AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಫ್ಟ್​ವೇರ್​ ಎಂಜಿನಿಯರ್​ to ಌಕ್ಟರ್​ to ಌಂಕರ್​: ಮಾದಕ ಜಾಲದ ಕೊಂಡಿ ಇಲ್ಲಿದೆ ನೋಡಿ

ಬೆಂಗಳೂರು: ಬಂಧಿತ ಬಾಲಿವುಡ್​ ನಟ ಕಿಶೋರ್​ಗೂ ಅನುಶ್ರೀಗೂ 5 ವರ್ಷಗಳಿಂದ ನಂಟಿದೆ ಎಂದು ತಿಳಿದುಬಂದಿದೆ. ಮುಂಬೈ ಸೇರಿ ವಿವಿಧ ಕಡೆ ಇಬ್ಬರು ಒಟ್ಟಿಗೆ ಓಡಾಡಿರುವ ಮಾಹಿತಿ ಸಹ ಸಿಕ್ಕಿದೆ. ಜೊತೆಗೆ, ಕಿಶೋರ್​ ಌಂಕರ್ ಅನುಶ್ರೀ ಜೊತೆ ಮಾತನಾಡಿರೋ ಕಾಲ್ ಲಿಸ್ಟ್ ಲಭ್ಯವಾಗಿದ್ದು ಆಕೆಗೆ ಕರೆ ಮಾಡಿದ್ದ ಬಗ್ಗೆ ತನಿಖಾಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ. ಇದಲ್ಲದೆ, ಅನುಶ್ರೀ ಜೊತೆ ಪಾರ್ಟಿ ಮಾಡಿರುವುದಾಗಿ ಮತ್ತೊಬ್ಬ ಬಂಧಿತ ಆರೋಪಿ ತರುಣ್ ಹೇಳಿದ್ದ ಎಂದು ತಿಳಿದುಬಂದಿದೆ. ಸದ್ಯ ಬೆಂಗಳೂರಲ್ಲಿ ಅರೆಸ್ಟ್ ಆಗಿರೋ ಪ್ರತೀಕ್ […]

ಸಾಫ್ಟ್​ವೇರ್​ ಎಂಜಿನಿಯರ್​ to ಌಕ್ಟರ್​ to ಌಂಕರ್​: ಮಾದಕ ಜಾಲದ ಕೊಂಡಿ ಇಲ್ಲಿದೆ ನೋಡಿ
KUSHAL V
| Updated By: ಸಾಧು ಶ್ರೀನಾಥ್​|

Updated on: Sep 24, 2020 | 4:41 PM

Share

ಬೆಂಗಳೂರು: ಬಂಧಿತ ಬಾಲಿವುಡ್​ ನಟ ಕಿಶೋರ್​ಗೂ ಅನುಶ್ರೀಗೂ 5 ವರ್ಷಗಳಿಂದ ನಂಟಿದೆ ಎಂದು ತಿಳಿದುಬಂದಿದೆ. ಮುಂಬೈ ಸೇರಿ ವಿವಿಧ ಕಡೆ ಇಬ್ಬರು ಒಟ್ಟಿಗೆ ಓಡಾಡಿರುವ ಮಾಹಿತಿ ಸಹ ಸಿಕ್ಕಿದೆ. ಜೊತೆಗೆ, ಕಿಶೋರ್​ ಌಂಕರ್ ಅನುಶ್ರೀ ಜೊತೆ ಮಾತನಾಡಿರೋ ಕಾಲ್ ಲಿಸ್ಟ್ ಲಭ್ಯವಾಗಿದ್ದು ಆಕೆಗೆ ಕರೆ ಮಾಡಿದ್ದ ಬಗ್ಗೆ ತನಿಖಾಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ. ಇದಲ್ಲದೆ, ಅನುಶ್ರೀ ಜೊತೆ ಪಾರ್ಟಿ ಮಾಡಿರುವುದಾಗಿ ಮತ್ತೊಬ್ಬ ಬಂಧಿತ ಆರೋಪಿ ತರುಣ್ ಹೇಳಿದ್ದ ಎಂದು ತಿಳಿದುಬಂದಿದೆ.

ಸದ್ಯ ಬೆಂಗಳೂರಲ್ಲಿ ಅರೆಸ್ಟ್ ಆಗಿರೋ ಪ್ರತೀಕ್ ಶೆಟ್ಟಿ, ಕಿಶೋರ್ ಶೆಟ್ಟಿ ಮತ್ತು ತರುಣ್​ ಎಲ್ಲರೂ ಗೆಳೆಯರು. ಪ್ರತೀಕ್ ಶೆಟ್ಟಿಯನ್ನು ಬೆಂಗಳೂರಿನ ಪೊಲೀಸರು 15 ದಿನಗಳ ಹಿಂದೆ ಬಂಧಿಸಿದ್ದರು. ಪ್ರತೀಕ್‌ ಶೆಟ್ಟಿಗೆ ಸ್ಯಾಂಡಲ್‌ವುಡ್‌ನ ನಟ-ನಟಿಯರ ಡ್ರಗ್ಸ್‌ ಸಂಪರ್ಕವಿತ್ತು. ಸಂಜನಾ-ರಾಗಿಣಿಗೆ ಸಾಕಷ್ಟು ಸಂದರ್ಭದಲ್ಲಿ ಪ್ರತೀಕ್ ಶೆಟ್ಟಿಯಿಂದ ಡ್ರಗ್ಸ್‌ ಪಡೆದಿದ್ದರಂತೆ. ಇತ್ತ ಕಿಶೋರ್‌ ಮಂಗಳೂರಿನಲ್ಲಿ ಪಾರ್ಟಿ ಮಾಡಿ ಡ್ರಗ್ಸ್‌ ಸರಬರಾಜು ಮಾಡಿದ್ದ. ಹಾಗಾಗಿ, ಮಂಗಳೂರಿನ ಕಿಶೋರ್‌ ಶೆಟ್ಟಿ ಪ್ರಕರಣಕ್ಕೂ ಕೂಡ ಬೆಂಗಳೂರಿನ ನಂಟು ಇದೆ ಅನ್ನೋ ಗುಮಾನಿ ವ್ಯಕ್ತವಾಗಿದೆ.

ಪ್ರತೀಕ್ ಶೆಟ್ಟಿಯಿಂದ ಅನುಶ್ರೀವರೆಗೆ ತನಿಖೆ ಬಂದು ನಿಂತಿದ್ಹೇಗೆ? ಸಾಫ್ಟ್​ವೇರ್​ ಇಂಜಿನಿಯರ್​ ಆಗಿದ್ದ ಪ್ರತೀಕ್​ ಶೆಟ್ಟಿ 2018 ರ ಬಾಣಸವಾಡಿ ಡ್ರಗ್ಸ್ ಕೇಸ್​​ನ ಆರೋಪಿ. ಸ್ಯಾಂಡಲ್​ವುಡ್ ಡ್ರಗ್ಸ್​​ ಕೇಸ್​ ತನಿಖೆಗಿಳಿದಾಗ ಆತ ಮತ್ತೆ ಅರೆಸ್ಟ್ ಆಗಿದ್ದ. ಪ್ರತೀಕ್​ ವಿಚಾರಣೆ ವೇಳೆ ಕಿಶೋರ್ ಮತ್ತು ತರುಣ್ ಹೆಸರನ್ನು ತನಿಖಾಧಿಕಾರಿಗಳಿಗೆ ಬಾಯ್ಬಿಟ್ಟಿದ್ದನಂತೆ.

ಈ ಬಗ್ಗೆ ಮಂಗಳೂರು ಸಿಸಿಬಿ ವಿಭಾಗಕ್ಕೆ ಬೆಂಗಳೂರಿನ ಸಿಸಿಬಿ ಅಧಿಕಾರಿಗಳು ಮಾಹಿತಿ ಕೊಟ್ಟಿದ್ದರು ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಕಿಶೋರ್ ಶೆಟ್ಟಿಯನ್ನ ಬಂಧಿಸಿದ್ದರು. ಬಳಿಕ ಆರೋಪಿ ತರುಣ್​ಗೆ ಕೂಡ ಖೆಡ್ಡಾ ತೋಡಿದ್ದರು. ಇದೀಗ, ಬಾಲಿವುಡ್​ ನಟ ಕಿಶೋರ್ ಆ್ಯಂಕರ್ ಅನುಶ್ರೀ ಹೆಸರು ಬಾಯ್ಬಿಟ್ಟಿರುವ ಮಾಹಿತಿ ದೊರೆತಿದೆ. ಅದಲ್ಲದೆ, ಆ್ಯಂಕರ್ ಅನುಶ್ರೀ ಜೊತೆ ಪಾರ್ಟಿ ಮಾಡಿರೋದಾಗಿ ಸಹ ಒಪ್ಪಿಕೊಂಡಿದ್ದಾನಂತೆ. ಸದ್ಯ ಕಿಶೋರ್ ಹೇಳಿಕೆಯನ್ನ ಆಧರಿಸಿ ಅನುಶ್ರೀಗೆ ನೋಟಿಸ್ ಜಾರಿಯಾಗಿದೆ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ