AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದನದಲ್ಲೂ ಪುನೀತ್​ ಬಗ್ಗೆ ಮಾತು; ಕರ್ನಾಟಕ ರತ್ನ, ಪದ್ಮಶ್ರೀ ಪ್ರಶಸ್ತಿ ಬಗ್ಗೆ ಸಿಎಂ ಹೇಳಿದ್ದೇನು?

CM Basavaraj Bommai | Puneeth Rajkumar: ‘ಅಲ್ಪ ಸಮಯದಲ್ಲಿ ಒಬ್ಬ ನಟ ಇಷ್ಟು ಜನರ ಹೃದಯದಲ್ಲಿ ಸ್ಥಾನ ಗಳಿಸಬಲ್ಲ ಎಂಬುದು ಪುನೀತ್​ ರಾಜ್​ಕುಮಾರ್​ ಅವರ ನಿಧನದ ಬಳಿಕ ತಿಳಿಯಿತು. ಅವರು​ ಕೇವಲ ಚಿತ್ರರಂಗಕ್ಕೆ ಸಂಬಂಧಿಸಿದ ವ್ಯಕ್ತಿ ಆಗಿರಲಿಲ್ಲ’ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಸದನದಲ್ಲೂ ಪುನೀತ್​ ಬಗ್ಗೆ ಮಾತು; ಕರ್ನಾಟಕ ರತ್ನ, ಪದ್ಮಶ್ರೀ ಪ್ರಶಸ್ತಿ ಬಗ್ಗೆ ಸಿಎಂ ಹೇಳಿದ್ದೇನು?
ಬಸವರಾಜ ಬೊಮ್ಮಾಯಿ, ಪುನೀತ್​ ರಾಜ್​ಕುಮಾರ್​
TV9 Web
| Edited By: |

Updated on: Dec 13, 2021 | 1:28 PM

Share

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ (Karnataka Assembly Winter Session) ಆರಂಭ ಆಗಿದೆ. ವಿಧಾನಸಭೆಯಲ್ಲಿ ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಇಂದು (ಡಿ.13) ಮಾತನಾಡಿದರು. ಅಪ್ಪು ನಿಧನರಾದ ದಿನ ಪರಿಸ್ಥಿತಿ ಹೇಗಿತ್ತು ಎಂಬುದನ್ನು ಅವರು ವಿವರಿಸಿದರು. ‘ಅಂದು ಬೆಳಗ್ಗೆ ಜಿಮ್​ನಲ್ಲಿ ವರ್ಕೌಟ್​ ಮಾಡಿದ ಬಳಿಕ ಪುನೀತ್ ಅವರಿಗೆ ಈ ರೀತಿ ಆಗುತ್ತೆ ಎಂದು ಯಾರಿಗೂ ಅನಿಸಿರಲಿಲ್ಲ. ವಿಷಯ ತಿಳಿದು ನಾನು ಆಸ್ಪತ್ರೆಗೆ ಹೋಗುವುದಕ್ಕೂ ಮುನ್ನ ಅವರು ನಿಧನರಾಗಿದ್ದರು. ಕೂಡಲೇ ಅವರ ಕುಟುಂಬದವರ ಜತೆ ಮಾತನಾಡಿ ಸಹಕಾರ ಕೋರಿದೆವು. ಡಾ. ರಾಜ್​ಕುಮಾರ್​ ಅಂತ್ಯ ಸಂಸ್ಕಾರದ ವೇಳೆ ನಡೆದ ಅಹಿತಕರ ಘಟನೆಗಳು ಮತ್ತೆ ಸಂಭವಿಸಬಾರದು ಎಂಬುದು ನಮ್ಮ ಉದ್ದೇಶ ಆಗಿತ್ತು. ಅದಕ್ಕೆ ಪುನೀತ್​ ಕುಟುಂಬದವರ ಸಹಕಾರ ಸಿಕ್ಕಿತು’ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಪುನೀತ್​ಗೆ ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನು ಈಗಾಗಲೇ ಘೋಷಿಸಲಾಗಿದೆ. ಆ ಪ್ರಶಸ್ತಿ ನೀಡುವ ದಿನಾಂಕ ಯಾವುದು ಎಂದು ತಿಳಿಯಲು ಜನರು ಕಾದಿದ್ದಾರೆ. ಆ ದಿನಾಂಕವನ್ನು ಶೀಘ್ರವೇ ಘೋಷಿಸಲಾಗುವುದು. ಪದ್ಮಶ್ರೀ ಪ್ರಶಸ್ತಿಗೆ ಅಪ್ಪು ಹೆಸರನ್ನು ಶಿಫಾರಸು ಮಾಡಲಾಗುವುದು ಬಸವರಾಜ ಬೊಮ್ಮಾಯಿ ಅವರು ಹೇಳಿದರು.

‘ಪುನೀತ್​ ರಾಜ್​ಕುಮಾರ್​ ಅವರ ಅಂತಿಮ ದರ್ಶನ ಪಡೆಯಲು ಹರಿದುಬಂದ ಜನಸಾಗರವನ್ನು ನೋಡಿ ನನಗೆ ಆಶ್ಚರ್ಯ ಆಯಿತು. ಅಲ್ಪ ಸಮಯದಲ್ಲಿ ಒಬ್ಬ ನಟ ಇಷ್ಟು ಜನರ ಹೃದಯದಲ್ಲಿ ಸ್ಥಾನ ಗಳಿಸಬಲ್ಲ ಎಂಬುದು ಅವರ ಸಾವಿನ ಬಳಿಕ ತಿಳಿಯಿತು. ಪುನೀತ್​ ಕೇವಲ ಚಿತ್ರರಂಗಕ್ಕೆ ಸಂಬಂಧಿಸಿದವರಲ್ಲ. ಸಿನಿಮಾ ಹೊರತಾಗಿಯೂ ಅವರು ಅನೇಕ ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದ್ದರು. ಯುವಜನರಿಗೆ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಅನುಕೂಲ ಆಗುವ ರೀತಿಯಲ್ಲಿ ಆ್ಯಪ್​ ಬಿಡುಗಡೆ ಮಾಡಿದ್ದರು’ ಎಂದು ಅಪ್ಪು ಮಾಡಿದ ಕಾರ್ಯಗಳನ್ನು ಬೊಮ್ಮಾಯಿ ಶ್ಲಾಘಿಸಿದರು.

‘ಚಿಕ್ಕಂದಿನಿಂದಲೂ ನಾನು ಪುನೀತ್​ ಅವರನ್ನು ಬಲ್ಲೆ. ಅವರಿಗೆ ನಾನೊಂದು ಪ್ರಶ್ನೆ ಕೇಳಿದ್ದೆ. ನಿಮಗೆ ನಟನೆ ಇಷ್ಟು ಸರಳವಾಗಿ ಮೈಗೂಡಿಕೊಂಡಿದ್ದು ಹೇಗೆ ಎಂದು ಪ್ರಶ್ನಿಸಿದ್ದೆ. ತಮಗೆ ಅದು ಸಹಜವಾಗಿ ಬಂದಿದೆ ಅಂತ ಪುನೀತ್​ ಹೇಳಿದ್ದರು’ ಎಂದು ಬೊಮ್ಮಾಯಿ ನೆನಪಿಸಿಕೊಂಡರು.

ಪುನೀತ್​ ನಿಧನರಾದಾಗಿನಿಂದ ಅಂತಿಮ ಸಂಸ್ಕಾರ ನೆರವೇರುವವರೆಗೂ ಬಸವರಾಜ ಬೊಮ್ಮಾಯಿ ಅವರು ಡಾ. ರಾಜ್​ಕುಮಾರ್​ ಕುಟುಂಬದ ಜತೆಗೆ ನಿಂತುಕೊಂಡಿದ್ದರು. ಕಾನೂನು ಸುವ್ಯವಸ್ಥೆ ಕೆಡದ ರೀತಿಯಲ್ಲಿ, ಪುನೀತ್​ ರಾಜ್​ಕುಮಾರ್​ ಅವರನ್ನು ಗೌರವಯುತವಾಗಿ ಕಳಿಸಿಕೊಡಲು ಸೂಕ್ತ ಕ್ರಮಗಳನ್ನು ಕೈಗೊಂಡಿದ್ದರು. ಅವರ ಈ ಕಾರ್ಯಕ್ಕೆ ವಿಧಾನ ಸಭೆಯಲ್ಲಿ ಎಲ್ಲರಿಂದ ಶ್ಲಾಘನೆ ವ್ಯಕ್ತವಾಯಿತು.

ಇದನ್ನೂ ಓದಿ:

ಪುನೀತ್​ ರಾಜ್​ಕುಮಾರ್​ ಭಾವಚಿತ್ರ ಹಿಡಿದುಕೊಂಡು ಶಬರಿಮಲೆ ಯಾತ್ರೆ ಮಾಡಿದ ಅಭಿಮಾನಿಗಳು

ಯಾವ ಸ್ಥಿತಿಯಲ್ಲಿದೆ ನೋಡಿ ಡಾ. ರಾಜ್​ ಬೆಳೆದ ಮನೆ; ಇದರ ಬಗ್ಗೆ ಪುನೀತ್​ ಕಂಡಿದ್ದರು ಕನಸು

Follow Us
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ