AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ ಸ್ನೇಹಿತನನ್ನ ಕಳೆದುಕೊಂಡು ಸ್ಮಶಾನದಲ್ಲಿ ಮರುಗಿದ ಜಿಮ್​ ರವಿ

ಮೃತರ ಅಂತ್ಯಕ್ರಿಯೆಗಾಗಿ ಕುಟುಂಬದವರು ಸಾಲುಗಟ್ಟಿ ನಿಂತಿರುವ ದೃಶ್ಯ ನೋಡಿದರೆ ಮನ ಕಲಕುತ್ತದೆ. ಚಾಮರಾಜಪೇಟೆಯ ಸ್ಮಶಾನದಲ್ಲಿ ವಿಡಿಯೋ ಮಾಡಿರುವ ರವಿ ಅವರು ಅಲ್ಲಿನ ಚಿತ್ರಣವನ್ನು ವಿವರಿಸಿದ್ದಾರೆ.

ಕೊರೊನಾದಿಂದ ಸ್ನೇಹಿತನನ್ನ ಕಳೆದುಕೊಂಡು ಸ್ಮಶಾನದಲ್ಲಿ ಮರುಗಿದ ಜಿಮ್​ ರವಿ
ಜಿಮ್ ರವಿ
ಮದನ್​ ಕುಮಾರ್​
|

Updated on: May 02, 2021 | 7:57 AM

Share

ಕೋವಿಡ್​​ 2ನೇ ಅಲೆಗೆ ಇಡೀ ದೇಶವೇ ತತ್ತರಿಸಿದೆ. ಪ್ರತಿದಿನ ಹೆಣಗಳು ಉರುಳುತ್ತಿವೆ. ಪ್ರಾಣ ಹೋಗುತ್ತಿದ್ದರೂ ಕೂಡ ಆಸ್ಪತ್ರೆಗಳಲ್ಲಿ ಬೆಡ್​ ಸಿಗದಂತಹ ದುಸ್ಥಿತಿ ನಿರ್ಮಾಣ ಆಗಿದೆ. ಬೆಂಗಳೂರಿನಲ್ಲಂತೂ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಸೆಲೆಬ್ರಿಟಿಗಳು ಕೂಡ ಈ ಸಂದರ್ಭದಲ್ಲಿ ಅಸಹಾಯಕರಾಗಿದ್ದಾರೆ. ತಮ್ಮವರನ್ನು ಕಳೆದುಕೊಂಡು ಅನೇಕರು ಕಷ್ಟ ಪಡುತ್ತಿದ್ದಾರೆ. ಇತ್ತೀಚೆಗೆ ನಟ ಜಿಮ್​ ರವಿ ಅವರ ಸ್ನೇಹಿತರೊಬ್ಬರು ನಿಧನರಾಗಿದ್ದು, ಚಾಮರಾಜಪೇಟೆಯ ರುದ್ರಭೂಮಿಯಲ್ಲಿ ರವಿ ದುಃಖ ತೋಡಿಕೊಂಡಿದ್ದಾರೆ.

ಮೃತರ ಅಂತ್ಯಕ್ರಿಯೆಗಾಗಿ ಕುಟುಂಬದವರು ಸಾಲುಗಟ್ಟಿ ನಿಂತಿರುವ ದೃಶ್ಯ ನೋಡಿದರೆ ಮನ ಕಲಕುತ್ತದೆ. ಚಾಮರಾಜಪೇಟೆಯ ಸ್ಮಶಾನದಲ್ಲಿ ವಿಡಿಯೋ ಮಾಡಿರುವ ರವಿ ಅವರು ಅಲ್ಲಿನ ಚಿತ್ರಣವನ್ನು ಕಟ್ಟಿಕೊಟ್ಟಿದ್ದಾರೆ. ನೂರಾರು ಹೆಣಗಳನ್ನು ಸುಡುತ್ತಿರುವ ದೃಶ್ಯ ಪರಿಸ್ಥಿತಿಯ ಭೀಕರತೆಯನ್ನು ಕಣ್ಣಿಗೆ ಕಟ್ಟುತ್ತಿದೆ.

‘ಇಲ್ಲಿ ಎಷ್ಟು ಸಾವಿರ ಜನ ಸಾಯುತ್ತಿದ್ದಾರೆ ನೋಡಿ. ಇವತ್ತು ನನ್ನ ಸ್ನೇಹಿತರೊಬ್ಬರು ತೀರಿಕೊಂಡರು. ಅವರ ಅಂತ್ಯ ಸಂಸ್ಕಾರಕ್ಕಾಗಿ ಇಲ್ಲಿಗೆ ಬಂದಿದ್ದೇನೆ. ತುಂಬ ದುಃಖ ಆಗುತ್ತಿದೆ. ಎಲ್ಲರೂ ಮನೆಯಲ್ಲೇ ಇರಿ. ಆಗ ನಿಮಗೆ ಒಳ್ಳೆಯದಾಗುತ್ತದೆ. ತಂದೆ-ತಾಯಿಯನ್ನು ನೀವು ಕಾಪಾಡಿಕೊಳ್ಳಬಹುದು. ಇವತ್ತು ಬೆಂಗಳೂರಿನ ಪರಿಸ್ಥಿತಿ ಹೀಗಾಗಿದೆ. ನಿಮ್ಮಲ್ಲಿ ಮನವಿ ಮಾಡಿಕೊಳ್ಳುತ್ತೇನೆ. ಸಾಮಾಜಿಕ ಅಂತರ ಕಾಪಾಡಿಕೊಳ್ಳಿ’ ಎಂದು ರವಿ ಮನವಿ ಮಾಡಿಕೊಂಡಿದ್ದಾರೆ.

‘ಇಲ್ಲಿ ಸಾಲು ಸಾಲು ಹೆಣಗಳು ಬರುತ್ತಿವೆ. ಎಲ್ಲರೂ ನಿಮ್ಮ ಕ್ಷೇಮ ನೋಡಿಕೊಳ್ಳಿ. ಮಾಸ್ಕ್​ ಹಾಕಿಕೊಳ್ಳಿ. ಸ್ಯಾನಿಟೈಸರ್​ ಉಪಯೋಗಿಸಿ. ಉಡಾಫೆ ಮಾತುಬೇಡ. ಸರ್ಕಾರ ಯಾರೋ ಸತ್ತರು ಅಂತ ರಜೆ ಕೊಡುತ್ತಿತ್ತು. ಆದರೆ ಈಗ ನಾವು ಬದುಕಲಿ ಅಂತ ರಜೆ ಕೊಟ್ಟಿದಾರೆ. ಯೋಚನೆ ಮಾಡಿ. ನಮ್ಮ ಪ್ರಾಣ ನಮ್ಮ ಕೈಯಲ್ಲಿ ಇದೆ’ ಎಂದು ರವಿ ಹೇಳಿದ್ದಾರೆ.

ಚಿತ್ರರಂಗದ ಅನೇಕರು ಕೊರೊನಾ ಮಹಾಮಾರಿಗೆ ಬಲಿ ಆಗುತ್ತಿದ್ದಾರೆ. ಏ.26ರಂದು ಖ್ಯಾತ ನಿರ್ಮಾಪಕ, ನಟಿ ಮಾಲಾಶ್ರೀ ಪತಿ ಕೋಟಿ ರಾಮು ಅವರು ನಿಧನರಾದರು. ಯುವ ನಟ-ನಿರ್ಮಾಪಕ ಡಿ.ಎಸ್​. ಮಂಜುನಾಥ್, ಪೆಟ್ರೋಮ್ಯಾಕ್ಸ್​ ಸಿನಿಮಾದ ಕಾರ್ಯಕಾರಿ ನಿರ್ಮಾಪಕ ರಾಜಶೇಖರ್​ ಅವರು ಕೂಡ ಕೊವಿಡ್​ನಿಂದ ಮೃತಪಟ್ಟಿದ್ದಾರೆ. ಹೀಗೆ ಕೊರೊನಾ ಮಹಾಮಾರಿಯ ಮರಣ ಮೃದಂಗ ಮುಂದುವರಿಸಿದೆ.

ಇದನ್ನೂ ಓದಿ: ಕೊವಿಡ್​ ಸೋಂಕಿತ ಸ್ನೇಹಿತರಿಗೆ ಬೆಡ್​ ಸಿಗದೇ 13 ಗಂಟೆ ಅಲೆದಾಡಿದ ನಟಿ ಶ್ರುತಿ ಹರಿಹರನ್​

ಕೊರೊನಾಗೆ ಬಲಿಯಾದ ಮತ್ತೋರ್ವ ಸ್ಯಾಂಡಲ್​ವುಡ್​ ಯುವ ನಿರ್ಮಾಪಕ

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು