AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Producer Ramu Death: ಕೊರೊನಾ ಸೋಂಕಿನಿಂದ ನಟಿ ಮಾಲಾಶ್ರೀ ಪತಿ, ಖ್ಯಾತ ನಿರ್ಮಾಪಕ ರಾಮು ನಿಧನ

Ramu Death News ರಾಮು ಸ್ಯಾಂಡಲ್​ವುಡ್​ನ ನಿರ್ಮಾಪಕ ಕೂಡ ಹೌದು. ಕನ್ನಡದಲ್ಲಿ ಅವರು ಸಾಕಷ್ಟು ಸಿನಿಮಾಗಳಿಗೆ ಬಂಡವಾಳ ಹೂಡಿದ್ದಾರೆ. ಲಾಕಪ್​ಡೆತ್, AK-47, ರಾಕ್ಷಸ‌, ಕಲಾಸಿಪಾಳ್ಯ, ಅರ್ಜುನ್ ಗೌಡ ಸೇರಿ ಹಲವು ಚಿತ್ರ ನಿರ್ಮಾಣ ಮಾಡಿದ್ದರು.

Producer Ramu Death: ಕೊರೊನಾ ಸೋಂಕಿನಿಂದ ನಟಿ ಮಾಲಾಶ್ರೀ ಪತಿ, ಖ್ಯಾತ ನಿರ್ಮಾಪಕ ರಾಮು ನಿಧನ
ಪತ್ನಿ ಮಾಲಾಶ್ರೀ ಹಾಗೂ ಮಗಳೊಂದಿಗೆ ರಾಮು
ರಾಜೇಶ್ ದುಗ್ಗುಮನೆ
|

Updated on:Apr 26, 2021 | 9:21 PM

Share

ಬೆಂಗಳೂರು: ಕೊರೊನಾ ವೈರಸ್​ ಮಿತಿಮೀರಿ ಹರಡುತ್ತಿದೆ. ಚಿತ್ರರಂಗದ ಕೆಲಸಗಳು ಸ್ಥಗಿತವಾಗಿದ್ದು ಒಂದು ಕಡೆಯಾದರೆ, ಕೊರೊನಾದಿಂದ ನಿರ್ದೇಶಕರು, ನಟರು ಮೃತಪಡುತ್ತಿರುವುದು ಮತ್ತೊಂದು ಕಡೆ. ಈಗ ಸ್ಯಾಂಡಲ್​ವುಡ್​ ನಟಿ ಮಾಲಾಶ್ರೀ ಅವರ ಗಂಡ, ಖ್ಯಾತ ನಿರ್ಮಾಪಕ ಕೋಟಿ ರಾಮು (52) ಕೊರೊನಾದಿಂದ ನಿಧನ ಹೊಂದಿದ್ದಾರೆ.

ರಾಮು ಅವರಿಗೆ ಕಳೆದವಾರ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಹೀಗಾಗಿ ಮೂರು ದಿನಗಳ ಹಿಂದೆ ಬೆಂಗಳೂರಿನ ಆಸ್ಪತ್ರೆಗೆ ಅವರನ್ನು ದಾಖಲು ಮಾಡಲಾಗಿತ್ತು. ಅವರಿಗೆ ವೈದ್ಯರು ನಿರಂತರವಾಗಿ ಚಿಕಿತ್ಸೆ ನೀಡುತ್ತಲೇ ಇದ್ದರು. ಆದರೆ, ಚಿಕಿತ್ಸೆ ಫಲಿಸಲಿಲ್ಲ. ಹೀಗಾಗಿ, ಅವರು ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ರಾಮು ಸ್ಯಾಂಡಲ್​ವುಡ್​ನಲ್ಲಿ ಖ್ಯಾತ ನಿರ್ಮಾಪಕರು. ಕನ್ನಡದಲ್ಲಿ ಅವರು ಸಾಕಷ್ಟು ಸಿನಿಮಾಗಳಿಗೆ ಬಂಡವಾಳ ಹೂಡಿದ್ದಾರೆ. ಲಾಕಪ್​ಡೆತ್, AK-47, ರಾಕ್ಷಸ‌, ಕಲಾಸಿಪಾಳ್ಯ, ಅರ್ಜುನ್ ಗೌಡ ಸೇರಿ ಹಲವು ಚಿತ್ರ ನಿರ್ಮಾಣ ಮಾಡಿದ್ದರು.ಕೋಟಿ ಕೋಟಿ ರೂಪಾಯಿ ವೆಚ್ಚದಲ್ಲಿ ಅದ್ದೂರಿ ಚಿತ್ರಗಳನ್ನು ರಾಮು ನಿರ್ಮಾಣ ಮಾಡುತ್ತಿದ್ದರು.  ಅವರು ಕೋಟಿ ರಾಮು ಎಂದೇ ಖ್ಯಾತರಾಗಿದ್ದರು.

ರಾಮು ನಿಧನಕ್ಕೆ ಸ್ಯಾಂಡಲ್​ವುಡ್​ ಶೋಕ ವ್ಯಕ್ತಪಡಿಸಿದೆ. ಅವರನ್ನು ನಾವು ಇಷ್ಟು ಬೇಗನೆ ಕಳೆದುಕೊಳ್ಳಬಾರದಿತ್ತು ಎಂದು ಸ್ಯಾಂಡಲ್​ವುಡ್​ ಮಂದಿ ಮರುಗಿದ್ದಾರೆ.

ಕೊರೊನಾ ಕಾರಣದಿಂದಲೂ ಚಿತ್ರರಂಗದ ಅನೇಕರು ಸಾವಿನ ಹಾದಿ ಹಿಡಿಯುತ್ತಿದ್ದಾರೆ. ಕೆಲವೇ ದಿನಗಳ ಹಿಂದೆ ಹಿರಿಯ ನಟ ಕಿಶೋರ್ ನಂದಲಸ್ಕರ್ ಅವರು ಕೊವಿಡ್ನಿಂದ ಮೃತರಾದರು. ಗುರುವಾರ (ಏ.22) ರಾತ್ರಿ ಹಿರಿಯ ಸಂಗೀತ ನಿರ್ದೇಶಕ ಶ್ರವಣ್ ರಾಥೋಡ್ ನಿಧನರಾದರು.

ಇದನ್ನೂ ಓದಿ: Amit Mistry Death: ‘ಬಂದಿಶ್ ಬ್ಯಾಂಡಿಟ್ಸ್’ ಖ್ಯಾತಿಯ ನಟ ಅಮಿತ್ ಮಿಸ್ತ್ರೀ ಹೃದಯಾಘಾತದಿಂದ ನಿಧನ

Published On - 8:38 pm, Mon, 26 April 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ