AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಬ್ಸಿಡಿ, ಬಾಕಿ ಪ್ರಶಸ್ತಿ ವಿತರಣೆ: ಬೆಂಗಳೂರು ಸಿನಿಮೋತ್ಸವ ಉದ್ಘಾಟನೆಯಲ್ಲಿ ಸಿಎಂ ಭರವಸೆ

Bengaluru Film Festival: 15ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಸಿದ್ದರಾಮಯ್ಯ ಉದ್ಘಾಟಿಸಿದ್ದು, ಕನ್ನಡ ಚಿತ್ರರಂಗಕ್ಕೆ ಕೆಲವು ಭರವಸೆಗಳನ್ನು ಸಹ ನೀಡಿದ್ದಾರೆ.

ಸಬ್ಸಿಡಿ, ಬಾಕಿ ಪ್ರಶಸ್ತಿ ವಿತರಣೆ: ಬೆಂಗಳೂರು ಸಿನಿಮೋತ್ಸವ ಉದ್ಘಾಟನೆಯಲ್ಲಿ ಸಿಎಂ ಭರವಸೆ
ಬೆಂಗಳೂರು ಅಂತರಾಷ್ಟ್ರೀಯ ಸಿನಿಮೋತ್ಸವ
Follow us
ಮಂಜುನಾಥ ಸಿ.
|

Updated on: Feb 29, 2024 | 10:12 PM

ವಿಧಾನಸೌಧದ ಮುಂಭಾಗದಲ್ಲಿ ಇಂದು (ಫೆಬ್ರವರಿ 29) ನಡೆದ ಕಾರ್ಯಕ್ರಮದಲ್ಲಿ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ (Bengaluru International Film Festival) ಉದ್ಘಾಟನೆ ಮಾಡಲಾಯ್ತು. ಸಿಎಂ ಸಿದ್ದರಾಮಯ್ಯ ಅವರು ಅಂತರಾಷ್ಟ್ರೀಯ ಸಿನಿಮಾ ಉತ್ಸವಕ್ಕೆ ಚಾಲನೆ ನೀಡಿದರು. 15ನೇ ಅಂತರಾಷ್ಟ್ರೀಯ ಸಿನಿಮಾ ಉತ್ಸವದ ರಾಯಭಾರಿ ಡಾಲಿ ಧನಂಜಯ್, ಹ್ಯಾ ಟ್ರಿಕ್ ಹೀರೋ ಶಿವರಾಜ್ ಕುಮಾರ್, ಕರ್ನಾಟಕ ಚಲನಚಿತ್ರ ಅಕಾಡೆಮಿ ನೂತನ ಅಧ್ಯಕ್ಷ ಸಾಧು ಕೋಕಿಲ, ಆರಾಧನಾ ಸೇರಿದಂತೆ ಹಲವು ಗಣ್ಯರು ಉದ್ಘಾಟನಾ ಕಾರ್ಯಕ್ರಮದಲ್ಲಿ ಹಾಜರಿದ್ದರು.

ಚಿತ್ರೋತ್ಸವದ ರಾಯಭಾರಿ ಡಾಲಿ ಧನಂಜಯ ಮಾತನಾಡಿ, ಚಿತ್ರೋದ್ಯಮದ ಪರವಾಗಿ ಒಂದಿಷ್ಟು ಬೇಡಿಕೆಗಳನ್ನು ಸಿಎಂ ಮುಂದಿಟ್ಟರು. ‘ಕೊರೊನಾ ಬಳಿಕ ಸಿನಿಮಾ ಸಬ್ಸಿಡಿಯನ್ನು ನಿಲ್ಲಿಸಲಾಗಿದೆ. ಇದರ ಜೊತೆಗೆ ರಾಜ್ಯದ ಅತ್ಯುತ್ತಮ ಸಿನಿಮಾಗಳಿಗೆ ನೀಡಲಾಗುತ್ತಿರುವ ಪ್ರಶಸ್ತಿಗಳು ಕೂಡ ನಿಂತಿದೆ. ಕಲಾವಿದರಿಗೆ ಪ್ರೋತ್ಸಾಹ ಕೂಡ ತುಂಬಾ ಮುಖ್ಯ. ‘ಕಾಂತರ’, ‘ಕೆಜಿಎಫ್’ ಅಂತಹ ಸಿನಿಮಾಗಳು ರಾಷ್ಟ್ರಮಟ್ಟದಲ್ಲಿ ಕನ್ನಡ ಚಿತ್ರರಂಗವನ್ನು ಗುರುತಿಸುವಂತೆ ಮಾಡಿದೆ. ಇದರ ಜೊತೆಗೆ ಸರ್ಕಾರದ ಪ್ರೋತ್ಸಾಹ ಕೂಡ ತುಂಬಾ ಮುಖ್ಯ. ಸದ್ಯ ನಿಂತಿರುವ ಪ್ರಶಸ್ತಿ ಮತ್ತು ಸಬ್ಸಿಡಿಯನ್ನು ಮುಂದುವರಿಸಬೇಕೆಂದು ಚಿತ್ರರಂಗದ ಪರವಾಗಿ ನಾನು ಸಿಎಂ ಬಳಿ ಕೇಳಿಕೊಳ್ಳುತ್ತಿದ್ದೇನೆ’ ಎಂದರು.

ಇದನ್ನೂ ಓದಿ:ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಡಾಲಿ ಧನಂಜಯ್ ರಾಯಭಾರಿ

ಧನಂಜಯ್ ಮಾತುಗಳಿಗೆ ಸಿಎಂ ಸಿದ್ದರಾಮಯ್ಯ ಸ್ಥಳದಲ್ಲಿಯೇ ಸಮ್ಮತಿ ಸೂಚಿಸಿದರು. ಚಿತ್ರೋತ್ಸವ ಉದ್ಘಾಟನೆ ಮಾಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ‘ಚಿತ್ರೋತ್ಸವಕ್ಕೆ ಸರ್ಕಾರ ಎಲ್ಲಾ ರೀತಿಯ ಸಹಾಯವನ್ನು ನೀಡಿದೆ, ಮುಂದೆಯೂ ಸಹ ಚಿತ್ರರಂಗಕ್ಕೆ ಎಲ್ಲಾ ರೀತಿಯ ಸಹಾಯವನ್ನು ಮಾಡಲಿದೆ. ಕನ್ನಡ ಚಿತ್ರರಂಗಕ್ಕೆ ಎಲ್ಲಾ ರೀತಿಯ ಬೆಂಬಲ, ಹಣಕಾಸಿನ ಸಹಕಾರವನ್ನು ಕೊಡುತ್ತೇವೆ. 2019 ರಿಂದ ಚಲನಚಿತ್ರ ಪ್ರಶಸ್ತಿಗಳನ್ನು ಕೊಟ್ಟಿಲ್ಲ. ಈಗ ನಾನು ಸಮಿತಿಗಳನ್ನು ಮಾಡಿದ್ದೇನೆ. ಆ ಸಮಿತಿಗಳು ವರದಿ ಕೊಟ್ಟ ತಕ್ಷಣ ಎಲ್ಲಾ ವರ್ಷದ ಪ್ರಶಸ್ತಿಗಳನ್ನು ಕೊಡುತ್ತೇವೆ’ ಎಂದರು.

ಇಂದು ಉದ್ಘಾಟನೆಯಾದ ಚಲನಚಿತ್ರೋತ್ಸವ ಮಾರ್ಚ್​ 7 ರವರೆಗೆ ನಡೆಯಲಿದೆ. ಈ ಬಾರಿ 50ಕ್ಕೂ ಹೆಚ್ಚು ರಾಷ್ಟ್ರಗಳಿಂದ ಆಸ್ಕರ್ ಪ್ರಶಸ್ತಿಗೆ ನಾಮಾಂಕಿತವಾದ ಸಿನಿಮಾಗಳೂ ಸೇರಿದಂತೆ 200ಕ್ಕೂ ಹೆಚ್ಚು ಚಲನಚಿತ್ರಗಳು ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿವೆ. ವಿಶ್ವದ ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಪಾಲ್ಗೊಂಡಿದ್ದ ಅತ್ಯುತ್ತಮ ಚಲನಚಿತ್ರಗಳು 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಭಾಗವಹಿಸುತ್ತಿವೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ