AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಜೆಟ್​ನಲ್ಲಿ ಡಾಲಿ ಸಾಹಿತ್ಯ; ‘ಡೇರ್​ಡೆವಿಲ್​ ಮುಸ್ತಾಫಾ’ ಚಿತ್ರದ ಸಾಲು ಓದಿದ ಸಿಎಂ

ಡಾಲಿ ಧನಂಜಯ ಪ್ರಸ್ತುತಪಡಿಸಿದ ‘ಡೇರ್​ಡೆವಿಲ್​ ಮುಸ್ತಾಫಾ’ ಸಿನಿಮಾದಲ್ಲಿ ಸಾಮರಸ್ಯ ಸಾರುವಂತಹ ಕಥೆ ಇದೆ. ಈ ಚಿತ್ರಕ್ಕಾಗಿ ಧಂಜಯ್​ ಬರೆದ ಹಾಡಿನ ಸಾಲುಗಳನ್ನು ಸಿಎಂ ಸಿದ್ದರಾಮಯ್ಯ ಅವರು ಬಜೆಟ್​ ಮಂಡನೆ ವೇಳೆ ಓದಿದ್ದಾರೆ. ಸಮಾಜ ಕಲ್ಯಾಣ ಇಲಾಖೆಯ ಅನುದಾನಗಳನ್ನು ಘೋಷಿಸುವಾಗ ಮುಖ್ಯಮಂತ್ರಿಗಳು ಈ ಸಾಲನ್ನು ಹೇಳಿದರು.

ಬಜೆಟ್​ನಲ್ಲಿ ಡಾಲಿ ಸಾಹಿತ್ಯ; ‘ಡೇರ್​ಡೆವಿಲ್​ ಮುಸ್ತಾಫಾ’ ಚಿತ್ರದ ಸಾಲು ಓದಿದ ಸಿಎಂ
ಸಿಎಂ ಸಿದ್ದರಾಮಯ್ಯ, ಡೇರ್​ಡೆವಿಲ್​ ಮುಸ್ತಾಫಾ, ಡಾಲಿ ಧನಂಜಯ್​
ಮದನ್​ ಕುಮಾರ್​
|

Updated on: Feb 16, 2024 | 1:43 PM

Share

ಸಿಎಂ ಸಿದ್ದರಾಮಯ್ಯ 2024-25ನೇ ಸಾಲಿನ ರಾಜ್ಯ ಬಜೆಟ್ (Karnataka Budget) ಮಂಡನೆ ಮಾಡುತ್ತಿದ್ದಾರೆ. ಬಜೆಟ್​ ಮಂಡನೆ ವೇಳೆ ಕೆಲವು ಸಿನಿಮಾ ಸಾಲುಗಳನ್ನು ಅವರು ಪ್ರಸ್ತಾಪಿಸಿದ್ದು ವಿಶೇಷವಾಗಿದೆ. ಡಾ. ರಾಜ್​ಕುಮಾರ್​ ನಟನೆಯ ‘ಬಂಗಾರದ ಮನುಷ್ಯ’ ಸಿನಿಮಾದ ‘ಆಗದು ಎಂದು ಕೈ ಕಟ್ಟಿ ಕುಳಿತರೆ ಸಾಗದು ಕೆಲವು ಮುಂದೆ.. ಮನಸೊಂದಿದ್ದರೆ ಮಾರ್ಗವು ಉಂಟು, ಕೆಚ್ಚೆದೆ ಇರಬೇಕು ಎಂದೆಂದೂ..’ ಎಂಬ ಹಾಡಿನ ಸಾಲುಗಳನ್ನು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಬಜೆಟ್​ ಓದಲು ಆರಂಭಿಸಿದರು. ಬಳಿಕ ‘ಡೇರ್​ಡೆವಿಲ್​ ಮುಸ್ತಾಫಾ’ ಸಿನಿಮಾದಲ್ಲಿ ಡಾಲಿ ಧನಂಜಯ್ (Daali Dhananjaya)​ ಬರೆದ ಸಾಲುಗಳನ್ನು ಸಿಎಂ ಓದಿದ್ದು ಕೂಡ ಗಮನ ಸೆಳೆಯಿತು. ಆ ಬಗ್ಗೆ ಇಲ್ಲಿದೆ ಮಾಹಿತಿ..

2023ರ ಮೇ 19ರಂದು ಬಿಡುಗಡೆಯಾದ ‘ಡೇರ್​ಡೆವಿಲ್​ ಮುಸ್ತಾಫಾ’ ಸಿನಿಮಾಗೆ ವಿಮರ್ಶಕರಿಂದ ಮತ್ತು ಪ್ರೇಕ್ಷಕರಿಂದ ಮೆಚ್ಚುಗೆ ಸಿಕ್ಕಿತ್ತು. ಕೋಮು ಸಾಮರಸ್ಯವನ್ನು ಸಾರುವ ಕಥೆ ಆ ಸಿನಿಮಾದಲ್ಲಿತ್ತು. ಆ ಸಿನಿಮಾದಲ್ಲಿನ ‘ಶಾಂತಿಯ ತೋಟ..’ ಹಾಡಿಗೆ ಸಾಹಿತ್ಯ ಬರೆದಿದ್ದು ನಟ, ನಿರ್ಮಾಪಕ ಡಾಲಿ ಧನಂಜಯ್​. ಆ ಹಾಡಿನಲ್ಲಿ ಬರುವ ಒಂದು ಸಾಲು ಈಗ ಬಜೆಟ್ ಪುಸ್ತಕದಲ್ಲಿ ಸ್ಥಾನ ಪಡೆದಿದ್ದು ವಿಶೇಷ.

‘ಒಂದು ತೋಟದಲ್ಲಿ ನೂರು ಹೂವು ಅರಳಲಿ.. ಎಲ್ಲ ಕೂಡಿ ಆಡುವಂಥ ಗಾಳಿ ಬೀಸಲಿ..’ ಎಂಬ ಅರ್ಥಭರಿತ ಸಾಹಿತ್ಯವನ್ನು ಡಾಲಿ ಧನಂಜಯ್​ ಬರೆದಿದ್ದಾರೆ. ಆದೇ ಸಾಲನ್ನು ಸಿಎಂ ಸಿದ್ದರಾಮಯ್ಯ ಅವರು ತಮ್ಮ ಬಜೆಟ್​ ಮಂಡನೆ ಸಮಯದಲ್ಲಿ ಓದಿದ್ದಾರೆ. ಸಮಾಜ ಕಲ್ಯಾಣ ಇಲಾಖೆಗೆ ಸಂಬಂಧಿಸಿದ ಅನುದಾನಗಳನ್ನು ಮಂಡಿಸುವುದಕ್ಕೂ ಮುನ್ನ ಮುಖ್ಯಮಂತ್ರಿಗಳು ಈ ಸಾಲನ್ನು ಓದಿದರು. ಆ ಮೂಲಕ ‘ಡೇರ್​ಡೆವಿಲ್​ ಮುಸ್ತಫಾ’ ತಂಡಕ್ಕೆ ವಿಶೇಷವಾದ ಗೌರವ ಸಿಕ್ಕಂತೆ ಆಗಿದೆ.

ಇದನ್ನೂ ಓದಿ: Daredevil Musthafa Review: ಭರಪೂರ ನಗಿಸುತ್ತಾ ಮತಗಳ ಜಗಳ ಬಿಡಿಸುವ ‘ಡೇರ್​ಡೆವಿಲ್​ ಮುಸ್ತಫಾ’

ಡಾಲಿ ಧನಂಜಯ ಅವರು ನಟನೆ ಮಾತ್ರವಲ್ಲದೇ ಸಿನಿಮಾಗಳ ನಿರ್ಮಾಣದಲ್ಲೂ ಬ್ಯುಸಿ ಆಗಿದ್ದಾರೆ. ಶಶಾಂಕ್ ಸೋಗಲ್ ನಿರ್ದೇಶನ ಮಾಡಿದ ‘ಡೇರ್​ ಡೆವಿಲ್​ ಮುಸ್ತಫಾ’ ಸಿನಿಮಾವನ್ನು ಧನಂಜಯ್​ ಪ್ರಸ್ತುತ ಪಡಿಸಿದ್ದರು. ಅಲ್ಲದೇ, ಸಾಹಿತ್ಯ ಬರೆಯುವ ಮೂಲಕ ಸಿನಿಮಾದ ಅಂದ ಹೆಚ್ಚಿಸಿದ್ದರು. ಡಾಲಿ ಧನಂಜಯ್​ ಬರೆದ ಸಾಲುಗಳಿಗೆ ಬಜೆಟ್​ಪುಸ್ತಕದಲ್ಲಿ ಸ್ಥಾನ ಸಿಕ್ಕಿದ್ದರಿಂದ ಅವರ ಅಭಿಮಾನಿಗಳಿಗೆ ಖುಷಿ ಆಗಿದೆ.

ಇದನ್ನೂ ಓದಿ: ಡಾಲಿ ಧನಂಜಯ್ ಅವರನ್ನು ಲಿಡ್ಕರ್ ಬ್ರ್ಯಾಂಡ್ ರಾಯಭಾರಿಯಾಗಿ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಕೆಲವೇ ದಿನಗಳ ಹಿಂದೆ ಡಾಲಿ ಧನಂಜಯ್ ಅವರಿಗೆ ಸರ್ಕಾರದ ಕಡೆಯಿಂದ ಹೊಸ ಜವಾಬ್ದಾರಿ ನೀಡಲಾಗಿದೆ. ‘ಲಿಡ್ಕರ್’ ಸಂಸ್ಥೆಗೆ ಅವರನ್ನು ಪ್ರಚಾರ ರಾಯಭಾರಿಯಾಗಿ ನೇಮಕ ಮಾಡಲಾಗಿದೆ. ಇಂದು (ಫೆಬ್ರವರಿ 16) ಸಿದ್ದರಾಮಯ್ಯ ಅವರು ಸೂಟ್ಕೇಸ್ ಬದಲಿಗೆ ಲಿಡ್ಕರ್ ಬ್ಯಾಗ್​ನಲ್ಲಿ ಬಜೆಟ್ ಪುಸ್ತಕವನ್ನು ಹಿಡಿದುಕೊಂಡು ಬಂದಿದ್ದು ಕೂಡ ವಿಶೇಷವಾಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು