Vishnuvardhan Memorial: ‘ಕರುನಾಡ ಧ್ವಜವನ್ನು ವಿಷ್ಣುವರ್ಧನ್​ ಎತ್ತಿ ಹಿಡಿದರು’; ಸ್ಮಾರಕ ಉದ್ಘಾಟನೆ ಬಳಿಕ ಸಿಎಂ ಬೊಮ್ಮಾಯಿ ಮಾತು

|

Updated on: Jan 29, 2023 | 4:57 PM

CM Basavaraj Bommai | Vishnuvardhan: ‘ಯಾವ ಪಾತ್ರವನ್ನು ಕೊಟ್ಟರೂ ವಿಷ್ಣುವರ್ಧನ್​ ಅತ್ಯಂತ ನೈಜವಾಗಿ ಅಭಿನಯಿಸುತ್ತಿದ್ದರು. ಅವರು ಮಾಡಿದ ಪ್ರತಿ ಪಾತ್ರ ಇಂದಿಗೂ ಅಭಿಮಾನಿಗಳ ಮನದಲ್ಲಿ ಹಸಿರಾಗಿದೆ’ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Vishnuvardhan Memorial: ‘ಕರುನಾಡ ಧ್ವಜವನ್ನು ವಿಷ್ಣುವರ್ಧನ್​ ಎತ್ತಿ ಹಿಡಿದರು’; ಸ್ಮಾರಕ ಉದ್ಘಾಟನೆ ಬಳಿಕ ಸಿಎಂ ಬೊಮ್ಮಾಯಿ ಮಾತು
ವಿಷ್ಣುವರ್ಧನ್, ಬಸವರಾಜ ಬೊಮ್ಮಾಯಿ,
Follow us on

ವಿಷ್ಣುವರ್ಧನ್​ ಸ್ಮಾರಕವನ್ನು (Vishnuvardhan Memorial) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು (ಜ.29) ಉದ್ಘಾಟನೆ ಮಾಡಿದ್ದಾರೆ. ಮೈಸೂರಿನಲ್ಲಿ ಭವ್ಯ ಸ್ಮಾರಕ ನಿರ್ಮಾಣ ಆಗಿದ್ದು, ವಿಷ್ಣು ಪ್ರತಿಮೆ ಗಮನ ಸೆಳೆಯುತ್ತಿದೆ. ಸ್ಮಾರಕ ಅನಾವರಣ ಸಂದರ್ಭದಲ್ಲಿ ‘ಸಾಹಸ ಸಿಂಹ’ ವಿಷ್ಣುವರ್ಧನ್​ (Vishnuvardhan) ಅವರ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದ್ದಾರೆ. ‘ನಾನು ಈ ಕಾರ್ಯಕ್ರಮಕ್ಕೆ ವಿಷ್ಣುವರ್ಧನ್​ ಅಭಿಮಾನಿಯಾಗಿ ಬಂದಿದ್ದೇನೆ. ಅವರ ಕಲೆ, ಸಾಹಸ, ಸಾಧನೆ ಎಲ್ಲವೂ ನಮ್ಮ ಕಣ್ಣ ಮುಂದಿದೆ. ಅವರ ಮೊದಲ ಸಿನಿಮಾ ‘ನಾಗರಹಾವು’ ಬಗ್ಗೆ ಪತ್ರಿಕೆಯಲ್ಲಿ ಪ್ರಕಟ ಆದಾಗ ವಿಷ್ಣುವರ್ಧನ್​ ಅವರ ಫೋಟೋ ಬಂದಿತ್ತು. ಅದನ್ನು ನೋಡಿದಾಗ ಯಾರಾದರೂ ವಿಷ್ಣುವರ್ಧನ್​ ಅವರ ಫ್ಯಾನ್​ ಆಗಲೇಬೇಕಿತ್ತು’ ಎಂದು ಬಸವರಾಜ​ ಬೊಮ್ಮಾಯಿ (CM Basavaraj Bommai) ಹೇಳಿದ್ದಾರೆ.

‘ವಿಷ್ಣುವರ್ಧನ್​ ಅವರು 70ರ ದಶಕದಲ್ಲಿ ‘ನಾಗರಹಾವು’ ಚಿತ್ರದ ಮೂಲಕ ಇಡೀ ಕರುನಾಡಿನ ಮನೆಮಾತಾದರು. ಹಲವು ಬಗೆಯ ಪಾತ್ರಗಳನ್ನು ಮಾಡಿ, ಕರ್ನಾಟಕದಲ್ಲಿ ಸಾಹಸ ಸಿಂಹನಾಗಿ ಮೆರೆದರು. ಬೇರೆ ಭಾಷೆಯ ಸಿನಿಮಾಗಳಲ್ಲೂ ನಟಿಸಿ, ಕರುನಾಡಿನ ಧ್ವಜವನ್ನು ಎತ್ತಿ ಹಿಡಿದರು. ಯಾವ ಪಾತ್ರವನ್ನು ಕೊಟ್ಟರೂ ಕೂಡ ಅತ್ಯಂತ ನೈಜವಾಗಿ ಅಭಿನಯಿಸುತ್ತಿದ್ದರು. ಅವರು ಮಾಡಿದ ಪ್ರತಿ ಪಾತ್ರ ಮತ್ತು ಡೈಲಾಗ್​ಗಳು ಇಂದಿಗೂ ಅಭಿಮಾನಿಗಳ ಮನದಲ್ಲಿ ಹಸಿರಾಗಿದೆ. ಅಂದಿನ ಪ್ರಸಿದ್ಧ ನಟಿ ಭಾರತಿ ಅವರು ವಿಷ್ಣುವರ್ಧನ್​ ಅವರ ಬಾಳಸಂಗಾತಿ ಆದಮೇಲೆ ಅವರಿಗೆ ದೊಡ್ಡ ಶಕ್ತಿಯಾಗಿ ನಿಂತರು’ ಎಂದು ಸಿಎಂ ಬಸವರಾಜ​ ಬೊಮ್ಮಾಯಿ ಹೇಳಿದ್ದಾರೆ.

ಇದನ್ನೂ ಓದಿ: Vishnuvardhan Memorial: ಬೆಂಗಳೂರಿನಲ್ಲಿ ವಿಷ್ಣುವರ್ಧನ್​ ಅಂತ್ಯ ಸಂಸ್ಕಾರ ಆದರೂ ಮೈಸೂರಿನಲ್ಲಿ ಸ್ಮಾರಕ ಆಗಿದ್ದೇಕೆ? ಇಲ್ಲಿದೆ ವಿವರ

ಇದನ್ನೂ ಓದಿ
Karnataka Ratna Award: ವಿಷ್ಣುವರ್ಧನ್​ಗೆ ‘ಕರ್ನಾಟಕ ರತ್ನ’ ನೀಡಬೇಕು ಎಂಬ ಬೇಡಿಕೆ ಬಗ್ಗೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ
Vishnuvardhan Memorial Inauguration: ‘ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ ಆಗುತ್ತಿರುವುದು ಮನಸ್ಸಿಗೆ ಖುಷಿ ನೀಡಿದೆ’; ಶಿವರಾಜ್​ಕುಮಾರ್​
Vishnuvardhan Memorial: ವಿಷ್ಣು​ ಅಭಿಮಾನಿಗಳ ಅನ್ನದಾನ ಕಾರ್ಯಕ್ಕೆ ಅಡೆತಡೆ; ಸ್ಮಾರಕ ಉದ್ಘಾಟನೆ ದಿನವೂ ತಪ್ಪದ ಪರದಾಟ
Vishnuvardhan Memorial: ಬೆಂಗಳೂರಿನಲ್ಲಿ ವಿಷ್ಣುವರ್ಧನ್​ ಅಂತ್ಯ ಸಂಸ್ಕಾರ ಆದರೂ ಮೈಸೂರಿನಲ್ಲಿ ಸ್ಮಾರಕ ಆಗಿದ್ದೇಕೆ? ಇಲ್ಲಿದೆ ವಿವರ

‘ವಿಷ್ಣುವರ್ಧನ್​ ಓರ್ವ ಭಾವುಕ ಜೀವಿ. ಅವರು ಮಾಡಿದ ಪಾತ್ರಗಳಲ್ಲೂ ಮಾನವೀಯತೆ ಕಾಣುತ್ತದೆ. ಅಧ್ಯಾತ್ಮಿಕವಾಗಿ ಅವರು ಹೇಳಿದ ವಿಚಾರಗಳು ಇಂದಿಗೂ ಪ್ರಸ್ತುತವಾಗಿವೆ. ವಿಷ್ಣು ಸ್ಮಾರಕ ಮಾಡುವಾಗ ಬಹಳ ವಿವಾದ ನಡೆಯಿತು. ಅನಿರುದ್ಧ್​ ಮತ್ತು ಭಾರತಿ ಅವರು ಮೈಸೂರಿನಲ್ಲಿ ಸ್ಮಾರಕ ಆಗಲಿ ಎಂದು ದಿಟ್ಟ ನಿಲುವು ತೆಗೆದುಕೊಂಡರು. 11 ಕೋಟಿ ರೂಪಾಯಿಯಲ್ಲಿ ಭವ್ಯವಾದ ಸ್ಮಾರಕ ನಿರ್ಮಾಣ ಆಗಿದೆ’ ಎಂದಿದ್ದಾರೆ ಬಸವರಾಜ ಬೊಮ್ಮಾಯಿ.

‘ಈ ಸ್ಮಾರಕದಲ್ಲಿ ಆಡಿಟೋರಿಯಂ, ಗ್ಯಾಲರಿ ಮುಂತಾದ ಸೌಲಭ್ಯ ಇದೆ. ಇದರ ಉಪಯೋಗವನ್ನು ಎಲ್ಲರೂ ಪಡೆಯಬೇಕು’ ಎಂದು ಸಿಎಂ ಹೇಳಿದ್ದಾರೆ. ವಿಷ್ಣುವರ್ಧನ್​ ಅವರಿಗೆ ‘ಕರ್ನಾಟಕ ರತ್ನ ಪ್ರಶಸ್ತಿ’ ಸಿಗಬೇಕು ಎಂಬುದು ಅಭಿಮಾನಿಗಳ ಬಯಕೆ. ಆ ಬಗ್ಗೆ ಮುಂದಿನ ದಿನಗಳಲ್ಲಿ ತಮ್ಮ ಸರ್ಕಾರವು ಸಕಾರಾತ್ಮಕವಾಗಿ ಸ್ಪಂದಿಸುತ್ತದೆ ಎಂದು ಕೂಡ ಬೊಮ್ಮಾಯಿ ಭರವಸೆ ನೀಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.