AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೊರೊನಾ ಸುಳ್ಳು, ಇದೊಂದು ಮೆಡಿಕಲ್ ಮಾಫಿಯಾ’; ಸಂಚಲನ ಸೃಷ್ಟಿಸಿದ ಅಗ್ನಿ ಶ್ರೀಧರ್​​ ಹೇಳಿಕೆ

ಕೊವಿಡ್​ ಇದೆ ಮತ್ತು ಇಲ್ಲ ಎನ್ನುವ ಬಗ್ಗೆ ಕೊರೊನಾ ಕಾಣಿಸಿಕೊಂಡಾಗಿನಿಂದಲೂ ಚರ್ಚೆ ನಡೆಯುತ್ತಿದೆ. ಹಣ ಮಾಡಿಕೊಳ್ಳೋಕೆ ನಡೆಯುತ್ತಿರುವ ದಂಧೆ ಇದು ಎಂದು ಈ ಮೊದಲಿನಿಂದಲೂ ಹಲವರು ಆರೋಪ ಮಾಡುತ್ತಲೇ ಬರುತ್ತಿದ್ದಾರೆ. ಈ ಬಗ್ಗೆ ಪರ ವಿರೋಧ ಚರ್ಚೆಗಳು ನಡೆಯುತ್ತಲೇ ಇವೆ.

‘ಕೊರೊನಾ ಸುಳ್ಳು, ಇದೊಂದು ಮೆಡಿಕಲ್ ಮಾಫಿಯಾ’; ಸಂಚಲನ ಸೃಷ್ಟಿಸಿದ ಅಗ್ನಿ ಶ್ರೀಧರ್​​ ಹೇಳಿಕೆ
ಅಗ್ನಿ ಶ್ರೀಧರ್
TV9 Web
| Edited By: |

Updated on:Jan 13, 2022 | 8:33 PM

Share

ದೇಶದಲ್ಲಿ ಕೊವಿಡ್ ಪ್ರಕರಣ ಹೆಚ್ಚುತ್ತಿದೆ. ಈಗ ಮೂರನೇ ಅಲೆಯ ಭಯದಲ್ಲಿ ಎಲ್ಲರೂ ಇದ್ದಾರೆ. ಕೊರೊನಾ ಪ್ರಕರಣಗಳು ದೊಡ್ಡ ಮಟ್ಟದಲ್ಲಿ ಹೆಚ್ಚುತ್ತಿರುವುದರಿಂದ ಸಹಜವಾಗಿಯೇ ಆತಂಕ ಮೂಡಿದೆ. ಅನೇಕ ಇಂಡಸ್ಟ್ರಿಗಳು ಅನಿಶ್ಚಿತತೆ ಎದುರಿಸುತ್ತಿವೆ. ಚಿತ್ರರಂಗಕ್ಕೆ ಕೊರೊನಾ ದೊಡ್ಡ ಹೊಡೆತ ನೀಡಿದೆ. ಸಿನಿಮಾ ಕೆಲಸಗಳು ನಿಂತಿವೆ. ಕೊವಿಡ್ ಕಾರಣದಿಂದ ಚಿತ್ರಮಂದಿರಗಳಲ್ಲಿ ಶೇ.50 ಆಸನ ವ್ಯವಸ್ಥೆಗೆ ಅವಕಾಶದ ನಿಯಮ ಬಂದಿರುವುದರಿಂದ ಯಾವ ಚಿತ್ರಗಳೂ ರಿಲೀಸ್​ ಆಗುತ್ತಿಲ್ಲ. ಈ ಮಧ್ಯೆ, ನಿರ್ದೇಶಕ ಹಾಗೂ ಚಿತ್ರಕಥೆ ಬರಹಗಾರ ಅಗ್ನಿ ಶ್ರೀಧರ್ (Agni Shridhar) ನೀಡಿದ ಹೇಳಿಕೆ ಸಂಚಲನ ಸೃಷ್ಟಿಸಿದೆ. ‘ಕೊವಿಡ್​ ಇಲ್ಲ. ಇದೊಂದು ಮೆಡಿಕಲ್​ ಮಾಫಿಯಾ’ ಎನ್ನುವ ಗಂಭೀರ ಆರೋಪವನ್ನು ಅವರು ಮಾಡಿದ್ದಾರೆ.

ಕೊವಿಡ್​ ಇದೆ ಮತ್ತು ಇಲ್ಲ ಎನ್ನುವ ಬಗ್ಗೆ ಕೊರೊನಾ ಕಾಣಿಸಿಕೊಂಡಾಗಿನಿಂದಲೂ ಚರ್ಚೆ ನಡೆಯುತ್ತಿದೆ. ಹಣ ಮಾಡಿಕೊಳ್ಳೋಕೆ ನಡೆಯುತ್ತಿರುವ ದಂಧೆ ಇದು ಎಂದು ಈ ಮೊದಲಿನಿಂದಲೂ ಹಲವರು ಆರೋಪ ಮಾಡುತ್ತಲೇ ಬರುತ್ತಿದ್ದಾರೆ. ಈ ಬಗ್ಗೆ ಪರ ವಿರೋಧ ಚರ್ಚೆಗಳು ನಡೆಯುತ್ತಲೇ ಇವೆ. ಈಗ ಅಗ್ನಿ ಶ್ರೀಧರ್​​ ಅವರು ಮಾಡಿರುವ ಗಂಭೀರ ಆರೋಪ ಸಂಚಲನ ಸೃಷ್ಟಿಸಿದೆ.

‘ಕೊರೊನಾ ಎಂಬುದೇ ಸುಳ್ಳು. ಇದೊಂದು ಮೆಡಿಕಲ್​ ಮಾಫಿಯಾ. ನಾನು ಇದುವರೆಗೂ ವ್ಯಾಕ್ಸಿನ್ ತೆಗೆದುಕೊಂಡಿಲ್ಲ. ನಮ್ಮ ಕುಟುಂಬದಲ್ಲಿ ಯಾರೂ ವ್ಯಾಕ್ಸಿನ್ ತೆಗೆದುಕೊಂಡಿಲ್ಲ. ಇತ್ತೀಚೆಗೆ ಸಿದ್ದರಾಮಯ್ಯ ಅವರ ಎದುರಿಗೂ ನಾನು ಇದನ್ನೇ ಹೇಳಿದ್ದೇನೆ. ರಾಜಕಾರಣಿಗಳು ತಳ ವರ್ಗದ ಜನರನ್ನು ಬದುಕಿರುವಾಗಲೇ ಸಾಯಿಸಿದ್ದಾರೆ’ ಎಂದು ಅಗ್ನಿ ಶ್ರೀಧರ್​​ ಅವರು ‘ಕ್ರೀಂ‌’‌ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಆಕ್ರೋಶ ಹೊರ ಹಾಕಿದ್ದಾರೆ.

‘ನನ್ನ ಕುಟುಂಬದ ಯಾರೊಬ್ಬರೂ ಕೊವಿಡ್​ ಲಸಿಕೆ ತೆಗೆದುಕೊಂಡಿಲ್ಲ. ನನಗೆ ಗೊತ್ತಿದೆ ಶೇ. 60 ವೈದ್ಯರು ಈ ಲಸಿಕೆ ಪಡೆದಿಲ್ಲ. ಇದು ಫ್ಯಾಕ್ಟ್​. ಯಾರೂ ಕೊವಿಡ್​ನಿಂದ ಸತ್ತಿಲ್ಲ. ಸತ್ತ ವ್ಯಕ್ತಿಯಲ್ಲಿ ನೂರಾರು ವೈರಸ್​ ಇದೆ. ಇದನ್ನು ಹೈಲೈಟ್​ ಮಾಡಲಾಗಿದೆ. ಇದು ನನ್ನ ಅಭಿಪ್ರಾಯ’ ಎಂದು ಅಗ್ನಿ ಶ್ರೀಧರ್​​ ಹೇಳಿದ್ದಾರೆ.

ಇದನ್ನೂ ಓದಿ: ರಾಧಿಕಾ ಪಂಡಿತ್​ ಮೊಬೈಲ್​ನಲ್ಲಿ ಯಶ್​ ಹೆಸರು ಏನೆಂದು ಸೇವ್​ ಆಗಿದೆ? ವೈರಲ್​ ಆಯ್ತು ವಿಡಿಯೋ

Arjun Sarja: ಶ್ರುತಿ ಹರಿಹರನ್​ ಮೀಟೂ ಪ್ರಕರಣ: ಅರ್ಜುನ್​ ಸರ್ಜಾಗೆ ಜಯ

Published On - 5:11 pm, Thu, 13 January 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ