AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ಸಿನಿಮಾಗೆ ‘ಎನ್​ಟಿಆರ್​’ ಶೀರ್ಷಿಕೆ; ಈ ಚಿತ್ರಕ್ಕೆ ಹಾಸ್ಯನಟ ಕೆಂಪೇಗೌಡ ಹೀರೋ

ಶೂಟಿಂಗ್​ ಆರಂಭ ಆಗುವುದಕ್ಕಿಂತ ಮುನ್ನವೇ ಈ ಸಿನಿಮಾದ ಆಡಿಯೋ ಹಕ್ಕುಗಳು ‘ಆನಂದ್​ ಆಡಿಯೋ’ ಸಂಸ್ಥೆಗೆ ಮಾರಾಟ ಆಗಿವೆ. ಆ ಬಗ್ಗೆ ಚಿತ್ರತಂಡಕ್ಕೆ ಹೆಚ್ಚು ಖುಷಿ ಇದೆ.

ಕನ್ನಡ ಸಿನಿಮಾಗೆ ‘ಎನ್​ಟಿಆರ್​’ ಶೀರ್ಷಿಕೆ; ಈ ಚಿತ್ರಕ್ಕೆ ಹಾಸ್ಯನಟ ಕೆಂಪೇಗೌಡ ಹೀರೋ
‘ಎನ್​ಟಿಆರ್​’ ಕನ್ನಡ ಸಿನಿಮಾ ಶೀರ್ಷಿಕೆ ಅನಾವರಣ ಮಾಡಿ ಶುಭಕೋರಿದ ಪ್ರಜ್ವಲ್​ ದೇವರಾಜ್​
Follow us
TV9 Web
| Updated By: ಮದನ್​ ಕುಮಾರ್​

Updated on: Dec 16, 2021 | 4:24 PM

ಅನೇಕ ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಹಾಸ್ಯನಟರಾಗಿ ಗುರುತಿಸಿಕೊಂಡಿರುವ ಕೆಂಪೇಗೌಡ  (Kempegowda) ಅವರು ಹೀರೋ ಆಗಿ ಅಭಿನಯಿಸುತ್ತಿರುವ ಹೊಸ ಚಿತ್ರದ ಶೀರ್ಷಿಕೆ ಅನಾವರಣ ಆಗಿದೆ. ಈ ಚಿತ್ರಕ್ಕೆ ‘ಎನ್​ಟಿಆರ್​’ (NTR) ಎಂದು ಹೆಸರಿಡಲಾಗಿದೆ. ಟೈಟಲ್​ ಮತ್ತು ಮೋಷನ್​ ಪೋಸ್ಟರ್​ ಬಿಡುಗಡೆ​ ಕಾರ್ಯಕ್ರಮಕ್ಕೆ ಖ್ಯಾತ ನಟ ಪ್ರಜ್ವಲ್​ ದೇವರಾಜ್​ (Prajwal Devaraj) ಅವರು ಅತಿಥಿಯಾಗಿ ಆಗಮಿಸಿದ್ದರು. ಅಷ್ಟಕ್ಕೂ ಎನ್​ಟಿಆರ್​ ಎಂದರೆ ಏನು? ಈ ಚಿತ್ರಕ್ಕೂ, ತೆಲುಗಿನ ನಟ ಎನ್​ಟಿಆರ್​ ಅವರಿಗೂ ಏನಾದರೂ ಸಂಬಂಧ ಇದೆಯಾ? ಯಾವುದೇ ಸಂಬಂಧ ಇಲ್ಲ. ಇಲ್ಲಿ ಎನ್​ಟಿಆರ್​ ಎಂದರೆ, ನಮ್ಮ ತಾಲೂಕಿನ ರೂಲರ್​. ಅದನ್ನೇ ಶಾರ್ಟ್​ ಆಗಿ ಎನ್​ಟಿಆರ್​ ಎಂದು ಶೀರ್ಷಿಕೆ ಮಾಡಲಾಗಿದೆ. ಭರತ್ ಗೌಡ ಅವರು ನಿರ್ಮಾಣ ಮಾಡುತ್ತಿರುವ ಈ ಚಿತ್ರಕ್ಕೆ ಜಾಕಿ ಆ್ಯಕ್ಷನ್​-ಕಟ್​ ಹೇಳಲಿದ್ದಾರೆ.

ಶೀರ್ಷಿಕೆ ಅನಾವರಣದ ಬಳಿಕ ಪ್ರಜ್ವಲ್​ ದೇವರಾಜ್​ ಅವರು ಚಿತ್ರತಂಡಕ್ಕೆ ಶುಭ ಕೋರಿದರು. ‘ಕೆಂಪೇಗೌಡ ಅವರ ಜೊತೆ ನಾನು ಸಾಕಷ್ಟು ಸಿನಿಮಾಗಳಲ್ಲಿ ಅಭಿನಯಿಸಿದ್ದೇನೆ. ಅವರು ಈಗ ಎನ್​ಟಿಆರ್​ ಚಿತ್ರದ ಮೂಲಕ ಹೀರೋ ಆಗುತ್ತಿದ್ದಾರೆ. ಕೆಂಪೇಗೌಡ ಅವರು ದೊಡ್ಡ ನಟರೊಬ್ಬರ ಹೆಸರಿನ ಚಿತ್ರದಲ್ಲಿ ಅಭಿನಯಿಸುತ್ತಿದ್ದು, ಅವರಷ್ಟೇ ಕೀರ್ತಿಶಾಲಿಯಾಗಲಿ’ ಎಂದು ಪ್ರಜ್ವಲ್ ದೇವರಾಜ್​ ಹಾರೈಸಿದರು. ‘ಮಾಗಡಿ ಕೆಂಪೇಗೌಡರು ಬೆಂಗಳೂರಿನ ನಿರ್ಮಾತೃ. ಹಾಸ್ಯ ನಟ ಕೆಂಪೇಗೌಡ ಕೂಡ ಅವರಷ್ಟೇ ಹೆಸರು ಮಾಡಲಿ’ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಸಾ ರಾ ಗೋವಿಂದು ಶುಭ ಕೋರಿದರು.

‘ಶೋಕಿವಾಲ’ ಸಿನಿಮಾವನ್ನು ನಿರ್ದೇಶನ ಮಾಡಿರುವ ಜಾಕಿ ಅವರಿಗೆ ‘ಎನ್​ಟಿಆರ್​’ ಎರಡನೇ ಸಿನಿಮಾ. ‘ಶೋಕಿವಾಲ’ ಸಿನಿಮಾ ಸದ್ಯಕ್ಕೆ ಬಿಡುಗಡೆಯ ಹಂತದಲ್ಲಿದೆ. ಆ ಚಿತ್ರ ತೆರೆಕಾಣುವುದಕ್ಕೂ ಮುನ್ನವೇ ಈ ಅವಕಾಶ ನೀಡಿದ್ದಕ್ಕಾಗಿ ನಿರ್ಮಾಪಕರಿಗೆ ಜಾಕಿ ಅವರು ಧನ್ಯವಾದ ಅರ್ಪಿಸಿದ್ದಾರೆ. ‘ಇದೊಂದು ಪಕ್ಕಾ ಹಳ್ಳಿ ಸೊಗಡಿನ ಮನರಂಜನಾ ಸಿನಿಮಾ. ಹಳ್ಳಿಯಲ್ಲಿ ನಡೆಯುವ ಜಾತ್ರೆ ಸುತ್ತಮುತ್ತಲಿನ ಕಥೆಯಾಗಿರುತ್ತದೆ. ಫೆಬ್ರವರಿ ಮೊದಲ ವಾರದಲ್ಲಿ ಚಿತ್ರೀಕರಣ ಆರಂಭ ಮಾಡುತ್ತೇನೆ’ ಎಂದಿದ್ದಾರೆ ನಿರ್ದೇಶಕರು.

ಶೂಟಿಂಗ್​ ಆರಂಭ ಆಗುವುದಕ್ಕಿಂತ ಮುನ್ನವೇ ಈ ಸಿನಿಮಾದ ಆಡಿಯೋ ಹಕ್ಕುಗಳು ‘ಆನಂದ್​ ಆಡಿಯೋ’ ಸಂಸ್ಥೆಗೆ ಮಾರಾಟ ಆಗಿವೆ. ಆ ಬಗ್ಗೆ ಚಿತ್ರತಂಡಕ್ಕೆ ಹೆಚ್ಚು ಖುಷಿ ಇದೆ. ‘ಜನಮನ ಗೆದ್ದಿರುವ ‘ಅಧ್ಯಕ್ಷ’, ‘ಕಿರಾತಕ’ ಚಿತ್ರಗಳ ರೀತಿ ನಮ್ಮ ಸಿನಿಮಾದಲ್ಲೂ ಹಳ್ಳಿಯ ಕಥೆ ಇದೆ. ಚಿತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಳ್ಳುತ್ತಿದ್ದೇನೆ. ಸಾಧುಕೋಕಿಲ, ರವಿಶಂಕರ್, ತಬಲನಾಣಿ, ರಾಜೇಶ್ ನಟರಂಗ ಮುಂತಾದ ಕಲಾವಿದರು ನಮ್ಮ ಸಿನಿಮಾದಲ್ಲಿ ನಟಿಸಲಿದ್ದಾರೆ. ನಾಯಕಿ ಯಾರೆಂಬುದು ಶೀಘ್ರದಲ್ಲೇ ತಿಳಿಸುತ್ತೇನೆ’ ಎಂದಿದ್ದಾರೆ ನಟ ಕೆಂಪೇಗೌಡ.

ಗೋಸಾಯಿ ಮಠ ಶ್ರೀವೇದಾಂತಾಚಾರ್ಯ ಮಂಜುನಾಥ ಸ್ವಾಮಿಗಳು, ‘ಈ ಚಿತ್ರತಂಡಕ್ಕೆ ನಟರಾಜನ ಅನುಗ್ರಹವಾಗಲಿ’ ಎಂದು ಆಶೀರ್ವದಿಸಿದರು.

ಇದನ್ನೂ ಓದಿ:

‘ಮಾಫಿಯಾ’ ಚಿತ್ರಕ್ಕಾಗಿ ಗೆಟಪ್​ ಬದಲಿಸಿ ಕ್ಯಾನ್ಸರ್​ ಪೀಡಿತರಿಗೆ ಕೂದಲು ದಾನ ಮಾಡಿದ ಪ್ರಜ್ವಲ್​ ದೇವರಾಜ್​

ಪುನೀತ್​ ರಾಜ್​ಕುಮಾರ್​ಗಾಗಿ ಫ್ಯಾನ್ಸ್​ ನಿರ್ಮಿಸಿದ ಮಿನಿ ಸ್ಮಾರಕ; ಹೊಸೂರು ಗ್ರಾಮಸ್ಥರ ಅಭಿಮಾನದ ಕಾರ್ಯ

ಡಿಸ್​ಪ್ಲೇ ಬೋರ್ಡಲ್ಲಿ ಕನ್ನಡಿಗರನ್ನು ಅವಹೇಳನ ಮಾಡುವ ಪದ ಬಳಕೆ
ಡಿಸ್​ಪ್ಲೇ ಬೋರ್ಡಲ್ಲಿ ಕನ್ನಡಿಗರನ್ನು ಅವಹೇಳನ ಮಾಡುವ ಪದ ಬಳಕೆ
ಹೆಂಡತಿಯೊಂದಿಗೆ ಕಾರಲ್ಲಿ ಪ್ರಯಾಣಿಸುತ್ತಿದ್ದ ಸೇಲ್ಸ್ ಮ್ಯಾನೇಜರ್
ಹೆಂಡತಿಯೊಂದಿಗೆ ಕಾರಲ್ಲಿ ಪ್ರಯಾಣಿಸುತ್ತಿದ್ದ ಸೇಲ್ಸ್ ಮ್ಯಾನೇಜರ್
ಗುರು ಸಂಚಾರದಿಂದ ವೃಶ್ಚಿಕ ರಾಶಿಯವರಲ್ಲಿ ಭಯದ ವಾತಾವಾರಣ ನಿರ್ಮಾಣವಾಗಲಿದೆ!
ಗುರು ಸಂಚಾರದಿಂದ ವೃಶ್ಚಿಕ ರಾಶಿಯವರಲ್ಲಿ ಭಯದ ವಾತಾವಾರಣ ನಿರ್ಮಾಣವಾಗಲಿದೆ!
ತುಲಾ ರಾಶಿಗೆ ಭಾಗ್ಯ ಸ್ಥಾನದಲ್ಲಿ ಗುರು ಸಂಚಾರ; ಅದೃಷ್ಟವೋ ಅದೃಷ್ಟ
ತುಲಾ ರಾಶಿಗೆ ಭಾಗ್ಯ ಸ್ಥಾನದಲ್ಲಿ ಗುರು ಸಂಚಾರ; ಅದೃಷ್ಟವೋ ಅದೃಷ್ಟ
2025ರ ಗುರು ಸಂಚಾರ ಕನ್ಯಾ ರಾಶಿಯವರ ಮೇಲೆ ಹೇಗೆ ಪ್ರಭಾವ ಬೀರಲಿದೆ?
2025ರ ಗುರು ಸಂಚಾರ ಕನ್ಯಾ ರಾಶಿಯವರ ಮೇಲೆ ಹೇಗೆ ಪ್ರಭಾವ ಬೀರಲಿದೆ?
ದಲಿತರಿಗೆ ಮೀಸಲಾತಿ ಸಿಕ್ಕಿದ್ದು ಡಾ ಅಂಬೇಡ್ಕರ್ ಪ್ರಯತ್ನಗಳಿಂದ: ಯತ್ನಾಳ್
ದಲಿತರಿಗೆ ಮೀಸಲಾತಿ ಸಿಕ್ಕಿದ್ದು ಡಾ ಅಂಬೇಡ್ಕರ್ ಪ್ರಯತ್ನಗಳಿಂದ: ಯತ್ನಾಳ್
ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ