AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಮ, ನಾಯಿ ಎಂದು ನಿಂದಿಸಿದ ಆರೋಪ; ನಟ ಜಗ್ಗೇಶ್ ವಿರುದ್ಧ ಸಿಎಸ್​ ರಘು ದೂರು

Jaggesh: ಟ್ವಿಟರ್​​ನಲ್ಲಿ ‘ಅಧಮ, ನಾಯಿ’ ಎಂದು ನನ್ನನ್ನು ನಿಂದಿಸಿದ್ದಾರೆ ಎಂದು ರಘು ದೂರು ಕೊಟ್ಟಿದ್ದಾರೆ. ವಿದ್ಯಾರ್ಥಿಗಳಿಗೆ ಸ್ವೆಟರ್ ಹಂಚಿಕೆಯಲ್ಲಿ ಅಕ್ರಮ ಆರೋಪದ ವಿಚಾರವಾಗಿ ನಟ ಜಗ್ಗೇಶ್​ ಟ್ವೀಟ್​ ಮಾಡಿದ್ದರು.

ಅಧಮ, ನಾಯಿ ಎಂದು ನಿಂದಿಸಿದ ಆರೋಪ; ನಟ ಜಗ್ಗೇಶ್ ವಿರುದ್ಧ ಸಿಎಸ್​ ರಘು ದೂರು
ನಟ ಜಗ್ಗೇಶ್​​
TV9 Web
| Edited By: |

Updated on: Aug 25, 2021 | 7:05 PM

Share

ಬೆಂಗಳೂರು: ವಿದ್ಯಾರ್ಥಿಗಳಿಗೆ ಸ್ವೆಟರ್ ಹಂಚಿಕೆ ವಿಚಾರದಲ್ಲಿ ಅಕ್ರಮ ಆರೋಪಕ್ಕೆ ಸಂಬಂಧಿಸಿ ನಟ ನವರಸ ನಾಯಕ ಜಗ್ಗೇಶ್ (Jaggesh) ಟ್ವೀಟ್ ಮಾಡಿದ್ದರು. ಆ ಟ್ವೀಟ್​ನಲ್ಲಿ ಅಧಮ ಮತ್ತು ನಾಯಿ ಎಂಬ ಪದಬಳಕೆ ಮಾಡಿರುವ ಬಗ್ಗೆ ದಲಿತ ಸಂಘರ್ಷ ಸಮಿತಿಯ ಅಧ್ಯಕ್ಷ ಸಿ.ಎಸ್​. ರಘು (Raghu) ಆಕ್ಷೇಪಿಸಿ ದೂರು ಸಲ್ಲಿಸಿದ್ದಾರೆ. ನಟ ಜಗ್ಗೇಶ್​ ವಿರುದ್ಧ ದೂರು ನೀಡಿದ್ದಾರೆ. ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ಡಾ. ರವೀಂದ್ರನಾಥ್​​ಗೆ ದೂರು ಸಲ್ಲಿಸಲಾಗಿದೆ.

ಟ್ವಿಟರ್​​ನಲ್ಲಿ ‘ಅಧಮ, ನಾಯಿ’ ಎಂದು ನನ್ನನ್ನು ನಿಂದಿಸಿದ್ದಾರೆ ಎಂದು ರಘು ದೂರು ಕೊಟ್ಟಿದ್ದಾರೆ. ವಿದ್ಯಾರ್ಥಿಗಳಿಗೆ ಸ್ವೆಟರ್ ಹಂಚಿಕೆಯಲ್ಲಿ ಅಕ್ರಮ ಆರೋಪದ ವಿಚಾರವಾಗಿ ನಟ ಜಗ್ಗೇಶ್​ ಟ್ವೀಟ್​ ಮಾಡಿದ್ದರು. ಟ್ವೀಟ್ ಈಗ ಮತ್ತೊಂದು ಆರೋಪಕ್ಕೆ ಕಾರಣವಾಗಿದೆ.

ಸ್ಯಾಂಡಲ್​ವುಡ್​ನ ಖ್ಯಾತ ನಟ ಜಗ್ಗೇಶ್​ ಅವರು ದಲಿತ ಸಂಘರ್ಷ ಸಮಿತಿಯ ಅಧ್ಯಕ್ಷ ಸಿ.ಎಸ್​. ರಘು ವಿರುದ್ಧ ಕಾನೂನು ಹೋರಾಟ ಮಾಡಲು ನಿರ್ಧರಿಸಿದ್ದರು. ಈ ಬಗ್ಗೆ ಅವರು ಬಹಿರಂಗವಾಗಿಯೇ ಹೇಳಿಕೆ ನೀಡಿದ್ದರು. ಟ್ವಿಟರ್​ ಮೂಲಕ ರಘು ಅವರಿಗೆ ಜಗ್ಗೇಶ್​ ಪರ ವಕೀಲರು ನೋಟಿಸ್​ ನೀಡಿದ್ದರು. ತಮಗೆ ಸಂಬಂಧವೇ ಇಲ್ಲದ ಪ್ರಕರಣದಲ್ಲಿ ಹೆಸರನ್ನು ಪ್ರಸ್ತಾಪಿಸಿ, ಮಾಧ್ಯಮಗಳಲ್ಲಿ ಮಾನಹಾನಿ ಆಗುವಂತಹ ಹೇಳಿಕೆಗಳನ್ನು ರಘು ನೀಡಿದ್ದಾರೆ ಎಂದಿರುವ ಜಗ್ಗೇಶ್​ ಈಗ ಕಾನೂನು ಕ್ರಮಕ್ಕೆ ಮುಂದಾಗಿದ್ದರು. ಈ ಕುರಿತು ಅವರು ಟ್ವಿಟರ್​ನಲ್ಲಿ ವಿವರವಾಗಿ ಬರೆದುಕೊಂಡಿದ್ದಾರೆ.

ಜಗ್ಗೇಶ್​ ಸಹೋದರ ಕೋಮಲ್​ ಕುಮಾರ್​ ಅವರು ಬಿಬಿಎಂಪಿಯಿಂದ ಟೆಂಡರ್​ ಪಡೆದು ಅಕ್ರಮ ಎಸಗಿದ್ದಾರೆ ಎಂಬ ಆರೋಪ ಇತ್ತೀಚೆಗೆ ಕೇಳಿಬಂದಿತ್ತು. ಈ ಪ್ರಕರಣದಲ್ಲಿ ಜಗ್ಗೇಶ್​ ಅವರ ಹೆಸರನ್ನೂ ಎಳೆದುತಂದಿರುವುದು ಜಗ್ಗೇಶ್ ಕೋಪಕ್ಕೆ ಕಾರಣ ಆಗಿದೆ. ‘ಮಾನ್ಯ ಡಿಎಸ್​ಎಸ್​ ರಘು ಅವರಿಗೆ.. ಮಾನ್ಯರೇ ತಾವು ಹಾಗೂ ತಮ್ಮ ವಿಳಾಸ ನನಗೆ ತಿಳಿಯದ ಕಾರಣ ಸಾಮಾಜಿಕ ಜಾಲತಾಣವಾದ ಟ್ವಿಟರ್​ನಲ್ಲಿ ತಮಗೆ ತಿಳಿಸುತ್ತಿರುವೆ. ನನ್ನ ಬಗ್ಗೆ ಸತ್ಯಾಸತ್ಯತೆ ಅರಿಯದೆ, ಮಾಧ್ಯಮದ ಮುಂದೆ ನನ್ನ ತೇಜೋವಧೆ ಮಾಡಿದ್ದೀರಿ. ನಾನು ತಪ್ಪು ಮಾಡಿಲ್ಲ. ಮಾಡುವುದೂ ಇಲ್ಲ. ಹಾಗಾಗಿ ನಿಮ್ಮ ಮೇಲೆ ಕಾನೂನು ಪ್ರಕ್ರಿಯೆ. ಉತ್ತರಿಸಿ!’ ಎಂದು ಜಗ್ಗೇಶ್​ ಬರೆದುಕೊಂಡಿದ್ದರು.

ಜಗ್ಗೇಶ್ ಮಾಡಿರುವ ಈ ಮೇಲಿನ ಟ್ವೀಟ್ ಈಗ ಆರೋಪಕ್ಕೆ ಕಾರಣವಾಗಿದೆ. ಈ ಬಗ್ಗೆ ಮುಂದೆ ಏನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕಾದುನೋಡಬೇಕಿದೆ.

ಆ ಬಳಿಕ, ‘ಯಾರೋ, ಎಲ್ಲೋ ಮಾಡಿದ ವಿಷಯಕ್ಕೆ ನನ್ನ ಹೆಸರು ಏಕೆ ತಂದಿರಿ? ನೀವು ನ್ಯಾಯಪರ ಹೋರಾಟ ಮಾಡಿ. ನನ್ನ ಬೆಂಬಲವು ಇರುತ್ತದೆ. ಆದರೆ ನನಗೂ ಇದಕ್ಕೂ ಯಾವ ಸಂಬಂಧವಿಲ್ಲ. ಆದರೂ ನನ್ನ ಹೆಸರು ಏಕೆ ತಂದಿರಿ? ಯಾವ ಪುರುಷಾರ್ಥಕ್ಕೆ? ನಾನು ತಪ್ಪು ಮಾಡಲ್ಲ. ತಲೆಯೂ ಬಾಗಿಸುವುದಿಲ್ಲ. ನನ್ನ ಕೋಟ್ಯಾಂತರ ಅಭಿಮಾನಿಗಳಿಗೆ ತಪ್ಪು ಸಂದೇಶ ರವಾನಿಸುವ ಕಾರ್ಯ ಮಾಡಿದ್ದೀರಿ. ಕ್ಷಮೆಯಿಲ್ಲ’ ಎಂದೂ ಜಗ್ಗೇಶ್​ ಟ್ವೀಟ್​ ಮಾಡಿದ್ದರು. ಈ ಟ್ವೀಟ್​ನ ಜೊತೆಯಲ್ಲಿ ಅವರು ನೋಟಿಸ್​ ಶೇರ್​ ಮಾಡಿಕೊಂಡಿದ್ದರು.

ಇದನ್ನೂ ಓದಿ: ಸಹೋದರ ಕೋಮಲ್ ವಿರುದ್ಧ ಕೇಳಿ ಬಂದ ಗಂಭೀರ ಆರೋಪಕ್ಕೆ ಪರೋಕ್ಷವಾಗಿ ಉತ್ತರ ನೀಡಿದರಾ ಜಗ್ಗೇಶ್?

ನಾಳೆ ಸಾಯ್ತೀನಿ ಎಂದರೆ ಹಿಂದಿನ ದಿನವೂ ಬಣ್ಣ ಹಚ್ಚುತ್ತೀನಿ; ಜಗ್ಗೇಶ್​

Follow Us
Web contact
Web contact

TV9 Kannada

Read More
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ