AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಲವ್​ ಮಾಕ್​ಟೇಲ್​ ಸಿನಿಮಾ ಅದ್ಭುತ’​; ESCN ಎಂದಿದ್ದ ಆಸ್ಟ್ರೇಲಿಯಾ ಪತ್ರಕರ್ತೆಗೆ ಈಗ ಕನ್ನಡ ಸಿನಿಮಾಗಳ ಮೇಲೆ ಒಲವು

Chloe Amanda Bailey: 2020ರಲ್ಲಿ ತೆರೆಗೆ ಬಂದ ಲವ್​ ಮಾಕ್​​ಟೇಲ್​ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಡಾರ್ಲಿಂಗ್​ ಕೃಷ್ಣ ಹಾಗೂ ಮಿಲನಾ ಸಿನಿ ಬದುಕಿಗೆ ಈ ಚಿತ್ರ ಸಾಕಷ್ಟು ಮೈಲೇಜ್​ ನೀಡಿತ್ತು.

‘ಲವ್​ ಮಾಕ್​ಟೇಲ್​ ಸಿನಿಮಾ ಅದ್ಭುತ’​; ESCN ಎಂದಿದ್ದ ಆಸ್ಟ್ರೇಲಿಯಾ ಪತ್ರಕರ್ತೆಗೆ ಈಗ ಕನ್ನಡ ಸಿನಿಮಾಗಳ ಮೇಲೆ ಒಲವು
ಕ್ಲೊಯಿ ಅಮಂಡಾ- ಲವ್​ ಮಾಕ್ಟೇಲ್​ ಸಿನಿಮಾ ಪೋಸ್ಟರ್​
ರಾಜೇಶ್ ದುಗ್ಗುಮನೆ
|

Updated on: May 27, 2021 | 7:43 PM

Share

ಆಸ್ಟ್ರೆಲಿಯಾದ ಜನಪ್ರಿಯ ಕ್ರೀಡಾ ಪತ್ರಕರ್ತೆ ಕ್ಲೊಯಿ ಅಮಂಡಾ ಬೈಲಿ ಇತ್ತೀಚೆಗೆ ‘ಈ ಸಲ ಕಪ್​ ನಮ್ದೇ’ ಎಂದು ಕನ್ನಡದಲ್ಲಿ ಟ್ವೀಟ್​ ಮಾಡಿ ಕರ್ನಾಟಕದವರ ಮನ ಗೆದ್ದಿದ್ದರು. ಈಗ ಕನ್ನಡಿಗರಿಗೆ ಅವರು ಮತ್ತಷ್ಟು ಹತ್ತಿರವಾಗಿದ್ದಾರೆ. ಕ್ಲೊಯಿ ಕನ್ನಡ ಸಿನಿಮಾಗಳ ಬಗ್ಗೆ ಒಲವು ಹೆಚ್ಚಿಸಿಕೊಂಡಿದ್ದು, ಡಾರ್ಲಿಂಗ್​ ಕೃಷ್ಣ ಹಾಗೂ ಮಿಲನಾ ನಾಗರಾಜ್​ ನಟನೆಯ ‘ಲವ್​ ಮಾಕ್​​ಟೇಲ್’​ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ.

2020ರಲ್ಲಿ ತೆರೆಗೆ ಬಂದ ‘ಲವ್​ ಮಾಕ್​​ಟೇಲ್’​ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್​ ಆಗಿತ್ತು. ಡಾರ್ಲಿಂಗ್​ ಕೃಷ್ಣ ಹಾಗೂ ಮಿಲನಾ ಸಿನಿ ಬದುಕಿಗೆ ಈ ಚಿತ್ರ ಸಾಕಷ್ಟು ಮೈಲೇಜ್​ ನೀಡಿತ್ತು. ಈ ಸಿನಿಮಾವನ್ನು ನೋಡಿ ಕಣ್ಣೀರಿಟ್ಟವರ ಸಂಖ್ಯೆ ದೊಡ್ಡದಿದೆ. ಈಗ ಈ ಚಿತ್ರಕ್ಕೆ ದೂರದ ಆಸ್ಟ್ರೇಲಿಯಾದಿಂದ ಮೆಚ್ಚುಗೆಯ ಮಾತು ಕೇಳಿ ಬಂದಿದೆ. ಕ್ಲೊಯಿ ಅಮಂಡಾ ಬೈಲಿ ಸಿನಿಮಾ ನೋಡಿ ಟ್ವೀಟ್​ ಮಾಡಿದ್ದಾರೆ.

‘ನಾನು ‘ಲವ್​ ಮಾಕ್ಟೇಲ್’​ ಸಿನಿಮಾ ನೋಡಿದೆ. ನಿಜಕ್ಕೂ ಇದು ಅತ್ಯುತ್ತಮ ಸಿನಿಮಾ. ನಾನು ಸಿನಿಮಾ ಉದ್ದಕ್ಕೂ ನಕ್ಕಿದ್ದೇನೆ. ಸಿನಿಮಾದ ಕ್ಲೈಮ್ಯಾಕ್ಸ್​ ಬೇಸರ ಮೂಡಿಸುತ್ತದೆ. ಸಿನಿಮಾ ಮ್ಯೂಸಿಕ್​ ಅದ್ಭುತವಾಗಿದೆ. ಸಿನಿಮಾದಲ್ಲಿ ಫನ್​ ಇದೆ, ಬೇಸರ ಇದೆ. ಈ ಚಿತ್ರ ಎಲ್ಲಾ ಎಮೋಷನ್​ಗಳನ್ನು ಒಳಗೊಂಡಿದೆ. ಲವ್​ ಮಾಕ್​ಟೇಲ್​ 2 ಬರುತ್ತಿದೆ ಎಂದು ಕೇಳಲ್ಪಟ್ಟೆ’ ಎಂಬುದಾಗಿ ಅವರು ಬರೆದಕೊಂಡಿದ್ದಾರೆ.

ಇನ್ನು, ಕ್ಲೊಯಿ ಅಮಂಡಾ ಯಶ್​ ನಟನೆಯ ‘ಕೆಜಿಎಫ್​‘ ಸಿನಿಮಾ ನೋಡಿದ್ದಾರಂತೆ. ಈ ಬಗ್ಗೆ ಅವರು ಕಮೆಂಟ್​ನಲ್ಲಿ ತಿಳಿಸಿದ್ದಾರೆ. ಅಷ್ಟೇ ಅಲ್ಲ, ‘ಕೆಜಿಎಫ್​ 2’ಗಾಗಿ ಕಾದಿದ್ದೇನೆ ಎಂಬುದಾಗಿಯೂ ಬರೆದುಕೊಂಡಿದ್ದಾರೆ. ಸದ್ಯ, ಅವರ ಈ ಟ್ವೀಟ್​ ಸಾಕಷ್ಟು ವೈರಲ್​ ಆಗಿದೆ.

ಐಪಿಎಲ್​ 14ನೇ ಸೀಸನ್​ ಆರಂಭವಾದಾಗ ಆರ್​ಸಿಬಿ ಜೆರ್ಸಿ ಹಾಕಿಕೊಂಡು ‘ಈ ಸಲ ಕಪ್​ ನಮ್ದೇ’ ಎಂದು ಹಾಕಿದ್ದರು. ಈ ಮೂಲಕ ಸಾಕಷ್ಟು ಕನ್ನಡ ಅಭಿಮಾನಿಗಳನ್ನು ಪಡೆದುಕೊಂಡಿದ್ದರು. ಈಗ ಲವ್​ ಮಾಕ್​ಟೇಲ್​ ಸಿನಿಮಾ ಬಗ್ಗೆ ಅವರು ಕೊಟ್ಟ ಪ್ರತಿಕ್ರಿಯೆಯಿಂದ ಅವರ ಅಭಿಮಾನಿ ಬಳಗ ಮತ್ತಷ್ಟು ಹಿರಿದಾಗಿದೆ.

ಇದನ್ನೂ ಓದಿ: ಕೊವಿಡ್​ ಪಾಸಿಟಿವ್​ ಆದರೂ ಅಭಿಮಾನ ಮರೆಯದ ಕೃಷ್ಣ-ಮಿಲನಾ!

ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ