AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇಂಥ ಗಿಫ್ಟ್ ನೀಡಲು ಅಲ್ಲಾಹಗೆ ಮಾತ್ರ ಅಧಿಕಾರ ಇದೆ’; ಎರಡನೇ ಬಾರಿ ತಾಯಿ ಆಗಲಿದ್ದಾರೆ ‘ಕೂಲ್’ ಸಿನಿಮಾ ನಟಿ

‘ಕೂಲ್’ ಸಿನಿಮಾದ ನಟಿ ಸನಾ ಖಾನ್ ಅವರು ಎರಡನೇ ಮಗುವನ್ನು ನಿರೀಕ್ಷಿಸುತ್ತಿದ್ದಾರೆ ಎಂದು ಘೋಷಿಸಿದ್ದಾರೆ. ಇದು ಅಲ್ಲಾಹನ ಆಶೀರ್ವಾದ ಎಂದು ತಿಳಿಸಿರುವ ಅವರು ತಮ್ಮ ಸಂತೋಷವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಸನಾ ಅವರಿಗೆ ಅಭಿಮಾನಿಗಳಿಂದ ಶುಭಾಶಯಗಳು ಹರಿದುಬರುತ್ತಿವೆ.

‘ಇಂಥ ಗಿಫ್ಟ್ ನೀಡಲು ಅಲ್ಲಾಹಗೆ ಮಾತ್ರ ಅಧಿಕಾರ ಇದೆ’; ಎರಡನೇ ಬಾರಿ ತಾಯಿ ಆಗಲಿದ್ದಾರೆ ‘ಕೂಲ್’ ಸಿನಿಮಾ ನಟಿ
ಸನಾ ಖಾನ್
ರಾಜೇಶ್ ದುಗ್ಗುಮನೆ
|

Updated on:Nov 23, 2024 | 12:03 PM

Share

ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ‘ಕೂಲ್’ ಚಿತ್ರದಲ್ಲಿ ನಟಿಸಿದ್ದ ಸನಾ ಖಾನ್ ಅವರು ಇತ್ತೀಚೆಗೆ ಚಿತ್ರರಂಗ ತೊರೆದಿದ್ದಾರೆ. ಮುಸ್ಲಿಂ ಧರ್ಮಗುರು ಅನಾಸ್ ಸಯ್ಯದ್ ಅವರನ್ನು ಮದುವೆ ಆಗಿದ್ದರು. ಈಗ ಅವರು ಎರಡನೇ ಮಗುವಿನ ನಿರೀಕ್ಷೆಯಲ್ಲಿ ಇದ್ದಾರೆ. ಈ ವಿಚಾರವನ್ನು ಅವರು ಇತ್ತೀಚೆಗೆ ರಿವೀಲ್ ಮಾಡಿದ್ದಾರೆ. ಸೋಶಿಯಲ್ ವೀಡಿಯಾದಲ್ಲಿ ಈ ಬಗ್ಗೆ ಅವರು ವಿಡಿಯೋ ಪೋಸ್ಟ್ ಮಾಡಿದ್ದಾರೆ.  ಅವರಿಗೆ ಎಲ್ಲರೂ ಶುಭಾಶಯ ಕೋರುತ್ತಿದ್ದಾರೆ.

‘ಅಲ್ಲಾಹನ ಆಶೀರ್ವಾದದಿಂದ ನಾವು ಮೂವರು ಈಗ ನಾಲ್ವರಾಗುತ್ತಿದ್ದೇವೆ. ಮಗುವಿನ ಆಗಮನದ ನಿರೀಕ್ಷೆಯಲ್ಲಿದ್ದೇವೆ. ಸೈಯದ್ ತಾರಿಕ್ ಜಮೀಲ್ ಅಣ್ಣನಾಗಲು ಉತ್ಸುಕನಾಗಿದ್ದಾನೆ. ಮಗುವಿಗಾಗಿ ನಾವು ಕಾಯುತ್ತಿದ್ದೇವೆ. ಅಲ್ಲಾಹ ನಿಮ್ಮ ಆಶೀರ್ವಾದ ಇರಲಿ’ ಎಂದು ಅವರು ಬರೆದುಕೊಂಡಿದ್ದಾರೆ.

‘ಇಂಥ ಉಡುಗೊರೆಯನ್ನು ನೀಡಲು ಅಲ್ಲಾಹನಿಗೆ ಮಾತ್ರ ಅಧಿಕಾರವಿದೆ. ನಮಗೆ ಒಳ್ಳೆಯದು ಮಾಡಲಿ. ಅಲ್ಲಾಹ ನಮ್ಮ ಪ್ರಾರ್ಥನೆಯನ್ನು ಸ್ವೀಕರಿಸಲಿ’ ಎಂದು ಅವರು ಕೋರಿದ್ದಾರೆ. ಸನಾ ಖಾನ್ ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ.

ಸನಾ ಅವರು ಮೂಲತಃ ಕೇರಳದವರು. ಅವರು ಹುಟ್ಟಿ ಬೆಳೆದಿದ್ದು ಮುಂಬೈನಲ್ಲಿ. ಅವರು 2005ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟರು. ಅವರು ಹಿಂದಿ ಸಿನಿಮಾಗಳಲ್ಲಿ ಹೆಚ್ಚು ಕಾಣಿಸಿಕೊಂಡಿದ್ದರು. 2011ರಲ್ಲಿ ‘ಕೂಲ್’ ಸಿನಿಮಾದಲ್ಲಿ ನಟಿಸಿದ್ದರು. ಗಣೇಶ್​ಗೆ ಅವರು ಜೊತೆಯಾಗಿದ್ದರು. ಅವರು ತಮಿಳು, ತೆಲುಗು, ಮಲಯಾಳಂ ಭಾಷೆಗಳಲ್ಲೂ ನಟಿಸಿದ್ದಾರೆ. 2019ರಲ್ಲಿ ರಿಲೀಸ್ ಆದ ತಮಿಳಿನ ‘ಅಯೋಗ್ಯ’ ಅವರ ನಟನೆಯ ಕೊನೆಯ ಚಿತ್ರ.

ಇದನ್ನೂ ಓದಿ: ರೆಹಮಾನ್ ಜೊತೆ ಲಿಂಕ್; ಮಾಧ್ಯಮಗಳ ಎದುರು ಬರಲು ಭಯಬಿದ್ದ ಮೋಹಿನಿ ಡೇ

ಸನಾ 2020ರಲ್ಲಿ ಚಿತ್ರರಂಗ ತೊರೆದರು. ‘ನಾನು ಸಿನಿಮಾ ರಂಗಕ್ಕೆ ಗುಡ್​ಬೈ ಹೇಳುತ್ತಿದ್ದೇನೆ’ ಎಂದು ಹೇಳಿದ್ದರು. ಅವರು 2020ರ ನವೆಂಬರ್​ನಲ್ಲಿ ಮದುವೆ ಆದರು. ಸೈಯ್ಯದ್ ತಾರಿಖ್ ಜಮೀಲ್​ ಹೆಸರಿನ ಮಗುವಿಗೆ ಅವರು ಜನ್ಮನೀಡಿದರು. ಅವರು ಕೆಲವು ಫೌಂಡೇಷನ್ ಸ್ಥಾಪಿಸಿ ಸಾಮಾಜಿಕ ಕೆಲಸ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:02 pm, Sat, 23 November 24

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್