AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಮಿಡಿ ಕಿಲಾಡಿ’ ಅಪ್ಪಣ್ಣ ಮೇಲೆ ಕಿರುಕುಳ ಆರೋಪ; ಸ್ಪಷ್ಟನೆ ನೀಡಿದ ಕಲಾವಿದ

ಕಾಮಿಡಿ ಕಿಲಾಡಿಗಳು ಸೀಸನ್ 2 ರ ಸ್ಪರ್ಧಿಯೊಬ್ಬರು ಮಡೆನೂರು ಮನು ಅವರ ಮೇಲೆ ಅತ್ಯಾಚಾರದ ಆರೋಪ ಹೊರಿಸಿದ್ದಾರೆ. ಈಗ ಅದೇ ಸೀಸನ್‌ನಲ್ಲಿದ್ದ ಅಪ್ಪಣ್ಣ ರಾಮದುರ್ಗ ಅವರ ಮೇಲೆ ಸಹ ಆರೋಪ ಹೊರಿಸಿರುವ ಆಡಿಯೋ ವೈರಲ್ ಆಗಿದೆ. ಅಪ್ಪಣ್ಣ ರಾಮದುರ್ಗ ಈ ಆರೋಪಗಳನ್ನು ತಳ್ಳಿಹಾಕಿದ್ದಾರೆ ಮತ್ತು ಆಡಿಯೋವನ್ನು ಮನು ಒತ್ತಾಯದಿಂದ ರೆಕಾರ್ಡ್ ಮಾಡಲಾಗಿದೆ ಎಂದು ಹೇಳಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: May 23, 2025 | 11:19 AM

Share

ಮಡೆನೂರು ಮನು (Madenuru Manu) ಅವರ ಮೇಲೆಕಾಮಿಡಿ ಕಿಲಾಡಿಗಳು ಸೀಸನ್ 2’ ಮಹಿಳಾ ಸ್ಪರ್ಧಿ ಗಂಭೀರ ಆರೋಪ ಮಾಡಿದ್ದರು. ಅವರು ನನ್ನ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂದು ದೂರಿದ್ದರು. ಈ ಬೆನ್ನಲ್ಲೇ ಇದೇ ಸೀಸನ್​ನಲ್ಲಿ ಇದ್ದ ಅಪ್ಪಣ್ಣ ರಾಮದುರ್ಗ ಮೇಲೆ ಅವರು ಆರೋಪ ಮಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದೆ. ಈ ಬಗ್ಗೆ ಸ್ಪಷ್ಟನೆ ನೀಡಿರೋ ಅಪ್ಪಣ್ಣ, ಇದು ಸುಳ್ಳು ಎಂದಿದ್ದಾರೆ.

ಮಡೆನೂರು ಮನು ಅವರು ಸಂತ್ರಸ್ತೆಗೆ 2018ರಿಂದ ಪರಿಚಯ. ಆ ಬಳಿಕ ಇಬ್ಬರ ಮಧ್ಯೆ ಆಪ್ತತೆ ಬೆಳೆಯಿತು. 2022ರಲ್ಲಿ ನನ್ನ ಮೇಲೆ ಅತ್ಯಾಚಾರ ಮಾಡಿದ್ದಾನೆ ಎಂದು ಮನು ವಿರುದ್ಧ ಸಂತ್ರಸ್ತೆ ದೂರಿದ್ದಾರೆ. ಅಲ್ಲದೆ, ಒತ್ತಾಯಪೂರ್ವಕವಾಗಿ ತಾಳಿ ಕಟ್ಟಿದ್ದಾಗಿಯೂ ಹೇಳಿದ್ದಾರೆ. ಅವರ ದೂರನ್ನು ಆಧರಿಸಿ ಮನು ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಂದು ಅವರನ್ನು ಕೋರ್ಟ್ ಎದುರು ಹಾಜರುಪಡಿಸೋ ಸಾಧ್ಯತೆ ಇದೆ. ಈಗ ಸಂತ್ರಸ್ತೆ ಮಾಡಿರೋ ಹೊಸ ಆರೋಪ ವೈರಲ್ ಆಗಿದೆ.

‘ನನಗೆ ಕಾಮಿಡಿ ಕಿಲಾಡಿಗಳು ಅಪ್ಪಣ್ಣ ರಾಮದುರ್ಗ ಅಂತ ಇದಾನೆ. ಎರಡನೇ ಸೀಸನ್​ನಿಂದ ತೊಂದರೆ ಕೊಡುತ್ತಾ ಇದ್ದ. ಶೋಗೆ ಕರೆದು ಕೆಟ್ಟ ದೃಷ್ಟಿಯಲ್ಲಿ ನೋಡುತ್ತಾನೆ. ಅವನ ಕಾಟ ಇನ್ನೂ ತಪ್ಪಿಲ್ಲ. ದಿನವೂ ಅವನ ಕಾಟ ಹೆಚ್ಚುತ್ತಿದೆ. ನನ್ನ ಹಾಗೂ ಬಾಯ್​ಫ್ರೆಂಡ್ ಅಲೋಕ ಮಧ್ಯೆ ಬ್ರೇಕಪ್ ಆಗಿದೆ. ಇದಕ್ಕೆ ಕಾರಣ ಅಪ್ಪಣ್ಣ. ನಾನು ಆತ್ಮಹತ್ಯೆ ಮಾಡಿಕೊಂಡರೆ ಅವನೇ ಕಾರಣ. ಅವನ ಸುಮ್ಮನೆ ಬಿಡಬೇಡಿ’ ಎಂದು ಸಂತ್ರಸ್ತೆ ಹೇಳಿರೋ ಆಡಿಯೋ ವೈರಲ್ ಆಗಿದೆ.

ಇದನ್ನೂ ಓದಿ
Image
‘ಕಾಂತಾರ: ಚಾಪ್ಟರ್ 1’ ಅಡಚಣೆ; ಅಂದುಕೊಂಡ ದಿನಾಂಕದಲ್ಲೇ ಚಿತ್ರ ರಿಲೀಸ್
Image
ಮಹೇಶ್ ಬಾಬು ಕುಟುಂಬದಲ್ಲಿ ಕೊವಿಡ್; ಅಭಿಮಾನಿಗಳಲ್ಲಿ ಹೆಚ್ಚಿತು ಆತಂಕ
Image
‘ನಾನು ಯಶ್ ಅಭಿಮಾನಿ ಅಲ್ಲ, ಆದರೆ ಆ ಹೀರೋ ನಂಗೆ ಆದರ್ಶ’; ಯಶ್ ತಾಯಿ
Image
25ನೇ ವಯಸ್ಸಿಗೆ ಕಾಲಿಟ್ಟ ಸುಹಾನ; ಶಾರುಖ್ ಮಗಳ ಬಳಿ ಇದೆ ದುಬಾರಿ ವಸ್ತುಗಳು

ಇದನ್ನೂ ಓದಿ: ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿಕೊಂಡಿದ್ದಾನೆ: ಮಡೆನೂರು ಮನು ಮೇಲೆ ಆರೋಪಗಳ ಸುರಿಮಳೆ

ಇದಕ್ಕೆ ಸ್ಪಷ್ಟನೆ ನೀಡಿರೋ ಅಪ್ಪಣ್ಣ, ‘ಒಂದೂವರೆ ವರ್ಷದ ಹಿಂದೆ ನಾನು ಅವರ ಸಂಪರ್ಕದಲ್ಲಿ ಇದ್ದಿದ್ದು ನಿಜ. ಆದರೆ, ಆ ಬಳಿಕ ಅವರ ಸಂಪರ್ಕ ಇಲ್ಲ. ಈ ರೀತಿ ಮಾತನಾಡು ಎಂದು ಮನು ಒತ್ತಾಯ ಪೂರ್ವಕವಾಗಿ ಆಕೆಯ (ಸಂತಸ್ತೆ) ಆಡಿಯೋ ರೆಕಾರ್ಡ್ ಮಾಡಿಕೊಂಡಿದ್ದಾರೆ’ ಎಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ