AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಲವ್​ ಮಾಕ್​ಟೇಲ್​ ಸಿನಿಮಾ ಅದ್ಭುತ’​; ESCN ಎಂದಿದ್ದ ಆಸ್ಟ್ರೇಲಿಯಾ ಪತ್ರಕರ್ತೆಗೆ ಈಗ ಕನ್ನಡ ಸಿನಿಮಾಗಳ ಮೇಲೆ ಒಲವು

Chloe Amanda Bailey: 2020ರಲ್ಲಿ ತೆರೆಗೆ ಬಂದ ಲವ್​ ಮಾಕ್​​ಟೇಲ್​ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಡಾರ್ಲಿಂಗ್​ ಕೃಷ್ಣ ಹಾಗೂ ಮಿಲನಾ ಸಿನಿ ಬದುಕಿಗೆ ಈ ಚಿತ್ರ ಸಾಕಷ್ಟು ಮೈಲೇಜ್​ ನೀಡಿತ್ತು.

‘ಲವ್​ ಮಾಕ್​ಟೇಲ್​ ಸಿನಿಮಾ ಅದ್ಭುತ’​; ESCN ಎಂದಿದ್ದ ಆಸ್ಟ್ರೇಲಿಯಾ ಪತ್ರಕರ್ತೆಗೆ ಈಗ ಕನ್ನಡ ಸಿನಿಮಾಗಳ ಮೇಲೆ ಒಲವು
ಕ್ಲೊಯಿ ಅಮಂಡಾ- ಲವ್​ ಮಾಕ್ಟೇಲ್​ ಸಿನಿಮಾ ಪೋಸ್ಟರ್​
ರಾಜೇಶ್ ದುಗ್ಗುಮನೆ
|

Updated on: May 27, 2021 | 7:43 PM

Share

ಆಸ್ಟ್ರೆಲಿಯಾದ ಜನಪ್ರಿಯ ಕ್ರೀಡಾ ಪತ್ರಕರ್ತೆ ಕ್ಲೊಯಿ ಅಮಂಡಾ ಬೈಲಿ ಇತ್ತೀಚೆಗೆ ‘ಈ ಸಲ ಕಪ್​ ನಮ್ದೇ’ ಎಂದು ಕನ್ನಡದಲ್ಲಿ ಟ್ವೀಟ್​ ಮಾಡಿ ಕರ್ನಾಟಕದವರ ಮನ ಗೆದ್ದಿದ್ದರು. ಈಗ ಕನ್ನಡಿಗರಿಗೆ ಅವರು ಮತ್ತಷ್ಟು ಹತ್ತಿರವಾಗಿದ್ದಾರೆ. ಕ್ಲೊಯಿ ಕನ್ನಡ ಸಿನಿಮಾಗಳ ಬಗ್ಗೆ ಒಲವು ಹೆಚ್ಚಿಸಿಕೊಂಡಿದ್ದು, ಡಾರ್ಲಿಂಗ್​ ಕೃಷ್ಣ ಹಾಗೂ ಮಿಲನಾ ನಾಗರಾಜ್​ ನಟನೆಯ ‘ಲವ್​ ಮಾಕ್​​ಟೇಲ್’​ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ.

2020ರಲ್ಲಿ ತೆರೆಗೆ ಬಂದ ‘ಲವ್​ ಮಾಕ್​​ಟೇಲ್’​ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಡಾರ್ಲಿಂಗ್​ ಕೃಷ್ಣ ಹಾಗೂ ಮಿಲನಾ ಸಿನಿ ಬದುಕಿಗೆ ಈ ಚಿತ್ರ ಸಾಕಷ್ಟು ಮೈಲೇಜ್​ ನೀಡಿತ್ತು. ಈ ಸಿನಿಮಾವನ್ನು ನೋಡಿ ಕಣ್ಣೀರಿಟ್ಟವರ ಸಂಖ್ಯೆ ದೊಡ್ಡದಿದೆ. ಈಗ ಈ ಚಿತ್ರಕ್ಕೆ ದೂರದ ಆಸ್ಟ್ರೇಲಿಯಾದಿಂದ ಮೆಚ್ಚುಗೆಯ ಮಾತು ಕೇಳಿ ಬಂದಿದೆ. ಕ್ಲೊಯಿ ಅಮಂಡಾ ಬೈಲಿ ಸಿನಿಮಾ ನೋಡಿ ಟ್ವೀಟ್​ ಮಾಡಿದ್ದಾರೆ.

‘ನಾನು ‘ಲವ್​ ಮಾಕ್ಟೇಲ್’​ ಸಿನಿಮಾ ನೋಡಿದೆ. ನಿಜಕ್ಕೂ ಇದು ಅತ್ಯುತ್ತಮ ಸಿನಿಮಾ. ನಾನು ಸಿನಿಮಾ ಉದ್ದಕ್ಕೂ ನಕ್ಕಿದ್ದೇನೆ. ಸಿನಿಮಾದ ಕ್ಲೈಮ್ಯಾಕ್ಸ್​ ಬೇಸರ ಮೂಡಿಸುತ್ತದೆ. ಸಿನಿಮಾ ಮ್ಯೂಸಿಕ್​ ಅದ್ಭುತವಾಗಿದೆ. ಸಿನಿಮಾದಲ್ಲಿ ಫನ್​ ಇದೆ, ಬೇಸರ ಇದೆ. ಈ ಚಿತ್ರ ಎಲ್ಲಾ ಎಮೋಷನ್​ಗಳನ್ನು ಒಳಗೊಂಡಿದೆ. ಲವ್​ ಮಾಕ್​ಟೇಲ್​ 2 ಬರುತ್ತಿದೆ ಎಂದು ಕೇಳಲ್ಪಟ್ಟೆ’ ಎಂಬುದಾಗಿ ಅವರು ಬರೆದಕೊಂಡಿದ್ದಾರೆ.

ಇನ್ನು, ಕ್ಲೊಯಿ ಅಮಂಡಾ ಯಶ್​ ನಟನೆಯ ‘ಕೆಜಿಎಫ್​‘ ಸಿನಿಮಾ ನೋಡಿದ್ದಾರಂತೆ. ಈ ಬಗ್ಗೆ ಅವರು ಕಮೆಂಟ್​ನಲ್ಲಿ ತಿಳಿಸಿದ್ದಾರೆ. ಅಷ್ಟೇ ಅಲ್ಲ, ‘ಕೆಜಿಎಫ್​ 2’ಗಾಗಿ ಕಾದಿದ್ದೇನೆ ಎಂಬುದಾಗಿಯೂ ಬರೆದುಕೊಂಡಿದ್ದಾರೆ. ಸದ್ಯ, ಅವರ ಈ ಟ್ವೀಟ್​ ಸಾಕಷ್ಟು ವೈರಲ್​ ಆಗಿದೆ.

ಐಪಿಎಲ್​ 14ನೇ ಸೀಸನ್​ ಆರಂಭವಾದಾಗ ಆರ್​ಸಿಬಿ ಜೆರ್ಸಿ ಹಾಕಿಕೊಂಡು ‘ಈ ಸಲ ಕಪ್​ ನಮ್ದೇ’ ಎಂದು ಹಾಕಿದ್ದರು. ಈ ಮೂಲಕ ಸಾಕಷ್ಟು ಕನ್ನಡ ಅಭಿಮಾನಿಗಳನ್ನು ಪಡೆದುಕೊಂಡಿದ್ದರು. ಈಗ ಲವ್​ ಮಾಕ್​ಟೇಲ್​ ಸಿನಿಮಾ ಬಗ್ಗೆ ಅವರು ಕೊಟ್ಟ ಪ್ರತಿಕ್ರಿಯೆಯಿಂದ ಅವರ ಅಭಿಮಾನಿ ಬಳಗ ಮತ್ತಷ್ಟು ಹಿರಿದಾಗಿದೆ.

ಇದನ್ನೂ ಓದಿ: ಕೊವಿಡ್​ ಪಾಸಿಟಿವ್​ ಆದರೂ ಅಭಿಮಾನ ಮರೆಯದ ಕೃಷ್ಣ-ಮಿಲನಾ!

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ