AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಿಎಂ ಯಡಿಯೂರಪ್ಪ ನಿಜವಾದ ರಾಜಾಹುಲಿ’: ಹೌಸ್​ಫುಲ್ ಅವಕಾಶ ನೀಡಿದ್ದಕ್ಕೆ ಕೇಳಿಬಂತು ಹೊಗಳಿಕೆ

ಸ್ಯಾಂಡಲ್​ವುಡ್ ಮನವಿಗೆ ಸ್ಪಂದಿಸಿದ ರಾಜ್ಯ ಸರ್ಕಾರಕ್ಕೆ ಸಿನಿರಂಗದವರಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ನಟ ಪುನೀತ್ ರಾಜ್​ಕುಮಾರ್, ಪುನೀತ್ ಅಭಿಮಾನಿಗಳು ಹಾಗೂ ಸಿನಿಪ್ರಿಯರು ಸಂತಸ ವ್ಯಕ್ತಪಡಿಸಿದ್ದಾರೆ.

‘ಸಿಎಂ ಯಡಿಯೂರಪ್ಪ ನಿಜವಾದ ರಾಜಾಹುಲಿ’: ಹೌಸ್​ಫುಲ್ ಅವಕಾಶ ನೀಡಿದ್ದಕ್ಕೆ ಕೇಳಿಬಂತು ಹೊಗಳಿಕೆ
ಸಿಎಂ ಯಡಿಯೂರಪ್ಪ
TV9 Web
| Edited By: |

Updated on:Apr 05, 2022 | 12:53 PM

Share

ಬೆಂಗಳೂರು: ಸಿನಿಮಾ ಹಾಲ್​ಗಳಲ್ಲಿ ಶೇ. 100ರಷ್ಟು ಸೀಟು ಭರ್ತಿಗೆ ಅವಕಾಶ ನೀಡಬೇಕು ಎಂಬ ಸ್ಯಾಂಡಲ್​ವುಡ್​ ಮನವಿಗೆ ರಾಜ್ಯ ಸರ್ಕಾರ ಕೊನೆಗೂ ಸಕಾರಾತ್ಮಕವಾಗಿ ಸ್ಪಂದಿಸಿದೆ. ಏಪ್ರಿಲ್ 7ರ ವರೆಗೆ, ಅಂದರೆ ಇನ್ನು ಮೂರು ದಿನಗಳ ಕಾಲ ಥಿಯೇಟರ್ ಹೌಸ್​ಫುಲ್​ಗೆ ಅವಕಾಶ ನೀಡಿ ಆದೇಶ ಹೊರಡಿಸಿದೆ.

ಸ್ಯಾಂಡಲ್​ವುಡ್ ಮನವಿಗೆ ಸ್ಪಂದಿಸಿದ ರಾಜ್ಯ ಸರ್ಕಾರಕ್ಕೆ ಸಿನಿರಂಗದವರಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ನಟ ಪುನೀತ್ ರಾಜ್​ಕುಮಾರ್, ಪುನೀತ್ ಅಭಿಮಾನಿಗಳು ಹಾಗೂ ಸಿನಿಪ್ರಿಯರು ಸಂತಸ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಿರ್ಮಾಪಕ ಕ. ಮಂಜು, ಸಿಎಂ ಯಡಿಯೂರಪ್ಪ ಅವರೇ ನಿಜವಾದ ರಾಜಾಹುಲಿ ಎಂದು ಹೇಳಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ನಿರ್ಮಾಪಕ ಕೆ.ಮಂಜು ಧನ್ಯವಾದ ತಿಳಿಸಿದ್ದಾರೆ. ನಿರ್ಮಾಪಕರ ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್ ಕೂಡ ಮುಖ್ಯಮಂತ್ರಿಗೆ ಧನ್ಯವಾದ ಹೇಳಿದ್ದಾರೆ.

3 ದಿನಗಳ ಕಾಲ ಥಿಯೇಟರ್​ ಫುಲ್​ ಭರ್ತಿಗೆ ಅವಕಾಶ ನೀಡಿರುವ ಕಾರಣ ರಾಜ್ಯ ಸರ್ಕಾರ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ನಟ ಪುನೀತ್ ಅಭಿನಂದನೆ ಸಲ್ಲಿಸಿದ್ದಾರೆ. ಜೊತೆಗೆ, ಕೊವಿಡ್ ನಿಯಮ ಪಾಲಿಸಿ ಸಿನಿಮಾ ವೀಕ್ಷಿಸುವಂತೆ ಸಲಹೆ ಸಿನಿಪ್ರಿಯರಿಗೆ ಸಲಹೆ ನೀಡಿದ್ದಾರೆ.

ಈಗಾಗಲೇ ‘ಯುವರತ್ನ’ ಟಿಕೆಟ್​ ಬುಕ್​ ಆಗಿರುವ ಹಿನ್ನೆಲೆಯಲ್ಲಿ, ಥಿಯೇಟರ್​ ಭರ್ತಿಗೆ ಚಿತ್ರ ಪೇಮಿಗಳು ಅವಕಾಶ ಕೇಳಿದ್ದರು. ನಟ ಪುನೀತ್ ಸೇರಿದಂತೆ, ಶಿವರಾಜ್​ಕುಮಾರ್, ಸುದೀಪ್, ಯಶ್ ಹಾಗೂ ಇತರ ನಟರು ಕೂಡ ಒತ್ತಾಯಿಸಿದ್ದರು. ಸಿಎಂ ಬಿಎಸ್​ವೈ ಭೇಟಿಯಾಗಿ ನಟ ಪುನೀತ್ ಮನವಿ ಸಲ್ಲಿಸಿದ್ದರು. ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರು, ನಟ ಪುನೀತ್ ಅಭಿಮಾನಿಗಳು ಕೂಡ ಮನವಿ ಮಾಡಿದ್ದರು. ತಮ್ಮ ಮನವಿಗೆ ಸ್ಪಂದಿಸಿ ಅವಕಾಶ ನೀಡಿದ್ದಕ್ಕೆ ಸಿನಿರಂಗ ಫುಲ್​ಖುಷ್​ ಆಗಿದೆ.

ಇದನ್ನೂ ಓದಿ: ಯುವರತ್ನನಿಗೆ ರಿಲೀಫ್: ಏಪ್ರಿಲ್ 7ರವರೆಗೂ ಥಿಯೇಟರ್​ ಹೌಸ್ ಫುಲ್​ಗೆ ಅವಕಾಶ

ಇದನ್ನೂ ಓದಿ: ಯುವರತ್ನ ಚಿತ್ರಕ್ಕೆ ತೊಂದರೆ: ಮೌನ ಮುರಿದ ಯಶ್​, ಶಿವರಾಜ್​ಕುಮಾರ್​!

Published On - 9:53 pm, Sat, 3 April 21

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!