‘ಕಾಮಿಡಿ ಕಿಲಾಡಿಗಳು’ ಹಾಸ್ಯ ಕಲಾವಿದ ಗಿಲ್ಲಿ ನಟನ ಹೊಸ ಸಿನಿಮಾ ‘ಸರ್ವೇ ನಂಬರ್ 45’

‘ಸರ್ವೇ ನಂಬರ್ 45’ ಎಂಬ ಡಿಫರೆಂಟ್​ ಶೀರ್ಷಿಕೆ ಇರುವ ಈ ಸಿನಿಮಾದಲ್ಲಿ ಗಿಲ್ಲಿ ನಟ, ರಿಯಾ ಭಾಸ್ಕರ್ ಮುಂತಾದವರು ಪ್ರಮುಖ ಪಾತ್ರಗಳನ್ನು ಮಾಡುತ್ತಿದ್ದಾರೆ. ಅದ್ದೂರಿಯಾಗಿ ಈ ಚಿತ್ರಕ್ಕೆ ಮುಹೂರ್ತ ಮಾಡಲಾಗಿದೆ. ಶೀಘ್ರದಲ್ಲೇ ಈ ಚಿತ್ರಕ್ಕೆ ಶೂಟಿಂಗ್​ ಆರಂಭ ಆಗಲಿದೆ. ಶಿವಕುಮಾರ್ ಎಂ. ಶೆಟ್ಟಿಹಳ್ಳಿ ಅವರು ಈ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ.

‘ಕಾಮಿಡಿ ಕಿಲಾಡಿಗಳು’ ಹಾಸ್ಯ ಕಲಾವಿದ ಗಿಲ್ಲಿ ನಟನ ಹೊಸ ಸಿನಿಮಾ ‘ಸರ್ವೇ ನಂಬರ್ 45’
‘ಸರ್ವೇ ನಂಬರ್ 45’ ಸಿನಿಮಾ ಮುಹೂರ್ತ
Follow us
|

Updated on: Aug 29, 2024 | 10:48 PM

ಕನ್ನಡದ ಕಿರುತೆರೆಯಲ್ಲಿ ಗಿಲ್ಲಿ ನಟ ಫೇಮಸ್​ ಆಗಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲೂ ಅವರು ಸಖತ್​ ಖ್ಯಾತಿ ಹೊಂದಿದ್ದಾರೆ. ಅವರ ಹೊಸ ಸಿನಿಮಾಗೆ ‘ಸರ್ವೇ ನಂಬರ್ 45’ ಎಂದು ಶೀರ್ಷಿಕೆ ಇಡಲಾಗಿದೆ. ಹೊಸಬರೇ ಸೇರಿಕೊಂಡು ಈ ಸಿನಿಮಾವನ್ನು ಸಿದ್ಧಪಡಿಸುತ್ತಿದ್ದಾರೆ. ‘ಸರ್ವೇ ನಂಬರ್ 45’ ಸಿನಿಮಾದ ಮುಹೂರ್ತ ಸಮಾರಂಭ ಇತ್ತೀಚೆಗೆ ಬೆಂಗಳೂರಿನ ಬಂಡಿ ಮಹಾಕಾಳಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ಜರುಗಿತು. ಬಳಿಕ ಮಾತನಾಡಿದ ಚಿತ್ರತಂಡದವರು ಸಿನಿಮಾದ ಬಗ್ಗೆ ಮಾಹಿತಿ ಹಂಚಿಕೊಂಡರು.

‘ಸರ್ವೇ ನಂಬರ್ 45’ ಸಿನಿಮಾದ ಮೊದಲ ದೃಶ್ಯಕ್ಕೆ ಹಿರಿಯ ನಿರ್ದೇಶಕ ಹೆಚ್. ವಾಸು ಅವರು ಕ್ಲ್ಯಾಪ್ ಮಾಡಿದ್ದಾರೆ. ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್‌ ಬಣಕಾರ್ ಅವರು ಕ್ಯಾಮೆರಾ ಚಾಲನೆ ಮಾಡುವ ಮೂಲಕ ಶುಭ ಕೋರಿದರು. ಇದೇ ವೇಳೆ ವಿಧಾನ ಪರಿಷತ್ ಸದಸ್ಯ ಶರವಣ ಕೂಡ ಉಪಸ್ಥಿತರಿದ್ದರು. ವರನಂದಿ ಸಿನಿ ಸಂಸ್ಥೆಯ ಮೂಲಕ ‘ಸರ್ವೇ ನಂಬರ್ 45’ ಸಿನಿಮಾ ನಿರ್ಮಾಣ ಆಗುತ್ತಿದೆ.

ಹಿರಿಯ ನಿರ್ದೇಶಕರಾದ ಹೆಚ್. ವಾಸು ಹಾಗೂ ಕೆ. ರಾಘವ ಅವರ ಬಳಿ ಕೆಲಸ ಕಲಿತ ಪಿರಿಯಾಪಟ್ಟಣದ ಶಿವಕುಮಾರ್ ಎಂ. ಶೆಟ್ಟಿಹಳ್ಳಿ ಅವರು ಈ ಮೊದಲು ಮಹದೇಶ್ವರ ಭಕ್ತಿ ಗೀತೆಗಳಿಗೆ ಸಾಹಿತ್ಯ ರಚಿಸಿದ್ದಾರೆ. ಇದರ ಅನುಭವದಿಂದಲೇ ಈ ಸಿನಿಮಾಗೆ ಕತೆ, ಚಿತ್ರಕಥೆ ಹಾಗೂ ಮೂರು ಹಾಡುಗಳನ್ನು ಬರೆದು ನಿರ್ದೇಶನ ಕೂಡ ಮಾಡುತ್ತಿದ್ದಾರೆ. ಮೈಸೂರು, ಮಂಡ್ಯ, ಹಾಸನ ಮುಂತಾದ ಕಡೆ 2 ಹಂತಗಳಲ್ಲಿ ಶೂಟಿಂಗ್​ ನಡೆಯಲಿದೆ. ಸೆಪ್ಟೆಂಬರ್ ಮೊದಲ ವಾರದಿಂದ ಚಿತ್ರೀಕರಣ ಶುರುವಾಗಲಿದೆ.

ಇದನ್ನೂ ಓದಿ: ‘ವೈಕುಂಠ ಸಮಾರಾಧನೆ’: ಇದು ಹೊಸ ಕನ್ನಡ ಸಿನಿಮಾದ ಶೀರ್ಷಿಕೆ, ಪೋಸ್ಟರ್​!

ಜಾಗಕ್ಕೆ ಸರ್ವೇ ನಂಬರ್ ಎಂದು ಸರ್ಕಾರ ನೀಡುತ್ತದೆ. ಇದರಿಂದ ರೈತನೊಬ್ಬನಿಗೆ ಹಲವು ಕಷ್ಟಗಳು ಬರುತ್ತವೆ. ಅದನ್ನು ಆತ ಚಾಣಾಕ್ಷತನದಿಂದ ಹೇಗೆ ಪರಿಹಾರ ಮಾಡಿಕೊಳ್ಳುತ್ತಾನೆ ಎಂಬುದನ್ನು ಸಿನಿಮಾದಲ್ಲಿ ತೋರಿಲಾಗುವುದು. ನಿರ್ದೇಶಕರು ತಾವು ಕಂಡ ಒಂದಷ್ಟು ಘಟನೆಗಳಿಗೆ ಕಾಲ್ಪನಿಕ ಅಂಶಗಳನ್ನು ಸೇರಿಸಿ ಕೆಲವು ಸನ್ನಿವೇಶಗಳನ್ನು ಸೃಷ್ಟಿಸಿದ್ದಾರೆ. ಜೊತೆಗೆ ಒಂದು ಸಂದೇಶವನ್ನೂ ನೀಡಲಾಗುತ್ತಿದೆ ಎಂದು ಚಿತ್ರತಂಡದವರು ತಿಳಿಸಿದ್ದಾರೆ.

ಇದನ್ನೂ ಓದಿ: ‘ಪ್ರಕರಣ ತನಿಖಾ ಹಂತದಲ್ಲಿದೆ’ ಎನ್ನುತ್ತ ಶೀರ್ಷಿಕೆ ಗೀತೆ ಬಿಡುಗಡೆ ಮಾಡಿದ ಹೊಸಬರ ತಂಡ

‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಗಿಲ್ಲಿ ನಟ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಬಾಲನಟಿಯಾಗಿ ಫೇಮಸ್​ ಆಗಿದ್ದ ರೀಯಾ ಭಾಸ್ಕರ್ ಅವರು ಗೌಡರ ಮಗಳ ಪಾತ್ರದಲ್ಲಿ ನಟಿಸಿದ್ದಾರೆ. ಜಗದೀಶ್ ಕೊಪ್ಪ, ಮುನಿ, ಸಂಜಯ್ ಪಾಟೀಲ್, ಟೋನಿತಾ, ಮೈತ್ರಿ, ರಾಜವ್ ಬಾಲೆ, ತೇಜು ಮೈಸೂರು, ಪ್ರಕಾಶ್ ಬಾನಾಳು, ಸುರೇಶ್ ಕೋಲಾರ, ರಂಗರಾಜು ಹುಲಿದುರ್ಗ ಸೇರಿದಂತೆ ಹಲವರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಚಕ್ರಿ ಕಿರಿಸಾವೆ ಸಂಭಾಷಣೆ ಬರೆದಿದ್ದಾರೆ. ವಿಶಾಲ್ ಆಲಾಪ್ ಅವರು ಸಂಗೀತ ನೀಡುತ್ತಿದ್ದಾರೆ. ದೀಪಕ್ ಕುಮಾರ್ ಜಿ.ಕೆ. ಅವರು ಛಾಯಾಗ್ರಹಣದ ಜವಾಬ್ದಾರಿ ಹೊತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತುಂಗಭದ್ರಾ ಪೈಪ್‌ಲೈನ್ ಒಡೆದು 50 ಎಕರೆ ಬೆಳೆ ಮುಳುಗಡೆ
ತುಂಗಭದ್ರಾ ಪೈಪ್‌ಲೈನ್ ಒಡೆದು 50 ಎಕರೆ ಬೆಳೆ ಮುಳುಗಡೆ
ಕಟ್ಟಡ ಕುಸಿತ: ಅಧಿಕಾರಿಗಳನ್ನ ತರಾಟೆಗೆ ತಗೊಂಡ್ರು ಲೋಕಾಯುಕ್ತ ನ್ಯಾಯಮೂರ್ತಿ
ಕಟ್ಟಡ ಕುಸಿತ: ಅಧಿಕಾರಿಗಳನ್ನ ತರಾಟೆಗೆ ತಗೊಂಡ್ರು ಲೋಕಾಯುಕ್ತ ನ್ಯಾಯಮೂರ್ತಿ
ನಾಮಪತ್ರ ಸಲ್ಲಿಕೆಗೆ ಸಿದ್ದರಾಮಯ್ಯ, ಶಿವಕುಮಾರ್ ಬರಲಿದ್ದಾರೆ: ಯೋಗೇಶ್ವರ್
ನಾಮಪತ್ರ ಸಲ್ಲಿಕೆಗೆ ಸಿದ್ದರಾಮಯ್ಯ, ಶಿವಕುಮಾರ್ ಬರಲಿದ್ದಾರೆ: ಯೋಗೇಶ್ವರ್
ಕುಮಾರಸ್ವಾಮಿ ಸೂಚಿಸುವ ಅಭ್ಯರ್ಥಿಗೆ ಎನ್​ಡಿಎ ಒಮ್ಮತದ ಬೆಂಬಲ: ವಿಜಯೇಂದ್ರ
ಕುಮಾರಸ್ವಾಮಿ ಸೂಚಿಸುವ ಅಭ್ಯರ್ಥಿಗೆ ಎನ್​ಡಿಎ ಒಮ್ಮತದ ಬೆಂಬಲ: ವಿಜಯೇಂದ್ರ
ಬಿಗ್​ಬಾಸ್​ನಲ್ಲಿ ಶುರುವಾಯ್ತು ಪಕ್ಷ ರಾಜಕೀಯ, ಸ್ಪರ್ಧಿಗಳ ನಡುವೆ ಗಲಾಟೆ
ಬಿಗ್​ಬಾಸ್​ನಲ್ಲಿ ಶುರುವಾಯ್ತು ಪಕ್ಷ ರಾಜಕೀಯ, ಸ್ಪರ್ಧಿಗಳ ನಡುವೆ ಗಲಾಟೆ
ಭಾರತ- ಪಾಕಿಸ್ತಾನದ ನಡುವೆ ರಾಜಿಯಾಗಬೇಕು; ಮೆಹಬೂಬಾ ಮುಫ್ತಿ ಹೇಳಿಕೆ
ಭಾರತ- ಪಾಕಿಸ್ತಾನದ ನಡುವೆ ರಾಜಿಯಾಗಬೇಕು; ಮೆಹಬೂಬಾ ಮುಫ್ತಿ ಹೇಳಿಕೆ
ಎನ್​ಡಿಎ ಅಭ್ಯರ್ಥಿ ಗೆಲ್ಲಿಸಲು ಕುಮಾರಸ್ವಾಮಿ ಶ್ರಮಿಸಬೇಕು: ಪ್ರೀತಂ ಗೌಡ
ಎನ್​ಡಿಎ ಅಭ್ಯರ್ಥಿ ಗೆಲ್ಲಿಸಲು ಕುಮಾರಸ್ವಾಮಿ ಶ್ರಮಿಸಬೇಕು: ಪ್ರೀತಂ ಗೌಡ
ಯೋಗೇಶ್ವರ್​ನನ್ನು ಸೇರಿಸಿಕೊಂಡು ಸಿದ್ದರಾಮಯ್ಯ ಪಕ್ಷ ಹಾಳುಮಾಡಿತ್ತಿದ್ದಾರೆ:
ಯೋಗೇಶ್ವರ್​ನನ್ನು ಸೇರಿಸಿಕೊಂಡು ಸಿದ್ದರಾಮಯ್ಯ ಪಕ್ಷ ಹಾಳುಮಾಡಿತ್ತಿದ್ದಾರೆ:
ಇವತ್ತು ಸಾಯಂಕಾಲ ಎನ್​ಡಿಎ ಅಭ್ಯರ್ಥಿ ಹೆಸರು ಘೋಷಣೆ ಸಾಧ್ಯತೆ: ನಿಖಿಲ್
ಇವತ್ತು ಸಾಯಂಕಾಲ ಎನ್​ಡಿಎ ಅಭ್ಯರ್ಥಿ ಹೆಸರು ಘೋಷಣೆ ಸಾಧ್ಯತೆ: ನಿಖಿಲ್
ಕಂಜನ್​ ಮತ್ತು ಧನಂಜಯ ಆನೆಗಳ ನಡುವೆ ಮತ್ತೆ ಗಲಾಟೆ: ತಪ್ಪಿದ ಭಾರೀ ಅನಾಹುತ
ಕಂಜನ್​ ಮತ್ತು ಧನಂಜಯ ಆನೆಗಳ ನಡುವೆ ಮತ್ತೆ ಗಲಾಟೆ: ತಪ್ಪಿದ ಭಾರೀ ಅನಾಹುತ