AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪು ಬಾಸ್, ಪುನೀತ್ ರಾಜ್​ಕುಮಾರ್ ಅನ್ನು ನೆನಪಿಸಿಕೊಂಡ ಯೂನಿವರ್ಸಲ್ ಬಾಸ್ ಕ್ರಿಸ್ ಗೇಲ್

ಯೂನಿವರ್ಸಲ್ ಬಾಸ್ ಎಂದು ಕರೆಯಲಾಗುವ ಖ್ಯಾತ ಕ್ರಿಕೆಟಿಗ ಕ್ರಿಸ್ ಗೇಲ್, ಪುನೀತ್ ರಾಜ್​ಕುಮಾರ್ ಅವರನ್ನು ನೆನಪಿಸಿಕೊಂಡಿದ್ದಾರೆ.

ಅಪ್ಪು ಬಾಸ್, ಪುನೀತ್ ರಾಜ್​ಕುಮಾರ್ ಅನ್ನು ನೆನಪಿಸಿಕೊಂಡ ಯೂನಿವರ್ಸಲ್ ಬಾಸ್ ಕ್ರಿಸ್ ಗೇಲ್
ಅಪ್ಪು-ಗೇಲ್
ಮಂಜುನಾಥ ಸಿ.
|

Updated on:Apr 09, 2023 | 4:02 PM

Share

ಮತ್ತೊಂದು ಐಪಿಎಲ್ ಸೀಸನ್ (IPL 2023) ಪ್ರಾರಂಭವಾಗಿದ್ದು ಆರ್​ಸಿಬಿ (RCB) ಅಭಿಮಾನಿಗಳು ಈ ಬಾರಿಯೂ ಕಪ್ ನಮ್ದೆ ಎನ್ನುತ್ತಿದ್ದಾರೆ. ಈ ಐಪಿಎಲ್​ನ ವಿಶೇಷತೆಯೆಂದರೆ ಆರ್​ಸಿಬಿಯ ಇಬ್ಬರು ಲಿಜೆಂಡ್​ಗಳು ಕಮೆಂಟರಿ ಬಾಕ್ಸ್ ಮೂಲಕ ಆರ್​ಸಿಬಿಗೆ ಬೆಂಬಲ ನೀಡುತ್ತಿದ್ದಾರೆ. ಹೌದು, ಕ್ರಿಸ್ ಗೇಲ್ (Chris Gayle) ಹಾಗೂ ಎಬಿ ಡಿವಿಲಿಯರ್ಸ್ ಅವರುಗಳು ಈ ಬಾರಿ ಐಪಿಎಲ್ ಆಡುತ್ತಿಲ್ಲ ಬದಲಿಗೆ ಕಮೆಂಟರಿ ಮಾಡುತ್ತಿದ್ದಾರೆ. ಐಪಿಎಲ್ ಆರಂಭಕ್ಕೂ ಮುನ್ನ ನಡೆದ ಆರ್​ಸಿಬಿ ಅನ್​ಬಾಕ್ಸಿಂಗ್​ನಲ್ಲಿಯೂ ಈ ದಿಗ್ಗಜರು ಪಾಲ್ಗೊಂಡಿದ್ದರು. ಆರ್​ಸಿಬಿಯ ಭಾಗವಾಗಿರುವ ಮಿಸ್ಟರ್ ನ್ಯಾಗ್ಸ್ ಕ್ರಿಸ್ ಗೇಲ್ ಸಂದರ್ಶನ ಮಾಡಿದ್ದು ಸಂದರ್ಶನದಲ್ಲಿ ಪುನೀತ್ ರಾಜ್​ಕುಮಾರ್ (Puneeth Rajkumar) ಅವರನ್ನು ಕ್ರಿಸ್ ಗೇಲ್ ನೆನಪು ಮಾಡಿಕೊಂಡಿದ್ದಾರೆ.

ಮಿಸ್ಟರ್ ನಾಗ್ಸ್ ಅಲಿಯಾಸ್ ದಾನಿಶ್ ಸೇಠ್ ತಮಾಷೆಯಾಗಿ ಪ್ರಶ್ನೆಗಳನ್ನು ಕೇಳುತ್ತಾ, ನಿಮ್ಮ ತವರು ಯಾವುದು ಅಥವಾ ನಿಮ್ಮ ಹೋಮ್​ಟೌನ್ ಯಾವುದು ಎಂದಾಗ ನನಗೆ ಎರಡು ಹೋಮ್ ಟೌನ್ ಇದೆ. ಒಂದು ಕೆರೆಬಿಯನ್ ಮತ್ತೊಂದು ಕಲಬುರ್ಗಿ ಎಂದಿದ್ದಾರೆ ಕ್ರಿಸ್ ಗೇಲ್. ಕಲಬುರ್ಗಿಗೆ ಭೇಟಿ ನೀಡಿರುವುದಾಗಿಯೂ ಹೇಳಿರುವ ಕ್ರಿಸ್ ಗೇಲ್, ಜೋಳದ ರೊಟ್ಟಿ, ಶೆಂಗ ಚಟ್ನಿ ಚೆನ್ನಾಗಿರುತ್ತೆ ಎಂದು ಸಹ ಹೇಳಿದ್ದಾರೆ. ‘ತ್ರಾಸಾಕ್ಕೆತಿ’ ಹಾಡು ಸಹ ಹಾಡಿದ್ದಾರೆ. ಈ ನಡುವೆ ವಿಶ್ವದಲ್ಲಿ ಇರುವುದು ಇಬ್ಬರೇ ಬಾಸ್​ಗಳು ಒಬ್ಬರು ಅಪ್ಪು ಬಾಸ್ ಹಾಗೂ ಮತ್ತೊಬ್ಬರು ಯೂನಿವರ್ಸಲ್ ಬಾಸ್ ಎಂದಿದ್ದಾರೆ ಕ್ರಿಸ್ ಗೇಲ್. ಮಾತ್ರವಲ್ಲದೆ ಅಪ್ಪುವನ್ನು ಮಿಸ್ ಮಾಡಿಕೊಳ್ಳುವುದಾಗಿಯೂ ಹೇಳಿದ್ದಾರೆ.

ಕ್ರಿಕೆಟಿಗ ಕ್ರಿಸ್ ಗೇಲ್, ಅಪ್ಪು ಅವರನ್ನು ನೆನಪಿಸಿಕೊಂಡಿರುವುದು ಅಪ್ಪು ಅಭಿಮಾನಿಗಳಿಗೆ ಖುಷಿ ತಂದಿರುವುದು ಮಾತ್ರವೇ ಅಲ್ಲದೆ, ಸ್ವತಃ ಯೂನಿವರ್ಸಲ್ ಬಾಸ್ ಎಂದು ಕರೆಸಿಕೊಳ್ಳುವ ಕ್ರಿಸ್ ಗೇಲ್ ಅವರು ಅಪ್ಪು ಅವರನ್ನು ಬಾಸ್ ಎಂದು ಕರೆದಿರುವುದಕ್ಕೆ ಹೆಮ್ಮೆ ಪಡುತ್ತಿದ್ದಾರೆ. ಕ್ರಿಸ್ ಗೇಲ್, ಅಪ್ಪು ಬಾಸ್ ಎಂದಿರುವುದು ವಿಡಿಯೋ ತುಣುಕು ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.

ಅಂದಹಾಗೆ ಪುನೀತ್ ರಾಜ್​ಕುಮಾರ್ ಅವರಿಗೆ ಆರ್​ಸಿಬಿ ಜೊತೆಗೆ ಉತ್ತಮ ಬಾಂಧವ್ಯ ಮೊದಲಿನಿಂದಲೂ ಇತ್ತು. ಆರ್​ಸಿಬಿ ತಂಡಕ್ಕೆ ರಾಯಭಾರಿಯಾಗಿಯೂ ಕೆಲ ಕಾಲ ಇದ್ದರು. ಆರ್​ಸಿಬಿಯ ಹಲವು ಆಟಗಾರರೊಟ್ಟಿಗೆ ಸ್ನೇಹವನ್ನು ಪುನೀತ್ ರಾಜ್​ಕುಮಾರ್ ಹೊಂದಿದ್ದರು. ಇನ್ನು ಆರ್​ಸಿಬಿ ಗಾಗಿ ದಾನಿಶ್ ಸೇಠ್ ಹಲವು ವರ್ಷಗಳಿಂದ ಸಂದರ್ಶನ ಮಾಡುತ್ತಲೇ ಬರುತ್ತಿದ್ದಾರೆ. ಈ ಹಿಂದೆಯೂ ಹಲವು ಬಾರಿ ಕ್ರಿಸ್ ಗೇಲ್ ಅನ್ನು ಸಂದರ್ಶನ ಮಾಡಿದ್ದರು. ಆಗ ಹಿಂದೊಮ್ಮೆ ಕಲಬುರ್ಗಿ ಬಗ್ಗೆ ಕ್ರಿಸ್ ಗೇಲ್ ಮಾತನಾಡಿದ್ದರು. ಇದೀಗ ಮತ್ತೊಮ್ಮೆ ಕಲಬುರ್ಗಿ ಬಗ್ಗೆ ಕ್ರಿಸ್ ಮಾತನಾಡಿದ್ದಾರೆ.

ಇನ್ನು ಈ ಐಪಿಎಲ್​ನಲ್ಲಿ ಆರ್​ಸಿಬಿ ಈವರೆಗೆ ಎರಡು ಪಂದ್ಯಗಳನ್ನು ಆಡಿದೆ. ಮೊದಲ ಪಂದ್ಯದಲ್ಲಿ ದೊಡ್ಡ ವಿಜಯ ಗಳಿಸಿದರೆ ಎರಡನೇ ಪಂದ್ಯದಲ್ಲಿ ಹೀನಾಯ ಸೋಲು ಕಂಡಿದೆ. ಆರ್​ಸಿಬಿಯ ಮುಂದಿನ ಪಂದ್ಯ ಲಖನೌ ಸೂಪರ್ ಜಾಯಿಂಟ್ಸ್ ವಿರುದ್ಧ ಸೋಮವಾರ ನಡೆಯಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:00 pm, Sun, 9 April 23

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ