AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಮಿಡಿ ಕಿಲಾಡಿ ಖ್ಯಾತಿಯ ನಟ ಗೋವಿಂದೇಗೌಡಗೆ ಅಪಘಾತ: ಆಸ್ಪತ್ರೆಗೆ ದಾಖಲು

Actor Govinde Gowda: ಕಿರುತೆರೆ ಜೊತೆಗೆ ಬೆಳ್ಳಿತೆರೆಯಲ್ಲೂ ತೊಡಗಿಸಿಕೊಂಡಿದ್ದ ಗೋವಿಂದೇಗೌಡ ಕೆಜಿಎಫ್ ಸೇರಿದಂತೆ ಹಲವು ಕನ್ನಡ ಸಿನಿಮಾಗಳಲ್ಲಿ ಬಣ್ಣ ಹಚ್ಚಿದ್ದರು. ಅಷ್ಟೇ ಅಲ್ಲದೆ ಇತ್ತೀಚೆಗೆ ರಾಷ್ಟ್ರಪ್ರಶಸ್ತಿಗೆ ಭಾಜನವಾದ 'ಅಕ್ಷಿ' ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.

ಕಾಮಿಡಿ ಕಿಲಾಡಿ ಖ್ಯಾತಿಯ ನಟ ಗೋವಿಂದೇಗೌಡಗೆ ಅಪಘಾತ: ಆಸ್ಪತ್ರೆಗೆ ದಾಖಲು
actor Govinde Gowda
TV9 Web
| Edited By: |

Updated on:Jul 27, 2021 | 11:06 PM

Share

ಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋ ಖ್ಯಾತಿಯ ನಟ ಗೋವಿಂದೇಗೌಡ ಅಪಘಾತಕ್ಕೀಡಾಗಿದ್ದಾರೆ. ಇಂದು ಸಂಜೆ ಚಿತ್ರೀಕರಣದ ವೇಳೆ ಅಪಘಾತ ಸಂಭವಿಸಿದ್ದು, ಇದೀಗ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಿರುತೆರೆಯಲ್ಲಿ ಜಿಜಿ (ಗೋವಿಂದೇಗೌಡ) ಎಂದೇ ಪರಿಚಿತರಾಗಿದ್ದ ಗೋವಿಂದೇಗೌಡರ ಅಪಘಾತದ ಸುದ್ದಿಯನ್ನು ಸೋಷಿಯಲ್ ಮೀಡಿಯಾ ಮೂಲಕ ನಟ ಜಗ್ಗೇಶ್ ಖಚಿತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ನವರಸ ನಾಯಕ  ಜಗ್ಗೇಶ್, ”ಕಾಮಿಡಿಕಿಲಾಡಿ ನಟ GG ಗೋವಿಂದೆಗೌಡನಿಗೆ ಚಿತ್ರಿಕರಣ ಸಮಯದಲ್ಲಿ ಅಪಘಾತವಾಗಿ BGS ಆಸ್ಪತ್ರೆಯಲ್ಲಿ ದಾಖಲಾಗಿರುವ ದಯಮಾಡಿ ಅವನಿಗೆ ಏನು ಆಗದಂತೆ ನೀವು ಪ್ರಾರ್ಥನೆ ಮಾಡಿ..ನಾನು ಗಣಪತಿಗೆ ಪ್ರಾರ್ಥಿಸಿ ಆಸ್ಪತ್ರೆಗೆ ಹೊರಟೆ” ಎಂದು ತಿಳಿಸಿದ್ದಾರೆ.

ಕಿರುತೆರೆ ಜೊತೆಗೆ ಬೆಳ್ಳಿತೆರೆಯಲ್ಲೂ ತೊಡಗಿಸಿಕೊಂಡಿದ್ದ ಗೋವಿಂದೇಗೌಡ ಕೆಜಿಎಫ್ ಸೇರಿದಂತೆ ಹಲವು ಕನ್ನಡ ಸಿನಿಮಾಗಳಲ್ಲಿ ಬಣ್ಣ ಹಚ್ಚಿದ್ದರು. ಅಷ್ಟೇ ಅಲ್ಲದೆ ಇತ್ತೀಚೆಗೆ ರಾಷ್ಟ್ರಪ್ರಶಸ್ತಿಗೆ ಭಾಜನವಾದ ‘ಅಕ್ಷಿ’ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಹಾಗೆಯೇ ಐದು ನಿರ್ದೇಶಕರು ಹೊಸ ಪ್ರಯೋಗ ‘ಆದ್ದರಿಂದ’ ಎಂಬ ಸಿನಿಮಾದಲ್ಲಿ ಯೋಗರಾಜ್ ಭಟ್‌ ಆ್ಯಕ್ಷನ್ ಕಟ್ ಹೇಳಿರುವ ಭಾಗದಲ್ಲಿ ಗೋವಿಂದೇಗೌಡ ನಾಯಕರಾಗಿ ಬಣ್ಣ ಹಚ್ಚಿದ್ದರು.

ಇದೀಗ ಗೋವಿಂದೇ ಗೌಡನನ್ನು ಭೇಟಿಯಾಗಿ ಟ್ವೀಟ್ ಮಾಡಿರುವ ನಟ ಜಗ್ಗೇಶ್, “ಈಗ ತಾನೆ ಗೋವಿಂದೇ ಗೌಡನನ್ನ ಭೇಟಿ ಮಾಡಿದೆ.. ರಾಯರ ಆಶೀರ್ವಾದದಿಂದ ಕ್ಷೇಮವಾಗಿದ್ದಾನೆ.. ನಾನು, ಭಟ್ರು ಮತ್ತು ಶರಣ ಜೊತೆಗಿದ್ದೇವೆ.. ನಿಮ್ಮ ಹಾರೈಕೆಯಿರಲಿ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Rahul Dravid: ಶ್ರೀಲಂಕಾ ನಾಯಕನ ಜೊತೆ ರಾಹುಲ್ ದ್ರಾವಿಡ್ ಮಾತನಾಡಿದ್ದೇನು? ಇಲ್ಲಿದೆ ಉತ್ತರ

ಇದನ್ನೂ ಓದಿ: Ola electric scooter: ಓಲಾ ಎಲೆಕ್ಟ್ರಿಕ್ ಸ್ಕೂಟರ್ ಟಾಪ್ ಸ್ಪೀಡ್ ಎಷ್ಟು ಗೊತ್ತಾ?

Published On - 11:02 pm, Tue, 27 July 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?