AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದಾತ್ತ ಉದ್ದೇಶಕ್ಕಾಗಿ.. ಪೊಗರು ಶೂಟಿಂಗ್​ ನಂತರ ತಲೆಗೂದಲು ಕಟ್ ಮಾಡಿಸ್ಕೊಂಡ ಧ್ರುವ ಸರ್ಜಾ

ಬೆಂಗಳೂರು: ಚಿತ್ರನಟ, ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ತಮ್ಮ ಉದ್ದ ಕೂದಲಿಗೆ ಕೊನೆಗೂ ಕತ್ತರಿ ಹಾಕಿದ್ದಾರೆ. ‘ಪೊಗರು’ ಚಿತ್ರಕ್ಕಾಗಿ 3 ವರ್ಷಗಳ ಕಾಲ ಪೊಗರ್ದಸ್ತಾಗಿ ಬೆಳೆಸಿದ್ದ ಕೂದಲನ್ನು ಒಂದು ಒಳ್ಳೇ ಉದ್ದೇಶಕ್ಕೆ ದಾನ ಮಾಡುವ ಮೂಲಕ ಮಾದರಿಯೂ ಆಗಿದ್ದಾರೆ. ಕಿಮೊಥೆರಪಿ ಚಿಕಿತ್ಸೆ ಪಡೆಯುವ ಕ್ಯಾನ್ಸರ್ ಪೀಡಿತರು ಕೂದಲು ಉದುರುವ ಸಮಸ್ಯೆ ಅನುಭವಿಸುತ್ತಾರೆ. ಇದೇ ಕಾರಣಕ್ಕೆ ಮಕ್ಕಳಲ್ಲಿ ಹಿಂಜರಿಕೆಯ ಮನಃಸ್ಥಿತಿಯೂ ಬೆಳೆಯುತ್ತದೆ. ಇಂಥವರಿಗೆ ವಿಗ್ ತಯಾರಿಸಿ ನೀಡುವ ಕಾರ್ಯದಲ್ಲಿ ಹಲವರು ತೊಡಗಿಸಿಕೊಂಡಿದ್ದಾರೆ. ಧ್ರುವ ಸರ್ಜಾ ದಾನ ಮಾಡಿರುವ ಕೂದಲು […]

ಉದಾತ್ತ ಉದ್ದೇಶಕ್ಕಾಗಿ.. ಪೊಗರು ಶೂಟಿಂಗ್​ ನಂತರ ತಲೆಗೂದಲು ಕಟ್ ಮಾಡಿಸ್ಕೊಂಡ ಧ್ರುವ ಸರ್ಜಾ
KUSHAL V
| Edited By: |

Updated on:Nov 21, 2020 | 2:55 PM

Share

ಬೆಂಗಳೂರು: ಚಿತ್ರನಟ, ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ತಮ್ಮ ಉದ್ದ ಕೂದಲಿಗೆ ಕೊನೆಗೂ ಕತ್ತರಿ ಹಾಕಿದ್ದಾರೆ. ‘ಪೊಗರು’ ಚಿತ್ರಕ್ಕಾಗಿ 3 ವರ್ಷಗಳ ಕಾಲ ಪೊಗರ್ದಸ್ತಾಗಿ ಬೆಳೆಸಿದ್ದ ಕೂದಲನ್ನು ಒಂದು ಒಳ್ಳೇ ಉದ್ದೇಶಕ್ಕೆ ದಾನ ಮಾಡುವ ಮೂಲಕ ಮಾದರಿಯೂ ಆಗಿದ್ದಾರೆ.

ಕಿಮೊಥೆರಪಿ ಚಿಕಿತ್ಸೆ ಪಡೆಯುವ ಕ್ಯಾನ್ಸರ್ ಪೀಡಿತರು ಕೂದಲು ಉದುರುವ ಸಮಸ್ಯೆ ಅನುಭವಿಸುತ್ತಾರೆ. ಇದೇ ಕಾರಣಕ್ಕೆ ಮಕ್ಕಳಲ್ಲಿ ಹಿಂಜರಿಕೆಯ ಮನಃಸ್ಥಿತಿಯೂ ಬೆಳೆಯುತ್ತದೆ. ಇಂಥವರಿಗೆ ವಿಗ್ ತಯಾರಿಸಿ ನೀಡುವ ಕಾರ್ಯದಲ್ಲಿ ಹಲವರು ತೊಡಗಿಸಿಕೊಂಡಿದ್ದಾರೆ. ಧ್ರುವ ಸರ್ಜಾ ದಾನ ಮಾಡಿರುವ ಕೂದಲು ಸಹ ವಿಗ್ ಆಗಿ ಇಂಥ ಮಗುವೊಂದರ ಆತ್ಮವಿಶ್ವಾಸ ಹೆಚ್ಚಿಸಲು ನೆರವಾಗಲಿದೆ.

ಇದನ್ನೂ ಓದಿ ಖ್ಯಾತನಾಮರು ತಮ್ಮ ತಲೆಗೂದಲನ್ನು ತೆಗೆಸಿಕೊಳ್ಳುವುದರ ಹಿಂದಿದೆ ಉದಾತ್ತ ಉದ್ದೇಶ, ಏನದು?

ಧ್ರುವ ಸರ್ಜಾ ‘ಪೊಗರು’ ಚಿತ್ರಕ್ಕಾಗಿ ಮೂರು ವರ್ಷಗಳಿಂದ ಬೆಳೆಸಿದ್ದ ತಲೆ ಕೂದಲು 10 ಇಂಚಿಗಿಂತಲೂ ಉದ್ದವಿತ್ತು. ಇದೀಗ ಚಿತ್ರದ ಚಿತ್ರೀಕರಣ ಮುಗಿದಿದೆ. ಕೂದಲನ್ನು ಕ್ಯಾನ್ಸರ್ ಪೀಡಿತ ಮಕ್ಕಳ ನೆರವಿಗಾಗಿ ದಾನ ಮಾಡುವುದು ಒಳಿತು ಎಂಬ ಆಪ್ತರ ಸಲಹೆಗೆ ಕಿವಿಗೊಟ್ಟು ಆ್ಯಕ್ಷನ್ ಪ್ರಿನ್ಸ್ ಇಂಥ ಉತ್ತಮ ನಿರ್ಧಾರ ತೆಗೆದುಕೊಂಡಿದ್ದಾರೆ. ಜೊತೆಗೆ, ತಮ್ಮ ಹೇರ್​ ಕಟ್ಟಿಂಗ್​ ವಿಡಿಯೋವನ್ನ ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಶೇರ್​ ಮಾಡಿದ್ದಾರೆ.

Published On - 2:51 pm, Sat, 21 November 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?