AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪು ಸಮಾಧಿ ಬಳಿ ಮದುವೆ ಆಗೋರಿಗೆ ರಾಜ್​ ಕುಟುಂಬದಿಂದ ಒಂದು ಕಂಡೀಷನ್​; ಇದನ್ನು ಪಾಲಿಸಲೇಬೇಕು

Puneeth Rajkumar Samadhi: ‘ಇಂದು (ನ.6) ಒಂದು ಜೋಡಿ ಬಂದು ಮದುವೆಗೆ ಅನುಮತಿ ಕೇಳಿದರು. ಆದರೆ ನಾವು ಒಪ್ಪಿಗೆ ಕೊಡಲಿಲ್ಲ. ಅವರು ಒಂದೊಂದು ಸಲ ಒಂದೊಂದು ರೀತಿ ಹೇಳುತ್ತಿದ್ದಾರೆ’ ಎಂದು ರಾಘವೇಂದ್ರ ರಾಜ್​ಕುಮಾರ್​ ತಿಳಿಸಿದ್ದಾರೆ.

ಅಪ್ಪು ಸಮಾಧಿ ಬಳಿ ಮದುವೆ ಆಗೋರಿಗೆ ರಾಜ್​ ಕುಟುಂಬದಿಂದ ಒಂದು ಕಂಡೀಷನ್​; ಇದನ್ನು ಪಾಲಿಸಲೇಬೇಕು
ರಾಘವೇಂದ್ರ ರಾಜ್​ಕುಮಾರ್
TV9 Web
| Edited By: |

Updated on: Nov 06, 2021 | 6:25 PM

Share

ಪ್ರತಿ ದಿನ 20 ಸಾವಿರಕ್ಕೂ ಅಧಿಕ ಅಭಿಮಾನಿಗಳು ಪುನೀತ್​ ರಾಜ್​ಕುಮಾರ್​ ಸಮಾಧಿಗೆ ಭೇಟಿ ನೀಡುತ್ತಿದ್ದಾರೆ. ದೂರದ ಊರುಗಳಿಂದ ಬರುವ ಜನರು ಸರದಿ ಸಾಲಿನಲ್ಲಿ ನಿಂತು ಅಪ್ಪುಗೆ ನಮನ ಸಲ್ಲಿಸುತ್ತಿದ್ದಾರೆ. ಸಮಾಧಿ ಎದುರಿನಲ್ಲಿ ನಿಂತು ಕಣ್ಣೀರು ಸುರಿಸುತ್ತಿದ್ದಾರೆ. ಅನೇಕರಿಗೆ ಅಪ್ಪು ಎಂದರೆ ದೇವರ ಸಮಾನ. ಹಾಗಾಗಿ ಅವರ ಸಮಾಧಿ ಎದುರು ಮದುವೆ ಆಗಲು ಕೆಲವರು ನಿರ್ಧರಿಸಿದ್ದಾರೆ. ಆದರೆ ಅಂಥ ಜೋಡಿಗಳಿಗೆ ರಾಜ್​ಕುಮಾರ್​ ಕುಟುಂಬದವರು ಒಂದು ಕಂಡೀಷನ್​ ಹಾಕಿದ್ದಾರೆ. ಈ ಬಗ್ಗೆ ರಾಘವೇಂದ್ರ ರಾಜ್​ಕುಮಾರ್​ ಪ್ರತಿಕ್ರಿಯೆ ನೀಡಿದ್ದಾರೆ.

‘ಪೊಲೀಸರದ್ದು ಕೆಲವೊಂದು ನಿಯಮಗಳು ಇರುತ್ತವೆ. ಕೆಲವರು ಅಪ್ರಾಪ್ತರಾಗಿರುತ್ತಾರೆ. ನಂತರ ಅವರ ಕಡೆಯವರು ಬಂದು ಗಲಾಟೆ ಮಾಡುತ್ತಾರೆ. ಟಿವಿಯಲ್ಲಿ ಒಂದು ಮದುವೆ ನೋಡಿದ ಬಳಿಕ ಅನೇಕರು ಬರಲು ಆರಂಭಿಸುತ್ತಾರೆ. ಮದುವೆ ಆಗಲು ಬಯಸುವ ಜೋಡಿಗಳ ಜೊತೆಗೆ ಅವರ ತಂದೆ-ತಾಯಿ ಮತ್ತು ಕುಟುಂಬದವರು ಬಂದರೆ ಅನುಮತಿ ಕೊಡಬಹುದು’ ಎಂದು ರಾಘವೇಂದ್ರ ರಾಜ್​ಕುಮಾರ್​ ಹೇಳಿದ್ದಾರೆ.

‘ಇಂದು (ನ.6) ಒಂದು ಜೋಡಿ ಬಂದು ಅನುಮತಿ ಕೇಳಿದರು. ಆದರೆ ನಾವು ಒಪ್ಪಿಗೆ ಕೊಡಲಿಲ್ಲ. ಅವರು ಒಂದೊಂದು ಸಲ ಒಂದೊಂದು ರೀತಿ ಹೇಳುತ್ತಿದ್ದಾರೆ. ತಂದೆ-ತಾಯಿ ಕರೆದುಕೊಂಡು ಬನ್ನಿ ಅಂತ ಹೇಳಿದ್ದೇವೆ’ ಎಂದು ರಾಘವೇಂದ್ರ ರಾಜ್​ಕುಮಾರ್​ ತಿಳಿಸಿದ್ದಾರೆ.

ಬಳ್ಳಾರಿಯಿಂದ ಬಂದಿರುವ ಗಂಗಾ ಮತ್ತು ಗುರು ಪ್ರಸಾದ್ ಎಂಬ ಪ್ರೇಮಿಗಳು ಪುನೀತ್​ ರಾಜ್​ಕುಮಾರ್​ ಸಮಾಧಿ ಎದುರು ಮದುವೆ ಆಗಲು ನಿರ್ಧರಿಸಿದ್ದಾರೆ. ಕಳೆದ 2 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿರುವ ಇಬ್ಬರಿಗೂ ಪುನೀತ್​ ರಾಜ್​ಕುಮಾರ್​ ಎಂದರೆ ಅಪಾರ ಅಭಿಮಾನ. ಅದೇ ಕಾರಣಕ್ಕೆ ಅಪ್ಪು ಸಮಾಧಿ ಎದುರು ಮದುವೆ ಆಗಲು ತೀರ್ಮಾನಿಸಿದ್ದಾರೆ. ಅದಕ್ಕಾಗಿ ರಾಜ್​ ಕುಟುಂಬದವರ ಅನುಮತಿ ಪಡೆಯಲು ಕಾದಿದ್ದಾರೆ.

‘ಜಾತಕ ತೋರಿಸಿ, ದೇವಸ್ಥಾನದಲ್ಲಿ ಮದುವೆ ಆಗುವುದು ಸಹಜ. ಹಾಗಂತ ದೇವಸ್ಥಾನದಲ್ಲಿ ಮದುವೆ ಆದವರು ಜೀವನ ಪರ್ಯಂತ ಚೆನ್ನಾಗಿ ಇರುತ್ತಾರೆ ಎಂದು ಹೇಳೋಕಾಗಲ್ಲ. ಪುನೀತ್​ ಮಾಡಿದ ಸಮಾಜ ಸೇವೆ ನೋಡಿದರೆ ಅವರಿಗಿಂತ ದೊಡ್ಡ ದೇವರು ಯಾರೂ ಇಲ್ಲ ಎನಿಸುತ್ತದೆ’ ಎಂದು ಗಂಗಾ ಹೇಳಿದ್ದಾರೆ.

ಇದನ್ನೂ ಓದಿ:

ಪುನೀತ್​ ಸಾವಿನ ಬಗ್ಗೆ ಮೂಡಿದೆ ಅನುಮಾನ; ವೈದ್ಯರ ವಿರುದ್ಧ ದೂರು ದಾಖಲು

Puneeth Rajkumar: ‘ಪುನೀತ್​ ಅತಿಯಾಗಿ ಜಿಮ್​ ಮಾಡಿದ್ರು’: ಕರಾಳ ಶುಕ್ರವಾರದ ಘಟನೆ ವಿವರಿಸಿದ ಸೆಕ್ಯೂರಿಟಿ ಸಿಬ್ಬಂದಿ

Follow Us
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ