ಫೆ.5ರಿಂದ ಚಿತ್ರಮಂದಿರದಲ್ಲಿ ಹೌಸ್​ಫುಲ್​ಗೆ ಅವಕಾಶ; ಸ್ಯಾಂಡಲ್​ವುಡ್​ನಲ್ಲಿ ಹಬ್ಬದ ವಾತಾವರಣ

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜತೆ ಸಭೆ ನಡೆಸಿ ಬಂದಿದ್ದರು. ಈಗ ಶೇ. 100 ಆಸನ ವ್ಯವಸ್ಥೆಗೆ ಸರ್ಕಾರ ಅನುಮತಿ ನೀಡಿದೆ. ಶನಿವಾರದಿಂದಲೇ (ಫೆಬ್ರವರಿ 5) ಹೊಸ ನಿಯಮ ಜಾರಿಗೆ ಬರಲಿದೆ.

ಫೆ.5ರಿಂದ ಚಿತ್ರಮಂದಿರದಲ್ಲಿ ಹೌಸ್​ಫುಲ್​ಗೆ ಅವಕಾಶ; ಸ್ಯಾಂಡಲ್​ವುಡ್​ನಲ್ಲಿ ಹಬ್ಬದ ವಾತಾವರಣ
ಸಾಂದರ್ಭಿಕ ಚಿತ್ರ
Follow us
| Updated By: ರಾಜೇಶ್ ದುಗ್ಗುಮನೆ

Updated on:Feb 04, 2022 | 2:59 PM

ಕೊವಿಡ್​ ಮೂರನೇ ಅಲೆ (Covid 3rd Wave) ಕಾರಣದಿಂದ ಚಿತ್ರಮಂದಿರದಲ್ಲಿ ಶೇ.50 ಆಸನ ವ್ಯವಸ್ಥೆಗೆ ಮಾತ್ರ ಅವಕಾಶ ನೀಡಲಾಗಿತ್ತು. ಈಗ ಕೊವಿಡ್​ ಪ್ರಭಾವ ಕಡಿಮೆ ಆಗಿದೆ. ಹೀಗಾಗಿ, ಬಹುತೇಕ ಎಲ್ಲಾ ಉದ್ಯಮಗಳಿಗೆ ರಿಲೀಫ್​ ನೀಡಲಾಗಿದೆ. ಆದರೆ, ಚಿತ್ರಮಂದಿರಗಳ ಮೇಲೆ ಹೇರಿದ್ದ ಕೆಲ ನಿರ್ಬಂಧಗಳಿಗೆ ರಿಲೀಫ್​ ಸಿಕ್ಕಿರಲಿಲ್ಲ. ಈ ಬಗ್ಗೆ ಅನೇಕ ಸ್ಟಾರ್​ ನಟರು ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಜತೆ ಸಭೆ ನಡೆಸಿ ಬಂದಿದ್ದರು. ಈಗ ಶೇ. 100 ಆಸನ ವ್ಯವಸ್ಥೆಗೆ ಸರ್ಕಾರ ಅನುಮತಿ ನೀಡಿದೆ. ಶನಿವಾರದಿಂದಲೇ (ಫೆಬ್ರವರಿ 5) ಹೊಸ ನಿಯಮ ಜಾರಿಗೆ ಬರಲಿದೆ. ಈ ಘೋಷಣೆಯಿಂದ ಚಿತ್ರಮಂದಿರದಲ್ಲಿ ಮತ್ತೆ ಹಬ್ಬದ ವಾತಾವರಣ ನಿರ್ಮಾಣವಾಗಿದೆ.

‘ಚಿತ್ರಮಂದಿರಗಳಲ್ಲಿ ಶೇ.100ರಷ್ಟು ಆಸನ ಭರ್ತಿ ವಿಚಾರಕ್ಕೆ ಸಂಬಂಧಿಸಿ 4-5 ದಿನಗಳಲ್ಲಿ ತೀರ್ಮಾನ ಮಾಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಪೂರ್ಣ ಮಾಹಿತಿ ನೀಡುವಂತೆ ಸಿಎಂ ಕೇಳಿದರು. ತಜ್ಞರ ಜತೆ ಚರ್ಚಿಸಿ ತೀರ್ಮಾನ ಮಾಡುವುದಾಗಿ ಹೇಳಿದ್ದಾರೆ. ಸಿಎಂ ಬೊಮ್ಮಾಯಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ’ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜೈರಾಜ್ ಕೆಲದಿನಗಳ ಹಿಂದೆ ಹೇಳಿದ್ದರು. ಈಗ ಸರ್ಕಾರ ಶೇ.100ಕ್ಕೆ ಅವಕಾಶ ಮಾಡಿದೆ.

‘ಚಿತ್ರಮಂದಿರಗಳಲ್ಲಿ ಶೇ.100ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಲಾಗಿದೆ. ಯೋಗಕೇಂದ್ರ, ಜಿಮ್​, ಈಜುಕೊಳಗಳಲ್ಲಿ ಶೇ.100ರಷ್ಟು ಅವಕಾಶ ಇದೆ. ರಾಜ್ಯ ಸರ್ಕಾರದ ಮಾರ್ಗಸೂಚಿ ಪಾಲಿಸಬೇಕು. ಎರಡು ಡೋಸ್​ ಲಸಿಕೆಯನ್ನು ಕಡ್ಡಾಯವಾಗಿ ಪಡೆದಿರಬೇಕು. ಎಲ್ಲ ನಿರ್ಬಂಧ, ಕ್ರಮಗಳನ್ನು ಹಿಂಪಡೆಯಲಾಗುತ್ತಿದೆ’ ಎಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿಕೆ ನೀಡಿದ್ದಾರೆ.

ರಾಜ್ಯ ಸರ್ಕಾರದ ನಿರ್ಧಾರಕ್ಕೆ ಫಿಲ್ಮ್ ಚೇಂಬರ್​ ಆಕ್ರೋಶ ಹೊರಹಾಕಿತ್ತು. ‘ಚಿತ್ರೋದ್ಯಮದ ಬಗ್ಗೆ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಬೇರೆ ಎಲ್ಲಾ ಉದ್ಯಮಗಳಿಗೂ ಸರ್ಕಾರ ಅವಕಾಶ ನೀಡಿದೆ.  ಚಿತ್ರೋದ್ಯಮಕ್ಕೆ ಯಾಕೆ ಸಂಪೂರ್ಣ ಅವಕಾಶ ನೀಡುತ್ತಿಲ್ಲ? ಈಗಾಗಲೇ ನಿರ್ಮಾಪಕರು, ಕಲಾವಿದರು ಬೀದಿಗೆ ಬಂದಿದ್ದಾರೆ. ಥಿಯೇಟರ್​ಗಳಿಗೆ ಶೇ.100ರಷ್ಟು ಆಸನ ವ್ಯವಸ್ಥೆಗೆ ಅವಕಾಶ ನೀಡಲಿ’ ಎಂದು ಫಿಲ್ಮ್ ಚೇಂಬರ್ ಕಾರ್ಯದರ್ಶಿ ಎನ್.ಎಂ.ಸುರೇಶ್ ಹೇಳಿಕೆ ನೀಡಿದ್ದರು.

ಕೊರೊನಾ ನಿಯಂತ್ರಣಕ್ಕೆ ಸರ್ಕಾರ ತಂದ ಟಫ್​ ರೂಲ್ಸ್​ನಿಂದಾಗಿ ಹಲವು ನಿರ್ಮಾಪಕರಿಗೆ ಸಿನಿಮಾ ರಿಲೀಸ್​ ಮಾಡೋಕೆ ಆಗಿಲ್ಲ. ಈಗಾಗಲೇ ಹಲವು ಪ್ರೊಡ್ಯೂಸರ್​ಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಿನಿಮಾ ಮಾಡುವುದರ ಜತೆಗೆ ಸಾಲದ ಹೊರೆಯನ್ನೂ ಹೊತ್ತಿದ್ದಾರೆ. ಈ ಎಲ್ಲಾ ಕಾರಣದಿಂದ ಚಿತ್ರಮಂದಿರದ ಮೇಲೆ ಹೇರಿರುವ ನಿರ್ಬಂಧ ತೆಗೆಯಬೇಕು ಎಂದು ಒತ್ತಾಯ ಮಾಡಿದ್ದರು. ಈಗ ಸರ್ಕಾರದಿಂದ ಇದಕ್ಕೆ ಅವಕಾಶ ಸಿಕ್ಕಿದ್ದು, ಮುಂದೆ ಬರುವ ಸಿನಿಮಾಗಳಿಗೆ ಸಹಕಾರಿಯಾಗಲಿದೆ.

ಇದನ್ನೂ ಓದಿ: ‘ಕನ್ನಡತಿ’ ಧಾರಾವಾಹಿ: ಹರ್ಷ-ಭುವಿ ಮದುವೆ ಮುರಿಯಲು ಸಾನಿಯಾ ಮಾಡಿದ ಹೊಸ ಪ್ಲ್ಯಾನ್​ ಯಶಸ್ವಿ ಆಗೋದು ಪಕ್ಕಾ? 

Alia Bhatt: ವಿಭಿನ್ನ ಗೆಟಪ್​ಗಳಲ್ಲಿ ಆಲಿಯಾ ಭಟ್​; ಇಲ್ಲಿವೆ ಫೋಟೋಗಳು

Published On - 2:46 pm, Fri, 4 February 22

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ