AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡು ದಿನಗಳಲ್ಲಿ ‘ಕೂಲಿ’ ಸಿನಿಮಾ ಟಿಕೆಟ್ ಪ್ರೈಸ್ ಹೈಕ್​ಗೆ ಶಾಕ್ ಕೊಡಲಿದೆ ಸರ್ಕಾರ?

ಬೆಂಗಳೂರಿನಲ್ಲಿ 'ಕೂಲಿ' ಸಿನಿಮಾದ ಟಿಕೆಟ್ ದರ ಮಿರಿ ಮೀರಿ ಏರಿಕೆಯಾಗಿದೆ. ಸರ್ಕಾರ 200 ರೂಪಾಯಿಗಳ ಮಿತಿಯನ್ನು ಹೇರಲು ಆದೇಶ ಹೊರಡಿಸಲು ಸಿದ್ಧವಾಗಿದೆ. 'ಸು ಫ್ರಮ್ ಸೋ' ಚಿತ್ರದ ಶೋಗಳನ್ನು ರದ್ದುಗೊಳಿಸಿ 'ಕೂಲಿ' ಮತ್ತು 'ವಾರ್ 2' ಚಿತ್ರಗಳಿಗೆ ಆದ್ಯತೆ ನೀಡುತ್ತಿರುವುದು ಕನ್ನಡಿಗರಲ್ಲಿ ಬೇಸರ ಉಂಟುಮಾಡಿದೆ.

ಎರಡು ದಿನಗಳಲ್ಲಿ ‘ಕೂಲಿ’ ಸಿನಿಮಾ ಟಿಕೆಟ್ ಪ್ರೈಸ್ ಹೈಕ್​ಗೆ ಶಾಕ್ ಕೊಡಲಿದೆ ಸರ್ಕಾರ?
ರಜಿನಿ-ಸಿದ್ದರಾಮಯ್ಯ
ರಾಜೇಶ್ ದುಗ್ಗುಮನೆ
|

Updated on:Aug 14, 2025 | 10:11 AM

Share

ಬೆಂಗಳೂರಿನಲ್ಲಿ ‘ಕೂಲಿ’ ಸಿನಿಮಾಗೆ (Coolie Movie) ಭರ್ಜರಿ ಶೋ ಸಿಕ್ಕಿದೆ. ರಜನಿಕಾಂತ್ ನಟನೆಯ ಈ ಸಿನಿಮಾದಲ್ಲಿ ಉಪೇಂದ್ರ, ಆಮಿರ್ ಖಾನ್ ಸೇರಿದಂತೆ ಅನೇಕ ಸ್ಟಾರ್ ಹಿರೋಗಳು ಇದ್ದಾರೆ. ಅನೇಕ ಕಡೆಗಳಲ್ಲಿ ‘ಸು ಫ್ರಮ್ ಸೋ’ ಸಿನಿಮಾ ಬದಲು ಕೂಲಿ ಚಿತ್ರ ಪ್ರದರ್ಶನ ಮಾಡಲಾಗುತ್ತಿದೆ. ಎಲ್ಲಕ್ಕಿಂತ ಮುಖ್ಯವಾಗಿ ‘ಕೂಲಿ’ ಚಿತ್ರದ ಟಿಕೆಟ್ ಬೆಲೆ 400 ರೂಪಾಯಿಗೂ ಅಧಿಕವಾಗಿದೆ. ಈ ವಿಚಾರ ಸಾಕಷ್ಟು ಚರ್ಚೆಗಳನ್ನು ಹುಟ್ಟುಹಾಕಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಫಿಲ್ಮ್ ಚೇಂಬರ್ ಅಧ್ಯಕ್ಷ ನರಸಿಂಹಲು ಅವರು ಮಾತನಾಡಿದ್ದಾರೆ. ಅವರು ಒಂದು ಸಿಹಿ ಸುದ್ದಿ ಕೊಟ್ಟಿದ್ದಾರೆ.

ಕರ್ನಾಟಕ ಸರ್ಕಾರ ಒಂದು ಆದೇಶ ಹೊರಡಿಸಲು ಸಿದ್ಧತೆ ನಡೆಸಿದೆ. ಸಿನಿಮಾದ ಟಿಕೆಟ್ ದರ 200 ರೂಪಾಯಿ ಮಿತಿ ದಾಟದಂತೆ ಆದೇಶ ಇದೆ. ಈ ಆದೇಶಕ್ಕೆ ವಿರೋಧವಿದ್ದರೆ ತಿಳಿಸುವಂತೆ ಸರ್ಕಾರ ಸೂಚಿಸಿದೆ. ಈ ಆದೇಶ ಇನ್ನು ಎರಡರಿಂದ ಮೂರು ದಿನಗಳಲ್ಲಿ ಜಾರಿಗೆ ಬರುವ ನಿರೀಕ್ಷೆ ಇದೆ ಎಂಬುದು ನರಸಿಂಹಲು ಅವರ ಮಾತು. ಈ ರೀತಿಯ ಬೆಲೆ ಏರಿಕೆಯನ್ನು ನಮ್ಮಿಂದ ತಡೆಯಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.

ಈ ಆದೇಶ ಜಾರಿಗೆ ಬಂದರೆ ಪ್ರೇಕ್ಷಕರು ನಿಟ್ಟುಸಿರು ಬಿಡುತ್ತಾರೆ. ಸದ್ಯ ವೀಕೆಂಡ್​ನಲ್ಲಿ ಮಲ್ಟಿಪ್ಲೆಕ್ಸ್​ನಲ್ಲಿ ‘ಕೂಲಿ’ ಸಿನಿಮಾದ ಟಿಕೆಟ್ ದರ 400 ರೂಪಾಯಿಯಿಂದ ಸಾವಿರ ರೂಪಾಯಿವರೆಗೆ ನಿಗದಿ ಮಾಡಲಾಗಿದೆ. ಬುಕ್ ಮೈ ಶೋ ತೆರಿಗೆ ಸೇರಿದರೆ ಈ ದರ ಮತ್ತಷ್ಟು ಹೆಚ್ಚಲಿದೆ. ಇನ್ನು ಎರಡು ಮೂರು ದಿನಗಳಲ್ಲಿ ಆದೇಶ ಜಾರಿಗೆ ಬಂದರೆ ಪ್ರೇಕ್ಷಕರು ನಿಟ್ಟುಸಿರು ಬಿಡಲಿದ್ದಾರೆ.

ಇದನ್ನೂ ಓದಿ:  ಸಿಂಗಪುರದಲ್ಲೂ ರಜನೀ ಹವಾ, ‘ಕೂಲಿ’ ಸಿನಿಮಾ ನೋಡಲು ರಜೆ ಘೋಷಣೆ

‘ಸು ಫ್ರಮ್ ಸೋ’ ಸಿನಿಮಾ ಅನೇಕ ಕಡೆಗಳಲ್ಲಿ ಒಳ್ಳೆಯ ಪ್ರದರ್ಶನ ಕಾಣುತ್ತಿದೆ. ಈ ಚಿತ್ರ ಈಗಾಗಲೇ 100 ಕೋಟಿ ರೂಪಾಯಿ ಕ್ಲಬ್ ಸೇರುವ ಸೂಚನೆ ಸಿಕ್ಕಿದೆ. ಬೆಂಗಳೂರಿನಲ್ಲಿ ಅನೇಕ ಕಡೆಗಳಲ್ಲಿ ಈ ಶೋನ ತೆಗೆದು ‘ಕೂಲಿ’ ಹಾಗೂ ‘ವಾರ್ 2’ ಚಿತ್ರಗಳಿಗೆ ಮಣೆ ಹಾಕುವ ಕೆಲಸ ಮಾಡಲಾಗುತ್ತಿದೆ. ಇದು ಕನ್ನಡಿಗರ ಬೇಸರಕ್ಕೆ ಕಾರಣ ಆಗಿದೆ. ಇದನ್ನು ಕೂಡ ‘ಖಂಡಿಸೋದಾಗಿ’ ನರಸಿಂಹಲು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:34 pm, Wed, 13 August 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು