AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಮಿಡಿ ಕಿಲಾಡಿ ಖ್ಯಾತಿಯ ನಟ ಗೋವಿಂದೇಗೌಡಗೆ ಅಪಘಾತ: ಆಸ್ಪತ್ರೆಗೆ ದಾಖಲು

Actor Govinde Gowda: ಕಿರುತೆರೆ ಜೊತೆಗೆ ಬೆಳ್ಳಿತೆರೆಯಲ್ಲೂ ತೊಡಗಿಸಿಕೊಂಡಿದ್ದ ಗೋವಿಂದೇಗೌಡ ಕೆಜಿಎಫ್ ಸೇರಿದಂತೆ ಹಲವು ಕನ್ನಡ ಸಿನಿಮಾಗಳಲ್ಲಿ ಬಣ್ಣ ಹಚ್ಚಿದ್ದರು. ಅಷ್ಟೇ ಅಲ್ಲದೆ ಇತ್ತೀಚೆಗೆ ರಾಷ್ಟ್ರಪ್ರಶಸ್ತಿಗೆ ಭಾಜನವಾದ 'ಅಕ್ಷಿ' ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.

ಕಾಮಿಡಿ ಕಿಲಾಡಿ ಖ್ಯಾತಿಯ ನಟ ಗೋವಿಂದೇಗೌಡಗೆ ಅಪಘಾತ: ಆಸ್ಪತ್ರೆಗೆ ದಾಖಲು
actor Govinde Gowda
TV9 Web
| Edited By: |

Updated on:Jul 27, 2021 | 11:06 PM

Share

ಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋ ಖ್ಯಾತಿಯ ನಟ ಗೋವಿಂದೇಗೌಡ ಅಪಘಾತಕ್ಕೀಡಾಗಿದ್ದಾರೆ. ಇಂದು ಸಂಜೆ ಚಿತ್ರೀಕರಣದ ವೇಳೆ ಅಪಘಾತ ಸಂಭವಿಸಿದ್ದು, ಇದೀಗ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಿರುತೆರೆಯಲ್ಲಿ ಜಿಜಿ (ಗೋವಿಂದೇಗೌಡ) ಎಂದೇ ಪರಿಚಿತರಾಗಿದ್ದ ಗೋವಿಂದೇಗೌಡರ ಅಪಘಾತದ ಸುದ್ದಿಯನ್ನು ಸೋಷಿಯಲ್ ಮೀಡಿಯಾ ಮೂಲಕ ನಟ ಜಗ್ಗೇಶ್ ಖಚಿತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ನವರಸ ನಾಯಕ  ಜಗ್ಗೇಶ್, ”ಕಾಮಿಡಿಕಿಲಾಡಿ ನಟ GG ಗೋವಿಂದೆಗೌಡನಿಗೆ ಚಿತ್ರಿಕರಣ ಸಮಯದಲ್ಲಿ ಅಪಘಾತವಾಗಿ BGS ಆಸ್ಪತ್ರೆಯಲ್ಲಿ ದಾಖಲಾಗಿರುವ ದಯಮಾಡಿ ಅವನಿಗೆ ಏನು ಆಗದಂತೆ ನೀವು ಪ್ರಾರ್ಥನೆ ಮಾಡಿ..ನಾನು ಗಣಪತಿಗೆ ಪ್ರಾರ್ಥಿಸಿ ಆಸ್ಪತ್ರೆಗೆ ಹೊರಟೆ” ಎಂದು ತಿಳಿಸಿದ್ದಾರೆ.

ಕಿರುತೆರೆ ಜೊತೆಗೆ ಬೆಳ್ಳಿತೆರೆಯಲ್ಲೂ ತೊಡಗಿಸಿಕೊಂಡಿದ್ದ ಗೋವಿಂದೇಗೌಡ ಕೆಜಿಎಫ್ ಸೇರಿದಂತೆ ಹಲವು ಕನ್ನಡ ಸಿನಿಮಾಗಳಲ್ಲಿ ಬಣ್ಣ ಹಚ್ಚಿದ್ದರು. ಅಷ್ಟೇ ಅಲ್ಲದೆ ಇತ್ತೀಚೆಗೆ ರಾಷ್ಟ್ರಪ್ರಶಸ್ತಿಗೆ ಭಾಜನವಾದ ‘ಅಕ್ಷಿ’ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಹಾಗೆಯೇ ಐದು ನಿರ್ದೇಶಕರು ಹೊಸ ಪ್ರಯೋಗ ‘ಆದ್ದರಿಂದ’ ಎಂಬ ಸಿನಿಮಾದಲ್ಲಿ ಯೋಗರಾಜ್ ಭಟ್‌ ಆ್ಯಕ್ಷನ್ ಕಟ್ ಹೇಳಿರುವ ಭಾಗದಲ್ಲಿ ಗೋವಿಂದೇಗೌಡ ನಾಯಕರಾಗಿ ಬಣ್ಣ ಹಚ್ಚಿದ್ದರು.

ಇದೀಗ ಗೋವಿಂದೇ ಗೌಡನನ್ನು ಭೇಟಿಯಾಗಿ ಟ್ವೀಟ್ ಮಾಡಿರುವ ನಟ ಜಗ್ಗೇಶ್, “ಈಗ ತಾನೆ ಗೋವಿಂದೇ ಗೌಡನನ್ನ ಭೇಟಿ ಮಾಡಿದೆ.. ರಾಯರ ಆಶೀರ್ವಾದದಿಂದ ಕ್ಷೇಮವಾಗಿದ್ದಾನೆ.. ನಾನು, ಭಟ್ರು ಮತ್ತು ಶರಣ ಜೊತೆಗಿದ್ದೇವೆ.. ನಿಮ್ಮ ಹಾರೈಕೆಯಿರಲಿ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Rahul Dravid: ಶ್ರೀಲಂಕಾ ನಾಯಕನ ಜೊತೆ ರಾಹುಲ್ ದ್ರಾವಿಡ್ ಮಾತನಾಡಿದ್ದೇನು? ಇಲ್ಲಿದೆ ಉತ್ತರ

ಇದನ್ನೂ ಓದಿ: Ola electric scooter: ಓಲಾ ಎಲೆಕ್ಟ್ರಿಕ್ ಸ್ಕೂಟರ್ ಟಾಪ್ ಸ್ಪೀಡ್ ಎಷ್ಟು ಗೊತ್ತಾ?

Published On - 11:02 pm, Tue, 27 July 21

ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ