AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೊರೊನಾ ಸುಳ್ಳು, ಇದೊಂದು ಮೆಡಿಕಲ್ ಮಾಫಿಯಾ’; ಸಂಚಲನ ಸೃಷ್ಟಿಸಿದ ಅಗ್ನಿ ಶ್ರೀಧರ್​​ ಹೇಳಿಕೆ

ಕೊವಿಡ್​ ಇದೆ ಮತ್ತು ಇಲ್ಲ ಎನ್ನುವ ಬಗ್ಗೆ ಕೊರೊನಾ ಕಾಣಿಸಿಕೊಂಡಾಗಿನಿಂದಲೂ ಚರ್ಚೆ ನಡೆಯುತ್ತಿದೆ. ಹಣ ಮಾಡಿಕೊಳ್ಳೋಕೆ ನಡೆಯುತ್ತಿರುವ ದಂಧೆ ಇದು ಎಂದು ಈ ಮೊದಲಿನಿಂದಲೂ ಹಲವರು ಆರೋಪ ಮಾಡುತ್ತಲೇ ಬರುತ್ತಿದ್ದಾರೆ. ಈ ಬಗ್ಗೆ ಪರ ವಿರೋಧ ಚರ್ಚೆಗಳು ನಡೆಯುತ್ತಲೇ ಇವೆ.

‘ಕೊರೊನಾ ಸುಳ್ಳು, ಇದೊಂದು ಮೆಡಿಕಲ್ ಮಾಫಿಯಾ’; ಸಂಚಲನ ಸೃಷ್ಟಿಸಿದ ಅಗ್ನಿ ಶ್ರೀಧರ್​​ ಹೇಳಿಕೆ
ಅಗ್ನಿ ಶ್ರೀಧರ್
TV9 Web
| Edited By: |

Updated on:Jan 13, 2022 | 8:33 PM

Share

ದೇಶದಲ್ಲಿ ಕೊವಿಡ್ ಪ್ರಕರಣ ಹೆಚ್ಚುತ್ತಿದೆ. ಈಗ ಮೂರನೇ ಅಲೆಯ ಭಯದಲ್ಲಿ ಎಲ್ಲರೂ ಇದ್ದಾರೆ. ಕೊರೊನಾ ಪ್ರಕರಣಗಳು ದೊಡ್ಡ ಮಟ್ಟದಲ್ಲಿ ಹೆಚ್ಚುತ್ತಿರುವುದರಿಂದ ಸಹಜವಾಗಿಯೇ ಆತಂಕ ಮೂಡಿದೆ. ಅನೇಕ ಇಂಡಸ್ಟ್ರಿಗಳು ಅನಿಶ್ಚಿತತೆ ಎದುರಿಸುತ್ತಿವೆ. ಚಿತ್ರರಂಗಕ್ಕೆ ಕೊರೊನಾ ದೊಡ್ಡ ಹೊಡೆತ ನೀಡಿದೆ. ಸಿನಿಮಾ ಕೆಲಸಗಳು ನಿಂತಿವೆ. ಕೊವಿಡ್ ಕಾರಣದಿಂದ ಚಿತ್ರಮಂದಿರಗಳಲ್ಲಿ ಶೇ.50 ಆಸನ ವ್ಯವಸ್ಥೆಗೆ ಅವಕಾಶದ ನಿಯಮ ಬಂದಿರುವುದರಿಂದ ಯಾವ ಚಿತ್ರಗಳೂ ರಿಲೀಸ್​ ಆಗುತ್ತಿಲ್ಲ. ಈ ಮಧ್ಯೆ, ನಿರ್ದೇಶಕ ಹಾಗೂ ಚಿತ್ರಕಥೆ ಬರಹಗಾರ ಅಗ್ನಿ ಶ್ರೀಧರ್ (Agni Shridhar) ನೀಡಿದ ಹೇಳಿಕೆ ಸಂಚಲನ ಸೃಷ್ಟಿಸಿದೆ. ‘ಕೊವಿಡ್​ ಇಲ್ಲ. ಇದೊಂದು ಮೆಡಿಕಲ್​ ಮಾಫಿಯಾ’ ಎನ್ನುವ ಗಂಭೀರ ಆರೋಪವನ್ನು ಅವರು ಮಾಡಿದ್ದಾರೆ.

ಕೊವಿಡ್​ ಇದೆ ಮತ್ತು ಇಲ್ಲ ಎನ್ನುವ ಬಗ್ಗೆ ಕೊರೊನಾ ಕಾಣಿಸಿಕೊಂಡಾಗಿನಿಂದಲೂ ಚರ್ಚೆ ನಡೆಯುತ್ತಿದೆ. ಹಣ ಮಾಡಿಕೊಳ್ಳೋಕೆ ನಡೆಯುತ್ತಿರುವ ದಂಧೆ ಇದು ಎಂದು ಈ ಮೊದಲಿನಿಂದಲೂ ಹಲವರು ಆರೋಪ ಮಾಡುತ್ತಲೇ ಬರುತ್ತಿದ್ದಾರೆ. ಈ ಬಗ್ಗೆ ಪರ ವಿರೋಧ ಚರ್ಚೆಗಳು ನಡೆಯುತ್ತಲೇ ಇವೆ. ಈಗ ಅಗ್ನಿ ಶ್ರೀಧರ್​​ ಅವರು ಮಾಡಿರುವ ಗಂಭೀರ ಆರೋಪ ಸಂಚಲನ ಸೃಷ್ಟಿಸಿದೆ.

‘ಕೊರೊನಾ ಎಂಬುದೇ ಸುಳ್ಳು. ಇದೊಂದು ಮೆಡಿಕಲ್​ ಮಾಫಿಯಾ. ನಾನು ಇದುವರೆಗೂ ವ್ಯಾಕ್ಸಿನ್ ತೆಗೆದುಕೊಂಡಿಲ್ಲ. ನಮ್ಮ ಕುಟುಂಬದಲ್ಲಿ ಯಾರೂ ವ್ಯಾಕ್ಸಿನ್ ತೆಗೆದುಕೊಂಡಿಲ್ಲ. ಇತ್ತೀಚೆಗೆ ಸಿದ್ದರಾಮಯ್ಯ ಅವರ ಎದುರಿಗೂ ನಾನು ಇದನ್ನೇ ಹೇಳಿದ್ದೇನೆ. ರಾಜಕಾರಣಿಗಳು ತಳ ವರ್ಗದ ಜನರನ್ನು ಬದುಕಿರುವಾಗಲೇ ಸಾಯಿಸಿದ್ದಾರೆ’ ಎಂದು ಅಗ್ನಿ ಶ್ರೀಧರ್​​ ಅವರು ‘ಕ್ರೀಂ‌’‌ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಆಕ್ರೋಶ ಹೊರ ಹಾಕಿದ್ದಾರೆ.

‘ನನ್ನ ಕುಟುಂಬದ ಯಾರೊಬ್ಬರೂ ಕೊವಿಡ್​ ಲಸಿಕೆ ತೆಗೆದುಕೊಂಡಿಲ್ಲ. ನನಗೆ ಗೊತ್ತಿದೆ ಶೇ. 60 ವೈದ್ಯರು ಈ ಲಸಿಕೆ ಪಡೆದಿಲ್ಲ. ಇದು ಫ್ಯಾಕ್ಟ್​. ಯಾರೂ ಕೊವಿಡ್​ನಿಂದ ಸತ್ತಿಲ್ಲ. ಸತ್ತ ವ್ಯಕ್ತಿಯಲ್ಲಿ ನೂರಾರು ವೈರಸ್​ ಇದೆ. ಇದನ್ನು ಹೈಲೈಟ್​ ಮಾಡಲಾಗಿದೆ. ಇದು ನನ್ನ ಅಭಿಪ್ರಾಯ’ ಎಂದು ಅಗ್ನಿ ಶ್ರೀಧರ್​​ ಹೇಳಿದ್ದಾರೆ.

ಇದನ್ನೂ ಓದಿ: ರಾಧಿಕಾ ಪಂಡಿತ್​ ಮೊಬೈಲ್​ನಲ್ಲಿ ಯಶ್​ ಹೆಸರು ಏನೆಂದು ಸೇವ್​ ಆಗಿದೆ? ವೈರಲ್​ ಆಯ್ತು ವಿಡಿಯೋ

Arjun Sarja: ಶ್ರುತಿ ಹರಿಹರನ್​ ಮೀಟೂ ಪ್ರಕರಣ: ಅರ್ಜುನ್​ ಸರ್ಜಾಗೆ ಜಯ

Published On - 5:11 pm, Thu, 13 January 22

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ