AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ambareesh Road Inauguration: ರೇಸ್​ ಕೋರ್ಸ್​ ರಸ್ತೆಗೆ ಅಂಬರೀಷ್​ ಹೆಸರು ಇಟ್ಟಿದ್ದೇಕೆ? ಉದ್ಘಾಟನೆ ವೇಳೆ ವಿವರಣೆ ನೀಡಿದ ಸಿಎಂ

Ambareesh | CM Basavaraj Bommai: ‘ನಟ ಅಂಬರೀಷ್​ ಅವರ ಜೀವನ ತೆರೆದ ಪುಸ್ತಕದ ರೀತಿ ಇತ್ತು. ಅದರಲ್ಲಿ ಮುಚ್ಚಿಡುವಂಥದ್ದು ಏನೂ ಇಲ್ಲ’ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮದನ್​ ಕುಮಾರ್​
|

Updated on:Mar 27, 2023 | 7:05 PM

Share

ಬೆಂಗಳೂರಿನ ರೇಸ್​ ಕೋರ್ಸ್​ ರಸ್ತೆಗೆ (Race Course Road) ನಟ ಅಂಬರೀಷ್​ ಅವರ ಹೆಸರು ಇಡಬೇಕು ಎಂಬುದು ಅಭಿಮಾನಿಗಳ ಬೇಡಿಕೆ ಆಗಿತ್ತು. ಆ ಬೇಡಿಕೆ ಇಂದು (ಮಾರ್ಚ್​ 27) ನೆರವೇರಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ‘ರೆಬೆಲ್​ ಸ್ಟಾರ್​ ಡಾ. ಎಂ.ಎಚ್​. ಅಂಬರೀಷ್​ ರಸ್ತೆ’ (Ambareesh Road) ಉದ್ಘಾಟನೆ ಮಾಡಿದ್ದಾರೆ. ಈ ವೇಳೆ ಮಾತನಾಡಿದ ಅವರು ಅಂಬರೀಷ್​ ಜೊತೆಗಿನ ನೆನಪುಗಳನ್ನು ಮೆಲುಕು ಹಾಕಿದರು. ಚಿತ್ರರಂಗಕ್ಕೆ ಮತ್ತು ಕರುನಾಡಿಗೆ ಅಂಬಿ ನೀಡಿದ ಕೊಡುಗೆ ಬಗ್ಗೆಯೂ ಬೊಮ್ಮಾಯಿ ಮಾತನಾಡಿದರು. ರೇಸ್​ ಕೋರ್ಸ್​ ರಸ್ತೆಗೆ ಅಂಬರೀಷ್​ ಅವರ ಹೆಸರು ಯಾಕೆ ಸೂಕ್ತ ಎಂಬುದನ್ನು ಕೂಡ ಬಸವರಾಜ ಬೊಮ್ಮಾಯಿ (CM Basavaraj Bommai) ಅವರು ವಿವರಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ಅಂಬಿ ಕುಟುಂಬದ ಸದಸ್ಯರು ಹಾಗೂ ಕನ್ನಡ ಚಿತ್ರರಂಗದ ಅನೇಕ ಗಣ್ಯರು ಸಾಕ್ಷಿ ಆಗಿದ್ದಾರೆ.

ಇದು ಅಂಬರೀಷ್​ ಕಾರ್ಯಕ್ಷೇತ್ರ:

‘ಅಂಬರೀಷ್​ ಅವರದ್ದು ನೇರ ನಡೆ-ನುಡಿಯ ವ್ಯಕ್ತಿತ್ವ ಆಗಿತ್ತು. ಅವರ ನೆನಪಿಗಾಗಿ ಇಂದು ರೇಸ್​ ಕೋರ್ಸ್​ ರಸ್ತೆಗೆ ಅವರ ಹೆಸರು ಇಡಲಾಗಿದೆ. ಇದು ನನಗೆ ಅತ್ಯಂತ ಸಂತೋಷ ತಂದಿದೆ. ಇಲ್ಲಿ ಫಿಲ್ಮ್​ ಚೇಂಬರ್​ ಇದೆ. ಹತ್ತಿರದಲ್ಲೇ ಗಾಂಧಿ ನಗರ ಇದೆ. ಇದು ಅಂಬರೀಷ್​ ಅವರ ಕಾರ್ಯಕ್ಷೇತ್ರವಾಗಿದ್ದ ಜಾಗ. ಹಾಗಾಗಿ ಅವರ ಹೆಸರು ಅತ್ಯಂತ ಸೂಕ್ತ. ಅವರ ಅಭಿಮಾನಿಗಳ ಒತ್ತಾಸೆಯ ಮೇರೆಗೆ ಈ ಹೆಸರು ಇಟ್ಟಿದ್ದೇವೆ’ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಇದನ್ನೂ ಓದಿ: Ambareesh Road: ಬಸವರಾಜ ಬೊಮ್ಮಾಯಿ ಅವರಿಂದ ‘ಅಂಬರೀಷ್​ ರಸ್ತೆ’ ಉದ್ಘಾಟನೆ; ಇಲ್ಲಿದೆ ಲೈವ್​ ವಿಡಿಯೋ

ಇದನ್ನೂ ಓದಿ
Image
‘ಅಂಬರೀಷ್​​ಗೆ ಅನಾರೋಗ್ಯ ಉಂಟಾದಾಗ ಬದುಕಿಸಿದವರು ಇವರೇ’; ಹಳೆ ಘಟನೆ ನೆನೆದ ಸುಂದರ್ ರಾಜ್
Image
ಅಂಬಿ ಸಮಾಧಿಗೆ ಎಡೆ ಇಟ್ಟು ನಮಿಸಿದ ಸುಮಲತಾ ಅಂಬರೀಷ್​; ಸಾಥ್​ ನೀಡಿದ ರಾಕ್​ಲೈನ್​ ವೆಂಕಟೇಶ್​
Image
‘ರೆಬೆಲ್​ ಸ್ಟಾರ್​​’ 70ನೇ ಜನ್ಮದಿನಕ್ಕೆ ಕೇಕ್​ ಕತ್ತರಿಸಿ ವಿಶೇಷ ಮಾತುಗಳನ್ನು ಹಂಚಿಕೊಂಡ ಸುಮಲತಾ ಅಂಬರೀಷ್​
Image
‘ಇಲ್ಲಿಗೆ ಬರಲು ನಂಗೆ ಧೈರ್ಯ ಸಾಕಾಗಲ್ಲ’: ಕಲಾವಿದರ ಭವನದಲ್ಲಿ ಅಂಬರೀಷ್​ ನೆನೆದು ರಾಕ್​ಲೈನ್​ ಭಾವುಕ

ನಿಜಜೀವನದಲ್ಲೂ ಅವರು ರೆಬೆಲ್​:

‘ಸಿನಿಮಾಗಳಲ್ಲಿ ಅಂಬರೀಷ್​ ಅವರು ಅದ್ಭುತವಾದ ಅಭಿನಯ ತೋರಿದ್ದರು. ಜನರನ್ನು ಸೆಳೆದಿಟ್ಟುಕೊಳ್ಳುವಂತಹ ಶಕ್ತಿ ಅವರಿಗೆ ಇತ್ತು. ಅವರ ನಟನೆ ಸಹಜವಾಗಿತ್ತು. ನಟನೆಗಾಗಿ ಅವರು ಕಷ್ಟಪಟ್ಟಿಲ್ಲ. ಪದರೆ ಮೇಲೆ ಇದ್ದಂತೆಯೇ ನಿಜಜೀವನದಲ್ಲೂ ಇದ್ದರು. ನೇರವಾಗಿ, ಸತ್ಯವನ್ನೇ ಮಾತನಾಡುತ್ತಿದ್ದರು. ಒಮ್ಮೆ ಮಾತನಾಡಿದರೆ ಹಿಂದೆ ಸರಿಯುವ ಮಾತೇ ಇರಲಿಲ್ಲ. ಎಲ್ಲ ಕ್ರೀಡೆಗಳಲ್ಲೂ ಅವರಿಗೆ ಆಸಕ್ತಿ ಇತ್ತು. ರಾಜಕೀಯಕ್ಕೆ ಬಂದಾಗ ಜನಪರವಾದ ಅನೇಕ ಕಾರ್ಯಕ್ರಮಗಳನ್ನು ರೂಪಿಸಿದ್ದರು. ಕಾವೇರಿ ವಿಚಾರದಲ್ಲಿ ಕೇಂದ್ರ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಅಧಿಕಾರದ ಹಿಂದೆ ಅವರು ಹೋಗಿರಲಿಲ್ಲ. ಅವರ ಹಿಂದೆಯೇ ಅಧಿಕಾರ ಬಂದಿತ್ತು. ರಿಯಲ್​ ಲೈಫ್​ನಲ್ಲಿಯೂ ಅವರು ರೆಬೆಲ್​ ಸ್ಟಾರ್​ ಆಗಿ ಕೆಲಸ ಮಾಡಿದ್ದಾರೆ’ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಇದನ್ನೂ ಓದಿ: Ambareesh: ‘ಅಂಬರೀಷ್​​ಗೆ ಕುದುರೆ ಹೆಸರು ಮಾತ್ರ ಮರೆಯುತ್ತಿರಲಿಲ್ಲ’; ದೊಡ್ಡಣ್ಣ

ರೇಸ್​ ಕೋರ್ಸ್​ ರಸ್ತೆಗೆ ಅಂಬಿ ಹೆಸರು ಸೂಕ್ತ:

‘ಅಂಬರೀಷ್​ ನನ್ನ ಆತ್ಮೀಯ ಮಿತ್ರ. ನಾವು ಸುಮ್ಮನೆ ಹರಟೆ ಹೊಡೆಯುತ್ತಿರಲಿಲ್ಲ. ಅನೇಕ ಗಂಭೀರ ವಿಚಾರಗಳನ್ನು ನಾವು ಚರ್ಚೆ ಮಾಡುತ್ತಿದ್ದೆವು. ಅವರ ಜೀವನ ತೆರೆದ ಪುಸ್ತಕ. ಮುಚ್ಚಿಡುವಂಥದ್ದು ಏನೂ ಇಲ್ಲ. ಕೇಸ್​ ಕೋರ್ಸ್​ನಲ್ಲಿ ಅವರು ಇರುತ್ತಿದ್ದರು. ಅವರಿಗೆ ಸೂಕ್ತವಾದ ರಸ್ತೆಗೆ ಅವರ ಹೆಸರು ಇಟ್ಟಿದ್ದೇವೆ’ ಎಂದು ಬಸವರಾಜ್​ ಬೊಮ್ಮಾಯಿ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:05 pm, Mon, 27 March 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ