AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pogaru | ‘ಪೊಗರು’ ಸಿನಿಮಾ ವಿವಾದಕ್ಕೆ ತೆರೆ: ಚಿತ್ರದಲ್ಲಿನ ವಿವಾದಾತ್ಮಕ ದೃಶ್ಯಗಳಿಗೆ ಕತ್ತರಿ

ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾದಲ್ಲಿ ಬ್ರಾಹ್ಮಣ ಸಮುದಾಯದ ಕುರಿತು ವಿವಾದಾತ್ಮಕ ದೃಶ್ಯಗಳು ಇದ್ದ ಹಿನ್ನೆಲೆಯಲ್ಲಿ ಸಮುದಾಯದವರಿಂದ ತೀವ್ರ ಪ್ರತಿಭಟನೆ ನಡೆಯಿತು. ಇದೀಗ, ಬ್ರಾಹ್ಮಣ ಸಮುದಾಯದ ಒತ್ತಾಯದ ಮೇರೆಗೆ ಪೊಗರು ಚಿತ್ರದಲ್ಲಿನ ವಿವಾದಾತ್ಮಕ ದೃಶ್ಯಗಳಿಗೆ ಕತ್ತರಿ ಬಿದ್ದಿದೆ. ಪೊಗರು ಚಿತ್ರತಂಡ ವಿವಾದಿತ ದೃಶ್ಯಗಳಿಗೆ ಕತ್ತರಿ ಹಾಕಿದೆ.

Pogaru | ‘ಪೊಗರು’ ಸಿನಿಮಾ ವಿವಾದಕ್ಕೆ ತೆರೆ: ಚಿತ್ರದಲ್ಲಿನ ವಿವಾದಾತ್ಮಕ ದೃಶ್ಯಗಳಿಗೆ ಕತ್ತರಿ
‘ಪೊಗರು’ ಸಿನಿಮಾ ವಿವಾದಕ್ಕೆ ತೆರೆ
Follow us
KUSHAL V
|

Updated on:Feb 23, 2021 | 11:51 PM

ಬೆಂಗಳೂರು: ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾದಲ್ಲಿ ಬ್ರಾಹ್ಮಣ ಸಮುದಾಯದ ಕುರಿತು ವಿವಾದಾತ್ಮಕ ದೃಶ್ಯಗಳು ಇದ್ದ ಹಿನ್ನೆಲೆಯಲ್ಲಿ ಸಮುದಾಯದವರಿಂದ ತೀವ್ರ ಪ್ರತಿಭಟನೆ ನಡೆಯಿತು. ಇದೀಗ, ಬ್ರಾಹ್ಮಣ ಸಮುದಾಯದ ಒತ್ತಾಯದ ಮೇರೆಗೆ ಪೊಗರು ಚಿತ್ರದಲ್ಲಿನ ವಿವಾದಾತ್ಮಕ ದೃಶ್ಯಗಳಿಗೆ ಕತ್ತರಿ ಬಿದ್ದಿದೆ. ಪೊಗರು ಚಿತ್ರತಂಡ ವಿವಾದಿತ ದೃಶ್ಯಗಳಿಗೆ ಕತ್ತರಿ ಹಾಕಿದೆ.

ಈ ಮೂಲಕ, ಪೊಗರು ಸಿನಿಮಾ ವಿವಾದ ಸುಖಾಂತ್ಯ ಕಂಡಿದೆ. ಸದ್ಯ ಪೊಗರು ಸಿನಿಮಾ ನೋಡಿದ ಬ್ರಾಹ್ಮಣ ಸಭಾದ ಸದಸ್ಯರು ವಿವಾದಾತ್ಮಕ ಸೀನ್​ಗಳಿಗೆ ಕತ್ತರಿ ಹಾಕಿರುವುದನ್ನು ಗಮನಿಸಿದ್ದಾರೆ. ಈ ಹಿಂದೆ, ನಿರ್ದೇಶಕ ನಂದಕಿಶೋರ್ ಮತ್ತು ಸಮುದಾಯದ ಸದಸ್ಯರ ಮಧ್ಯೆ ಮಾತುಕತೆ ನಡೆದಿತ್ತು. ಸದ್ಯ, ತಾಂತ್ರಿಕ ಕಾರಣದಿಂದ ಸಿನಿಮಾ ಒಂದು ದಿನ ತಡವಾಗಿ ಥಿಯೇಟರ್​ನಲ್ಲಿ ಪ್ರದರ್ಶನವಾಗಬಹುದು. ಸದ್ಯ, ಸೆನ್ಸಾರ್ ಮಂಡಳಿ ಮುಂದೆ ಮತ್ತೆ ಸಿನಿಮಾ ಕಳಿಸಲಾಗುತ್ತೆ. ಅನುಮತಿ ಸಿಕ್ಕ ನಂತರ‌ ಹೊಸ ಪ್ರಿಂಟ್​ನ ಪ್ರದರ್ಶನ ಆರಂಭಿಸುತ್ತೇವೆ ಎಂದು ಪೊಗರು ಚಿತ್ರತಂಡ ತಿಳಿಸಿದೆ.

ಇದಕ್ಕೂ ಮುನ್ನ, ಚಿತ್ರದಲ್ಲಿ ಬ್ರಾಹ್ಮಣರ ಬಗ್ಗೆ ವಿವಾದಾತ್ಮಕ ದೃಶ್ಯಗಳಿರುವ ಬಗ್ಗೆ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಮಾತನಾಡಿದ ಸಾ.ರಾ.ಗೋವಿಂದು ಪೊಗರು ಸೆನ್ಸಾರ್​ ಆದ ಚಿತ್ರ, ಅವರೇ ತಡೆಹಿಡಿಯಬಹುದಿತ್ತು. ಅಂಥ ಅಚಾತುರ್ಯ ಆಗಿದ್ರೆ ಅವರೇ ತಡೆಹಿಡಿಯಬಹುದಾಗಿತ್ತು. ಈಗ ಕೈತಪ್ಪಿ ಆಗಿದೆ, ಆದರೂ ನೋವಾಗಿದ್ದರೆ ತೆಗೆಯುತ್ತಾರೆ. ಬ್ರಾಹ್ಮಣ ಸಮಾಜಕ್ಕೆ‌ ನೋವಾಗಿದ್ದರೆ ದೃಶ್ಯವನ್ನು ತೆಗೆಯುತ್ತಾರೆ ಎಂದು ಹೇಳಿದರು.

ಇನ್ನೂ, ಈ ಕುರಿತು ಪ್ರತಿಕ್ರಿಯಿಸಿದ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜಯರಾಜ್ ಯಾರ ಭಾವನೆಗೂ ಧಕ್ಕೆ‌ ತರುವ, ಅಗೌರವ ತರುವ ಉದ್ದೇಶವಿಲ್ಲ. ಪೊಗರು ಚಿತ್ರದಲ್ಲಿನ ವಿವಾದಿತ ದೃಶ್ಯ ತೆಗೆದುಹಾಕಲಾಗುವುದು ಎಂದು ಹೇಳಿದರು.

ಈ ನಡುವೆ, ಬ್ರಾಹ್ಮಣ ಸಮುದಾಯ, ಬ್ರಾಹ್ಮಣ ಮಠಾಧೀಶರಿಗೂ ಕ್ಷಮೆ ಇರಲಿ. ನನ್ನನ್ನು ದಯವಿಟ್ಟು ಕ್ಷಮಿಸಿ ಎಂದು ಸಿನಿಮಾದ ನಿರ್ದೇಶಕ ನಂದಕಿಶೋರ್​ ಹೇಳಿದರು. ಚಿತ್ರದಲ್ಲಿ 12 ಅಂಶಗಳನ್ನು ತೆಗೆಯುವಂತೆ ಮನವಿ ಮಾಡಿದ್ದಾರೆ. ವಿವಾದಾತ್ಮಕ ಅಂಶಗಳನ್ನ ತೆಗೆಯುತ್ತೇವೆ. ಇನ್ಮುಂದೆ ಇಂತಹ ತಪ್ಪುಗಳು ಆಗದಂತೆ ನೋಡಿಕೊಳ್ಳುತ್ತೇನೆ ಎಂದು ಫಿಲ್ಮ್ ಚೇಂಬರ್​ನಲ್ಲಿ ಪೊಗರು ನಿರ್ದೇಶಕ ನಂದಕಿಶೋರ್ ಹೇಳಿದರು.

ಇದನ್ನೂ ಓದಿ: Pogaru | ಹಿಂದೂಗಳನ್ನ ಅವಮಾನಿಸೋದು ಫ್ಯಾಷನ್​ ಆಗಿಬಿಟ್ಟಿದೆ -ಪೊಗರು ವಿರುದ್ಧ ಶೋಭಾ ಕರಂದ್ಲಾಜೆ ಆಕ್ರೋಶ

Published On - 11:47 pm, Tue, 23 February 21

ಪ್ರಧಾನಿ ಮೋದಿ ಉಗ್ರರಿಗೆ ತಕ್ಕ ಪಾಠ ಕಲಿಸದೆ ಬಿಡೋದಿಲ್ಲ: ರಾಜೇಶ್ವರಿ
ಪ್ರಧಾನಿ ಮೋದಿ ಉಗ್ರರಿಗೆ ತಕ್ಕ ಪಾಠ ಕಲಿಸದೆ ಬಿಡೋದಿಲ್ಲ: ರಾಜೇಶ್ವರಿ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ
ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ
ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ
ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಅಲರ್ಟ್​
ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಅಲರ್ಟ್​