ಎಂದು ಕೇಳಲ್ಪಟ್ಟೆ’ ಎಂಬುದಾಗಿ ಅವರು ಬರೆದಕೊಂಡಿದ್ದಾರೆ.

ಇನ್ನು, ಕ್ಲೊಯಿ ಅಮಂಡಾ ಯಶ್​ ನಟನೆಯ ‘ಕೆಜಿಎಫ್​‘ ಸಿನಿಮಾ ನೋಡಿದ್ದಾರಂತೆ. ಈ ಬಗ್ಗೆ ಅವರು ಕಮೆಂಟ್​ನಲ್ಲಿ ತಿಳಿಸಿದ್ದಾರೆ. ಅಷ್ಟೇ ಅಲ್ಲ, ‘ಕೆಜಿಎಫ್​ 2’ಗಾಗಿ ಕಾದಿದ್ದೇನೆ ಎಂಬುದಾಗಿಯೂ ಬರೆದುಕೊಂಡಿದ್ದಾರೆ. ಸದ್ಯ, ಅವರ ಈ ಟ್ವೀಟ್​ ಸಾಕಷ್ಟು ವೈರಲ್​ ಆಗಿದೆ.

ಐಪಿಎಲ್​ 14ನೇ ಸೀಸನ್​ ಆರಂಭವಾದಾಗ ಆರ್​ಸಿಬಿ ಜೆರ್ಸಿ ಹಾಕಿಕೊಂಡು ‘ಈ ಸಲ ಕಪ್​ ನಮ್ದೇ’ ಎಂದು ಹಾಕಿದ್ದರು. ಈ ಮೂಲಕ ಸಾಕಷ್ಟು ಕನ್ನಡ ಅಭಿಮಾನಿಗಳನ್ನು ಪಡೆದುಕೊಂಡಿದ್ದರು. ಈಗ ಲವ್​ ಮಾಕ್​ಟೇಲ್​ ಸಿನಿಮಾ ಬಗ್ಗೆ ಅವರು ಕೊಟ್ಟ ಪ್ರತಿಕ್ರಿಯೆಯಿಂದ ಅವರ ಅಭಿಮಾನಿ ಬಳಗ ಮತ್ತಷ್ಟು ಹಿರಿದಾಗಿದೆ.

ಇದನ್ನೂ ಓದಿ: ಕೊವಿಡ್​ ಪಾಸಿಟಿವ್​ ಆದರೂ ಅಭಿಮಾನ ಮರೆಯದ ಕೃಷ್ಣ-ಮಿಲನಾ!

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ