Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ವಿರುದ್ಧ ಮತ್ತೊಂದು ದೂರು, ಮಾರ್ಚ್​ 1ಕ್ಕೆ ವಿಚಾರಣೆ

Darshan Thoogudeepa: ನಟ ದರ್ಶನ್ ವಿರುದ್ಧ ಈಗಾಗಲೇ ಕೆಲವು ದೂರುಗಳು ದಾಖಲಾಗಿವೆ. ಇದೀಗ ಹೊಸದೊಂದು ದೂರು ಪಟ್ಟಿಗೆ ಸೇರಿದೆ. ದೂರಿನ ವಿಚಾರಣೆ ನಡೆಸಿರುವ ನ್ಯಾಯಾಲಯ ಮಾರ್ಚ್ 1ಕ್ಕೆ ವಿಚಾರಣೆ ಮುಂದೂಡಿದೆ.

ದರ್ಶನ್ ವಿರುದ್ಧ ಮತ್ತೊಂದು ದೂರು, ಮಾರ್ಚ್​ 1ಕ್ಕೆ ವಿಚಾರಣೆ
Follow us
ಮಂಜುನಾಥ ಸಿ.
|

Updated on: Feb 28, 2024 | 8:51 PM

ನಟ ದರ್ಶನ್ ‘ಕಾಟೇರ’ (Kaatera) ಮೂಲಕ ವೃತ್ತಿ ಜೀವನದ ಬಹು ದೊಡ್ಡ ಹಿಟ್ ಸಿನಿಮಾ ನೀಡಿದ್ದಾರೆ. ಆದರೆ ಆ ಖುಷಿಯ ಜೊತೆಗೆ ಕೆಲವು ವಿವಾದಗಳು ಸಹ ದರ್ಶನ್ ಅವರನ್ನು ಸುತ್ತಿಕೊಂಡಿವೆ. ದರ್ಶನ್ ಚಿತ್ರರಂಗದಲ್ಲಿ 25 ವರ್ಷ ಪೂರೈಸಿದ ಸಾಧನೆಯನ್ನು ಸಂಭ್ರಮಿಸಲು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ದರ್ಶನ್ ಆಡಿದ ಮಾತುಗಳು ಹಾಗೂ ಆ ನಂತರ ‘ಕಾಟೇರ’ ಸಿನಿಮಾದ 50ನೇ ದಿನದ ಸಂಭ್ರಮಾಚರಣೆಯಲ್ಲಿ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ವಿರುದ್ಧ ಆಡಿದ ಮಾತುಗಳು ದರ್ಶನ್​ ಅವರಿಗೆ ಸಂಕಷ್ಟ ತಂದೊಡ್ಡಿವೆ.

ದರ್ಶನ್ ವಿರುದ್ಧ ಈಗಾಗಲೇ ನಾಲ್ಕು ದೂರುಗಳು ವಿವಿಧ ಠಾಣೆಗಳಲ್ಲಿ ದಾಖಲಾಗಿವೆ. ಇದೀಗ ರೇಣುಕಮ್ಮ ಎಂಬುವರು 37ನೇ ACMM ಕೋರ್ಟ್ ನಲ್ಲಿ ಖಾಸಗಿ ದೂರನ್ನು ದರ್ಶನ್ ವಿರುದ್ಧ ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್ 295(A), 509, 298, 504 ಅಡಿ ಕೇಸ್ ನಮೂದಿಸುವಂತೆ ಖಾಸಗಿ ದೂರನ್ನು ರೇಣುಕಮ್ಮ ದಾಖಲಿಸಿದ್ದಾರೆ. IPC 295(A), ಉದ್ದೇಶ ಪೂರ್ವಕವಾಗಿ ಹೇಳಿಕೆ ನೀಡುವುದು, IPC 509- ಮಹಿಳೆಯರನ್ನು ಅವಮಾನಿಸುವ ಉದ್ದೇಶ, IPC-298- ಧಾರ್ಮಿಕ ಭಾವನೆಗಳಿಗೆ ದಕ್ಕೆ ತರುವುದು, IPC- 504- ಶಾಂತಿ ಭಂಗಕ್ಕೆ ಪ್ರಚೋದನೆ ನೀಡುವ ಕಾರ್ಯಕ್ರಮಗಳನ್ನು ದರ್ಶನ ಮಾಡಿದ್ದಾರೆಂದು ಆರೋಪಿಸಲಾಗಿದೆ.

ಇದನ್ನೂ ಓದಿ:‘ಶೀಘ್ರವೇ ಹೊಸ ದಿನಾಂಕ ಪ್ರಕಟಿಸುತ್ತೇವೆ’; ದರ್ಶನ್ ರ‍್ಯಾಲಿ ರದ್ದಾದ ಬಗ್ಗೆ ಮಾಹಿತಿ ನೀಡಿದ ಫ್ಯಾನ್ಸ್

ರೇಣುಕಮ್ಮ ಪರ ವಕೀಲ ರಂಗನಾಥ್ ಅವರು 37ನೇ ACMM ಕೋರ್ಟ್ ನಲ್ಲಿ ವಾದ ಮಂಡನೆ ಮಾಡಿದ್ದಾರೆ. ಪ್ರಕರಣದ ಅರ್ಜಿ ವಿಚಾರಣೆ ನಡೆಸಿ ಮುಂದೂಡಿದ ACMM ನ್ಯಾಯಾಲಯವು ಮಾರ್ಚ್ 1 ಕ್ಕೆ ಅರ್ಜಿ ವಿಚಾರಣೆ ಮುಂದೂಡಿದೆ. ಇದೇ ಪ್ರಕರಣಗಳಿಗೆ ಸಂಬಂಧಿಸಿದಂತೆ ವಿವಿಧ ಸಂಘಟನೆಗಳು ಸಹ ದೂರುಗಳನ್ನು ದಾಖಲು ಮಾಡಿವೆ. ಆ ದೂರುಗಳ ವಿಚಾರಣೆ ಇನ್ನಷ್ಟೆ ಆಗಬೇಕಿದೆ. ಈಗ ದಾಖಲಾಗಿರುವ ದೂರುಗಳ ಕುರಿತಾಗಿ ದರ್ಶನ್​ಗೆ ನೋಟೀಸ್ ಜಾರಿ ಆಗಿರುವ ಬಗ್ಗೆ ಯಾವುದೇ ಮಾಹಿತಿ ಈವರೆಗೆ ಬಂದಿಲ್ಲ.

‘ಕಾಟೇರ’ ಸಿನಿಮಾದ 50ನೇ ದಿನದ ಕಾರ್ಯಕ್ರಮದಲ್ಲಿ ವೇದಿಕೆ ಮೇಲೆ ಮಾತನಾಡಿದ್ದ ನಟ ದರ್ಶನ್, ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಅವರನ್ನು ಉದ್ದೇಶಿಸಿ, ‘ತಗಡು’, ‘ಗುಮ್ಮಿಸ್ಕೋತೀಯ’ ಎಂಬಿತ್ಯಾದಿ ಪದಗಳನ್ನು ಬಳಸಿ ಮೂದಲಿಸಿದ್ದರು. ಉಮಾಪತಿ ಶ್ರೀನಿವಾಸ್, ‘ಉಪಾಧ್ಯಕ್ಷ’ ಸಿನಿಮಾದ ಪ್ರಚಾರದ ಸಮಯದಲ್ಲಿ ‘ಕಾಟೇರ’ ಸಿನಿಮಾದ ಕತೆ ತಾವು ಮಾಡಿಸಿದ್ದು ಎಂದು ಹೇಳಿದ್ದಕ್ಕೆ ಪ್ರತಿಕ್ರಿಯೆಯಾಗಿ ದರ್ಶನ್ ಆ ಪದಗಳನ್ನು ಬಳಸಿ ಎಚ್ಚರಿಕೆಯ ಧ್ವನಿಯಲ್ಲಿ ಮಾತನಾಡಿದ್ದರು.

ಅದಕ್ಕೆ ಮುನ್ನ ದರ್ಶನ್​ ಚಿತ್ರರಂಗದಕ್ಕೆ ಕಾಲಿರಿಸಿ 25 ವರ್ಷಗಳಾದ ಸಂಭ್ರಮಾಚರಣೆಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ‘ಇಂದು ಇವಳು ಇರ್ತಾಳೆ, ನಾಳೆ ಅವಳು ಇರ್ತಾಳೆ’ ಎಂಬ ಪದಬಳಕೆ ಮಾಡಿದ್ದರು. ಇದರ ಬಗ್ಗೆಯೂ ಈಗ ವಿವಾದ ಆಗಿದ್ದು, ಮಹಿಳಾಪರ ಸಂಘಟನೆಗಳು ಆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿವೆ. ತಮ್ಮ ವಿರುದ್ಧ ದಾಖಲಾದ ದೂರುಗಳ ಬಗ್ಗೆ ದರ್ಶನ್ ಈ ವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ಲಾಂಗ್ ಹಿಡಿದ ಪ್ರಕರಣ: ಮತ್ತೆ ಪೊಲೀಸ್ ಠಾಣೆಗೆ ರಜತ್, ವಿನಯ್ ಗೌಡ ಅಲೆದಾಟ
ಲಾಂಗ್ ಹಿಡಿದ ಪ್ರಕರಣ: ಮತ್ತೆ ಪೊಲೀಸ್ ಠಾಣೆಗೆ ರಜತ್, ವಿನಯ್ ಗೌಡ ಅಲೆದಾಟ