AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Basavaraj Bommai: ಮಾರ್ಚ್​ ಮೊದಲ ವಾರದಲ್ಲಿ ಅಂಬರೀಷ್​ ಸ್ಮಾರಕ ಉದ್ಘಾಟನೆ: ಸಿಎಂ ಬಸವರಾಜ ಬೊಮ್ಮಾಯಿ

Rebel Star Ambareesh Memorial: ‘ಒಂದೂವರೆ ವರ್ಷದ ಹಿಂದೆ ಅಂಬರೀಷ್​ ಸ್ಮಾರಕದ ನಿರ್ಮಾಣಕ್ಕೆ ಹಣ ನೀಡಿ ಕೆಲಸ ಆರಂಭಿಸಿದ್ದೆವು. ಆ ಸ್ಮಾರಕದ ಕಾರ್ಯ ಈಗ ಪೂರ್ಣಗೊಂಡಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Basavaraj Bommai: ಮಾರ್ಚ್​ ಮೊದಲ ವಾರದಲ್ಲಿ ಅಂಬರೀಷ್​ ಸ್ಮಾರಕ ಉದ್ಘಾಟನೆ: ಸಿಎಂ ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ, ಅಂಬರೀಷ್
ಮದನ್​ ಕುಮಾರ್​
|

Updated on:Feb 07, 2023 | 10:25 PM

Share

ಖ್ಯಾತ ನಟ ‘ರೆಬಲ್​ ಸ್ಟಾರ್​’ ಅಂಬರೀಷ್​ ಸ್ಮಾರಕ (Ambareesh Memorial) ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಹಿತಿ ನೀಡಿದ್ದಾರೆ. ಮಂಗಳವಾರ (ಫೆ.7) ಸಂಜೆ ‘ಪುನೀತ್​ ರಾಜ್​ಕುಮಾರ್​ ರಸ್ತೆ’ (Puneeth Rajkumar Road) ಉದ್ಘಾಟನೆ ವೇಳೆ ಅವರು ಈ ವಿಚಾರ ತಿಳಿಸಿದ್ದಾರೆ. ‘ಪುನೀತ್​ ರಾಜ್​ಕುಮಾರ್​​ ಹಾಗೆಯೇ ನನ್ನ ಆತ್ಮೀಯ ಸ್ನೇಹಿತ ಅಂಬರೀಷ್​ ಕೂಡ ಬಂಗಾರದ ಹೃದಯ ಹೊಂದಿದ್ದ ವ್ಯಕ್ತಿ. ಅವರು ಮನಸ್ಸು ಮಾಡಿದ್ದರೆ ಎಷ್ಟೋ ಹಣ ಗಳಿಸಬಹುದಿತ್ತು. ಆದರೆ ಅವರು ಅಪಾರ ಜನರ ಪ್ರೀತಿ-ಸ್ನೇಹ ಗಳಿಸಿದ್ದರು. ಅವರ ಸ್ಮಾರಕ ಮಾಡುವ ಸೌಭಾಗ್ಯ ನನಗೆ ಸಿಕ್ಕಿತು. ಮಾರ್ಚ್​ ಮೊದಲ ವಾರ ಆ ಸ್ಮಾರಕ ಉದ್ಘಾಟನೆ ಮಾಡೋಣ’ ಎಂದು ಬಸವರಾಜ ಬೊಮ್ಮಾಯಿ (CM Basavaraj Bommai) ಹೇಳಿದ್ದಾರೆ.

‘ಒಂದು ಕಾಲದಲ್ಲಿ ನಾನು ಮತ್ತು ಅಂಬರೀಷ್​ ಅವರು ಪ್ರತಿ ದಿನ ಒಟ್ಟಿಗೆ ಇರುತ್ತಿದ್ದೆವು. ಹಳ್ಳಿ, ದೇಶ, ವಿದೇಶದಲ್ಲಿ ಅವರಿಗೆ ಸ್ನೇಹಿತರು ಇದ್ದಾರೆ. ಅಂಥ ಸ್ನೇಹಿತರಲ್ಲಿ ನಾನೂ ಒಬ್ಬ. ಸುಮಾರು ಒಂದೂವರೆ ವರ್ಷದ ಹಿಂದೆ ಅಂಬರೀಷ್​ ಸ್ಮಾರಕದ ನಿರ್ಮಾಣಕ್ಕೆ ಹಣ ನೀಡಿ ಕೆಲಸ ಆರಂಭಿಸಿದ್ದೆವು. ಆ ಸ್ಮಾರಕದ ಕಾರ್ಯ ಈಗ ಪೂರ್ಣಗೊಂಡಿದೆ’ ಎಂದು ಬೊಮ್ಮಾಯಿ ಹೇಳಿದ್ದಾರೆ.

ಇದನ್ನೂ ಓದಿ: Puneeth Rajkumar Road: ಪುನೀತ್​ ರಾಜ್​ಕುಮಾರ್​ ರಸ್ತೆ ಉದ್ಘಾಟನೆ: ಅದ್ದೂರಿ ಕಾರ್ಯಕ್ರಮದ ಲೈವ್​ ನೋಡಲು ಇಲ್ಲಿ ಕ್ಲಿಕ್​ ಮಾಡಿ

ಇದನ್ನೂ ಓದಿ
Image
‘ಅಂಬರೀಷ್​​ಗೆ ಅನಾರೋಗ್ಯ ಉಂಟಾದಾಗ ಬದುಕಿಸಿದವರು ಇವರೇ’; ಹಳೆ ಘಟನೆ ನೆನೆದ ಸುಂದರ್ ರಾಜ್
Image
ಅಂಬಿ ಸಮಾಧಿಗೆ ಎಡೆ ಇಟ್ಟು ನಮಿಸಿದ ಸುಮಲತಾ ಅಂಬರೀಷ್​; ಸಾಥ್​ ನೀಡಿದ ರಾಕ್​ಲೈನ್​ ವೆಂಕಟೇಶ್​
Image
‘ರೆಬೆಲ್​ ಸ್ಟಾರ್​​’ 70ನೇ ಜನ್ಮದಿನಕ್ಕೆ ಕೇಕ್​ ಕತ್ತರಿಸಿ ವಿಶೇಷ ಮಾತುಗಳನ್ನು ಹಂಚಿಕೊಂಡ ಸುಮಲತಾ ಅಂಬರೀಷ್​
Image
‘ಇಲ್ಲಿಗೆ ಬರಲು ನಂಗೆ ಧೈರ್ಯ ಸಾಕಾಗಲ್ಲ’: ಕಲಾವಿದರ ಭವನದಲ್ಲಿ ಅಂಬರೀಷ್​ ನೆನೆದು ರಾಕ್​ಲೈನ್​ ಭಾವುಕ

ರೇಸ್​ ಕೋರ್ಸ್​ ರಸ್ತೆಗೆ ಅಂಬರೀಷ್​ ಹೆಸರು:

‘ಬೆಂಗಳೂರಿನ ರೇಸ್​ ಕೋರ್ಸ್​ ರಸ್ತೆಗೆ ಅಂಬರೀಷ್​ ಹೆಸರನ್ನು ಇಡಬೇಕು ಎಂದು ಅವರ ಅನೇಕ ಸ್ನೇಹಿತರು ಆಸೆಪಟ್ಟಿದ್ದಾರೆ. ಆ ರಸ್ತೆಗೆ ಅವರ ಹೆಸರು ಸೂಕ್ತ. ಅವರ ವ್ಯಕ್ತಿತ್ವದ ಬಗ್ಗೆ ತಿಳಿದಿರುವ ಎಲ್ಲರೂ ಹೌದು ಎನ್ನುತ್ತಾರೆ. ಯಾಕೆಂದರೆ, ಅವರು ಅಲ್ಲಿ ಸಮಯ ಕಳೆಯುತ್ತಿದ್ದರು. ಕುದುರೆಯ ಓನರ್​ ಆಗಿದ್ದರು. ಅದರ ಜೊತೆಗೆ ನಮ್ಮ ಚಿತ್ರೋದ್ಯಮದ ವಾಣಿಜ್ಯ ಮಂಡಳಿ ಕೂಡ ಅಲ್ಲೇ ಇದೆ. ಗಾಂಧಿನಗರವೂ ಹತ್ತಿರ ಇದೆ. ಹಾಗಾಗಿ ಆ ರಸ್ತೆಗೆ ರೇಸ್​ ಕೋರ್ಸ್​ ರಸ್ತೆ ಎನ್ನುವುದಕ್ಕಿಂತ ರೆಬೆಲ್​ ಸ್ಟಾರ್​ ರಸ್ತೆ ಎಂದರೆ ಬಹಳ ಚೆನ್ನಾಗಿ ಇರುತ್ತದೆ’ ಎಂದಿದ್ದಾರೆ ಬಸವರಾಜ ಬೊಮ್ಮಾಯಿ.

ಇದನ್ನೂ ಓದಿ: Puneeth Rajkumar Road: ಪುನೀತ್​ ಜೀವನ ಚರಿತ್ರೆ ಸಾರುವ ಸ್ಮಾರಕ ನಿರ್ಮಾಣಕ್ಕೆ ಸಿಎಂ ಭರವಸೆ; ರಸ್ತೆ ಉದ್ಘಾಟನೆ ವೇಳೆ ಘೋಷಣೆ

‘ಅಂಬರೀಷ್​ಗೂ ಬಹಳ ಖುಷಿ ಆಗುತ್ತದೆ’:

‘ರೇಸ್​ ಕೋರ್ಸ್​ ರಸ್ತೆಗೆ ಅಂಬರೀಷ್​ ಹೆಸರು ಇಡಬೇಕು ಎಂದು ನಾನು ತೀರ್ಮಾನಿಸಿದ್ದೇನೆ. ಇದರಿಂದ ಅಂಬರೀಷ್​ಗೆ ಬಹಳ ಖುಷಿ ಆಗುತ್ತದೆ. ಸರಿಯಾದ ರಸ್ತೆಗೆ ನೀನು ನನ್ನ ಹೆಸರನ್ನು ಇಟ್ಟಿದ್ದೀಯ ಅಂತ ಅವನು ಹೇಳುತ್ತಾನೆ’ ಎಂದಿದ್ದಾರೆ ಬೊಮ್ಮಾಯಿ.

‘ಅಂಬರೀಷ್​, ಪುನೀತ್​ ರಾಜ್​ಕುಮಾರ್​, ವಿಷ್ಣುವರ್ಧನ್​, ಡಾ. ರಾಜ್​ಕುಮಾರ್​ ಅವರಂತಹ ವ್ಯಕ್ತಿತ್ವಗಳು ನಮ್ಮನ್ನು ರಂಜಿಸಲು ಹುಟ್ಟಿದ್ದು ಮಾತ್ರವಲ್ಲ. ನಮ್ಮ ಪ್ರೀತಿ-ವಿಶ್ವಾಸವನ್ನು ಗಳಿಸಿದ ಜೀವಗಳು ಅವು. ಅವರ ಹೆಸರು ನಮ್ಮ ಹೃದಯದಲ್ಲಿ ಶಾಶ್ವತವಾಗಿ ಇರುತ್ತದೆ’ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:25 pm, Tue, 7 February 23

Follow Us
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ