AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರೀಕರಣಕ್ಕೆ ಹೊಸ ನಿಯಮಾವಳಿ ರೂಪಿಸುವ ಸಂಬಂಧ ಇಂದು ಸಂಜೆ ಸಿಎಂ ಬೊಮ್ಮಾಯಿ ಸಭೆ

ಚಿತ್ರೀಕರಣಕ್ಕೆ ಹೊಸ ನಿಯಮಾವಳಿ ರೂಪಿಸುವ ಸಂಬಂಧ ಇಂದು ಸಂಜೆ ಚಲನಚಿತ್ರ ವಾಣಿಜ್ಯ ಮಂಡಳಿ, ಹಿರಿಯ ಕಲಾವಿದರೊಂದಿಗೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ. ಇದೇ ವೇಳೆ ಕೊರೊನಾದಿಂದ ನಲುಗಿರುವ ಚಲನಚಿತ್ರ ಉದ್ಯಮದ ಕುರಿತು ವಾಣಿಜ್ಯ ಮಂಡಳಿಯ ನಿಯೋಗ ಮಾತುಕತೆ ನಡೆಸಲಿದೆ.

ಚಿತ್ರೀಕರಣಕ್ಕೆ ಹೊಸ ನಿಯಮಾವಳಿ ರೂಪಿಸುವ ಸಂಬಂಧ ಇಂದು ಸಂಜೆ ಸಿಎಂ ಬೊಮ್ಮಾಯಿ ಸಭೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Updated By: shivaprasad.hs|

Updated on: Aug 11, 2021 | 10:20 AM

Share

‘ಲವ್​ ಯೂ ರಚ್ಚು’ ಚಿತ್ರದ ಚಿತ್ರೀಕರಣದ ವೇಳೆ ಫೈಟರ್ ವಿವೇಕ್ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಚಲನಚಿತ್ರ ವಾಣಿಜ್ಯ ಮಂಡಳಿ ಜತೆ ಇಂದು ಸಿಎಂ ಸಭೆ ನಡೆಸಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಂಜೆ 4.30ಕ್ಕೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಯಲಿದೆ. ಚಿತ್ರೀಕರಣದ ವೇಳೆ ನಿಯಮಗಳನ್ನು ಪಾಲಿಸದ ಆರೋಪಕ್ಕೆ ಸಂಬಂಧಪಟ್ಟಂತೆ ಸಭೆಯಲ್ಲಿ ಚರ್ಚೆ ನಡೆಸಲಾಗುವುದು ಎಂದು ತಿಳಿದುಬಂದಿದೆ. ಈ ಕುರಿತು ಹೊಸ ನಿಯಮ ಜಾರಿಗೆ ತರುವ ಸಂಬಂಧ ಹಿರಿಯ ಕಲಾವಿದರ ಅಭಿಪ್ರಾಯವನ್ನು ಸಿಎಂ ಪಡೆಯಲಿದ್ದಾರೆ. ನಂತರ ಚಿತ್ರೀಕರಣಕ್ಕೆ ಹೊಸ ನಿಯಮ ಜಾರಿ ಮಾಡುವ ಸಾಧ್ಯತೆ ಇದೆ.

ಇಂದು ಸಂಜೆ ಸಿಎಂ ಭೇಟಿ ಮಾಡಲಿರುವ ಚಲನಚಿತ್ರ ವಾಣಿಜ್ಯ ಮಂಡಳಿ ನಿಯೋಗ:

ಸಿನಿಮಾ ಇಂಡಸ್ಟ್ರಿಯ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲು ಇಂದು ಸಂಜೆ ಚಲನಚಿತ್ರ ವಾಣಿಜ್ಯ ಮಂಡಳಿ ನಿಯೋಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಭೇಟಿ ಮಾಡಲಿದೆ. ಕೊರೊನಾ ಲಾಕ್ ಡೌನ್ ಹೊಡೆತಕ್ಕೆ ತತ್ತರಿಸಿರುವ ಚಲನಚಿತ್ರ ಉದ್ಯಮದ ಕುರಿತಂತೆ ಚರ್ಚೆ ಮಾಡಿ ಚಿತ್ರಮಂದಿರಗಳ ಕರೆಂಟ್ ಬಿಲ್ ಮನ್ನಾ ಮಾಡುವುದು, ಚಿತ್ರಮಂದಿರಗಳಲ್ಲಿ 100% ಆಕ್ಯೂಪೆನ್ಸಿಗೆ ಅವಕಾಶ ನೀಡುವ ಬಗ್ಗೆ ಚರ್ಚೆ ಮಾಡುವ ಸಾಧ್ಯತೆ ಇದೆ. ಇಂದು ಸಂಜೆ ಚಲನ ಚಿತ್ರ ವಾಣಿಜ್ಯ ಮಂಡಳಿಯ ಎಲ್ಲ ವಲಯಗಳ ಮುಖಂಡರು ಸಿಎಂ ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ.

ಸಿಎಂ ಮನೆಗೆ ಹಿರಿಯ ನಟ ಶ್ರೀನಾಥ್ ಭೇಟಿ: 

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿಗೆ ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ಶ್ರೀನಾಥ್ ಆಗಮಿಸಿದ್ದಾರೆ. ಆರ್ ಟಿ ನಗರದ ಸಿಎಂ ಸ್ವಗೃಹಕ್ಕೆ ತೆರಳಿರುವ ಶ್ರೀನಾಥ್ ಭೇಟಿ, ಇಂದು ಸಂಜೆ ನಡೆಯಲಿರುವ ಚಲನ ಚಿತ್ರ ಮಂಡಳಿ ಮತ್ತು ಹಿರಿಯ ಕಲಾವಿದರ ಸಭೆಯ ಹಿನ್ನೆಲೆಯಲ್ಲಿ ಮಹತ್ವ ಪಡೆದಿದೆ.

ಇದನ್ನೂ ಓದಿ:

ಚಿತ್ರೀಕರಣ ವೇಳೆ ನಿಯಮಗಳನ್ನು ಪಾಲಿಸುತ್ತಿಲ್ಲ, ಕಠಿಣ ನಿಯಮಗಳನ್ನು ಜಾರಿ ಮಾಡಿ ಶೀಘ್ರದಲ್ಲೇ ಆದೇಶ; ಸಿಎಂ ಬಸವರಾಜ ಬೊಮ್ಮಾಯಿ

ಫೈಟರ್​ ಸಾವು: ರಚಿತಾ ರಾಮ್​, ಅಜಯ್​ ರಾವ್​ ಬಂಧನಕ್ಕೆ ಎಐಸಿಸಿ ಹ್ಯುಮನ್ ರೈಟ್ಸ್ ಸಂಘಟನೆ ಒತ್ತಾಯ

(CM Basavaraj Bommai will Meet The Karnataka Film Chamber Of Commerce Officials and senior actors to make new law for shooting)

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ