AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಿಎಂ ಯಡಿಯೂರಪ್ಪ ನಿಜವಾದ ರಾಜಾಹುಲಿ’: ಹೌಸ್​ಫುಲ್ ಅವಕಾಶ ನೀಡಿದ್ದಕ್ಕೆ ಕೇಳಿಬಂತು ಹೊಗಳಿಕೆ

ಸ್ಯಾಂಡಲ್​ವುಡ್ ಮನವಿಗೆ ಸ್ಪಂದಿಸಿದ ರಾಜ್ಯ ಸರ್ಕಾರಕ್ಕೆ ಸಿನಿರಂಗದವರಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ನಟ ಪುನೀತ್ ರಾಜ್​ಕುಮಾರ್, ಪುನೀತ್ ಅಭಿಮಾನಿಗಳು ಹಾಗೂ ಸಿನಿಪ್ರಿಯರು ಸಂತಸ ವ್ಯಕ್ತಪಡಿಸಿದ್ದಾರೆ.

‘ಸಿಎಂ ಯಡಿಯೂರಪ್ಪ ನಿಜವಾದ ರಾಜಾಹುಲಿ’: ಹೌಸ್​ಫುಲ್ ಅವಕಾಶ ನೀಡಿದ್ದಕ್ಕೆ ಕೇಳಿಬಂತು ಹೊಗಳಿಕೆ
ಸಿಎಂ ಯಡಿಯೂರಪ್ಪ
TV9 Web
| Edited By: |

Updated on:Apr 05, 2022 | 12:53 PM

Share

ಬೆಂಗಳೂರು: ಸಿನಿಮಾ ಹಾಲ್​ಗಳಲ್ಲಿ ಶೇ. 100ರಷ್ಟು ಸೀಟು ಭರ್ತಿಗೆ ಅವಕಾಶ ನೀಡಬೇಕು ಎಂಬ ಸ್ಯಾಂಡಲ್​ವುಡ್​ ಮನವಿಗೆ ರಾಜ್ಯ ಸರ್ಕಾರ ಕೊನೆಗೂ ಸಕಾರಾತ್ಮಕವಾಗಿ ಸ್ಪಂದಿಸಿದೆ. ಏಪ್ರಿಲ್ 7ರ ವರೆಗೆ, ಅಂದರೆ ಇನ್ನು ಮೂರು ದಿನಗಳ ಕಾಲ ಥಿಯೇಟರ್ ಹೌಸ್​ಫುಲ್​ಗೆ ಅವಕಾಶ ನೀಡಿ ಆದೇಶ ಹೊರಡಿಸಿದೆ.

ಸ್ಯಾಂಡಲ್​ವುಡ್ ಮನವಿಗೆ ಸ್ಪಂದಿಸಿದ ರಾಜ್ಯ ಸರ್ಕಾರಕ್ಕೆ ಸಿನಿರಂಗದವರಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ನಟ ಪುನೀತ್ ರಾಜ್​ಕುಮಾರ್, ಪುನೀತ್ ಅಭಿಮಾನಿಗಳು ಹಾಗೂ ಸಿನಿಪ್ರಿಯರು ಸಂತಸ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಿರ್ಮಾಪಕ ಕ. ಮಂಜು, ಸಿಎಂ ಯಡಿಯೂರಪ್ಪ ಅವರೇ ನಿಜವಾದ ರಾಜಾಹುಲಿ ಎಂದು ಹೇಳಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ನಿರ್ಮಾಪಕ ಕೆ.ಮಂಜು ಧನ್ಯವಾದ ತಿಳಿಸಿದ್ದಾರೆ. ನಿರ್ಮಾಪಕರ ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್ ಕೂಡ ಮುಖ್ಯಮಂತ್ರಿಗೆ ಧನ್ಯವಾದ ಹೇಳಿದ್ದಾರೆ.

3 ದಿನಗಳ ಕಾಲ ಥಿಯೇಟರ್​ ಫುಲ್​ ಭರ್ತಿಗೆ ಅವಕಾಶ ನೀಡಿರುವ ಕಾರಣ ರಾಜ್ಯ ಸರ್ಕಾರ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ನಟ ಪುನೀತ್ ಅಭಿನಂದನೆ ಸಲ್ಲಿಸಿದ್ದಾರೆ. ಜೊತೆಗೆ, ಕೊವಿಡ್ ನಿಯಮ ಪಾಲಿಸಿ ಸಿನಿಮಾ ವೀಕ್ಷಿಸುವಂತೆ ಸಲಹೆ ಸಿನಿಪ್ರಿಯರಿಗೆ ಸಲಹೆ ನೀಡಿದ್ದಾರೆ.

ಈಗಾಗಲೇ ‘ಯುವರತ್ನ’ ಟಿಕೆಟ್​ ಬುಕ್​ ಆಗಿರುವ ಹಿನ್ನೆಲೆಯಲ್ಲಿ, ಥಿಯೇಟರ್​ ಭರ್ತಿಗೆ ಚಿತ್ರ ಪೇಮಿಗಳು ಅವಕಾಶ ಕೇಳಿದ್ದರು. ನಟ ಪುನೀತ್ ಸೇರಿದಂತೆ, ಶಿವರಾಜ್​ಕುಮಾರ್, ಸುದೀಪ್, ಯಶ್ ಹಾಗೂ ಇತರ ನಟರು ಕೂಡ ಒತ್ತಾಯಿಸಿದ್ದರು. ಸಿಎಂ ಬಿಎಸ್​ವೈ ಭೇಟಿಯಾಗಿ ನಟ ಪುನೀತ್ ಮನವಿ ಸಲ್ಲಿಸಿದ್ದರು. ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರು, ನಟ ಪುನೀತ್ ಅಭಿಮಾನಿಗಳು ಕೂಡ ಮನವಿ ಮಾಡಿದ್ದರು. ತಮ್ಮ ಮನವಿಗೆ ಸ್ಪಂದಿಸಿ ಅವಕಾಶ ನೀಡಿದ್ದಕ್ಕೆ ಸಿನಿರಂಗ ಫುಲ್​ಖುಷ್​ ಆಗಿದೆ.

ಇದನ್ನೂ ಓದಿ: ಯುವರತ್ನನಿಗೆ ರಿಲೀಫ್: ಏಪ್ರಿಲ್ 7ರವರೆಗೂ ಥಿಯೇಟರ್​ ಹೌಸ್ ಫುಲ್​ಗೆ ಅವಕಾಶ

ಇದನ್ನೂ ಓದಿ: ಯುವರತ್ನ ಚಿತ್ರಕ್ಕೆ ತೊಂದರೆ: ಮೌನ ಮುರಿದ ಯಶ್​, ಶಿವರಾಜ್​ಕುಮಾರ್​!

Published On - 9:53 pm, Sat, 3 April 21

ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ