AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಿಎಂ ಯಡಿಯೂರಪ್ಪ ನಿಜವಾದ ರಾಜಾಹುಲಿ’: ಹೌಸ್​ಫುಲ್ ಅವಕಾಶ ನೀಡಿದ್ದಕ್ಕೆ ಕೇಳಿಬಂತು ಹೊಗಳಿಕೆ

ಸ್ಯಾಂಡಲ್​ವುಡ್ ಮನವಿಗೆ ಸ್ಪಂದಿಸಿದ ರಾಜ್ಯ ಸರ್ಕಾರಕ್ಕೆ ಸಿನಿರಂಗದವರಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ನಟ ಪುನೀತ್ ರಾಜ್​ಕುಮಾರ್, ಪುನೀತ್ ಅಭಿಮಾನಿಗಳು ಹಾಗೂ ಸಿನಿಪ್ರಿಯರು ಸಂತಸ ವ್ಯಕ್ತಪಡಿಸಿದ್ದಾರೆ.

‘ಸಿಎಂ ಯಡಿಯೂರಪ್ಪ ನಿಜವಾದ ರಾಜಾಹುಲಿ’: ಹೌಸ್​ಫುಲ್ ಅವಕಾಶ ನೀಡಿದ್ದಕ್ಕೆ ಕೇಳಿಬಂತು ಹೊಗಳಿಕೆ
ಸಿಎಂ ಯಡಿಯೂರಪ್ಪ
Follow us
TV9 Web
| Updated By: ganapathi bhat

Updated on:Apr 05, 2022 | 12:53 PM

ಬೆಂಗಳೂರು: ಸಿನಿಮಾ ಹಾಲ್​ಗಳಲ್ಲಿ ಶೇ. 100ರಷ್ಟು ಸೀಟು ಭರ್ತಿಗೆ ಅವಕಾಶ ನೀಡಬೇಕು ಎಂಬ ಸ್ಯಾಂಡಲ್​ವುಡ್​ ಮನವಿಗೆ ರಾಜ್ಯ ಸರ್ಕಾರ ಕೊನೆಗೂ ಸಕಾರಾತ್ಮಕವಾಗಿ ಸ್ಪಂದಿಸಿದೆ. ಏಪ್ರಿಲ್ 7ರ ವರೆಗೆ, ಅಂದರೆ ಇನ್ನು ಮೂರು ದಿನಗಳ ಕಾಲ ಥಿಯೇಟರ್ ಹೌಸ್​ಫುಲ್​ಗೆ ಅವಕಾಶ ನೀಡಿ ಆದೇಶ ಹೊರಡಿಸಿದೆ.

ಸ್ಯಾಂಡಲ್​ವುಡ್ ಮನವಿಗೆ ಸ್ಪಂದಿಸಿದ ರಾಜ್ಯ ಸರ್ಕಾರಕ್ಕೆ ಸಿನಿರಂಗದವರಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ನಟ ಪುನೀತ್ ರಾಜ್​ಕುಮಾರ್, ಪುನೀತ್ ಅಭಿಮಾನಿಗಳು ಹಾಗೂ ಸಿನಿಪ್ರಿಯರು ಸಂತಸ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಿರ್ಮಾಪಕ ಕ. ಮಂಜು, ಸಿಎಂ ಯಡಿಯೂರಪ್ಪ ಅವರೇ ನಿಜವಾದ ರಾಜಾಹುಲಿ ಎಂದು ಹೇಳಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ನಿರ್ಮಾಪಕ ಕೆ.ಮಂಜು ಧನ್ಯವಾದ ತಿಳಿಸಿದ್ದಾರೆ. ನಿರ್ಮಾಪಕರ ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್ ಕೂಡ ಮುಖ್ಯಮಂತ್ರಿಗೆ ಧನ್ಯವಾದ ಹೇಳಿದ್ದಾರೆ.

3 ದಿನಗಳ ಕಾಲ ಥಿಯೇಟರ್​ ಫುಲ್​ ಭರ್ತಿಗೆ ಅವಕಾಶ ನೀಡಿರುವ ಕಾರಣ ರಾಜ್ಯ ಸರ್ಕಾರ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ನಟ ಪುನೀತ್ ಅಭಿನಂದನೆ ಸಲ್ಲಿಸಿದ್ದಾರೆ. ಜೊತೆಗೆ, ಕೊವಿಡ್ ನಿಯಮ ಪಾಲಿಸಿ ಸಿನಿಮಾ ವೀಕ್ಷಿಸುವಂತೆ ಸಲಹೆ ಸಿನಿಪ್ರಿಯರಿಗೆ ಸಲಹೆ ನೀಡಿದ್ದಾರೆ.

ಈಗಾಗಲೇ ‘ಯುವರತ್ನ’ ಟಿಕೆಟ್​ ಬುಕ್​ ಆಗಿರುವ ಹಿನ್ನೆಲೆಯಲ್ಲಿ, ಥಿಯೇಟರ್​ ಭರ್ತಿಗೆ ಚಿತ್ರ ಪೇಮಿಗಳು ಅವಕಾಶ ಕೇಳಿದ್ದರು. ನಟ ಪುನೀತ್ ಸೇರಿದಂತೆ, ಶಿವರಾಜ್​ಕುಮಾರ್, ಸುದೀಪ್, ಯಶ್ ಹಾಗೂ ಇತರ ನಟರು ಕೂಡ ಒತ್ತಾಯಿಸಿದ್ದರು. ಸಿಎಂ ಬಿಎಸ್​ವೈ ಭೇಟಿಯಾಗಿ ನಟ ಪುನೀತ್ ಮನವಿ ಸಲ್ಲಿಸಿದ್ದರು. ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರು, ನಟ ಪುನೀತ್ ಅಭಿಮಾನಿಗಳು ಕೂಡ ಮನವಿ ಮಾಡಿದ್ದರು. ತಮ್ಮ ಮನವಿಗೆ ಸ್ಪಂದಿಸಿ ಅವಕಾಶ ನೀಡಿದ್ದಕ್ಕೆ ಸಿನಿರಂಗ ಫುಲ್​ಖುಷ್​ ಆಗಿದೆ.

ಇದನ್ನೂ ಓದಿ: ಯುವರತ್ನನಿಗೆ ರಿಲೀಫ್: ಏಪ್ರಿಲ್ 7ರವರೆಗೂ ಥಿಯೇಟರ್​ ಹೌಸ್ ಫುಲ್​ಗೆ ಅವಕಾಶ

ಇದನ್ನೂ ಓದಿ: ಯುವರತ್ನ ಚಿತ್ರಕ್ಕೆ ತೊಂದರೆ: ಮೌನ ಮುರಿದ ಯಶ್​, ಶಿವರಾಜ್​ಕುಮಾರ್​!

Published On - 9:53 pm, Sat, 3 April 21

ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ಕೆಆರ್​ಎಸ್​ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಯುವಕರ ಹುಚ್ಚಾಟ: ವಿಡಿಯೋ ವೈರಲ್
ಕೆಆರ್​ಎಸ್​ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಯುವಕರ ಹುಚ್ಚಾಟ: ವಿಡಿಯೋ ವೈರಲ್
ಬೆಣ್ಣೆಹಳ್ಳದಲ್ಲಿ ಪ್ರತಿವರ್ಷ ಪ್ರವಾಹದಂಥ ಸ್ಥಿತಿಯಿಂದ ಮೂರು ಬೆಳೆ ನಷ್ಟ
ಬೆಣ್ಣೆಹಳ್ಳದಲ್ಲಿ ಪ್ರತಿವರ್ಷ ಪ್ರವಾಹದಂಥ ಸ್ಥಿತಿಯಿಂದ ಮೂರು ಬೆಳೆ ನಷ್ಟ
ವಿಮಾನ ಬಿದ್ದ ರಭಸಕ್ಕೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ಹೇಗಾಗಿದೆ ನೋಡಿ
ವಿಮಾನ ಬಿದ್ದ ರಭಸಕ್ಕೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ಹೇಗಾಗಿದೆ ನೋಡಿ
ಶನಿವಾರದಂದು ಶ್ರೀ ವೆಂಕಟೇಶ್ವರನ ಆರಾಧನೆಯ ಮಹತ್ವ ತಿಳಿಯಿರಿ
ಶನಿವಾರದಂದು ಶ್ರೀ ವೆಂಕಟೇಶ್ವರನ ಆರಾಧನೆಯ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ವೈರಾಗ್ಯದ ಭಾವನೆಗಳು ಕಾಡಬಹುದು
Daily Horoscope: ಈ ರಾಶಿಯವರಿಗೆ ವೈರಾಗ್ಯದ ಭಾವನೆಗಳು ಕಾಡಬಹುದು
ಸೆಲೆಬ್ರಿಟಿಗಳಿಗೆ ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಇಷ್ಟ ಆಯ್ತಾ?
ಸೆಲೆಬ್ರಿಟಿಗಳಿಗೆ ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಇಷ್ಟ ಆಯ್ತಾ?
ಗರ್ಭಾವಸ್ಥೆಯ ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದ ದುಷ್ಕರ್ಮಿಗಳು
ಗರ್ಭಾವಸ್ಥೆಯ ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದ ದುಷ್ಕರ್ಮಿಗಳು