AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಲವ್​ ಮಾಕ್​ಟೇಲ್​ ಸಿನಿಮಾ ಅದ್ಭುತ’​; ESCN ಎಂದಿದ್ದ ಆಸ್ಟ್ರೇಲಿಯಾ ಪತ್ರಕರ್ತೆಗೆ ಈಗ ಕನ್ನಡ ಸಿನಿಮಾಗಳ ಮೇಲೆ ಒಲವು

Chloe Amanda Bailey: 2020ರಲ್ಲಿ ತೆರೆಗೆ ಬಂದ ಲವ್​ ಮಾಕ್​​ಟೇಲ್​ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಡಾರ್ಲಿಂಗ್​ ಕೃಷ್ಣ ಹಾಗೂ ಮಿಲನಾ ಸಿನಿ ಬದುಕಿಗೆ ಈ ಚಿತ್ರ ಸಾಕಷ್ಟು ಮೈಲೇಜ್​ ನೀಡಿತ್ತು.

‘ಲವ್​ ಮಾಕ್​ಟೇಲ್​ ಸಿನಿಮಾ ಅದ್ಭುತ’​; ESCN ಎಂದಿದ್ದ ಆಸ್ಟ್ರೇಲಿಯಾ ಪತ್ರಕರ್ತೆಗೆ ಈಗ ಕನ್ನಡ ಸಿನಿಮಾಗಳ ಮೇಲೆ ಒಲವು
ಕ್ಲೊಯಿ ಅಮಂಡಾ- ಲವ್​ ಮಾಕ್ಟೇಲ್​ ಸಿನಿಮಾ ಪೋಸ್ಟರ್​
ರಾಜೇಶ್ ದುಗ್ಗುಮನೆ
|

Updated on: May 27, 2021 | 7:43 PM

Share

ಆಸ್ಟ್ರೆಲಿಯಾದ ಜನಪ್ರಿಯ ಕ್ರೀಡಾ ಪತ್ರಕರ್ತೆ ಕ್ಲೊಯಿ ಅಮಂಡಾ ಬೈಲಿ ಇತ್ತೀಚೆಗೆ ‘ಈ ಸಲ ಕಪ್​ ನಮ್ದೇ’ ಎಂದು ಕನ್ನಡದಲ್ಲಿ ಟ್ವೀಟ್​ ಮಾಡಿ ಕರ್ನಾಟಕದವರ ಮನ ಗೆದ್ದಿದ್ದರು. ಈಗ ಕನ್ನಡಿಗರಿಗೆ ಅವರು ಮತ್ತಷ್ಟು ಹತ್ತಿರವಾಗಿದ್ದಾರೆ. ಕ್ಲೊಯಿ ಕನ್ನಡ ಸಿನಿಮಾಗಳ ಬಗ್ಗೆ ಒಲವು ಹೆಚ್ಚಿಸಿಕೊಂಡಿದ್ದು, ಡಾರ್ಲಿಂಗ್​ ಕೃಷ್ಣ ಹಾಗೂ ಮಿಲನಾ ನಾಗರಾಜ್​ ನಟನೆಯ ‘ಲವ್​ ಮಾಕ್​​ಟೇಲ್’​ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ.

2020ರಲ್ಲಿ ತೆರೆಗೆ ಬಂದ ‘ಲವ್​ ಮಾಕ್​​ಟೇಲ್’​ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಡಾರ್ಲಿಂಗ್​ ಕೃಷ್ಣ ಹಾಗೂ ಮಿಲನಾ ಸಿನಿ ಬದುಕಿಗೆ ಈ ಚಿತ್ರ ಸಾಕಷ್ಟು ಮೈಲೇಜ್​ ನೀಡಿತ್ತು. ಈ ಸಿನಿಮಾವನ್ನು ನೋಡಿ ಕಣ್ಣೀರಿಟ್ಟವರ ಸಂಖ್ಯೆ ದೊಡ್ಡದಿದೆ. ಈಗ ಈ ಚಿತ್ರಕ್ಕೆ ದೂರದ ಆಸ್ಟ್ರೇಲಿಯಾದಿಂದ ಮೆಚ್ಚುಗೆಯ ಮಾತು ಕೇಳಿ ಬಂದಿದೆ. ಕ್ಲೊಯಿ ಅಮಂಡಾ ಬೈಲಿ ಸಿನಿಮಾ ನೋಡಿ ಟ್ವೀಟ್​ ಮಾಡಿದ್ದಾರೆ.

‘ನಾನು ‘ಲವ್​ ಮಾಕ್ಟೇಲ್’​ ಸಿನಿಮಾ ನೋಡಿದೆ. ನಿಜಕ್ಕೂ ಇದು ಅತ್ಯುತ್ತಮ ಸಿನಿಮಾ. ನಾನು ಸಿನಿಮಾ ಉದ್ದಕ್ಕೂ ನಕ್ಕಿದ್ದೇನೆ. ಸಿನಿಮಾದ ಕ್ಲೈಮ್ಯಾಕ್ಸ್​ ಬೇಸರ ಮೂಡಿಸುತ್ತದೆ. ಸಿನಿಮಾ ಮ್ಯೂಸಿಕ್​ ಅದ್ಭುತವಾಗಿದೆ. ಸಿನಿಮಾದಲ್ಲಿ ಫನ್​ ಇದೆ, ಬೇಸರ ಇದೆ. ಈ ಚಿತ್ರ ಎಲ್ಲಾ ಎಮೋಷನ್​ಗಳನ್ನು ಒಳಗೊಂಡಿದೆ. ಲವ್​ ಮಾಕ್​ಟೇಲ್​ 2 ಬರುತ್ತಿದೆ ಎಂದು ಕೇಳಲ್ಪಟ್ಟೆ’ ಎಂಬುದಾಗಿ ಅವರು ಬರೆದಕೊಂಡಿದ್ದಾರೆ.

ಇನ್ನು, ಕ್ಲೊಯಿ ಅಮಂಡಾ ಯಶ್​ ನಟನೆಯ ‘ಕೆಜಿಎಫ್​‘ ಸಿನಿಮಾ ನೋಡಿದ್ದಾರಂತೆ. ಈ ಬಗ್ಗೆ ಅವರು ಕಮೆಂಟ್​ನಲ್ಲಿ ತಿಳಿಸಿದ್ದಾರೆ. ಅಷ್ಟೇ ಅಲ್ಲ, ‘ಕೆಜಿಎಫ್​ 2’ಗಾಗಿ ಕಾದಿದ್ದೇನೆ ಎಂಬುದಾಗಿಯೂ ಬರೆದುಕೊಂಡಿದ್ದಾರೆ. ಸದ್ಯ, ಅವರ ಈ ಟ್ವೀಟ್​ ಸಾಕಷ್ಟು ವೈರಲ್​ ಆಗಿದೆ.

ಐಪಿಎಲ್​ 14ನೇ ಸೀಸನ್​ ಆರಂಭವಾದಾಗ ಆರ್​ಸಿಬಿ ಜೆರ್ಸಿ ಹಾಕಿಕೊಂಡು ‘ಈ ಸಲ ಕಪ್​ ನಮ್ದೇ’ ಎಂದು ಹಾಕಿದ್ದರು. ಈ ಮೂಲಕ ಸಾಕಷ್ಟು ಕನ್ನಡ ಅಭಿಮಾನಿಗಳನ್ನು ಪಡೆದುಕೊಂಡಿದ್ದರು. ಈಗ ಲವ್​ ಮಾಕ್​ಟೇಲ್​ ಸಿನಿಮಾ ಬಗ್ಗೆ ಅವರು ಕೊಟ್ಟ ಪ್ರತಿಕ್ರಿಯೆಯಿಂದ ಅವರ ಅಭಿಮಾನಿ ಬಳಗ ಮತ್ತಷ್ಟು ಹಿರಿದಾಗಿದೆ.

ಇದನ್ನೂ ಓದಿ: ಕೊವಿಡ್​ ಪಾಸಿಟಿವ್​ ಆದರೂ ಅಭಿಮಾನ ಮರೆಯದ ಕೃಷ್ಣ-ಮಿಲನಾ!

Follow Us
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್