ಲೀಲಾವತಿಯ ಹೆಸರನ್ನು ‘ಲೀಲಾದೇವಿ’ ಎಂದು ಸಿಎಂ ಸಿದ್ದರಾಮಯ್ಯ ಕರೆದಿದ್ದೇಕೆ?

‘ಲೀಲಾವತಿ ಪರಿಪೂರ್ಣ ಕಲಾವಿದೆ. ಹಾಸ್ಯ, ಐತಿಹಾಸಿಕ, ಸಾಮಾಜಿಕ ಹೀಗೆ ಯಾವುದೇ ಪಾತ್ರಕೊಟ್ಟರೂ ಲೀಲಾಜಾಲವಾಗಿ ನಟಿಸುತ್ತಿದ್ದರು. ಅವರ ಸಾವು ಸಾಕಷ್ಟು ದುಃಖ ತಂದಿದೆ. ಭಕ್ತ ಕುಂಬಾರದಲ್ಲಿ ಅವರ ಅಭಿನಯ ಪ್ರಶಂಸೆಗೆ ಪಾತ್ರವಾಗಿತ್ತು’ ಎಂದಿದ್ದಾರೆ ಸಿದ್ದರಾಮಯ್ಯ.

ಲೀಲಾವತಿಯ ಹೆಸರನ್ನು ‘ಲೀಲಾದೇವಿ’ ಎಂದು ಸಿಎಂ ಸಿದ್ದರಾಮಯ್ಯ ಕರೆದಿದ್ದೇಕೆ?
ಸಿದ್ದರಾಮಯ್ಯ-ಲೀಲಾವತಿ
Follow us
|

Updated on: Dec 09, 2023 | 12:21 PM

ಲೀಲಾವತಿ (Leelavathi) ಅವರು ಡಿಸೆಂಬರ್ 8ರಂದು ನಿಧನ ಹೊಂದಿದರು. ಬೆಂಗಳೂರಿನ ಹೊರವಲಯದಲ್ಲಿರುವ ಸೋಲದೇವನಹಳ್ಳಿಯಲ್ಲಿರುವ ನಿವಾಸದ ಸಮೀಪದ ತೋಟದಲ್ಲಿ ಅವರ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿದೆ. ಈ ವೇಳೆ ಸಿದ್ದರಾಮಯ್ಯ ಅವರು ಅಂತಿಮ ದರ್ಶನ ಪಡೆದು ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ ಅವರು ಲೀಲಾವತಿ ಎಂದು ಹೇಳುವ ಬದಲು ಲೀಲಾದೇವಿ ಎಂದರು. ಆಗ ವರದಿಗಾರರು ಹೆಸರನ್ನು ನೆನಪಿಸಿದರು. ಆ ಬಳಿಕ ಅವರು ತಪ್ಪನ್ನು ತಿದ್ದಿಕೊಂಡರು.

‘ವಾರದ ಹಿಂದೆ ನಾನು ಲೀಲಾವತಿ ಅವರನ್ನು ಭೇಟಿ ಮಾಡಿದ್ದೆ. ಆಗ ವಿನೋದ್ ರಾಜ್ ಕೂಡ ಇದ್ದರು. ವಿನೋದ್ ರಾಜ್​ಗೆ ತಾಯಿ ಮೇಲೆ ಬಹಳ ಪ್ರೀತಿ ಇತ್ತು. ಅವರು ಆದರ್ಶಯುತ ತಾಯಿ ಮಕ್ಕಳು. ಅಮ್ಮನ ಚೆನ್ನಾಗಿ ನೋಡ್ಕೋಳಪ್ಪ ಎಂದು ಹೇಳಿದ್ದೆ. ಸರ್ಕಾರದಿಂದ ಸಹಾಯ ಬೇಕಿದ್ರೆ ಕೇಳು ಎಂದು ಕೂಡ ಹೇಳಿದ್ದೆ. ಆದರೆ, ಅವರು ಸಹಾಯ ಕೇಳಲಿಲ್ಲ. ಲೀಲಾವತಿ ಅವರಿಗೆ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ಮಾಡಲು ಆದೇಶ ನೀಡಿದ್ದೇನೆ. ಚಿತ್ರರಂಗ ಕಂಡ ಅದ್ಭುತ ಕಲಾವಿದೆ ಅವರು’ ಎಂದಿದ್ದಾರೆ ಸಿದ್ದರಾಮಯ್ಯ.

‘ರಂಗಭೂಮಿಯಿಂದ ಸಿನಿಮಾ ರಂಗಕ್ಕೆ ಬಂದು 600ಕ್ಕೂ ಅಧಿಕ ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ. ದಕ್ಷಿಣ ಭಾರತದ ಎಲ್ಲಾ ಭಾಷೆಗಳಲ್ಲಿ ನಟನೆ ಮಾಡಿದ್ದಾರೆ. ಅವರು ಬಹುಭಾಷಾ ಕಲಾವಿದೆ. ಯಾವುದೇ ಪಾತ್ರವಾದರೂ ಉತ್ತಮವಾಗಿ ನಟಿಸುತ್ತಿದ್ದರು. ಅದು ತಾಯಿ ಪಾತ್ರ ಇರಲಿ ಅಥವಾ ಹೀರೋಯಿನ್ ಪಾತ್ರ ಇರಲಿ. ಎಲ್ಲದಕ್ಕೂ ನ್ಯಾಯ ಒದಗಿಸುತ್ತಿದ್ದರು. ಮನೋಜ್ಞವಾಗಿ ಅಭಿನಯಿಸುತ್ತಿದ್ದರು. ಅವರ ಹಲವು ಸಿನಿಮಾಗಳನ್ನು ನೋಡಿದ್ದೇನೆ. ರಾಜ್​ಕುಮಾರ್, ಲೀಲಾವತಿ ಜೋಡಿ ಸಖತ್ ಜನಪ್ರಿಯತೆ ಪಡೆದಿತ್ತು. ಅವರ ಎಲ್ಲಾ ಸಿನಿಮಾಗಳೂ ಇಷ್ಟವಾಗಿತ್ತು’ ಎಂದಿದ್ದಾರೆ ಸಿದ್ದರಾಮಯ್ಯ.

‘ಲೀಲಾವತಿ ಪರಿಪೂರ್ಣ ಕಲಾವಿದೆ. ಹಾಸ್ಯ, ಐತಿಹಾಸಿಕ, ಸಾಮಾಜಿಕ ಹೀಗೆ ಯಾವುದೇ ಪಾತ್ರಕೊಟ್ಟರೂ ಲೀಲಾಜಾಲವಾಗಿ ನಟಿಸುತ್ತಿದ್ದರು. ಅವರ ಸಾವು ಸಾಕಷ್ಟು ದುಃಖ ತಂದಿದೆ. ಭಕ್ತ ಕುಂಬಾರದಲ್ಲಿ ಅವರ ಅಭಿನಯ ಪ್ರಶಂಸೆಗೆ ಪಾತ್ರವಾಗಿತ್ತು. ಅವರು ಗಳಿಸಿದ ಹಣವನ್ನು ಬಚ್ಚಿಟ್ಟುಕೊಳ್ಳಲಿಲ್ಲ. ಆಸ್ಪತ್ರೆ ಕಟ್ಟಿಸಿದ್ದಾರೆ, ಬಡವರಿಗೆ ಸಹಾಯ ಮಾಡಿದ್ದಾರೆ. ಪ್ರಾಣಿಗಳ ಕಂಡರೆ ಅಪಾರ ಪ್ರೀತಿ ಇತ್ತು. ಎಲ್ಲ ಮನುಷ್ಯರೂ ಇದೇ ರೀತಿ ಮಾಡಬೇಕು. ದಯವೇ ಧರ್ಮದ ಮೂಲ. ಇದು ಅವರಿಗೆ ರಕ್ತಗತವಾಗಿ ಬಂದಿತ್ತು. ಲೀಲಾವತಿಗೆ ಬೇರೆಯವರ ಕಷ್ಟವನ್ನು ಅರ್ಥ ಮಾಡಿಕೊಳ್ಳುವ ಮನಸ್ಸು ಇತ್ತು’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: ಲೀಲಾವತಿ ಅಂತಿಮ ದರ್ಶನ ಪಡೆದು ವಿನೋದ್​ ರಾಜ್​ನ ಸಂತೈಸಿದ ಉಪೇಂದ್ರ

‘ರಾಷ್ಟ್ರ ಮಟ್ಟದಲ್ಲಿ ಅವರಿಗೆ ಹಲವು ಪ್ರಶಸ್ತಿ ಸಿಗಬೇಕಿತ್ತು. ಆದರೆ, ಸಿಗಲಿಲ್ಲ. ರೈತಾಪಿ ಕೆಲಸ ಮಾಡಿದ್ದಾರೆ. ಯಾವುದೇ ಕೆಲಸ ಮಾಡಿದರೂ ಅವರು ತಮ್ಮನ್ನು ತಾವು ಅದಕ್ಕೆ ಅರ್ಪಿಸಿಕೊಂಡಿದ್ದರು. ಪರಿಪೂರ್ಣ ಕಲಾವಿದೆ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ