AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದಾತ್ತ ಉದ್ದೇಶಕ್ಕಾಗಿ.. ಪೊಗರು ಶೂಟಿಂಗ್​ ನಂತರ ತಲೆಗೂದಲು ಕಟ್ ಮಾಡಿಸ್ಕೊಂಡ ಧ್ರುವ ಸರ್ಜಾ

ಬೆಂಗಳೂರು: ಚಿತ್ರನಟ, ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ತಮ್ಮ ಉದ್ದ ಕೂದಲಿಗೆ ಕೊನೆಗೂ ಕತ್ತರಿ ಹಾಕಿದ್ದಾರೆ. ‘ಪೊಗರು’ ಚಿತ್ರಕ್ಕಾಗಿ 3 ವರ್ಷಗಳ ಕಾಲ ಪೊಗರ್ದಸ್ತಾಗಿ ಬೆಳೆಸಿದ್ದ ಕೂದಲನ್ನು ಒಂದು ಒಳ್ಳೇ ಉದ್ದೇಶಕ್ಕೆ ದಾನ ಮಾಡುವ ಮೂಲಕ ಮಾದರಿಯೂ ಆಗಿದ್ದಾರೆ. ಕಿಮೊಥೆರಪಿ ಚಿಕಿತ್ಸೆ ಪಡೆಯುವ ಕ್ಯಾನ್ಸರ್ ಪೀಡಿತರು ಕೂದಲು ಉದುರುವ ಸಮಸ್ಯೆ ಅನುಭವಿಸುತ್ತಾರೆ. ಇದೇ ಕಾರಣಕ್ಕೆ ಮಕ್ಕಳಲ್ಲಿ ಹಿಂಜರಿಕೆಯ ಮನಃಸ್ಥಿತಿಯೂ ಬೆಳೆಯುತ್ತದೆ. ಇಂಥವರಿಗೆ ವಿಗ್ ತಯಾರಿಸಿ ನೀಡುವ ಕಾರ್ಯದಲ್ಲಿ ಹಲವರು ತೊಡಗಿಸಿಕೊಂಡಿದ್ದಾರೆ. ಧ್ರುವ ಸರ್ಜಾ ದಾನ ಮಾಡಿರುವ ಕೂದಲು […]

ಉದಾತ್ತ ಉದ್ದೇಶಕ್ಕಾಗಿ.. ಪೊಗರು ಶೂಟಿಂಗ್​ ನಂತರ ತಲೆಗೂದಲು ಕಟ್ ಮಾಡಿಸ್ಕೊಂಡ ಧ್ರುವ ಸರ್ಜಾ
KUSHAL V
| Updated By: ಪೃಥ್ವಿಶಂಕರ|

Updated on:Nov 21, 2020 | 2:55 PM

Share

ಬೆಂಗಳೂರು: ಚಿತ್ರನಟ, ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ತಮ್ಮ ಉದ್ದ ಕೂದಲಿಗೆ ಕೊನೆಗೂ ಕತ್ತರಿ ಹಾಕಿದ್ದಾರೆ. ‘ಪೊಗರು’ ಚಿತ್ರಕ್ಕಾಗಿ 3 ವರ್ಷಗಳ ಕಾಲ ಪೊಗರ್ದಸ್ತಾಗಿ ಬೆಳೆಸಿದ್ದ ಕೂದಲನ್ನು ಒಂದು ಒಳ್ಳೇ ಉದ್ದೇಶಕ್ಕೆ ದಾನ ಮಾಡುವ ಮೂಲಕ ಮಾದರಿಯೂ ಆಗಿದ್ದಾರೆ.

ಕಿಮೊಥೆರಪಿ ಚಿಕಿತ್ಸೆ ಪಡೆಯುವ ಕ್ಯಾನ್ಸರ್ ಪೀಡಿತರು ಕೂದಲು ಉದುರುವ ಸಮಸ್ಯೆ ಅನುಭವಿಸುತ್ತಾರೆ. ಇದೇ ಕಾರಣಕ್ಕೆ ಮಕ್ಕಳಲ್ಲಿ ಹಿಂಜರಿಕೆಯ ಮನಃಸ್ಥಿತಿಯೂ ಬೆಳೆಯುತ್ತದೆ. ಇಂಥವರಿಗೆ ವಿಗ್ ತಯಾರಿಸಿ ನೀಡುವ ಕಾರ್ಯದಲ್ಲಿ ಹಲವರು ತೊಡಗಿಸಿಕೊಂಡಿದ್ದಾರೆ. ಧ್ರುವ ಸರ್ಜಾ ದಾನ ಮಾಡಿರುವ ಕೂದಲು ಸಹ ವಿಗ್ ಆಗಿ ಇಂಥ ಮಗುವೊಂದರ ಆತ್ಮವಿಶ್ವಾಸ ಹೆಚ್ಚಿಸಲು ನೆರವಾಗಲಿದೆ.

ಇದನ್ನೂ ಓದಿ ಖ್ಯಾತನಾಮರು ತಮ್ಮ ತಲೆಗೂದಲನ್ನು ತೆಗೆಸಿಕೊಳ್ಳುವುದರ ಹಿಂದಿದೆ ಉದಾತ್ತ ಉದ್ದೇಶ, ಏನದು?

ಧ್ರುವ ಸರ್ಜಾ ‘ಪೊಗರು’ ಚಿತ್ರಕ್ಕಾಗಿ ಮೂರು ವರ್ಷಗಳಿಂದ ಬೆಳೆಸಿದ್ದ ತಲೆ ಕೂದಲು 10 ಇಂಚಿಗಿಂತಲೂ ಉದ್ದವಿತ್ತು. ಇದೀಗ ಚಿತ್ರದ ಚಿತ್ರೀಕರಣ ಮುಗಿದಿದೆ. ಕೂದಲನ್ನು ಕ್ಯಾನ್ಸರ್ ಪೀಡಿತ ಮಕ್ಕಳ ನೆರವಿಗಾಗಿ ದಾನ ಮಾಡುವುದು ಒಳಿತು ಎಂಬ ಆಪ್ತರ ಸಲಹೆಗೆ ಕಿವಿಗೊಟ್ಟು ಆ್ಯಕ್ಷನ್ ಪ್ರಿನ್ಸ್ ಇಂಥ ಉತ್ತಮ ನಿರ್ಧಾರ ತೆಗೆದುಕೊಂಡಿದ್ದಾರೆ. ಜೊತೆಗೆ, ತಮ್ಮ ಹೇರ್​ ಕಟ್ಟಿಂಗ್​ ವಿಡಿಯೋವನ್ನ ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಶೇರ್​ ಮಾಡಿದ್ದಾರೆ.

Published On - 2:51 pm, Sat, 21 November 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ