AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಪ್ರೋಮೋ ರಿಲೀಸ್; ಕಿಚ್ಚ ಸುದೀಪ್​ ಇರ್ತಾರಾ, ಇರಲ್ವಾ? ಸ್ಪಷ್ಟಪಡಿಸಿದ ಕಲರ್ಸ್

Bigg Boss Kannada Season 11: ಕಿಚ್ಚ ಸುದೀಪ್ ಅವರಿಗೆ ಇಂದು (ಸೆಪ್ಟೆಂಬರ್ 2) ಜನ್ಮದಿನ. ಅದಕ್ಕೂ ಮೊದಲು ಕಲರ್ಸ್ ಕನ್ನಡದ ಕಡೆಯಿಂದ ಹೊಸ ಪ್ರೋಮೋ ಒಂದು ರಿಲೀಸ್ ಆಗಿದೆ. ಈ ಪ್ರೋಮೋದಲ್ಲಿ ಸುದೀಪ್ ಇರುತ್ತಾರೋ ಅಥವಾ ಇಲ್ಲವೋ ಎನ್ನುವ ಬಗ್ಗೆ ಸ್ಪಷ್ಟನೆ ನೀಡಲಾಗಿದೆ.

ಬಿಗ್ ಬಾಸ್ ಪ್ರೋಮೋ ರಿಲೀಸ್; ಕಿಚ್ಚ ಸುದೀಪ್​ ಇರ್ತಾರಾ, ಇರಲ್ವಾ? ಸ್ಪಷ್ಟಪಡಿಸಿದ ಕಲರ್ಸ್
ಸುದೀಪ್
ರಾಜೇಶ್ ದುಗ್ಗುಮನೆ
|

Updated on:Sep 02, 2024 | 7:12 AM

Share

ಕಿಚ್ಚ ಸುದೀಪ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಇರ್ತಾರಾ ಅಥವಾ ಇಲ್ಲವಾ ಎನ್ನುವುದು ಯಕ್ಷ ಪ್ರಶ್ನೆಯಾಗಿತ್ತು. ಕೊನೆಗೂ ಇದಕ್ಕೆ ಉತ್ತರ ಸಿಕ್ಕಿದೆ. ಕಲರ್ಸ್ ಕನ್ನಡ ವಾಹಿನಿ ಬಿಗ್ ಬಾಸ್ ಪ್ರೋಮೋ ರಿಲೀಸ್ ಮಾಡಿದೆ. ಹಾಗಂತ ಈ ಪ್ರೋಮೋದಲ್ಲಿ ಸುದೀಪ್ ಅವರ ಎಂಟ್ರಿ ಆಗಿಲ್ಲ. ಆದಾಗ್ಯೂ ಸುದೀಪ್ ಅವರು ಇರುತ್ತಾರೋ ಅಥವಾ ಇಲ್ಲವೋ ಎನ್ನುವ ವಿಚಾರಕ್ಕೆ ಸ್ಪಷ್ಟನೆ ಸಿಕ್ಕಂತೆ ಆಗಿದೆ. ಆ ಬಗ್ಗೆ ಇಲ್ಲಿದೆ ವಿವರ.

‘ಬಿಗ್ ಬಾಸ್ ಕನ್ನಡ ಸೀಸನ್ 10’ ಯಶಸ್ಸು ಕಂಡಿತ್ತು. ನಿರೂಪಕ ಸುದೀಪ್ ಅವರ ಸಿನಿಮಾ ಕೆಲಸಗಳಿಗೆ ಈ ಶೋ ಅಡಚಣೆ ಉಂಟುಮಾಡಿತ್ತು. ಎಲ್ಲೇ ಇದ್ದರೂ ಬಿಗ್ ಬಾಸ್​ಗಾಗಿ ಅವರು ಬೆಂಗಳೂರಿಗೆ ಬರಬೇಕಿತ್ತು. ಈಗ ಅವರು 2-3 ಸಿನಿಮಾಗಳನ್ನು ಒಟ್ಟೊಟ್ಟಿಗೆ ಶೂಟ್ ಮಾಡುವ ಆಲೋಚನೆಯಲ್ಲಿ ಇದ್ದಾರೆ. ಹೀಗಾಗಿ, ಅವರು ಬಿಗ್ ಬಾಸ್​ನಿಂದ ಹೊರಕ್ಕೆ ನಡೆಯಲಿದ್ದಾರೆ ಎನ್ನಲಾಗಿತ್ತು. ಆದರೆ, ಆ ರೀತಿ ಆಗಿಲ್ಲ. ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ ನಡೆಸಿಕೊಡಲಿದ್ದಾರೆ.

‘ಬಿಗ್ ಬಾಸ್’ ಪ್ರೋಮೋದಲ್ಲಿ ಲೋಗೋ ರಿವೀಲ್ ಮಾಡಲಾಗಿದೆ ಅಷ್ಟೇ. ಕ್ಯಾಪ್ಶನ್​ನಲ್ಲಿ ‘Kichcha Sudeep’ ಹ್ಯಾಶ್​ಟ್ಯಾಗ್ ಹಾಕಲಾಗಿದೆ. ಇದರಿಂದ ಸುದೀಪ್ ಅವರು ಇರೋದು ಪಕ್ಕಾ ಆಗಿದೆ. ಈ ವಿಡಿಯೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಕ್ಕಿದೆ.

ಇದನ್ನೂ ಓದಿ: ಕಿಚ್ಚ ಸುದೀಪ್​ ಹುಟ್ಟುಹಬ್ಬದ ಸೆಲೆಬ್ರೇಷನ್​ಗೆ ಭರ್ಜರಿಯಾಗಿ ನಡೆದಿದೆ ಫ್ಯಾನ್ಸ್ ತಯಾರಿ

ಸುದೀಪ್ ಅವರಿಗೆ ಇಂದು (ಸೆಪ್ಟೆಂಬರ್ 2) ಜನ್ಮದಿನ. ಈ ವಿಶೇಷ ಕಾರಣಕ್ಕೆ ‘ಬಿಗ್ ಬಾಸ್’ ಪ್ರೋಮೋ ರಿಲೀಸ್ ಮಾಡಿರಬಹುದು ಎಂದು ಫ್ಯಾನ್ಸ್ ಊಹಿಸಿದ್ದಾರೆ. ಈಗಾಗಲೇ ಹೈದರಾಬಾದ್​ನಲ್ಲಿ ಸುದೀಪ್ ಇರುವ ಬಿಗ್ ಬಾಸ್​ನ ಪ್ರೋಮೋಶೂಟ್ ಪೂರ್ಣಗೊಂಡಿದೆಯಂತೆ. ಅದನ್ನು ಯಾವಾಗ ರಿಲೀಸ್ ಮಾಡಲಾಗುತ್ತದೆ ಎಂದು ಫ್ಯಾನ್ಸ್ ಕಾದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:58 am, Mon, 2 September 24

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ