AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕೀಯಕ್ಕೆ ಎಂಟ್ರಿ ಕೊಡಲು ರೆಡಿ ಆದ ಹಾಸ್ಯ ನಟ ಟೆನ್ನಿಸ್ ಕೃಷ್ಣ; ಯಾವ ಪಕ್ಷಕ್ಕೆ ಸೇರ್ಪಡೆ?

ಪಂಜಾಬ್ ಚುನಾವಣೆಯಲ್ಲಿ ಗೆದ್ದು, ಸರ್ಕಾರ ರಚಿಸಿರುವ ಆಪ್ ಪಕ್ಷ ಈಗ ಕರ್ನಾಟಕದಲ್ಲೂ ಸ್ಪರ್ಧೆ ಮಾಡುವ ಸಾಧ್ಯತೆ ಇದೆ. ಈ ಕಾರಣಕ್ಕೆ ಪಕ್ಷವನ್ನು ಇಲ್ಲಿ ಬಲಪಡಿಸುವ ಕಾರ್ಯ ಆಗುತ್ತಿದೆ.

ರಾಜಕೀಯಕ್ಕೆ ಎಂಟ್ರಿ ಕೊಡಲು ರೆಡಿ ಆದ ಹಾಸ್ಯ ನಟ ಟೆನ್ನಿಸ್ ಕೃಷ್ಣ; ಯಾವ ಪಕ್ಷಕ್ಕೆ ಸೇರ್ಪಡೆ?
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Aug 03, 2022 | 8:28 PM

Share

ಹಾಸ್ಯ ನಟ ಟೆನ್ನಿಸ್ ಕೃಷ್ಣ (Tennis Krishna) ಅವರು ತೆರೆಮೇಲೆ ಸಾಕಷ್ಟು ನಗಿಸಿದ್ದಾರೆ. ಹಲವು ಭಿನ್ನ ಪಾತ್ರಗಳನ್ನು ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ನಟನೆಯಿಂದ ದೂರ ಉಳಿದುಕೊಂಡಿರುವ ಅವರು ಈಗ ರಾಜಕೀಯಕ್ಕೆ ಎಂಟ್ರಿ ಕೊಡಲು ರೆಡಿ ಆಗಿದ್ದಾರೆ. ಆಗಸ್ಟ್ 4ರದು ಅವರು ಆಪ್​ ಪಕ್ಷಕ್ಕೆ (AAP Party) ಸೇರ್ಪಡೆ ಆಗುತ್ತಿದ್ದಾರೆ. ಮುಂಜಾನೆ 10.30ಕ್ಕೆ ಬೆಂಗಳೂರಿನಲ್ಲಿ ಕಾರ್ಯಕ್ರಮ ನಡೆಯುತ್ತಿದೆ. ಈ ವೇಳೆ ಅವರು ಅಧಿಕೃತವಾಗಿ ಆಪ್​ ಪಕ್ಷ ಸೇರಿಕೊಳ್ಳಲಿದ್ದಾರೆ. ಅವರು ರಾಜಕೀಯದಲ್ಲಿ ಯಶಸ್ಸು ಕಾಣುತ್ತಾರಾ ಅನ್ನೋದು ಸದ್ಯದ ಕುತೂಹಲ.

2023ರಲ್ಲಿ ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಅದಕ್ಕೆ ಎಲ್ಲಾ ಪಕ್ಷಗಳು ಈಗಾಗಲೇ ಸಿದ್ಧತೆ ಮಾಡಿಕೊಳ್ಳುತ್ತಿವೆ. ಇತ್ತೀಚೆಗೆ ಪಂಜಾಬ್ ಚುನಾವಣೆಯಲ್ಲಿ ಗೆದ್ದು, ಸರ್ಕಾರ ರಚಿಸಿರುವ ಆಪ್ ಪಕ್ಷ ಈಗ ಕರ್ನಾಟಕದಲ್ಲೂ ಸ್ಪರ್ಧೆ ಮಾಡುವ ಸಾಧ್ಯತೆ ಇದೆ. ಈ ಕಾರಣಕ್ಕೆ ಪಕ್ಷವನ್ನು ಇಲ್ಲಿ ಬಲಪಡಿಸುವ ಕಾರ್ಯ ಆಗುತ್ತಿದೆ. ಈಗ ಹಾಸ್ಯ ನಟ ಟೆನ್ನಿಸ್ ಕೃಷ್ಣ ಅವರು ಪಕ್ಷಕ್ಕೆ ಸೇರ್ಪಡೆ ಆಗುತ್ತಿರುವುದರಿಂದ ಕರ್ನಾಟಕದಲ್ಲಿ ಆಪ್​ ಪಕ್ಷದ ಬಲ ಹೆಚ್ಚಲಿದೆ.

ಟೆನ್ನಿಸ್ ಕೃಷ್ಣ ಅವರು 90ರ ದಶಕದಿಂದಲೇ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದರು. ದೊಡ್ಡಣ್ಣ ಸೇರಿ ಸಾಕಷ್ಟು ನಟರ ಜತೆ ಅವರು ತೆರೆ ಹಂಚಿಕೊಳ್ಳುವ ಮೂಲಕ ಕರ್ನಾಟಕದಲ್ಲಿ ಮನೆ ಮಾತಾಗಿದ್ದಾರೆ. 2012ರಿಂದ ಈಚೆಗೆ ಅವರಿಗೆ ಬೇಡಿಕೆ ಕಡಿಮೆ ಆಗಿದೆ. ಈ ಕಾರಣಕ್ಕೆ ಅವರು ಚಿತ್ರರಂಗದಿಂದ ದೂರ ಉಳಿದುಕೊಂಡಿದ್ದಾರೆ. ಈಗ ಅವರು ರಾಜಕೀಯಕ್ಕೆ ಎಂಟ್ರಿ ಕೊಡುತ್ತಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ.

ಇದನ್ನೂ ಓದಿ
Image
‘ಪಾಸ್​ಪೋರ್ಟ್​ನಲ್ಲಿ ನನ್ನ ಹೆಸರು ಹೀಗಿಲ್ಲ’; ಅಸಲಿ ಹೆಸರು ರಿವೀಲ್ ಮಾಡಿದ ಶಿವರಾಜ್​ಕುಮಾರ್
Image
ಶಕ್ತಿಧಾಮದ ಮಕ್ಕಳ ಜತೆ ‘ಬೈರಾಗಿ’ ಹಾಡಿಗೆ ಡ್ಯಾನ್ಸ್ ಮಾಡಿದ ಶಿವರಾಜ್​ಕುಮಾರ್
Image
ವಿಷ್ಣು-ಅಂಬರೀಷ್ ಜೀವದ ಗೆಳೆಯರು: ಖ್ಯಾತ ಹಾಸ್ಯನಟ ಟೆನ್ನಿಸ್‌ ಕೃಷ್ಣ

ಇದನ್ನೂ ಓದಿ: ವಿಷ್ಣು-ಅಂಬರೀಷ್ ಜೀವದ ಗೆಳೆಯರು: ಖ್ಯಾತ ಹಾಸ್ಯನಟ ಟೆನ್ನಿಸ್‌ ಕೃಷ್ಣ

ಚಿತ್ರರಂಗಕ್ಕೂ ರಾಜಕೀಯಕ್ಕೂ ಈ ಮೊದಲಿನಿಂದಲೂ ಒಳ್ಳೆಯ ನಂಟಿದೆ. ಚಿತ್ರರಂಗದಲ್ಲಿ ಯಶಸ್ಸು ಕಂಡ ಬಳಿಕ ರಾಜಕೀಯದಲ್ಲಿ ಗೆಲುವು ಕಂಡ ಅನೇಕ ಸೆಲೆಬ್ರಿಟಿಗಳು ಇದ್ದಾರೆ. ಆ ಸಾಲಿಗೆ ಟೆನ್ನಿಸ್​ ಕೃಷ್ಣ ಕೂಡ ಸೇರ್ಪಡೆ ಆಗುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು